Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಕುಡಿಯಲು ಹಣ ಕೊಟ್ಟಿಲ್ಲ ಎಂದು ತಾಯಿಗೆ ಪಾಪಿ ಮಗನೋಬ್ಬ ಚಾಕು ಇರಿದ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ತಾಯಿ ಜಯಲಕ್ಷ್ಮಿಗೆ ಚಾಕು ಇರಿದ ಪಾಪಿ ಪುತ್ರ ರಾಹುಲ್. ಕುಡಿತದ ಚಟಕ್ಕೆ ಬಿದ್ದಿದ್ದ ರಾಹುಲ್ ಅಲಿಯಾಸ್ ಕಲರ್ಸ್, ಕೂಲಿ ಕೆಲಸ ಮಾಡಿ ತಾಯಿ ಜಯಲಕ್ಷ್ಮಿ ಮಗನ ಖರ್ಚಿಗೆ ಹಣ ಕೊಡುತ್ತಿದ್ದಳು. ಆದರೆ ಕಳೆದ ಎರಡು ಮೂರು ದಿನಗಳಿಂದ ಜಯಲಕ್ಷ್ಮಿ ಮಗನಿಗೆ ಖರ್ಚಿಗೆ ದುಡ್ಡು ಕೊಟ್ಟಿರಲಿಲ್ಲ. ಕುಡಿಯಲು ಹಣ ಕೊಡು ಅಂತ ಆರೋಪಿ ರಾಹುಲ್ ತಾಯಿಗೆ ಪೀಡಿಸುತ್ತಿದ್ದ. ಹಣ ಇಲ್ಲ ಎದ್ದಿದ್ದಕ್ಕೆ ತಾಳಿ ಕೊಡು ಎಂದು ಮಗ ಗಲಾಟೆ ಮಾಡಿದ್ದ. ಗಲಾಟೆ ವೇಳೆ ಚಾಕು ಇರಿದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಜಯಲಕ್ಷ್ಮಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆರೋಪಿ ರಾಹುಲ್ ಅನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಸ್ನೇಹಿತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ಬೆಳ್ತೂರು ಎಂಬಲ್ಲಿ ನಡೆದಿದೆ. ಅಕ್ರಮ ಸಂಬಂಧಕ್ಕೆ ಮಹಿಳೆಯ ಸ್ನೇಹಿತನ ಬರ್ಬರ ಹತ್ಯೆಗೈಯ್ಯಲಾಗಿದೆ. ಬೆಂಗಳೂರಿನ ಕಾಡುಗೋಡಿಯ ಬೆಳ್ತೂರು ಕಾಲೋನಿಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕಿಶೋರ್ ಎನ್ನುವ ವ್ಯಕ್ತಿಯನ್ನು ಬರಬರವಾಗಿ ಕೊಲೆ ಮಾಡಲಾಗಿದೆ. ಇನ್ನು ಮಹಿಳೆ ಅರುಂಧತಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಒಟ್ಟಿಗೆ ಇರುವಾಗ ಮಹಿಳೆಯ ಸಹೋದರ, ಗಂಡ ಹಾಗೂ ಮಗಳಿಂದ ಈ ಒಂದು ಕೃತ್ಯ ಎಸಗಿದ್ದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕುವೆಚ್ಚಾರ್‌ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ವೀರಭದ್ರ (29) ಎಂದು ತಿಳಿದುಬಂದಿದೆ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅಲ್ಲಿ ಅವರು ವೃತಪಟ್ಟರೆಂದು ವೈದ್ಯರು ಘೋಷಿಸಿದರು.ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.

Read More

ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಭಾಷಣ ಮಾಡಿದ ಮೌಲ್ವಿ ಮಫ್ತಿ ಮುಸ್ತಾಕ್ ನನ್ನು ಇಂದು ಪೊಲೀಸರು ಮೈಸೂರಿನ 2ನೇ ಹೆಚ್ಚುವರಿ ನ್ಯಾಯಕ್ಕೆ ಹಾಜರುಪಡಿಸಿದ್ದರು ಈ ವೇಳೆ ಜಡ್ಜ್ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಅದೇಶಿಸಿದರು. ಮೌಲ್ವಿ ಮುಸ್ತಾಕ್ ನನ್ನು ಎಂದು ಪೊಲೀಸರು 11 ದಿನಗಳ ಬಳಿಕ ಅರೆಸ್ಟ್ ಮಾಡಿದ್ದರು. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಲು ಈ ಒಂದು ಮೌಲ್ವಿಯ ಪ್ರಚೋದನಕಾರಿ ಭಾಷಣವೇ ಕಾರಣವಾಗಿತ್ತು. 10 ದಿನಗಳಾದರೂ ಆರೋಪಿಯನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ಧ ಕಿಡಿಕಾರಿದ್ದರು. ಇಂದು ಮೌಲ್ವಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಬಳಿಕ ಮೈಸೂರಿನ 2ನೇ ಸೇಷನ್ಸ್ ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಲ್ವಿ…

Read More

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದೀಗ ಈ ಒಂದು ಸಮನ್ಸ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಧಾರವಾಡ ಹೈಕೋರ್ಟ್ ಪೀಠದಲ್ಲಿ ಇಂದು ರಿಟ್ ಅರ್ಜಿ ವಿಚಾರಣೆ ನಡೆಯಿತು.ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರು, ಇಡೀ ತನಿಖೆಗೆ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ತನಿಖೆಗೆ ನೀಡಿದ ತಡೆಯಾಜ್ಞೆ ವಿಸ್ತರಿಸಿದೆ.ಬಳಿಕ ಎರಡು ಕಡೆ ವಾದ ಆಲಿಸಿದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ . ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಅನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಅವರ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ಅವರು ವಾದ ಮಂಡಿಸಿದರು. ಅಪರಾಧದ ಸಂಪತ್ತು ಮುಚ್ಚಿಟ್ಟಿದ್ದರೆ ಆಗ ಆಗ ಇಡಿ ವ್ಯಾಪ್ತಿಗೆ ಬರುತ್ತೆ. ಸಂಪತ್ತಿನ ಸ್ವಾಧೀನದಲ್ಲಿದ್ದರೆ, ಅನುಭವಿಸುತ್ತಿದ್ದರೆ ಇಡೀ ವ್ಯಾಪ್ತಿಗೆ…

Read More

ದಾವಣಗೆರೆ : ಟೈಲ್ಸ್ ಸಾಗಿಸುತ್ತಿದ್ದ ಟಾಟಾಏಸ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಬಳಿ NH 48 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮಿತಿಗಿಂತ ಅಧಿಕ ವಸ್ತುಗಳನ್ನು ತುಂಬಿದ್ದರಿಂದ ಟಾಟಾಏಸ್ ವಾಹನದ ಟೈರ್ ಸ್ಫೋಟಗೊಂಡು ಕೋಲ್ಕುಂಟೆ ಗ್ರಾಮದ ಮಹದೇವ (38) ಯರವನಾಗತಿಹಳ್ಳಿ ಕ್ಯಾಂಪ್ನ ಹನುಮಂತ (37) ಮತಪಟ್ಟ ಕಾರ್ಮಿಕರು ಎಂದು ತಿಳಿದುಬಂದಿದೆ. ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಇದೀಗ ಧರಣಿ ನಡೆಸಲಾಗುತ್ತಿದೆ.ದಾವಣಗೆರೆ ಹದಡಿ ರಸ್ತೆಯ ಸಮ್ಯಕ್ ಸಿರಾಮಿಕ್ ಮುಂದೆ ಮೃತರ ಶವವಿಟ್ಟು ಧರಣಿ ನಡೆಸಲಾಗುತ್ತಿದೆ. ಟೈಲ್ಸ್ ಮತ್ತು ಇಂಟೀರಿಯರ್ ಶಾಪ್ ಮುಂದೆ ಕಾರ್ಮಿಕರ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಪ್ ಮಾಲಿಕ ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರ ನಡುವೆ ಈ ವೇಳೆ ವಾಗ್ವಾದ ನಡೆಯಿತು. ಪರಿಹಾರ ಸಿಗುವವರೆಗೂ ಕಾರ್ಮಿಕರ ಶುಭ ಕೊಂಡಯ್ಯೆಲ್ಲವೆಂದು ಆಕ್ರೋಶ ಹೊರಹಾಕಿದರು ಪ್ರತಿಭಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವಾಗಲೂ ಅನುದಾನ ದುರ್ಬಳಕೆ ಆಗುತ್ತದೆ. SCSP-TSP ಅನುದಾನವನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಂಡಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧವಾಗಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ 15000 ಕೋಟಿ ಹಣ ಈಗ ಗ್ಯಾರಂಟಿ ಯೋಜನೆಗಳಿಗಾಗಿ ಡೈವರ್ಟ್ ಮಾಡಿಕೊಂಡಿದ್ದಾರೆ.ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ. ಅಲ್ಲಿಯೂ 20,000 ಕೋಟಿ ಗ್ಯಾರೆಂಟಿಗಾಗಿ ಡೈವರ್ಟ್ ಮಾಡುತ್ತಿದ್ದಾರೆ ಎಂದು ಗಂಭೀರಾವಾಗಿ ಆರೋಪಿಸಿದರು. ಇವತ್ತು ವಿಶೇಷ ಸಭೆ ಮತ್ತು ಕಾರ್ಯಗಾರ ನಡೆಸಿದ್ದೇವೆ. 14 ತಂಡಗಳನ್ನು ರಚಿಸಿ ಜನರಿಗೆ ಜಾಗೃತಿ ಮೂಡಿಸಲು ಸಜ್ಜಾಗಿದ್ದೇವೆ. SCSP-TSP ಸಮಾಜಕ್ಕೆ ಮೀಸಲಿಟ್ಟಿದ್ದ ಹಣ ಅವರಿಗೆ ಬಳಕೆಯಾಗಬೇಕು. ಕಾಂಗ್ರೆಸ್ ಬಜೆಟ್ ನಲ್ಲಿ ಅನುದಾನ ಬಳಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕಳೆದ ಬಜೆಟ್ ನಲ್ಲೂ 15 ಸಾವಿರದಿಂದ 16 ಸಾವಿರ ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದೆ. SCSP-TSP ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಾರಿಯೂ ಹಣ ದುರ್ಬಳಕೆ ಮಾಡುತ್ತಾರೆಂಬ ಮಾಹಿತಿ ಇದೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.ಹೌದು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಎನ್ನುವಾಗಲೇ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಷನ್ ಕುರಿತು ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿಬಿಜೆಪಿ ಮುಖಂಡ ಎನ್.ಆರ್.ರಮೇಶ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ದೂರಿನಲ್ಲಿ ಏನಿದೆ? ಮೈಸೂರು ಜಿಲ್ಲೆಯ ಹಿಣಕಲ್ ಗ್ರಾಮದ ಸರ್ವೆ ನಂ.70/4ಎ ಜಾಗವನ್ನು ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಡಿನೋಇಫಿಕೇಷನ್ ಮಾಡುವಲ್ಲಿ ಸಿಎಂ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಎನ್.ಆರ್.ರಮೇಶ್ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮಹಿಳೆಯ ಮೇಲೆ ಕೆಲವು ದುಷ್ಕರ್ಮಿಗಳು ರಾಕ್ಷಸಿಯ ವರ್ತನೆ ತೋರಿದ್ದು, ಮಹಿಳೆಯನ್ನು ಕೋಣೆಯಲ್ಲಿ ಕೂಡಿಹಾಕಿ ರಾತ್ರಿ ಇಡಿ ಚಿತ್ರಹಿಂಸೆ ನೀಡಿ ಕಣ್ಣುಗುಡ್ಡೆ ಕಿತ್ತು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಗನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕಣ್ಣು ಗುಡ್ಡೆ ಕಿತ್ತು ಬರುವಂತೆ ಮಹಿಳೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಕಿಡ್ನ್ಯಾಪ್ ಮಾಡಿ ತೋಟದ ಮನೆಯಲ್ಲಿ ಕೂಡಿಹಾಕಿ ಭೀಕರವಾಗಿ ಹಲ್ಲೆ ನಡೆಸಲಾಗಿದೆ ಅನ್ನುವ ಆರೋಪ ಹೇಳಿ ಬಂದಿದೆ. ತೋಟದ ಮನೆಯಲ್ಲಿ ಕೂಡಿಹಾಕಿ ಮಹಿಳೆಗೆ ರಾತ್ರಿ ಇಡಿ ಹಿಂಸೆ ನೀಡಿದ್ದಾರೆ. ಮುಖದಲ್ಲಿ ರಕ್ತ ಸುರಿಯುವಂತೆ ದುಷ್ಕರ್ಮಿಗಳು ಮನಬಂದಂತೆ ಥಳಿಸಿದ್ದಾರೆ. ಬ್ಯಾಟ್, ರಾಡ್ ಗಳಿಂದ ಮುಖ ಮೋತಿಯನ್ನು ನೋಡದೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಜಗನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗಂಗರಾಜು ಎರಡನೇ ಪತ್ನಿ ಸಂಗೀತ ಮೇಲೆ ಈ ಒಂದು ಭೀಕರವಾಗಿ ಹಲ್ಲೆ ನಡೆಸಲಾಗಿದೆ. ಮೊದಲ ಪತ್ನಿಯ ಕಡೆಯವರೇ ಈ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಕಾರ್ಯಕ್ರಮದಲ್ಲಿ ಕನ್ನಡ ಮಾಯವಾಗಿರುವ ವಿಚಾರವಾಗಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಕಗ್ಗೊಲೆ ನಡೆಯುತ್ತಿದೆ ನಾಡ ದ್ರೋಹಿ ಕಾಂಗ್ರೆಸ್ ಸರ್ಕಾರ ಕನ್ನಡದ ಅಸ್ಮಿತಿಗೆ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, ಕೆಪಿಎಸ್ಸಿ ಪ್ರಶ್ನೆ ಪತ್ರಿಕೆಗಳಲ್ಲಿ ಕನ್ನಡ ವ್ಯಾಕರಣ ತಪ್ಪಾಗಿ ಮುದ್ರಿಸಿ ಕನ್ನಡದ ಕಗ್ಗಲಿ ಮಾಡಿದ್ದಾಯ್ತು ಕನ್ನಡ ಶಾಲೆಗಳನ್ನು ಮುಚ್ಚಿಸಿ ಕನ್ನಡ ಕಲಿಕೆಗೆ ಎಳ್ಳುನೀರು ಬಿಟ್ಟಿದ್ದಾಯ್ತು, ಈಗ ಬಿಬಿಎಂಪಿ ಕಚೇರಿಯಲ್ಲಿ ಡಾ. ರಾಜಕುಮಾರ್ ಗಾಜಿನಮನೆಯಲ್ಲಿ ‘ನಮ್ಮ ರಸ್ತೆ ನಮ್ಮ ಹೆಮ್ಮೆ’ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ ಎಂದು ಆರ್ ಅಶೋಕ್ ಕಿಡಿ ಕಾರಿದ್ದಾರೆ. ಕರುನಾಡಲ್ಲಿ ಕನ್ನಡವನ್ನು ಶಾಶ್ವತವಾಗಿ ಅಳಿಸಿ ಹಾಕುವುದು ಮಾತ್ರ ಗ್ಯಾರಂಟಿ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. https://twitter.com/RAshokaBJP/status/1892452027935904171?t=1BMPEQqo1rnU8lb293gTvw&s=19

Read More