Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂದು ಬೆಂಗಳೂರಿನ ಸಂಜಯ್ ನಗರದಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಚೈತ್ರ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅದಾವತ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೈತ್ರಾಗೌಡ ಆತ್ಮಹತ್ಯೆ ಮಾಡಿಕೊಂಡ ಕುರಿತಂತೆ ದೂರು ಸಲ್ಲಿಕೆಯಾಗಿದೆ.ಮೃತ ಚೈತ್ರಗೌಡ ತಮ್ಮ ಆಗಮಿಸಿ, ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.ಮನೆಯಲ್ಲಿ ಒಂದು ಡೆತ್ ನೋಟ್ ಸಹ ಪತ್ತೆಯಾಗಿದೆ ಎಂದು ಅವರು ತಿಳಿಸಿದರು. ನನ್ನ ಸಾವಿಗೆ ಯಾರೂ ಕಾರಣ ಅಲ್ಲ ಅಂತ ಬರೆದಿದ್ದಾರೆ.ಅದನ್ನು ಅವರೇ ಬರೆದಿದ್ದಾರಾ ಅಂತ ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಅರವಾನಿಸಲಾಗಿದೆ. ತನಿಖೆಯ ಬಳಿಕ ವಿಚಾರ ಗೊತ್ತಾಗಲಿದೆ. ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲ್ ಅದಾವತ್ ಪ್ರತಿಕ್ರಿಯೆ ನೀಡಿದರು.
ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು ತಿಂಗಳ ಹಿಂದೆಯೇ ಮೃತ ಚೈತ್ರ ಗೌಡ ಡೆತ್ ನೋಟ್ ಬರೆದಿದ್ದರು ಎಂದು ತನಿಖೆಯ ವೇಳೆ ಗೊತ್ತಾಗಿದೆ. ಇಂದು ಬೆಳಿಗ್ಗೆ ಸಂಜಯ್ ನಗರದಲ್ಲಿ ಮನೆ ಒಂದರಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಹಾಗೂ ವೃತ್ತಿಯಲ್ಲಿ ವಕೀಲೆಯಾಗಿರುವಂತಹ ರೈತರ ಗೌಡ ಅವರು ಮನೆಯ ಬೆಡ್ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಅವರ ಶವವನ್ನು ರವಾನಿಸಲಾಗಿತ್ತು ಇದೀಗ ಪೊಲೀಸರು ಅವರ ಮನೆಯನ್ನು ಪರಿಶೀಲ ನಡೆಸಿದಾಗ ಈ ಒಂದು ಡೆತ್ ನೋಟ್ ಪ್ರತಿ ಪತ್ತೆಯಾಗಿದೆ. ಡೆತ್ ನೋಟ್ ಅಲ್ಲಿ ಏನಿದೆ? ಮಾರ್ಚ್ 11 ರಂದು ಚೈತ್ರಾಗೌಡ ಡೆತ್ ನೋಟ್ ಬರೆದಿಟ್ಟಿದ್ದರು. ಜೀವನ ಎಂಜಾಯ್ ಮಾಡಿ ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್ ಇಂದ ಬಳಲುತ್ತಿದ್ದೇನೆ. ಡಿಪ್ರೆಶನ್…
ಶಿವಮೊಗ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಜಸ್ಟ್ ಪಾಸ್ ಆದಂತಹ ವಿದ್ಯಾರ್ಥಿಗಳು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು ಎಂದು ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಸ್ಟ್ ಪಾಸ್ ಆದಂತ ವಿದ್ಯಾರ್ಥಿಗಳು ಕೂಡ ಮತ್ತೆ ಪರೀಕ್ಷೆ ಬರೆಯಬಹುದು. ಹೀಗಾಗಿ ಅಂತಹ ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಳ್ಳುತ್ತೇವೆ. ಫೇಲಾದವರು ಮತ್ತೆ ಪರೀಕ್ಷೆ ಬರೆದು ಪಾಸ್ ಆಗಿ ಈ ವರ್ಷ ಅಷ್ಟೇ ಕೃಪಾಂಕ ಅಂಕ ಸೀಮಿತವಾಗುತ್ತದೆ ಎಂದರು. ಅಲ್ಲದೆ ಈ ಒಂದು ವರ್ಷದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನಕ್ಕೆ ಏರಿಕೆ ಆಗಿದೆ. ಶಿವಮೊಗ್ಗ ಮೂರನೇ ಸ್ಥಾನಕ್ಕೆ ಬಂದಿದ್ದು ಸಂತಸ ತಂದಿದೆ. ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮತ್ತು ಬಂಗಾರಪ್ಪ ಹೇಳಿಕೆ ನೀಡಿದರು. ಪ್ರಸ್ತಕ ಸಾಲಿನಲ್ಲಿ ಉಡುಪಿ ಮೊದಲ ಸ್ಥಾನ ಗಳಿಸಿದ್ದು,ಯಾದಗಿರಿ ಮತ್ತೆ ಕೊನೆ ಸ್ಥಾನ ಪಡೆದುಕೊಂಡಿದೆ. ಇನ್ನು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕುರಿತು ಮಾತನಾಡಿದ ಅವರು,…
ಕೊಪ್ಪಳ : ಮಸೀದಿ ಕಮಿಟಿ ರಚನೆ ವಿಚಾರವಾಗಿ ಪೊಲೀಸ್ ಅವರಣದಲ್ಲೇ 2 ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆ ಆವರಣದಲ್ಲಿ ನಡೆದಿದೆ. ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಈ ಒಂದು ಗಲಾಟೆ ನಡೆದಿದೆ ಎಂದು ಹೇಳಲಗುತ್ತಿದೆ. ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ಯಾಗಿದೆ.ಪೊಲೀಸ್ ಠಾಣೆ ಆವರಣದಲ್ಲಿ ಗಲಾಟೆ ಕಂಡು ಕೆಲಕಾಲ ಜನರು ಆತಂಕಗೊಂಡಿದ್ದರು. ಗಲಾಟೆ ಮಾಡಿಕೊಂಡವರನ್ನು ಇದೀಗ ಗಂಗಾವತಿ ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಯ ಪತ್ನಿಯ ನಿಗೂಢ ಸಾವಾಗಿದ್ದು, ಬೆಂಗಳೂರಿನ ಸಂಜಯ್ ನಗರದ ಮನೆಯಲ್ಲಿ KAS ಅಧಿಕಾರಿಯ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ. ಹೌದು KAS ಅಧಿಕಾರಿ ಪತ್ನಿ ಚೈತ್ರಾಗೌಡ ಎನ್ನುವ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ., ಸಂಜಯ್ ನಗರದ ನಿವಾಸದ ಮನೆಯಲ್ಲಿ ಚೈತ್ರಾಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಂಜಯ್ ನಗರದ ನಿವಾಸದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇದೀಗ ಶವ ಪತ್ತೆಯಾಗಿದೆ, ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮನೆಯಲ್ಲಿ ಯಾವುದೇ ರೀತಿಯಾದ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತುಮಕೂರು : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇನ್ನೂ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಗಾಂಧಿನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ. ಹೌದು ತಂದೆಯೇ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ತಾಯಿ ತಿಪಟೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ತಂದೆಯ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದೆ. ಇವರದ್ದು ಬಡ ಕುಟುಂಬವಾಗಿದ್ದು, ಪತಿ – ಪತ್ನಿ ಇಬ್ಬರೂ ಕೂಲಿಗಾರರಾಗಿದ್ದಾರೆ. ಆದರೆ, ತಾಯಿ ಕೂಲಿ ಹೋದ ಸಂದರ್ಭದಲ್ಲಿ ಮನೆಯಲ್ಲೇ ಉಳಿಯುತ್ತಿದ್ದ ಪತಿಯು ತನ್ನ ಸ್ವಂತ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ತನ್ನ ದೂರಿನಲ್ಲಿ ವಿವರಿಸಿದ್ದಾರೆ. ಬಾಲಕಿ 13 ವರ್ಷದವಳಾಗಿದ್ದರಿಂದ ಇದೀಗ ತಿಪಟೂರು ನಗರ ಠಾಣೆ ಪೋಲೀಸರು ತಂದೆಯ ವಿರುದ್ಧ ಪೋಕ್ಸೋ ಪ್ರಕರಣವನ್ನು…
ಕೊಡಗು : ಗುರುವಾರ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಕೊಲೆ ಮಾಡಿದ ಆರೋಪಿ ಪ್ರಕಾಶ್ ರುಂಡವನ್ನು ತೆಗೆದುಕೊಂಡು ಹೋಗಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಮೃತ ಮೀನಾಳ ಅರುಂಡ ಪತ್ತೆಯಾಗಿದ್ದು ರುಂಡವನ್ನು ನೋಡಿದ ತಕ್ಷಣ ಮೀನಾಳ ಸಹೋದರ ವಿಚಿತ್ರವಾಗಿ ವರ್ತಿಸಿದ್ದಾನೆ. ತಂಗಿಯ ರುಂಡ ಕಂಡು ಬೆಚ್ಚಿಬಿದ್ದ ಅಣ್ಣ ದಿಲೀಪ್ ಸ್ಥಳ ಮಹಾಜರು ವೇಳೆ ದಿಲೀಪ್ ವಿಚಿತ್ರವಾಗಿ ವರ್ತಿಸಿದ್ದಾನೆ. ತಕ್ಷಣ ದಿಲೀಪ್ ನನ್ನು ಹಿಡಿದು ಸ್ಥಳೀಯರು ಆತನ ವಿಚಿತ್ರ ವರ್ತನೆ ಕಂಡು ಆತನನ್ನು ನಿಯಂತ್ರಿಸಿದ್ದಾರೆ.ತಕ್ಷಣವೇ ದಿಲೀಪ್ ನನ್ನ ಹಿಡಿದು ಸ್ಥಳೀಯರು ಆತನನ್ನು ನಿಯಂತ್ರಿಸಿದ್ದಾರೆ. ರುಂಡಪತ್ತೆಗೆ ಆರೋಪಿಯೊಂದಿಗೆ ಸ್ಥಳಕ್ಕೆ ಅಣ್ಣ ತೆರಳಿದ್ದ ಈ ವೇಳೆ ತಂಗಿಯರು ಉಂಡವನ್ನು ಕಂಡು ದಿಲೀಪ್ ಕಂಗಾಲಾಗಿ ವಿಚಿತ್ರವಾಗಿ ವರ್ತಿಸಿದ್ದಾನೆ. ಘಟನೆ ಹಿನ್ನೆಲೆ? ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೀನಾ ಹಾಗೂ ಅದೇ ಗ್ರಾಮದ ಪ್ರಕಾಶ್ ಓಂಕಾರಪ್ಪ ಎನ್ನುವ ವ್ಯಕ್ತಿಯ ಜೊತೆ ನಿಶ್ಚಿತಾರ್ಥ ನಿಶ್ಚಯವಾಗಿತ್ತು.ಈ ವೇಳೆ ಬಾಲಕಿಗೆ 18…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ. ಇದೆ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ HD ರೇವಣ್ಣ ಪತ್ನಿ ಭವಾನಿಯವರಿಗೂ ಸಂಕಷ್ಟ ಎದುರಾಗಿದೆ. ಕಿಡ್ನಾಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಮೊದಲನೇ ನೋಟೀಸ್ ನೀಡಿದ್ದು, ಇದಕ್ಕೆ ಉತ್ತರ ನೀಡದ ಹಿನ್ನೆಲೆಯಲ್ಲಿ ಎರಡನೇ ನೋಟೀಸ್ ಜಾರಿ ಮಾಡಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರಿನ ಬಸವನಗುಡಿ ನಿವಾಸದಲ್ಲಿ ಭವಾನಿ ರೇವಣ್ಣ ಬೀಡು ಬಿಟ್ಟಿದ್ದಾರೆಕೆ.ಆರ್.ನಗರ ಮೂಲದ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದರೆ, ಪುತ್ರ ಪ್ರಜ್ವಲ್ ವಿದೇಶದಲ್ಲಿದ್ದಾನೆ. ಈಗ ಭವಾನಿ ರೇವಣ್ಣ ತೀವ್ರ ನೋವಿನಲ್ಲಿದ್ದಾರೆ. ಇದರ ನಡುವೆ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ಭವಾನಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ನೋಟಿಸ್ ನೀಡಿದ್ದು ಭವಾನಿ ರೇವಣ್ಣ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಚಿತ್ರದುರ್ಗ : ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೆಗೌಡನನ್ನು ಚಿತ್ರದುರ್ಗದ ಹಿರಿಯೂರಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಮೇ 1 ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯ ಕುರಿತು ದೂರು ದಾಖಲಿಸಿದ್ದಳು. ದಾಖಲಾಗಿರುವ ದೂರಿನ ಆಧಾರದ ಮೇಲೆ ಇದೀಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪೊಲೀಸರು ದೇವರಾಜೇಗೌಡನನ್ನು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅಜ್ಞಾತ ಸ್ಥಳದಲ್ಲಿ ಇದ್ದು ಮೂರು ಆಡಿಯೋ ಕ್ಲಿಪ್ ಬಿಡುಗಡೆ ಮಾಡಿದ್ದ ದೇವರಾಜೇಗೌಡ, ಸಂತ್ರಸ್ತ ಮಹಿಳೆ ತನ್ನ ಗಂಡನ ಜೊತೆ ಮಾತನಾಡಿರುವ ಒಂದು ಆಡಿಯೋ ಹಾಗೂ ಶಿವರಾಮೇಗೌಡ ಡಿಕೆ ಶಿವಕುಮಾರ್ ಅವರಷ್ಟೇ ಮಾತನಾಡಿರುವ ಇನ್ನೊಂದು ಆಡಿಯೋ ಸೇರಿದಂತೆ ಪಟು ಮೂರು ಆಡಿಯೋಗಳನ್ನು ಬಿಡುಗಡೆ ಮಾಡಿದ್ದರು. ಇದೀಗ ಚಿತ್ರದುರ್ಗದ ಹಿರಿಯೂರಿನಲ್ಲಿ ದೇವರಾಜ ಗೌಡನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಹಿರಿಯೂರು ಠಾಣೆಯ…
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ವಿರುದ್ಧವೂ ದೂರು ದಾಖಲಾಗಿದೆ. ಬಂಧನದ ಭೀತಿ ಎದುರಿಸುತ್ತಿರುವಂತ ಅವರು, ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಇದೀಗ ಅಜ್ಞಾತ ಸ್ಥಳದಲ್ಲಿರುವ ಅವರು ನಾನು ಎಲ್ಲಿಯೂ ಕಾಣೆಯಾಗಿಲ್ಲ ಮೂರು ದಿನ ರಜೆ ಇದ್ದ ಕಾರಣ ದೇವಾಲಯಕ್ಕೆ ಬಂದಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯ ದೇವರಾಜೇಗೌಡ ಅಜ್ಞಾತ ಸ್ಥಳದಲ್ಲಿ ಇದ್ದು, ಅಲ್ಲಿಂದಲೇ ಮಾತನಾಡಿದ್ದು, ನಾನು ಎಲ್ಲೂ ಕಾಣೆಯಾಗಿಲ್ಲ. ಮೂರು ದಿನ ರಜೆ ಇದ್ದಿದ್ದರಿಂದ ದೇಗುಲಕ್ಕೆ ಬಂದಿದ್ದೇನೆ. ಕಾಣೆಯಾಗುವ ಪರಿಸ್ಥಿತಿ ನನಗೆ ಬಂದಿಲ್ಲ.3 ದಿನ ರಜೆ ಇದ್ದ ಕಾರಣ ಕುಟುಂಬದ ಸಮೇತ ದೇವಸ್ಥಾನಕ್ಕೆ ಬಂದಿದ್ದೇನೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ವಕೀಲ ದೇವರಾಜ ಗೌಡ ತಿಳಿಸಿದ್ದಾರೆ. ಮತ್ತೆ 3 ಆಡಿಯೋ ಕ್ಲಿಪ್ ಬಿಡುಗಡೆ ಇದೆ ವೇಳೆ ಪ್ರಜ್ವಲ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ದಂತೆ ಅಜ್ಞಾತ ಸ್ಥಳದಲ್ಲಿರುವ ವಕೀಲ ದೇವರಾಜಗೌಡ ಶಿವರಾಮೇಗೌಡ ಜೊತೆ ಮಾತನಾಡಿರುವ ಎರಡು ಆಡಿಯೋ ತುಣುಕುಗಳನ್ನು ಬಿಡುಗಡೆ…










