Author: kannadanewsnow05

ಬೆಂಗಳೂರು : ಕಾಂಗ್ರೆಸ್ ಸರ್ಕಾರ ತನ್ನ ಅಂತಿಮ ದಿನಗಳನ್ನು ಎಣಿಸುತ್ತಿದೆ. ಬಹಳ ದಿನ ಈ ಸರ್ಕಾರ ಉಳಿಯುವುದಿಲ್ಲ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್ ಭವಿಷ್ಯ ನುಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ, ಅಶಾಂತಿ ಸೃಷ್ಟಿಯಾಗಿದೆ. ಅಲ್ಲದೆ ಬಿಜೆಪಿ ಕಾರ್ಯಕರ್ತರಿಗೆ ಸರ್ಕಾರ ಬಹಳ ಕಿರುಕುಳ ಕೊಡುತ್ತಿದೆ.ಇದನ್ನು ನಾವು ಖಂಡಿಸುತ್ತೇವೆ. ಇದರ ವಿರುದ್ಧವಾಗಿ ನಾವು ಹೋರಾಟ ಮಾಡುತ್ತೇವೆ.ಸರ್ಕಾರ ದುರಂಕಾರದಿಂದ ಬಿಜೆಪಿ ಕಾರ್ಯಕರ್ತರಿಗೆ ಸರ್ಕಾರ ಕಿರುಕುಳ ನೀಡುತ್ತಿದೆ.ಕಾಂಗ್ರೆಸ್ ಸರ್ಕಾರ ಹೀಗಾಗಿ ಕೊನೆಯ ದಿನಗಳನ್ನು ಏನಿಸುತ್ತಿದೆ.ಬಿಜೆಪಿ ಕಾರ್ಯಕರ್ತರ ಮೇಲೆ ಕಿರುಕುಳ ನೀಡುವುದು ಅಕ್ರಮ ಅಪರಾಧ ಎಂದು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರು ರೂ.6,000 ವೋಟ್ ಬಂದಿಲ್ಲ ಅಂದರೆ ಸರ್ಕಾರ ಇರುವುದಿಲ್ಲ ಅಂತ ಹೇಳಿದ್ದಾರೆ ಡಿಕೆ ಶಿವಕುಮಾರ್ ಅವರು ಕೂಡ ಮಂಡ್ಯದಲ್ಲಿ ಅದೇ ರೀತಿ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿ ಗಳಿಂದ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ರಸ್ತೆಗಳು ಅಭಿವೃದ್ಧಿಯ ಗೊತ್ತಿಲ್ಲ ಶಾಲೆಗಳ ಹೊಸ ಘಟನೆ ಗೊತ್ತಿಲ್ಲ…

Read More

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯಾದ ಮೊಹಮ್ಮದ್ ಮುಸ್ತಾಫ ಪೈಚಾರ್ ನನ್ನು ಇದೀಗ NIA ಅಧಿಕಾರಿಗಳು ಬಂಧಿಸಿದ್ದು, ಹಳದಿ ಆತನಿಗೆ ಸಹಕರಿಸಿದ ಮತ್ತಿಬ್ಬರನ್ನು ಅವಶ್ಯಕತೆ ಪಡೆದು ಬೆಂಗಳೂರಿಗೆ ಕರೆತರುತ್ತಿದ್ದಾರೆ. 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.ಇದೀಗ ಸಕಲೇಶಪುರದ ಆನೆಮಹಲ್ ಬಳಿ ಸುಳ್ಯ ತಾಲೂಕಿನ ಬೆಳಾರೆಯ ಮೊಹಮ್ಮದ್ ಮುಸ್ತಾಫ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್ ಎನ್ನುವವರನ್ನು NIA ಬಂಧಿಸಿದೆ.

Read More

ಮಡಿಕೇರಿ : ಮಡಿಕೇರಿಯಲ್ಲಿ ಇಡೀ ಜಿಲ್ಲೆಯೇ ಬೆಚ್ಚಿ ಬೆಳೆಸುವಂತಹ ಘಟನೆ ನಡೆದಿದ್ದು ನಿನ್ನೆ 10ನೇ ತರಗತಿಯ ರಿಸಲ್ಟ್ ಬಂದಿದ್ದು,ಈ ವೇಳೆ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಮೀನಾ ಇದೀಗ ಬರ್ಬರವಾಗಿ ಹತ್ಯೆ ಆಗಿದ್ದಾಳೆ. ಆಕೆಯ ರುಂಡ ಕತ್ತರಿಸಿ ಹತ್ಯೆ ಮಾಡಲಾಗಿದೆ. ಹೌದು ಕೊಲೆಯಾದ ಬಾಲಕಿಯನ್ನು ಮೀನಾ (16) ಎಂದು ಹೇಳಲಾಗುತ್ತಿದ್ದು, ನಿನ್ನೆ ಬೆಳಗ್ಗೆ ರಿಸಲ್ಟ್ ಬಂದಿದ್ದು, ಮಧ್ಯಾಹ್ನ ಓಂಕಾರಪ್ಪ ಎನ್ನುವ ವ್ಯಕ್ತಿಯ ಜೊತೆ ನಿಶ್ಚಿತರ್ಥವಾಗಿತ್ತು. ಆದರೆ ಬಾಲಕಿಗೆ ಇನ್ನು 18 ವರ್ಷ ತುಂಬಿಲ್ಲವಾದ್ದರಿಂದ ಮಾಹಿತಿ ತಿಳಿದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೌನ್‌ಸಿಲಿಂಗ್‌ ಮಾಡಿ, ಎಂಗೇಜ್ಮೆಂಟ್ ತಡೆದಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿ ಓಂಕಾರಪ್ಪ ಸಂಜೆ ಬಾಲಕಿಯ ಮನೆಗೆ ಹೋಗಿ ಅವರ ಪೋಷಕರ ಜೊತೆ ಜಗಳವಡಿದ್ದಲ್ಲದೆ ಬಾಲಕಿಯನ್ನ ಹೊರಗೆ ಎಳೆದು ತಂದು ಕುತ್ತಿಗೆ ಕತ್ತರಿಸಿದ್ದಾನೆ. ಬಾಲಕಿಯ ರುಂಡ ಕತ್ತರಿಸಿ ರುಂಡ ಸಮೇತ ಆರೋಪಿ ಎಸ್ಕೇಪ್ ಆಗಿದ್ದಾನೆ. ಸೋಮವಾರಪೇಟೆ ತಾಲೂಕಿನ ಮುಟ್ಲು ಗ್ರಾಮದಲ್ಲಿ ಈ ಭೀಕರ…

Read More

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ತವರೂರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಹಲ್ಲೆ, ಕೊಲೆ ಮತ್ತಿತರ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ. ದುಷ್ಕರ್ಮಿಗಳು ಜಾವೀದ್​​ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಹತ್ಯೆಗೈದ ಆರೋಪ ಕೇಳಿಬಂದಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಲ್ಲದೆ ಇತ್ತೀಚಿಗೆ ಆಳಂದ್ ತಾಲೂಕಿನಲ್ಲಿ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಲಾಗಿತ್ತು. ಮಾರಾಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದರು. ಅದು ಅಲ್ಲದೆ ಆಫ್ಜಲ್ ಪುರ ತಾಲೂಕಿನಲ್ಲಿ ಉಮೇಶ್ ಜಾಧವ ಅವರ ಆಪ್ತ ಎಂದು ಹೇಳಲಾಗುತ್ತಿರುವ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಇದೀಗ ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕಾಗಿ ಇದೀಗ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

Read More

ಶಿವಮೊಗ್ಗ : ನಿನ್ನೆ ನಡೆದ ಗ್ಯಾಂಗ್ ವಾರ್​​ನಿಂದ ಶಿವಮೊಗ್ಗದ ಜನ ಕಂಗಾಲಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದುಷ್ಟ ಶಕ್ತಿಗಳು ಬಿಲದಿಂದ ಹೊರ ಬಂದಿವೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಆರೋಪಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಆಡಳಿತದಲ್ಲಿ ತುಷ್ಟೀಕರಣದ ನೀತಿಯಿಂದಾಗಿ ಪೊಲೀಸರ ಮಾನಸಿಕತೆ ಸಹ ಹಾಳಾಗಿದೆ. ಕಾನೂನು ಸುವ್ಯವಸ್ಥೆಗಿಂತ ಪೊಲೀಸರು ಬೇರೆ ರೀತಿ ಯೋಚನೆ ಮಾಡುತ್ತಿದ್ದಾರೆ ಎಂದು ಇತ್ತೀಚಿನ ದಿನಗಳಲ್ಲಿ ನಡೆದ ಅನೇಕ ಪ್ರಕರಣಗಳಿಂದ ನಮಗೆ ಅನ್ನಿಸುತ್ತಿದೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿದೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದುಷ್ಟ ಶಕ್ತಿಗಳು ಬಿಲದಿಂದ ಹೊರ ಬಂದು ಜಾಗೃತವಾಗಿವೆ. ಅದೇ ರೀತಿ ಶಿವಮೊಗ್ಗ ಮತ್ತೆ ಆ ದಿನಗಳಿಗೆ ಮರಳುತ್ತಿದೆ. ಇದು ಎಲ್ಲರನ್ನೂ ಭಯಭೀತರನ್ನಾಗಿ ಮಾಡಿದೆ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ನಡೆದ ರಾಗಿಗುಡ್ಡದ ಘಟನೆಯಿಂದ ಹಿಡಿದು ಶಿವಮೊಗ್ಗ ಪೊಲೀಸರು ದ್ರೋಹಿಗಳನ್ನು ನಿರ್ವಹಿಸದ ರೀತಿ…

Read More

ಬೆಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿಯ ಹಂಗರಹಳ್ಳಿ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನ ಶ್ರೀಮಠದ ಬಾಲ ಮಂಜುನಾಥ ಸ್ವಾಮೀಜಿ ನನಗೆ ಮಲಗಲು ಹಾಸಿಗೆ ಮನೆ ಊಟ ಬೇಕು ಎಂದು ಸಲ್ಲಿಸಿದ್ದ ಮಧ್ಯಂತರ ಮನವಿಗೆ ಹೈಕೋರ್ಟ್ ಅಸ್ತು ಎಂದಿದೆ. ಜೈಲಿನಲ್ಲಿ ಮಲಗಲು ನನಗೆ ಹಾಸಿಗೆ ಬೇಕು, ಮನೆಯೂಟವೇ ಬೇಕು ಎಂಬ ಈ ಸಂಬಂಧ ತುಮಕೂರು ಜೈಲು ಅಧೀಕ್ಷಕರಿಗೆ ನಿರ್ದೇಶಿಸಬೇಕು ಎಂದು ಕೋರಿ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರು ಗುರುವಾರ ಈ ಕುರಿತಂತೆ ಆದೇಶಿಸಿದರು. ಅರ್ಜಿದಾರರು ತಮ್ಮ ರಿಸ್ಕ್‌ನಲ್ಲಿ ಮಠದಿಂದ ಅಥವಾ ಮನೆಯಿಂದ ಊಟವನ್ನು ತರಿಸಿಕೊಳ್ಳಬಹುದು. ಆದರೆ, ಅದರ ಅಪಾಯಗಳ ಹೊಣೆಯನ್ನು ತಾವೇ ಹೊರಬೇಕು. ತಂದ ಊಟವನ್ನು ಜೈಲು ಅಧಿಕಾರಿಗಳು ಪರೀಕ್ಷಿಸದ ನಂತರವೇ ಅರ್ಜಿದಾರರು ಸೇವಿಸಲು ಅವಕಾಶ ಕಲ್ಪಿಸಬೇಕು ಅಗತ್ಯವಿದ್ದರೆ ಈ ಆದೇಶದ ಮಾರ್ಪಾಡಿಗೆ ಜೈಲು ಅಧಿಕಾರಿಗಳು…

Read More

ಧರ್ಮಶಾಲಾ : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಇಂದು, ಐಪಿಎಲ್ 2024 ರ 58 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಆದರೆ ಈ ಒಂದು ಪಂದ್ಯಕ್ಕೆ ವರುಣ ಕಾಟ ಕೊಟ್ಟಿದ್ದು, ಇದೀಗ ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಮಳೆಯಾಗುತ್ತಿದ್ದು, ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಆರ್‌ಸಿಬಿ 10 ಓವರ್ ಗಳಿಗೆ 119 ರನ್ ಗಳಿಸಿದೆ. ಈಗಾಗಲೇ ಆರ್‌ಸಿಬಿ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡಿದ್ದು, ಆರ್ ಸಿ ಬಿ ತಂಡದ ನಾಯಕ ಫ್ಯಾಫ್ ಡುಪ್ಲೆಸಿ, ವೀಲ್ ಜಾಕ್ಸ್ ಹಾಗೂ ರಜತ್ ಪಾಟೀದಾರ್ ಅವರ ವಿಕೆಟ್ಗಳನ್ನು ಕಳೆದುಕೊಂಡಿದೆ. ಆದರೆ ರಜತ್ ಪಾಟಿದಾರವರು ಕೇವಲ 23 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 3 ಬೌಂಡ್ರಿ ಚಚ್ಚಿ 55 ರನ್ನುಗಳನ್ನು ಬಾರಿಸಿ, ಸ್ಯಾಮ್ ಕರ್ರಂಗೆ ವಿಕೆಟ್ ಒಪ್ಪಿಸಿದರು. ಇದಕ್ಕೂ ಮುನ್ನ ಪಂಜಾಬ್ ತಂಡದ ವೇಗದ ಬೌಲರ್ ಕಾವೇರಪ್ಪ ಆರ್ ಸಿ ಬಿ ನಾಯಕ ಡು…

Read More

ಶಿವಮೊಗ್ಗ : ನಿನ್ನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ರೌಡಿಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಘಟನೆಯಲ್ಲಿ ಗೌಸ್ ಮತ್ತು ಶೋಯೆಬ್ ಎಂಬ ಇಬ್ಬರು ರೌಡಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆಯಲ್ಲಿ ಗಾಯಗೊಂಡಿದ್ದ ರೌಡಿ ಯಾಸೀನ್ ಖುರೇಷಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ. ಹೌದು ಚಿಕಿತ್ಸೆ ಫಲಿಸದೇ ರೌಡಿಶೀಟರ್ ಯಾಸಿನ್ ಖುರೇಶಿ ಸಾವನ್ನಪ್ಪಿದ್ದಾನೆ. ಯಾಸಿನ್ ಕುರೇಶಿಗೆ ನಿನ್ನೆ ಮತ್ತೊಂದು ಗ್ಯಾಂಗ್ ಚಾಕು ಇರಿದಿದತ್ತು. ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆಯ ಬಳಿ ಈ ಘಟನೆ ನಡೆದಿತ್ತು. ಖುರೆಷಿ ಸಹಚರ ಪ್ರತಿದಾಳಿಗೆ ಇಬ್ಬರು ರೌಡಿಗಳು ಬಲಿಯಾಗಿದ್ದರು. ರೌಡಿಶೀಡರ್ಗಳಾದ ಗೌಸ್ ಹಾಗೂ ಶೋಯಬ್ ಅಲಿಯಾಸ್ ಸೇಬು ಕೊಲೆಯಾಗಿದ್ದರು. ಘಟನೆಯಲ್ಲಿ ಯಾಸಿನ್ ಗಂಭೀರವಾಗಿ ಗಾಯಗೊಂಡಿದ್ದು ಇಂದು ಆತ ಕೂಡ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಯಾಸಿನ್ ಕುರೇಶಿ ಚಿಕಿತ್ಸೆ ಪಡಿಸದೆ ಸಾವನ್ನಪ್ಪಿದ್ದಾನೆ ಗ್ಯಾಂಗ್ ವಾರ್ ಗೆ ಮೂರನೇ ಬಲಿಯಾದ ರೌಡಿಶೀಟರ್…

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನರು ಹಾಗೂ ರೈತರು ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದು ಮಳೆಯಿಂದಾಗಿ ಸ್ವಲ್ಪ ನಿಟ್ಟುಸಿರುಬಿಟ್ಟಿದ್ದಾರೆ. ಇದೀಗ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಂಜೆ ಬಾರಿ ಮಳೆ ಆಯಿತು. ಹೌದು ಇಂದು ಸಂಜೆ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಭಾಷ್ಯಂ ಸರ್ಕಲ್ ಸೇರಿದಂತೆ ಮಹಾನಗರದ ಹಲವೆಡೆ ಮಳೆ ಶುರುವಾಗಿದ್ದು, ಮಳೆ ಹಿನ್ನೆಲೆ ವಾಹನ​ ಸವಾರರು ಪರದಾಡುವಂತಾಗಿದೆ. ಅಲ್ಲದೆ ಇತ್ತ ನೆಲಮಂಗಲದಲ್ಲಿ ಕೂಡ ಭಾರಿ ಮಳೆಯಾಗಿದ್ದು, ಮಳೆಯದ ಕಾರಣದಿಂದ ಬಾಳೆ, ಅಡಿಕೆ ಮರಗಳು ನೆಲಕಚ್ಚಿದ್ದವು. ಇಂದು ಕೂಡ ಪೀಣ್ಯಾ,ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಬಿರುಗಾಳಿ ಸಹಿತ ಬಾರಿ ಮಳೆ ಶುರುವಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.ಏನಾದರು ಅಗಲಿ ಒಟ್ಟಿನಲ್ಲಿ ಮಳೆಯಾಗುತ್ತಿದೆ ಅಂತ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಹಿನ್ನೆಲೆಯಲ್ಲಿ ಇದೀಗ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಪ್ರಮುಖವಾದಂತಹ ಸೂಚನೆ ನೀಡಿದ್ದು ಮಳೆಯಿಂದ ಆಗುವ ಅವಘಡಗಳಿಂದ ಪಾರಾಗುವ ಕುರಿತು ಸೂಚನೆ ನೀಡಿದೆ. ಮಳೆ ಅವಘಡ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹವಮಾನ ಇಲಾಖೆ ಸೂಚನೆ ನೀಡಿದ್ದು, ಮನೆಯೊಳಗೆ ಕಿಟಕಿಗಳು ಹಾಗೂ ಬಾಗಿಲುಗಳನ್ನು ಮುಚ್ಚಬೇಕು. ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಸುರಕ್ಷಿತ ಆಶ್ರಯ ಪಡೆದುಕೊಳ್ಳಿ. ಮಳೆ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯವನ್ನು ಪಡೆಯಬೇಡಿ. ಮಳೆ ಬರುವಾಗ ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣ ಅನ್ ಪ್ಲಗ್ ಮಾಡಿ.ಮಳೆ ಬಂದ ತಕ್ಷಣ ಜಲಮೂಲಗಳಿಂದ ಹೊರ ಬರುವಂತೆ ಸೂಚನೆ ನೀಡಿದೆ. ವಿದ್ಯುತ್ ಶಕ್ತಿಯಿಂದ ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ. ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಲು ಹವಾಮಾನ ಇಲಾಖೆ ಸೂಚನೆ ನೀಡಿದೆ.

Read More