Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಇದೀಗ ವರುಣ ತಂಪೆರೆದಿದ್ದಾನೆ. ಮೊನ್ನೆಯಷ್ಟೇ ಸಾಕಷ್ಟು ಮಳೆಯಾಗಿ ಅವಾಂತರ ಸೃಷ್ಟಿಯಾಗಿದ್ದು ಇದೀಗ ಬೆಂಗಳೂರಿನಲ್ಲಿ ಟೌನ್ ಹಾಲ್ ಬಳಿ ಭಾರಿ ಮಳೆಯಾಗಿದ್ದು ಸಂಜೆ ಆಫೀಸ್ ಮುಗಿಸಿಕೊಂಡು ಹೋಗುವಂತಹ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಹೌದು ಇಂದು ಬೆಂಗಳೂರಿನಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ಹೊರಟ ವಾಹನ ಸವಾರರು ರಸ್ತೆಯಲ್ಲಿ ಧಾರಾಕಾರ ಮಳೆಯಿಂದ ಪರದಾಟ ನಡೆಸಿದರು. ಕಾರ್ಪೊರೇಷನ್ ವಿಧಾನಸೌಧ ಸುತ್ತಲೂ ಧಾರಾಕಾರ ಮಳೆಯಾಗಿದೆ. ಭಾರಿ ಮಳೆಯಾಗಿದ್ದರಿಂದ ಕಾರ್ಪೊರೇಷನ್ ಸುತ್ತಮುತ್ತಲು ಸಂಚಾರ ದಟ್ಟಣೆ ಉಂಟಾಗಿದೆ. ಮಡಿವಾಳ ಅಡಗೋಡಿಯಲ್ಲಿ ತುಂತುರು ಮಳೆಯಾಗಿದೆ.11ನೇ ತಾರೀಖಿನವರೆಗೆ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆಯು ಇಂದು ಅಥವಾ ನಾಳೆ ಎಲ್ಲೋ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಎಂ ಜಿ ರಸ್ತೆ ಗುಟ್ಟಹಳ್ಳಿ ಕೆ ಆರ್ ಸರ್ಕಲ್ ಯಲಹಂಕ ಪರೀಕ್ಷೆ ಮಂಡ್ ಟೌನ್ ಮಡಿವಾಳ ಸದಾಶಿವನಗರ್ ಹೆಬ್ಬಾಳ ಅರಮನೆ ಮೈದಾನ ಮಲ್ಲೇಶ್ವರಂ…
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷವನ್ನು ಮುಗಿಸಲು ಬಿಜೆಪಿ ಏನು ಬೇಕು ಅದನ್ನು ಮಾಡುತ್ತಿದೆ ಎಂದು ಗಂಭೀರವಾದ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ,ಸಂತ್ರಸ್ತೆಯರ ಮಾನಹರಣದ ಜೊತೆಗೆ ನ್ಯಾಯಾಹರಣ ಆಗುತ್ತಿದೆ. ಆರೋಪಿ ಹತ್ತಿರ ಕೆಲಸ ಮಾಡುತ್ತಿದ್ದವರು ವಿಡಿಯೋ ನೀಡಿದ್ದಾರೆ. ವಿಡಿಯೋ ತೆಗೆದುಕೊಂಡು ಹೋಗಿ ವಕೀಲರಿಗೆ ನೀಡಿದ್ದಾರೆ ಆ ವಕೀಲ ಕಾನೂನು ಬಗ್ಗೆ ಮಾತನಾಡುತ್ತಿದ್ದಾರೆ ಅವರು ಡಿಜಿ ಮತ್ತು ಐಜಿಪಿ ಹೈಕೋರ್ಟ್ ಸಿಜೆಗೆ ನೀಡಬಹುದಿತ್ತಲ್ಲ? ಎಂದರು. ಇಷ್ಟೊಂದು ದೊಡ್ಡ ಕ್ರೈಂ ಆದರೂ ಏಕೆ ಬ್ಲಾಕ್ ಮೇಲ್ ಮಾಡ್ಕೊಂಡು ಕುಳಿತಿದ್ದರು? ಈ ಕುರಿತಂತೆ ಮಾಜಿ ಸಿಎಂ ಎಲ್ಡಿ ಕುಮಾರಸ್ವಾಮಿ ಹಾಗೂ ಆ ವಕೀಲ ಏನು ಚರ್ಚಿಸಿದ್ದಾರೋ ಅದರ ಕುರಿತಂತೆ ಹಾಸನಾಂಬ ದೇವಸ್ಥಾನಕ್ಕೆ ಬಂದು ಪ್ರಮಾಣವನ್ನು ಮಾಡಲಿ. ಹೈಕೋರ್ಟ್ ಜಡ್ಜ್ ಗೆ ನೀಡಿದ್ದರೆ ವಿಡಿಯೋ ವೈರಲ್ ಆಗುತ್ತಿತ್ತ?…
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶೀಲಾ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಿದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಪೆನ್ ಡ್ರೈವ್ ಪ್ರಕರಣದ ಹಿನ್ನೆಲೆ ಮರೆತಿದ್ದೇವೆ ಅನಿಸುತ್ತದೆ. ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಿದು ಎಂದು ಕೆಪಿಸಿಸಿ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ಹೇಳಿಕೆ ನೀಡಿದರು. ಇಷ್ಟೊಂದು ಹಿಂದೂ ಮಹಿಳೆಯರ ಮಾಂಗಲ್ಯದೋಚಿರುವ ಇದಕ್ಕಿಂತ ಇನ್ನೊಂದು ದೊಡ್ಡ ಪ್ರಕರಣ ತೋರಿಸಿ ನೋಡೋಣ? ಎಂದರು. ಮಾನಹರಣ, ಶೀಲಹರಣ, ಮಾಡಿರುವ ಹಗರಣ ಇದು ಯಾರ ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲೇಬೇಕು.ಮಾನಹರಣ ಮಾಡಿದ್ದು ಅಪರಾಧವಲ್ಲ ಎಂಬ ಚರ್ಚೆ ಆಗುತ್ತಿದೆ. ಮಾಂಗಲ್ಯದೋಚಿದ್ದು ಯಾರೆಂದು ಚರ್ಚೆ ಆಗಬೇಕಲ್ಲವಾ? ಚರ್ಚೆ ದಿಕ್ಕು ನೋಡಿದರೆ ಪ್ರಕರಣ ಮುಖ್ಯ ಹಾಕುವ ಷಡ್ಯಂತರ ನಡೆಯುತ್ತಿದೆ ಎಂದು ತಿಳಿಸಿದರು.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಚ್ಡಿ ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಆರೋಪ ಮಾಡಿದ್ದರು ಇದರ ಹಿಂದೆ ಡಿಕೆ ಶಿವ ಅವರು ಕೈವಾಡ ಇದೆ ಎಂದು ತಿಳಿಸಿದರು ಇದೀಗ ಟ್ವೀಟ್ ನಲ್ಲಿ ಡಿಕೆ ಶಿವಕುಮಾರ್ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು,ಪ್ರಜ್ವಲ್ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿನೆ ಎಂದು ತಿಳಿಸಿದ್ದಾರೆ. ಟ್ವೀಟ್ ನಲ್ಲಿ ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಈ ಕೇಸಿನ ಹಿಂದೆ ಇರುವುದು ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್…
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಸ್ಲಿಮರಂತೆ ಬಿಂಬಿಸಿ ಸಮುದಾಯಗಳಿಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡ, ಬಿ ವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇದೀಗ ಟ್ವೀಟ್ ನಲ್ಲಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಕುರಿತಂತೆ ಈ ರೀತಿ ಪೋಸ್ಟ್ ಮಾಡಿದ ಆರೋಪದ ಹಿನ್ನೆಲೆ ಕೆಪಿಸಿಸಿ ಕಾನೂನು ಘಟಕದ ರಮೇಶ್ ಬಾಬು ದೂರು ಸಲ್ಲಿಸಿದ್ದರು. ಹೀಗಾಗಿ ಇದೀಗ ಬಿವೈ ವಿಜಯೇಂದ್ರಗೆ ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡ, ಅಮಿತ್ ಮಾಳವಿಯ ಹಾಗೂ ವಿಜಯೇಂದ್ರ ವಿರುದ್ಧ FIR ದಾಖಲಾಗಿತ್ತು.ಟ್ವಿಟರ್ ನಲ್ಲಿ ಸಮುದಾಯಗಳಿಗೆ ಸಂಬಂಧಿಸಿದ ಪೋಸ್ಟ್ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು.…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದಾರೆ, ಅವರು ಬರುವವರೆಗೂ ತನಿಖೆಯನ್ನು ತೋರಿತಾ ಗತಿಯಲ್ಲಿ ಮಾಡುವುದು ಕಷ್ಟ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ ಐ ಟಿ ಗಂಭೀರವಾಗಿ ತನಿಖೆ ನಡೆಸುತ್ತಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.ಪ್ರಜ್ವಲ್ ಅವರನ್ನು ಕರೆತರಲು ಎಸ್ಐಟಿ ತಂಡ ಸಿಬಿಐ ನೆರವು ಕೋರಿದೆ. ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವಂತೆ ಎಸ್ಐಟಿ ಸಿಬಿಐಗೆ ಮನವಿ ಮಾಡಿದೆ. ಪ್ರಜ್ವಲ್ ವಾಪಸ್ ಬರೊವರೆಗೂ ತ್ವರಿತಗತಿ ವಿಚಾರಣೆ ಕಷ್ಟ ಎಂದು ತಿಳಿಸಿದರು. ಇನ್ನು ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಿ ಪರಮೇಶ್ವರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ HD ರೇವಣ್ಣ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ…
ಬೆಂಗಳೂರು : ಕಿಡ್ನಾಪ್ ಕೆಎಸ್ ನಲ್ಲಿ ಇದೀಗ ಮಾಡಿ ಸಚಿವ ಎಚ್ ಡಿ ರೇವಣ್ಣಗೆ ಬೆಂಗಳೂರಿನ 17ನೇ ಸೀಮ್ ಎಂ ನ್ಯಾಯಾಲಯವು 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಹೀಗಾಗಿ ಎಚ್ ಡಿ ರೇವಣ್ಣ ಅವರು ಕೋರ್ಟ್ ಹಾಲ್ ಇಂದ ಹೊರಗಡೆ ಬರಬೇಕಾದರೆ ಎಚ್ ಡಿ ರೇವಣ್ಣ ಕಣ್ಣೀರು ಹಾಕುತ್ತಾ ಹೊರ ಬರುತ್ತಿರುವುದು ಕಂಡುಬಂದಿತು. ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂದು ಎಚ್ ಡಿ ರೇವಣ್ಣ ಅವರು ಬೆಂಗಳೂರಿನ 17ನೇ ಸಿ ಎಂ ಎಂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ರವೀಂದ್ರ ಬಿ.ಕಟ್ಟಿಮನಿ ಇದೀಗ ರೇವಣ್ಣ ಅವರಿಗೆ ಮೇ 14ರ ವರೆಗೆ ಅಂದರೆ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು, ಹೀಗಾಗಿ ರೇವಣ್ಣ ಪರಪ್ಪನ ಅಗ್ರಹಾರ ಸೇರಬೇಕಿದೆ. ಎಚ್ ಡಿ ರೇವಣ್ಣ ಅವರ ಪರವಾಗಿ ಸಿರಿ ನಾಗೇಶ್ ವಾದ ಮಂಡಿಸಿದರೆ ಎಸ್ ಐ ಟಿ ಪರ ಜಗದೀಶ್ ಅವರು ವಾದ ಮಂಡಿಸಿದರು. ಈ…
ಶಿವಮೊಗ್ಗ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆದಿದೆ. ಈ ಒಂದು ಹಂತದಲ್ಲಿ ಶೇಕಡ 66 ರಷ್ಟು ಮತದಾನ ನಡೆದಿದೆ. ಈ ಮಧ್ಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ ಈ ಬಾರಿ ಗ್ಯಾರಂಟಿ ಯೋಜನೆಗಳೇ ನನ್ನ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಎಂಬಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿ ಮಾಡಿರುವ ಐದು ಗ್ಯಾರಂಟಿಗಳು, ಪ್ರತಿ ಕುಟುಂಬಕ್ಕೂ ತಲುಪಿದೆ. ಮತ್ತೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ಐದು ಗ್ಯಾರಂಟಿಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ, ವಿಶ್ವಾಸ ಕ್ಷೇತ್ರದ ಮತದಾರರಲ್ಲಿ ಇರುವುದರಿಂದ ನನಗೆ ಗೆಲುವು ಸಿಗುತ್ತದೆ ಎಂದು ತಿಳಿಸಿದರು. ನಮ್ಮ ತಂದೆ ಬಂಗಾರಪ್ಪನವರು ಬಡವರಿಗಾಗಿ ಅನೇಕ ಯೋಜನೆಗಳನ್ನು ತಂದಿದ್ದರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಭಾವನಾತ್ಮಕ ಹೇಳಿಕೆಗಳಿಂದ ಗೆದ್ದಿರಬಹುದು.ಆದರೆ ಈಗ ಜನರಿಗೆ ಅರ್ಥವಾಗಿದೆ. ಕಾಂಗ್ರೆಸ್ ಎಲ್ಲಾ ಧರ್ಮ ಹಾಗೂ ಜಾತಿಗಳನ್ನು ಸಮಾನವಾಗಿ ಕಾಣುತ್ತಾ ಸರ್ವಧರ್ಮಗಳ ಪರವಾಗಿದೆ.ಹಾಗಾಗಿ ಕ್ಷೇತ್ರದ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸದ್ಯ ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು ದಿನದಿಂದ ದಿನಕ್ಕೆ ಈ ಒಂದು ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸ್ಫೋಟಕವಾದಂತಹ ಹೇಳಿಕೆ ನೀಡಿದ್ದು, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಬೆಂಗಳೂರಿನಲ್ಲಿಯೇ ಇದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಕ್ಷಣೆ ನೀಡಿದ್ದಾರೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು. ಆದ್ರೆ, ಇದುವರೆಗೂ ಏನು ಮಾಡಿಲ್ಲ. ನವೀನ್, ಕಾರ್ತಿಕ್, ಶ್ರೇಯಸ್ ನೋಟಿಸ್ ಕೊಟ್ಟಿಲ್ಲ, ರೇವಣ್ಣಗೆ ಮಾತ್ರ ನೋಟಿಸ್ ಕೊಟ್ಟಿದ್ದಾರೆ. ಬೆಂಗಳೂರಿನ ಗಿರಿನಗರದಲ್ಲೇ ಪ್ರಜ್ವಲ್ ಮಾಜಿ ಡ್ರೈವರ್ ಕಾರ್ತಿಕ್ ಇದ್ದಾನೆ. ನಾನು ಗಲಭೆಗೆ ಪ್ರಚೋದನೆ ಮಾಡೋದಿಲ್ಲ. ಕಾರ್ತಿಕ್ನನ್ನು ಖಾಸಗಿ ಚಾನೆಲ್ ಅಲ್ಲಿ ಕುಳಿತು ಟ್ರೈನ್ ಅಪ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 14 ವರ್ಷದಿಂದ ಕಾರ್ತಿಕ್ ಕೆಲಸದಲ್ಲಿ ಇದ್ದವನು, ಪ್ರಜ್ವಲ್ ನಡವಳಿಕೆ ಗೊತ್ತಿದ್ರೆ ಕೆಲಸ ಬಿಡಬೇಕಿತ್ತು. ಇದೀಗ ಬಂಡೆ…
ಬೆಂಗಳೂರು : ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣರನ್ನು SIT ಅಧಿಕಾರಿಗಳು ಬಂಧಿಸಿದ್ದರು.ಇದೀಗ ಇಂದು ಅವರ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, ಹಾಗಾಗಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆಯ ಮಗ ದೂರು ದಾಖಲಿಸಿದ್ದನು ಶಾಸಕ ಎಚ್ ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ ಬಾಬು ವಿರುದ್ಧ ಮಹಿಳೆಯ ಮಗ ದೂರು ಸಲ್ಲಿಸಿದ್ದನು. ದೂರನ್ನು ಆಧರಿಸಿದ ಸೊಸೈಟಿ ಅಧಿಕಾರಿಗಳು ಎಚ್ಡಿ ರೇವಣ್ಣ ಅವರನ್ನು ಇತ್ತೀಚಿಗೆ ಬಂಧಿಸಿತ್ತು. ನಂತರ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯ ಮಹಿಳೆಯನ್ನು ಕರೆದುಕೊಂಡು ಹೋಗಿ ಸ್ಥಳ ಮಹಾಜರು ಹಾಗೂ ಪರಿಶೀಲನೆ ನಡೆಸಿದರು ತದನಂತರ ನಿನ್ನೆ ಅವರ ಆರೋಗ್ಯದಲ್ಲಿ6 ಏರುಪೇರು ಉಂಟಾಗಿದ್ದರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸತತವಾಗಿ 2 ಗಂಟೆಗಳ ಕಾಲ ಚಿಕಿತ್ಸೆ ಪಡೆದಿದ್ದರು. ಇದೀಗ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ…
		












