Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇತ್ತೀಚಿಗೆ ಬಹುಭಾಷ ನಟ ಪ್ರಕಾಶ್ ರೈ ಅವರ AI ಫೋಟೋ ಎಲ್ಲೆಡೆ ಭಾರಿ ವೈರಲ್ ಆಗಿತ್ತು.ಇದೀಗ ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ. ಈ ಫೋಟೋ ನಿಜ ಎಂದು ನಂಬಿಸುವ ಕೆಲಸ ಕೆಲವರಿಂದ ಆಗಿದೆ. ಇಲ್ಲದ್ದನ್ನು ಇರುವ ರೀತಿಯಲ್ಲಿ ತೋರಿಸುತ್ತಿರುವ ಬಗ್ಗೆ ಪ್ರಕಾಶ್ ರೈಗೆ ಅಸಮಾಧಾನ ಇದೆ. ಹೀಗಾಗಿ, ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ಕೊಟ್ಟಿದ್ದಾರೆ. ‘ತಮ್ಮ ಪೋಟೋವನ್ನು ಎಐ ತಂತ್ರಜ್ಞಾನ ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರಕಾಶ್ ರೈ ದೂರಿನಲ್ಲಿ ಕೋರಿದ್ದಾರೆ. ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವುದರಲ್ಲಿ ತಪ್ಪಿಲ್ಲ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆ ಇಲ್ಲ. ನನಗೆ ಮನ್ಯುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗಾಂತ ಅವರ ನಂಬಿಕೆಯನ್ನ ಪ್ರಶ್ನೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಡ್ರಗ್ ಪೆಡ್ಲರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಯುವಕನನ್ನು ಸಂಜಯ್ (21) ಎಂದು ತಿಳಿದುಬಂದಿದೆ. ದಾಸರಹಳ್ಳಿಯ ಕೆಂಪೇಗೌಡ ಉದ್ಯಾನವನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ ಬಳಿ ಇದ್ದ 2ಕೆಜಿಗೂ ಅಧಿಕ ಗಾಂಜಾ ಜಪ್ತಿ ಮಡಲಾಗಿದೆ. ಆರೋಪಿ ಚಿಕ್ಕ ಕವರ್ ನಲ್ಲಿ ಪ್ಯಾಕ್ ಮಾಡಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಕೆಂಪೇಗೌಡ ಉದ್ಯಾನವನದಲ್ಲಿ ಮಾರಾಟ ಮಾಡುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಜಿಲ್ಲೆಯ ನಾಲ್ವರ ಅಂತ್ಯಕ್ರಿಯೆ ವಿವಿಧೆಡೆ ನೆರವೇರಿತು.ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಟ ಮತ್ತು ಅವರ ಪುತ್ರಿ ಮೇಘಾ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದ ವಿಧಿ ವಿಧಾನದಂತೆ ಶುಕ್ರವಾರ ನೆರವೇರಿತು.ಈ ವೇಳೆ ಅವರ ಸಾಕು ನಾಯಿ ಅಂತಿಮಯಾತ್ರೆ ಯಲ್ಲಿ ಹೆಜ್ಜೆ ಹಾಕಿದ್ದು ನೆರೆದವರ ಕರಳು ಕಿವುಚಿದಂತಾಯಿತು. ಇಬ್ಬರ ಶವಗಳನ್ನು ದೆಹಲಿಯಿಂದ ಗೋವಾಗೆ ಏರ್‌ಲಿಫ್ಟ್ ಮಾಡಿ, ಅಲ್ಲಿಂದ ಆಂಬುಲೆನ್ಸ್‌ನಲ್ಲಿ ಬೆಳಗಾವಿಗೆ ತಂದಾಗ ಗುರುವಾರ ಮಧ್ಯರಾತ್ರಿ 12.30 ಆಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಶುಕ್ರವಾರ ನಸುಕಿನ 4ಕ್ಕೆ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಬೆಳಿಗ್ಗೆ 10.30ರ ಸುಮಾರಿಗೆ ಅಂತ್ಯಕ್ರಿಯೆ ಮುಗಿಯಿತು. ಇನ್ನು ಅದಕ್ಕೂ ಮುನ್ನ ಆಗಮಿಸಿದ್ದ ಅರುಣ‌ ಕೋಪರ್ಡೆ ಅವರ ಅಂತ್ಯಕ್ರಿಯೆ ಗುರುವಾರ ರಾತ್ರಿ 11ಕ್ಕೆ ಇಲ್ಲಿನ ಸದಾಶಿವ ನಗರದ ಸ್ಮಶಾನದಲ್ಲಿ ನೆರವೇರಿದರೆ, ಮಹಾದೇವಿ ಬಾವನೂರ ಅವರ ಅಂತ್ಯಕ್ರಿಯೆ ಅವರ ತವರೂರಾದ ಹುಬ್ಬಳ್ಳಿ ತಾಲ್ಲೂಕಿನ ನೂಲಿ ಗ್ರಾಮದಲ್ಲಿ ನಡೆಯಿತು. ಶವದೊಂದಿಗೆ ಹೆಜ್ಜೆ ಹಾಕಿದ ನಾಯಿ ಪ್ರಯಾಗ್‌ರಾಜ್‌ನಲ್ಲಿ ಮೃತಪಟ್ಟ ಬೆಳಗಾವಿಯ…

Read More

ಬಳ್ಳಾರಿ : ಕಳೆದ ವರ್ಷ ಬಳ್ಳಾರಿ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲಾ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆದರೆ ಇದೀಗ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನಪ್ಪಿದ್ದಾರೆ. ಹೌದು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಾದೇವಿ (21) ಇದೀಗ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಬಾಣಂತಿಯನ್ನು ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಜನವರೀ 25ರಂದು ಸಿರಿಯನ್ ಮೂಲಕ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದರು.ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಐದು ದಿನದ ಬಳಿಕ ಮಾದೇವಿಗೆ ಇನ್ಫೆಕ್ಷನ್ ಆಗಿದೆ ಅಂತ ವೈದ್ಯರು ತಿಳಿಸಿದರು ನಿನ್ನೆ ರಾತ್ರಿ ತೀವ್ರ ಅಸ್ವಸ್ಥವಾಗಿ ಬಾಣಂತಿ ಮಹಾದೇವಿ ಸಾವನ್ನಪ್ಪಿದ್ದಾರೆ.ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಇದೀಗ ಮೃತ ಮಹದೇವಿ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Read More

ಬೆಂಗಳೂರು : ಕೋರ್ಟ್ ವಾರೆಂಟ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಹಿಡಿಯಲು ಪೊಲೀಸರು ಮನೆಯ ಬಳಿ ತೆರಳಿದಾಗ ಆರೋಪಿ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಂಗಳೂರಿನ ಜೆಬಿ ನಗರದ ನ್ಯೂ ತಿಪ್ಪಸಂದ್ರದಲ್ಲಿ ನಡೆದಿದೆ. ಎಚ್ ಎ ಎಲ್ ಪೋಲಿಸರಿಂದ ಇದೀಗ ರೌಡಿ ಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಆರೋಪಿ ಸೈಕೋ ಕಿರಣ್ ಬಂಧಿಸಲು ಮನೆಯ ಬಳಿ ತೆರಳಿದ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ದ್ಯಾಗರ್ ಮೂಲಕ ಪೊಲೀಸ್ ಸಿಬ್ಬಂದಿ ಮೇಲೆ ಸೈಕೋ ಕಿರಣ ದಾಳಿ ನಡೆಸಿದ್ದಾನೆ. ಈ ವೇಳೆ ಇನ್ಸ್ಪೆಕ್ಟರ್ ಅಜರುದ್ದಿನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಪೊಲೀಸರು ಸೂಚಿಸಿದ್ದಾರೆ. ನಂತರ ರೌಡಿಶೀಟರ್ ಸೈಕೋ ಕಿರಣ್ ನನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಸೈಕೋ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಬೈಕ್, ಕಾರು, ಟಾಟಾಏಸ್ ನಡುವೆ ಭೀಕರವಾದಂತ ಸರಣಿ ಅಪಘಾತವಾಗಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಬಳಿ ನಡೆದಿದೆ. ಟಾಟಾ ಏಸ್ ವಾಹನ, ಕಾರು, 2 ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ಘಟನೆಯಲ್ಲಿ ಬೈಕ್, ಕಾರು ಹಾಗೂ ಟಾಟಾ ಏಸ್ ನಲ್ಲಿದ್ದತಂಹ ಒಟ್ಟು ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಅಪಘಾತದ ಕುರಿತು ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ 6 ಜನ ನಕ್ಸಲ್ ರು ಬೆಂಗಳೂರಿನ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾಗಿದ್ದರು. ಇದೀಗ ಮತ್ತೊಬ್ಬ ನಕ್ಸಲ್ ರವೀಂದ್ರ ಎನ್ನುವವನು ಇಂದು ನಕ್ಸಲ್ ಕಮಿಟಿ ಎದುರು ಶರಣಾಗಲಿದ್ದಾನೆ ಎಂದು ತಿಳಿದುಬಂದಿದೆ. ಹೌದು ಚಿಕ್ಕಮಂಗಳೂರಿನಲ್ಲಿ ನಕ್ಸಲ್ ರವೀಂದ್ರ ಶರಣಾಗತಿಯಾಗಲಿದ್ದಾನೆ. ಚಿಕ್ಕಮಂಗಳೂರು ಜಿಲ್ಲಾ ಡಳಿತದ ಮುಂದೆ ನಕ್ಸಲ್ ರವೀಂದ್ರ ಶರಣಾಗಲಿದ್ದಾನೆ. ಕಳೆದ 18 ವರ್ಷಗಳಿಂದ ನಕ್ಸಲ್ ರವೀಂದ್ರ ಭೂಗತನಾಗಿದ್ದ. ಇಂದು ಎಸ್ ಪಿ ವಿಕ್ರಂ ಆಮ್ಟೆ, ಡಿಸಿ ವೀಣಾ ನಾಗರಾಜ್ ಮುಂದೆ ಶರಣಾಗಲಿದ್ದಾನೆ. ಸದ್ಯ ನಕ್ಸಲ್ ಶರಣಾಗತಿ ಕಮಿಟಿ ಜೊತೆಗೆ ರವೀಂದ್ರ ಇದ್ದಾನೆ. ವಿಕ್ರಂ ಗೌಡ ಎನ್ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದ ಈತ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟೆಹೋಂಡ ನಿವಾಸಿ ಎಂದು ತಿಳಿದುಬಂದಿದೆ. ನಕ್ಸಲ್ ಶರಣಾಗತಿ ಕಮಿಟಿ ಶ್ರೀಪಾಲನ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾನೆ.

Read More

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರದ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಇದೀಗ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾನ್ ಅಧ್ಯಕ್ಷತೆಯಲ್ಲಿ SIT ರಚಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಿ ಕಂದಾಯ ಇಲಾಖೆಯು ಜನವರಿ 28ರಂದು ಆದೇಶ ಹೊರಡಿಸಿದೆ. ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾ‌ರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾ‌ರ್ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾ‌ರ್ ಶೀತಲ್‌ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಹೆಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿ…

Read More

ನವದೆಹಲಿ : ಆಧಾರ್ ಕಾರ್ಡ್ ಧೃಢಿಕರಣಕ್ಕೆ ಕೇಂದ್ರ ಸರ್ಕಾರ ಇದೀಗ ಖಾಸಗಿ ಕಂಪನಿಗಳಿಗೂ ಅನುಮತಿ ನೀಡಿದೆ.ಆಧಾ‌ರ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಖಾಸಗಿ ಕಂಪನಿಗಳು ತಮ್ಮ ಸೇವೆಯನ್ನು ಒದಗಿಸುವ ಮೊದಲು ಫಲಾನುಭವಿಗಳ ಆಧಾರ್ ಕಾರ್ಡ್ ಅನ್ನು ಧೃಡೀಕರಿಸಲು ಸರ್ಕಾರ ಅನುಮತಿ ನೀಡಿದೆ. ಉತ್ತಮ ಆಡಳಿತಕ್ಕಾಗಿ ಆಧಾರ್ ಧೃಡೀಕರಣ ತಿದ್ದುಪಡಿ ನಿಯಮ, 20250 ಅಡಿಯಲ್ಲಿ ಕಾಯ್ದೆಯ ಸೆಕ್ಷನ್ 57ರ ಅಡಿಯಲ್ಲಿ ಈ ಸೌಲಭ್ಯವನ್ನು ನೀಡಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಚಿವಾಲಯಗಳು/ ಸರ್ಕಾರದ ಇಲಾಖೆಗಳನ್ನು ಹೊರತುಪಡಿಸಿ ಆಧಾರ್ ಧೃಡೀಕರಣ ಮಾಡಬಯಸುವವರು ರ ಈ ಸೌಲಭ್ಯ ತಮಗೆ ಆಧಾರ್ ಯಾಕೆ ಬೇಕು ಎಂಬ ಬಗ್ಗೆ ಸಮರ್ಥನೆ ನೀಡಿ, ಸಂಬಂಧ ಪಟ್ಟ ಇಲಾಖೆ & ಸಚಿವಾಲಯಕ್ಕೆ ಮನವಿ ಸಲ್ಲಿಸಬೇಕುಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ. ಹೀಗೆ ಸಲ್ಲಿಸಲಾದ ಪ್ರಸ್ತಾವನೆಯು ನಿಯಮ 3ರಕ್ಕೆ ಹಾಗೂ ದೇಶದ ಹಿತಾಸಕ್ತಿಗೆ ಅನುಗುಣವಾಗಿದೆಯೇ ಎಂಬುದನ್ನುಆಇಲಾಖೆ/ಸಚಿವಾಲಯ ಪರಿಶೀಲಿಸಿ, ಕೇಂದ್ರದ ಶಿಫಾರಸಿನೊಂದಿಗೆ ರವಾನಿಸುವುದು. ಇದನ್ನು ಯುಐಡಿಎಐ ಪರಿಶೀಲನೆಯ ಬಳಿಕ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಅನುಮೋದಿಸುವುದು ಎಂದು ತಿಳಿಸಲಾಗಿದೆ.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಹುಬ್ಬಳ್ಳಿಯಲ್ಲೂ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ.ಮೆಹಬೂಬ್ ವಿವಿಧ ಸಂಘ ಸಂಸ್ಥೆಗಳಲ್ಲಿ ಒಟ್ಟು 8 ಲಕ್ಷ ರೂಪಾಯಿ ಸಾಲ ಮಾಡಿದ್ದರು.ಪಡೆದ ಸಾಲಕ್ಕೆ ಪ್ರತಿ ತಿಂಗಳು 40 ಸಾವಿರ ಕಂತಿನಂತೆ ಸಾಲ ಮರುಪಾವತಿ ಮಾಡುತ್ತಾ ಬಂದಿದ್ದರಂತೆ. ಆದರೂ ಕೂಡಾ ಕೆಲವು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ಹೆಚ್ಚಾದ ಬೆನ್ನಲೆ ಮೆಹಬೂಬ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಟುಂಬಸ್ಥರ ಗಮನಕ್ಕೆ ಬಂದ ಕೂಡಲೇ ವ್ಯಕ್ತಿಯನ್ನು ರಕ್ಷಿಸಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಸದ್ಯ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ಕುರಿತು ಹುಬ್ಬಳ್ಳಿ‌ ಕಮರಿಪೇಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More