Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇ ಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.ಈ ಸಂಬಂಧ ವಿ.ಎಸ್.ಎಸ್. ಅಭಿಮಾನ್ ಡಾ. ವಿಷ್ಣುವರ್ಧನ್ ಪುಣ್ಯ ಭೂಮಿ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೋರಡಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಡಾ.ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಒಬ್ಬ ಮೇರು ನಟ. ಅವರ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಸ್ಮಾರಕ ಭವನ ನಿರ್ಮಾಣ ಆಗಬೇಕು ಎಂಬುದು ಅರ್ಜಿದಾರರ ಅಭಿಲಾಷೆ. ಸ್ಮಾರಕ ಭವನ ನಿರ್ಮಾಣಕ್ಕೆ ಅಭಿಮಾನ್ ಸ್ಟುಡಿಯೋಗೆ ಮಂ ಜೂರಾದ ಜಾಗದ ಪೈಕಿ ಕೆಂಗೇರಿಯ ಮೈಲಸಂದ್ರ ಗ್ರಾಮದ ಸರ್ವೇ ನಂ. 26, 68ರಲ್ಲಿ 10 ಗುಂಟೆ ಜಾಗವನ್ನು ಕೇಳಿ 2017ರಲ್ಲಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇಂತಹ ವಿಚಾರಗಳ ಬಗ್ಗೆ ಹೈಕೋರ್ಟ್ ವ್ಯವಹರಿಸಲಾಗದು. ಅಗತ್ಯವಿ ದ್ದರೆ…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನಿರೀಕ್ಷೆ ಮಾಡಿದಷ್ಟು ಸೀಟ್ ಗೆಲ್ಲಲು ಸಾಧ್ಯವಾಗಿಲ್ಲ. ಇದರಿಂದ ಸಿಎಂ ಸಿದ್ಧರಾಮಯ್ಯ ಕೂಡ ಬೇಸರಗೊಂಡಿದ್ದಾರೆ. ಅವರು ಬಹಳ ಸೆನ್ಸಿಟಿವ್ ವ್ಯಕ್ತಿ. ಇದರಿಂದಾಗಿ ನಾಳೆಯೇ ಅವರು ರಾಜೀನಾಮೆ ಕೊಟ್ಟರೂ ಕೊಡಬಹುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಎಕ್ಸಾಂನಲ್ಲಿ ಸೋತಿದ್ದಾರೆ. ಡಿಸಿಎಂ ತವರು ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ. ಡಾ. ಮಂಜುನಾಥ್ ಅವರು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಹಾಗಿದ್ದರೂ ಬಹು ಮತದಿಂದ ಗೆಲುವು ಸಾಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ತುಂಬಾ ಸೆನ್ಸಿಟಿವ್. ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜೀನಾಮೆ ಕೊಡುತ್ತಾರೆ ಅನಿಸುತ್ತೆ. ನಾಳೆ ಬೆಳಿಗ್ಗೆ ಪತ್ರಿಕಾಗೋಷ್ಠಿ ಕರೆದು ರಾಜೀನಾಮೆ ಕೊಟ್ಟರು ಕೊಡಬಹುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವೋಟು ಶೇ.46. ಎನ್ಡಿಎಗೆ 51.66 % ವೋಟ್ ಶೇರಿಂಗ್ ಬಂದಿದೆ 136 ಎಂಎಲ್ಎ ಇರುವ ಕಾಂಗ್ರೆಸ್ ಸರ್ಕಾರಕ್ಕೆ ಶೇ. 45.43ರಷ್ಟು ವೋಟ್ ಶೇರ್ ಬಂದಿದೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಯೋಗ್ಯತೆ ಇದರಲ್ಲೇ ಗೊತ್ತಾಗುತ್ತಿದೆ.…
ದಕ್ಷಿಣಕನ್ನಡ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಹೌದು ಆರೋಪಿಯು ಮುಂಬೈ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಲು ಪ್ರಯತ್ನಿಸುತ್ತಿದ್ದ ಈ ವೇಳೆ ಎನ್ ಆಯಾಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿಯನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್ನನ್ನು ಬಂಧಿಸಿದ್ದರು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.
ಕೋಲ್ಕತ್ತಾ : ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ. ಈ ಬಾರಿ 400 ಸೀಟು ದಾಟುತ್ತೇವೆ ಎಂದು ಹೇಳಿದ್ದಕ್ಕೆ ಪ್ರಧಾನಿಯವರು ವಿಶ್ವಾಸಾರ್ಹತೆ ಕಳೆದುಕೊಂಡಿದ್ದಾರೆ, ಕೂಡಲೇ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದರು. ಕೋಲ್ಕತ್ತಾದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ ಅರ್ಪಿಸಿದ ಮಮತಾ, ಮೋದಿ ಅವರು ಎಲ್ಲ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ತೋರಿಸಿವೆ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಈ ಬಾರಿ ಬಹಳಷ್ಟು ಜನ ನನ್ನನ್ನು ಕಡಿಮೆ ಅಂದಾಜು ಮಾಡಿದ್ದಾರೆ ಎಂದರು. ನನಗೆ ಷೇರು ಮಾರುಕಟ್ಟೆ ಹೆಚ್ಚು ಅರ್ಥವಾಗುತ್ತಿಲ್ಲ, ಆದರೆ ನೀವು ಇಂದು ಷೇರು ಮಾರುಕಟ್ಟೆಯನ್ನು ನೋಡಿದ್ದೀರಾ? ಎಂದು ಕೇಳಿದ್ದಾರೆ.ಅಲ್ಲದೆ ಮುಂದುವರೆದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, “ನೀವು ಇಸಿಐ, ಸಿಬಿಐ ಅನ್ನು ನಿಯಂತ್ರಿಸಬಹುದು, ಆದರೆ ಇಂಡಿಯಾ ಬ್ಲಾಕ್ ನಿಮ್ಮನ್ನು ಕೆಳಗಿಳಿಸುತ್ತದೆ ಎಂದು ಹೇಳಿದ್ದಾರೆ.
ನವದೆಹಲಿ : ಲೋಕಸಭಾ ಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದ್ದು, ನರೇಂದ್ರ ಮೋದಿ ಅವರು ಇದೀಗ ಮೂರನೇ ಬಾರಿಗೆ ಅತ್ಯಂತ ಬಹುಮತ ಪಡೆದು ವಿಜಯಶಾಲಿಯಾಗಿದ್ದಾರೆ. ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದೇಶದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಟ್ವೀಟ್ ನಲ್ಲಿ ಸಂತಸ ವ್ಯಕ್ತಪಡಿಸಿದ ನರೇಂದ್ರ ಮೋದಿ ಅವರು, ಜನರು ಸತತ ಮೂರನೇ ಬಾರಿಗೆ ಎನ್ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ! ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನ್ ಅವರಿಗೆ ನಮಸ್ಕರಿಸುತ್ತೇನೆ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ.ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯವನ್ನು ನೀಡುವುದಿಲ್ಲ. https://twitter.com/narendramodi/status/1797990498554048771?t=M6vrtawCJ4Dd2-2wA6opfw&s=19
ಬೆಂಗಳೂರು, :ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು, ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ. ಮಂಜುನಾಥ್ ಅವರಿಗೆ ಅಭಿನಂದನೆಗಳು: ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ನನ್ನ ಕ್ಷೇತ್ರದಲ್ಲಿ ಡಾ. ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅವರಿಗೆ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು…
ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ನಿರೀಕ್ಷೆಗು ಮೀರಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಯಶಸ್ವಿಯಾಗಿದೆ. ಚುನಾವಣಾ ಫಲಿತಾಂಶದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. 15-20 ಸ್ಥಾನ ನಮ್ಮ ನಿರೀಕ್ಷೆಯಾಗಿತ್ತು. ಆದರೆ, 2019 ರಲ್ಲಿ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದ್ದೆವು. ಈಗ 9 ಕ್ಕೆ ಏರಿದ್ದೇವೆ. ಈ ಬಾರಿ ನಮಗೆ ಶೇ 45.34, ಬಿಜೆಪಿ ಶೇ 46.04 ರಷ್ಟು ಮತ ಪಡಿದಿದೆ. 2019 ರಲ್ಲಿ ಬಿಜೆಪಿ ಶೇ 51.38 ರಷ್ಟು ಮತ ಗಳಿಸಿತ್ತು. ನಮಗೆ ಶೇ31.88 ರಷ್ಟು ಮಾತ್ರ ಮತಗಳು ಬಂದಿದ್ದವು. 2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ. ಬಿಜೆಪಿ ಮತ ಪ್ರಮಾಣ ಶೇ5 ರಷ್ಟು ಕುಸಿದಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಅವರ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ. ಜೆಡಿಎಸ್…
ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ನಿರೀಕ್ಷೆಗು ಮೀರಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಯಶಸ್ವಿಯಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮದ ಹೆಸರಲ್ಲಿ ಮತ ಕೇಳಿದ ನರೇಂದ್ರ ಮೋದಿಯವರಿಗೆ ಪ್ರಧಾನಿಯಾಗಲು ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಗ್ರಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನೀರೀಕ್ಷೆಯಂತೆ ರಾಜ್ಯದಲ್ಲಿ ಹೆಚ್ಚು ಸೀಟ್ ಗೆಲ್ಲಲು ಆಗಲಿಲ್ಲ. ಪ್ರಧಾನಿ ಮೋದಿಗೆ ಸೋಲುವ ಭೀತಿ ಇತ್ತು.ಮೀಸಲಾತಿ ತೆಗೆದು ಮುಸ್ಲಿಮರಿಗೆ ಕೊಡುತ್ತಾರೆ ಎಂದು ಹೇಳಿದರು.ಆದರೆ ಚುನಾವಣೆಯಲ್ಲಿ ಇದು ಯಾವುದು ವರ್ಕ್ ಔಟ್ ಆಗಲಿಲ್ಲ. ಬಿಜೆಪಿಗೆ ಕಳೆದ ಬಾರಿಗಿಂತ ಸೀಟ್ ಕಡಿಮೆಯಾಗಿದೆ.ಪ್ರಧಾನಿಯಾಗಲು ನರೇಂದ್ರ ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದರು. ಸಿಎಂಗಳನ್ನು ಜೈಲಿಗೆ ಕಳುಹಿಸಿದರು ಈಡಿ ಸಿಬಿಐ ಬಳಸಿದರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅತಿ ದೊಡ್ಡ ಹಿನ್ನಡೆಯಾಗಿದೆ ಜೋಡೋ ಯಾತ್ರೆ ನ್ಯಾಯ ಯಾತ್ರೆಗೆ ಮನ್ನಣೆ ಸಿಕ್ಕಿದೆ ರಾಹುಲ್ ಯಾದರಿಗಳಿಂದಲೇ ಹೆಚ್ಚು ಮೈತ್ರಿ ಅಭ್ಯರ್ಥಿಗಳ ಜಯವಾಗಿದೆ…
ಬೆಂಗಳೂರು : ಲೋಕಸಭೆಯ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ನಿರೀಕ್ಷೆಯಂತೆ ಈ ಬಾರಿ ಏನ್ಡಿಎ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಾಗಲಿಲ್ಲ ಅದರಂತೆ ಇಂಡಿಯಾ ಮೈತ್ರಿ ಕೂಟ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ದೇಶದಲ್ಲಿ ಮತ್ತು ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ನಲ್ಲಿ ಮತದಾನದ ಪ್ರಮಾಣ ಹೆಚ್ಚಳವಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಿಂದ ಗೆದ್ದಂತಹ ಬಿಜೆಪಿ ಇರಬಹುದು ಜೆಡಿಎಸ್ ಇರಬಹುದು ಅಥವಾ ಕಾಂಗ್ರೆಸ್ನವರು ಎಲ್ಲಾ ಸಂಸತ್ ಸದಸ್ಯರಿಗೆ ಅಭಿನಂದನೆ ಹೇಳಲಿಕ್ಕೆ ಬಯಸುತ್ತೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ಏನು ನಿರೀಕ್ಷೆ ಮಾಡಿತ್ತೋ ಆ ನಿರೀಕ್ಷೆಗೆ ಅನುಗುಣವಾಗಿ 10 ಸ್ಥಾನಗಳನ್ನು ಗೆಲ್ಲಿಕೆ ಸಾಧ್ಯವಾಗಿದೆ. ನಾವು ಸುಮಾರು ಹದಿನೈದರಿಂದ ಇಪ್ಪತ್ತು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಲೆಕ್ಕಾಚಾರ ಹಾಕಲಾಗಿತ್ತು.ಆದರೆ ನಮ್ಮ ಲೆಕ್ಕಚಾರದಂತೆ ಅದು ಆಗಲಿಲ್ಲ. ಆದರೆ 2019ರಲ್ಲಿ ಕೇವಲ ಒಂದು ಸ್ಥಾನವನ್ನು ಗೆದ್ದಿದ್ದೆವು ಈ ಬಾರಿ 9 ಸ್ಥಾನಗಳನ್ನು ಗೆದ್ದಿದ್ದೇವೆ ಎಂದರು. ರಾಜ್ಯಕ್ಕೆ…
ಮಂಡ್ಯ : 2024ರ ಲೋಕಸಭಾ ಚುನಾವಣೆಯಲ್ಲಿ 5 ಲಕ್ಷಕ್ಕೂ ಅಧಿಕ ಮತದಾರರು ನನ್ನ ಪರವಾಗಿ ಮತ ಚಲಾಯಿಸಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ಜನರ ಈ ಒಂದು ತೀರ್ಪಿಗೆ ನಾನು ತಲೆಬಾಗುತ್ತೇನೆ ಎಂದು ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ತಿಳಿಸಿದರು. ಅತಿ ಕಡಿಮೆ ಅವಧಿಯಲ್ಲಿ ಲಕ್ಷಾಂತರ ಜನರ ವಿಶ್ವಾಸ ಗಳಿಸಿರುವುದು ನನಗೆ ಹೆಮ್ಮೆ ಎನಿಸಿದೆ. ಮತದಾರರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ.ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲಾ ನನ್ನ ಮತದಾರ ಬಂಧುಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯರ್ಕತರೆಲ್ಲರಿಗೂ ನನ್ನ ಹೃದಯದ ಪೂರ್ವಕ ಅಭಿನಂದನೆಗಳು. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ, ಕ್ಷೇತ್ರದ ಶಾಸಕರಿಗೆ ಧನ್ಯವಾದಗಳು. ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರು,…













