Author: kannadanewsnow05

ನವದೆಹಲಿ : ಲೋಕಸಭೆ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು , ನಿರೀಕ್ಷೆಯಂತೆ ಎನ್ಡಿಎ ಹೆಚ್ಚಿನ ಸ್ಥಾನಗಳನ್ನು ಪಡೆಯುವ ವಿಫಲವಾಗಿದೆ. ಅದೇ ರೀತಿಯಾಗಿ, ಇಂಡಿಯಾ ಮೈತ್ರಿ ಕೂಟ ನಿರೀಕ್ಷೆಯಂತೆ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಂಡಿದೆ, ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಸುದ್ದಿಗೋಷ್ಠಿ ನಡೆಸಿದರು. ಸಂವಿಧಾನವನ್ನು ಉಳಿಸುವ ಮೊದಲ ಹೆಜ್ಜೆ ಜನರು ಇಟ್ಟಿದ್ದಾರೆ. ಸಂವಿಧಾನದ ರಕ್ಷಣೆಗಾಗಿ ಜನರು ಒಗ್ಗಟ್ಟಾಗಿ ಹೋರಾಡಿದ್ದಾರೆ. ಸಂವಿಧಾನ ಪುಸ್ತಕ ಕೈಯಲ್ಲಿ ಹಿಡಿದು ರಾಹುಲ್ ಗಾಂಧಿ ಇದೆ ವೇಳೆ ತೋರಿಸಿದರು. ಸಂವಿಧಾನವನ್ನು ಉಳಿಸಲು ಹೋರಾಟ ಮಾಡಬೇಕಿತ್ತು.ಮೋದಿ ಅಮಿತ್ ಶಾ ಎಲ್ಲಾ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದರು. ಇಡೀ ಆಡಳಿತ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ್ದೇವೆ. ನಾವು ಕೇವಲ ರಾಜಕಾರಣಕ್ಕಾಗಿ ಹೋರಾಟ ಮಾಡಲಿಲ್ಲ ಎಂದು ದೆಹಲಿ ಎಐಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಎಲ್ಲಾ ಸಂಸ್ಥೆಗಳನ್ನ ಮೋದಿ, ಅಮಿತ್ ಶಾ ಬೆದರಿಸಿದ್ದರು. ಸಂವಿಧಾನವನ್ನು ಉಳಿಸುವ ಹೋರಾಟವಾಗಿತ್ತು. ನಮ್ಮ ಬ್ಯಾಂಕ್ ಅಕೌಂಟ್ ಸೀಸ್ ಮಾಡಿದಾಗ ನಮ್ಮ ಮುಖ್ಯಮಂತ್ರಿ ಅವರನ್ನು ಜೈಲಿಗೆ ಹಾಕಿದ್ದರು. ಒಂದಾಗಿ ಹೋರಾಡಬೇಕು ಅಂತ…

Read More

ಹಾವೇರಿ: ಹಾವೇರಿ ಗದಗ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಹಾವೇರಿಯಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು,ನನ್ನ ಗೆಲುವಿಗೆ ಕಾರಣರಾದ ಹಾವೇರಿ ಗದಗ ಜಿಲ್ಲೆಗಳ ಜನರಿಗೆ ಕೋಟಿ ಕೋಟಿ ನಮನಗಳು, ಮಹಾಜನತೆಯ ಆಶೀರ್ವಾದದಿಂದ ಈ ಗೆಲುವು ಸಾಧಿಸಿದ್ದೇನೆ ಎಂದು ಹೇಳಿದರು. ಈಗಾಗಲೇ ಸಂದೇಶ ಬಂದಿದೆ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಲಾಗುವುದು. ದೆಹಲಿಯಿಂದ ಬಂದ ಮೇಲೆ ದೊಡ್ಡ ಪ್ರಮಾಣದಲ್ಲಿ ಮೆರವಣಿಗೆ ಮಾಡೋಣ. ನೀವು ಇಟ್ಟಿರುವ ನಂಬಿಕೆಗೆ ತಕ್ಕಹಾಗೆ ಕೆಲಸ ಮಾಡುತ್ತೇನೆ. ಮಹಿಳೆಯರ ರಕ್ಷಣೆ .ಮಾಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಇರಬಹುದು. ನಮ್ಮ ಬಳಿ ಜನ ಶಕ್ತಿ ಇದೆ. ಜನಶಕ್ತಿ ರಾಜಶಕ್ತಿ ನಡುವೆ ಸಂಘರ್ಷ ಬಂದಾಗ ಜನಶಕ್ತಿ ಗೆಲ್ಲುತ್ತದೆ ಎಂದರು. ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸುಮ್ಮನೆ ಬಿಡುವುದಿಲ್ಲ.ನಮ್ಮ ಕಾರ್ಯಕರ್ತರಿಗೆ…

Read More

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಗೆಲುವು ಕುರಿತಾಗಿ HD ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,ಡಾ.ಮಂಜುನಾಥ್ ನ ಹರಕೆ ಕುರಿ ಮಾಡಿದ್ದಾರೆ ಎಂದಿದ್ದರೂ.ಇವತ್ತು ಯಾರು ಹರಕೆ ಕುರಿಯಾಗಿದ್ದಾರೆ ಎಂಬುದು ಫಲಿತಾಂಶದಿಂದ ತಿಳಿದಿದೆ.ಡಿ.ಕೆ.ಸುರೇಶ್ ರ 2019 ರ ಗೆಲುವಿಗೆ ಜೆಡಿಎಸ್ ಕಾರಣ.ಜೆಡಿಎಸ್ ಸಹಕಾರವೇ ಅವರ ಹಿಂದಿನ ಎರಡು ಗೆಲುವಿಗೆ ಕಾರಣ. ನಮ್ಮ ಪಕ್ಷವನ್ನ ಸರ್ವ ನಾಶ ಮಾಡಲು ಹೊರಟಿದ್ದರು.ಅದಕ್ಕೆ ಇಂದು ಜನರು ಉತ್ತರ ಕೊಟ್ಟಿದ್ದಾರೆ ಎಂದರು ಮಂಡ್ಯದಲ್ಲಿ ನೂತನ ಸಂಸದ ಕುಮಾರಸ್ವಾಮಿ ಸುದಿಗೋಷ್ಠಿಯಲ್ಲಿ ಮಾತನಾಡಿ,ಇದು ನನ್ನ ಗೆಲುವಲ್ಲ, ಮಂಡ್ಯ ಜಿಲ್ಲೆ ಜನರ ಗೆಲುವು. ನಾನು ಈ‌ ಚುನಾವಣೆಯಲ್ಲಿ ಪ್ರಚಾರ ಮಾಡಿಲ್ಲ. ಎರಡು ಪಕ್ಷದ ನಾಯಕರು, ಕಾರ್ಯಕರ್ತರ ಶ್ರಮದಿಂದ ಗೆಲುವು ಕಂಡಿದ್ದೇನೆ.ಈ‌ ಜಿಲ್ಲೆಯ ಜನರು ಋಣ ನಾನು ಹೊತ್ತಿದ್ದೇನೆ. ಭಗವಂತ‌ ಕೊಟ್ಟ ಅವಕಾಶವನ್ನ ಬಳಸಿಕೊಂಡು ಸಮಸ್ಯೆ ಪರಿಹಾರ ಮಾಡಲು ಪ್ರಯತ್ನಿಸುತ್ತೇನೆ.ಜನರ ನಿರೀಕ್ಷೆಗಳನ್ನ ಈಡೇರಿಸಲು ಪ್ರಾಮಾಣಿಕ ಪ್ರಯತ್ನ‌ ಮಾಡ್ತೇನೆ.ಎಲ್ಲ ಫ್ಯಾಕ್ಟರ್ ವರ್ಕ್ ನಿಂದ ಗೆಲುವು ಸಿಕ್ಕಿದೆ.ಪಕ್ಷಾತೀತವಾಗಿ ನನ್ನನ್ನ ಗೆಲ್ಲಿಸಿದ್ದಾರೆ. ಬೇರೆ ಪಕ್ಷದ ಮುಖಂಡರು‌ ಸಹಕರಿಸಿದ್ದಾರೆ.ಅವರ ನಿರೀಕ್ಷೆ…

Read More

ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಿಂದ ಶೋಭ ಗೋ ಬ್ಯಾಕ್ ಅಭಿಯಾನ ಆದ ಬಳಿಕ ಬಿಜೆಪಿ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಇದೀಗ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶುಭ ಕರಂದ್ಲಾಜೆ ಅವರು ಎರಡುವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಹೌದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಗೆ ಭರ್ಜರಿ ಜಯ ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ ಗೆ 2,59,476 ಮತಗಳ ಅಂತರದಿಂದ ಜಯ ಸಿಕ್ಕಿದ್ದು, ಬಿಜೆಪಿಗೆ ಶೋಭಾ ಕರಂದ್ಲಾಜೆ ಅವರು 9,86,49 ಮತಗಳು ಪಡೆದುಕೊಂಡಿದ್ದಾರೆ. ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್ನ ಪ್ರೊ. ರಾಜೀವ್ ಗೌಡ ಅವರು 76,573 ಮತಗಳು ಪಡೆದುಕೊಂಡಿದ್ದಾರೆ.ಹೀಗಾಗಿ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯದರು ಸಂಭ್ರಮಾಚರಣೆ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರು ಇದೀಗ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

Read More

ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಹಿಂದೂ ಪ್ರಕಟವಾಗಿದ್ದು ಕಳೆದ ಎರಡು ದಿನಗಳ ಹಿಂದೆ ಮತದಾನೋ ತರ ಸಮೀಕ್ಷೆಗಳು ಬಹಿರಂಗ ಪಡಿಸಿದ್ದ ಅಂಕಿ ಅಂಶಗಳು ಇದೀಗ ಸಂಪೂರ್ಣ ತಲೆಕೆಳಗಾಗಿವೆ ಎನ್‌ಡಿಎ ಮತ್ತು ಐಎನ್‌ಡಿಐಎ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇದೀಗ ಚುನಾವಣೆ ಫಲಿತಾಂಶದ ಕುರಿತು ಹಿರಿಯ ನಟ ಪ್ರಕಾಶ್ ರೈ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರಕಾಶ್ ರೈ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ. ಅವನು ಈಗ ಬೇರೊಬ್ಬರ ಬೆಂಬಲದ ಸಹಾಯ ಪಡೆದುಕೊಳ್ಳುವಂತಾಗಿದೆ. ಭಾರತ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ, ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮ ರೀತಿಯಲ್ಲಿ ಹೋರಾಡಿದ್ದು, ಇದು ಮುಂದುವರಿಯುತ್ತದೆ ಎಂದು ಪ್ರಕಾಶ್ ರೈ ಬರೆದುಕೊಂಡಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ 17 ಸ್ಥಾನ ಬಿಜೆಪಿ 9 ಸ್ಥಾನ ಕಾಂಗ್ರೆಸ್ ಹಾಗೂ 2 ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರು ಹಾಗೂ ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಯವರು ಎರಡುವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಹೌದು ಕೋಟ ಶ್ರೀನಿವಾಸ ಪೂಜಾರಿ ಅವರು, 7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು 4,70,215 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಕಾರಿ ಅವರು 2,57,178 ಮತಗಳ ಮುನ್ನಡೆ ಸಾಧಿದ್ದಾರೆ. ಈ ಗೆಲುವಿನ ಹಿಂದೆ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾದಳದ ನೂರಾರು ನಾಯಕರು, ಸಹಸ್ರಾರು ಕಾರ್ಯಕರ್ತರ ಶ್ರಮವಿದೆ. ಒಂದೊಂದು ಮತಕ್ಕೂ ಬೆಲೆ ಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿದ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಮಸ್ತ ಮತದಾರರಿಗೆ ವಂದನೆಗಳು…ಎಂದು ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ. https://twitter.com/KotasBJP/status/1797890863139602941?t=3mWuIEG425o5FvveFFN4mg&s=19

Read More

ನವದೆಹಲಿ : ಲೋಕಸಭೆಯ ಫಲಿತಾಂಶ ಬಹುತೇಕ ಇದೀಗ ಹೊರಬಿದ್ದಿದ್ದು, ಎನ್ ಡಿ ಎ ಸುಮಾರು 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಅಲ್ಲದೆ ಇಂಡಿಯಾ ಮೈತ್ರಿಕೂಟ ಕೂಡ 230 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಇಂಡಿಯಾ ಹೊಸ ರಣತಂತ್ರ ಒಂದು ಹೆಣೆದಿದ್ದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರ ಜೊತೆ ಹೇಗೆ ಮಾತುಕತೆ ನಡೆಸಿದ್ದು ಭರ್ಜರಿ ಆಫರ್ ಒಂದನ್ನು ನೀಡಿದೆ ಎಂದು ಹೇಳಲಾಗುತ್ತಿದೆ. ಹೌದು ಕಿಂಗ್ ಮೇಕರ್ ಎಂದೇ ಹೇಳಲಾಗುತ್ತಿರುವ ಚಂದ್ರಬಾಬು ನಾಯ್ಡು ಹಾಗೂ ನೀತಿಶ್ ಕುಮಾರ್ ಅವರಿಗೆ ಇಂಡಿಯಾ ಮೈತ್ರಿಕೂಟ ಭರ್ಜರಿ ಆಫರ್ ನೀಡಿದೆ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟದ ಆಫರ್ ನೀಡಿದ ಇಂಡಿಯಾ ಮೈತ್ರಿಕೂಟ, ಅಲ್ಲದೆ ಆಂಧ್ರಪ್ರದೇಶಕ್ಕೆ ಕೂಡ ವಿಶೇಷ ಸ್ಥಾನಮಾನದ ಆಫರ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ NCP ನಾಯಕ ಶರದ್ ಪವಾರ್ ಅವರು ಮಾತನಾಡಿ, ಇಂಡಿಯಾ ಮೈತ್ರಿಕೂಟ ನಾಯಕರ ಜೊತೆಗೆ ಚರ್ಚಿಸುದ್ದೇನೆ. ಹಿಂದಿ ಪ್ರಾಬಲ್ಯ ರಾಜ್ಯಗಳಲ್ಲಿ…

Read More

ಬೀದರ್ : ತಂದೆಯ ಗರಡಿಯಲ್ಲಿಯೇ ಬೆಳೆದು ಇದೀಗ ಕೇವಲ 26 ನೇ ವಯಸ್ಸಿಗೆ ಸಂಸತ್ತು ಪ್ರವೇಶಿಸಿರುವ ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಾಗೂ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಕಂಡ್ರೆ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಹೌದು ಸಚಿವ ಈಶ್ವರ್​ ಖಂಡ್ರೆ ಪುತ್ರ, ಸಾಗರ ಖಂಡ್ರೆ ಬೀದರ್​ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಿದ್ದಾರೆ. ಕ್ಷೇತ್ರವನ್ನು ಮರಳಿ “ಕೈ” ವಶವಾಗಿದೆ. ಸಾಗರ ಖಂಡ್ರೆ ಗೆಲವು ಸುಲಭವಾದದ್ದು ಅಲ್ಲ. ಸಾಗರ ಖಂಡ್ರೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಘಟಾನುಘಟಿ ನಾಯಕ ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರದ ವೇಳೆ ವಿಪಕ್ಷ ನಾಯಕ ಆರ್​. ಅಶೋಕ್​ ಸಾಗರ್ ಖಂಡ್ರೆ ವಿರುದ್ಧ ಸಾಗರ ಖಂಡ್ರೆ ಒಬ್ಬ ಅನುಭವ ಇಲ್ಲದ ಹುಡುಗ, ಆತ ಗೆದ್ದರೆ ಸಂಸತ್‌ಗೆ ಸ್ಕೂಲ್ ಬ್ಯಾಗ್, ಬುಕ್ ಹಿಡಿದು ಕರೆದುಕೊಂಡು ಹೋಗಲು ಒಬ್ಬರು ಬೇಕು ಎಂದು ವ್ಯಂಗ್ಯ ವಾಡಿದ್ದರು.…

Read More

ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿರುದ್ಧ ಹೀನಾಯವಾಗಿ ಸೋತಿದ್ದಾರೆ. ಇದೀಗ ಅವರ ವಿರುದ್ಧ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ನನ್ನು ಕಾಂಗ್ರೆಸ್ ಕಾರ್ಯಕರ್ತರು ಹೊತ್ತು ಸಂಭ್ರಮಾಚರಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಗೂ ಎನ್.ಡಿ.ಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಇದೀಗ ಫಲಿತಾಂಶ ಹೊರ ಬಿದ್ದಿದ್ದು ಶ್ರೇಯಸ್ ಪಟೇಲ್ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಮಾಜಿ ಕಾರ್ ಚಾಲಕ ಕಾರ್ತಿಕ್ ಹಾಗೂ ಪುಟ್ಟರಾಜು ಅವರೊಂದಿಗೆ ಸಂಭ್ರಮಾಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಅತ್ಯಂತ ಜಿದ್ದಾಜಿದ್ದಿನ ಕ್ಷೇತ್ರ ಎಂದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿತ್ತು.ಇದೀಗ ಈ ಒಂದು ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ವೈದ್ಯರಾಗಿರುವ ಡಾ. ಸಿಎನ್ ಮಂಜುನಾಥ್ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿಕೆ ಸುರೇಶ್ ಅವರು ಹ್ಯಾಟ್ರಿಕ್ ಗೆಲುವಿನ ಬಳಿಕ ಇದೀಗ 4ನೇ ಬಾರಿ ಸೋತಿದ್ದಾರೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿದರು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಗೆಲುವು ಖಚಿತವಾಗುತ್ತಿದ್ದಂತೆಯೇ ಸುರೇಶ್ ಪ್ರತಿಕ್ರಿಯೆ ನೀಡಿ, ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ.ಸೋಲು ಗೆಲುವನ್ನು ಸಮಾನವಾಗಿ…

Read More