Author: kannadanewsnow05

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಸರ್ಕಾರಿ ಪಬ್ಲಿಕ್ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಾಪತ್ತೆಯಾಗಿದ್ದಂತಹ ಶ್ರೇಯಸ್ (16) ಎನ್ನುವ ವಿದ್ಯಾರ್ಥಿಯ ಮೃತ ದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಕಳಸ ಪಬ್ಲಿಕ್ ಸ್ಕೂಲ್‍ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್(16) ಎಂಬ ವಿದ್ಯಾರ್ಥಿ ಮಾ.16ರಿಂದ ಕಾಣೆಯಾಗಿದ್ದ. ಶಾಲೆ ಬಿಟ್ಟ ನಂತರ ವಿದ್ಯಾರ್ಥಿ ಮನೆಗೆ ತೆರಳಿರಲಿಲ್ಲ. ಈ ಬಗ್ಗೆ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿಯ ಪತ್ತೆಗಾಗಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಲಾಗಿತ್ತು. ಮಂಗಳವಾರ ರಾತ್ರಿ ಕಳಸ ಬಾಳೆಹೊಳೆ ನಡುವಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮೇಲಿತ್ತಿ ಪರಿಶೀಲಿಸಲಾಗಿ ಅದು ನಾಪತ್ತೆಯಾಗಿದ್ದ ವಿದ್ಯಾರ್ಥಿಯದ್ದೇ ಎಂದು ತಿಳಿದು ಬಂದಿದೆ. ಈತ ಮೂಲತಃ ಬೇಲೂರಿನವನಾಗಿದ್ದು, ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿ ಇದ್ದುಕೊಂಡು ಕಳಸ ಪಬ್ಲಿಕ್ ಸ್ಕೂಲ್‍ಗೆ ಹೋಗುತ್ತಿದ್ದ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಅವರ ಕಚೇರಿಯಲ್ಲಿ ಕಳ್ಳತನ ನಡೆದಿದೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕರಾದಂತಹ ಮಹೇಶ್ ತೆಂಗಿನಕಾಯಿ ಅವರ ಕಚೇರಿಯಲ್ಲಿ ಕಳ್ಳತನ ನಡೆದಿದೆ. ಮಾರ್ಚ್ 16ರಂದು ಈ ಒಂದು ಕಳ್ಳತನ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಜೆಸಿ ನಗರದ ಟೌನ್ ಹಾಲ್ ಕಟ್ಟಡದಲ್ಲಿರುವ ಮಹೇಶ್ ತೆಂಗಿನಕಾಯಿ ಕಚೇರಿಯಲ್ಲಿ, ಕಚೇರಿಯ ಹಿಂಬಾಗಿಲಿನಿಂದ ಒಳನುಗ್ಗಿ ಕಳ್ಳತನ ನಡೆಸಿದ್ದಾರೆ. ಅವರ ಕೇಂದ್ರ ಕಚೇರಿ ಇದೆ. ಕಚೇರಿಯ ಹಿಂಬದಿಯಿಂದ ಬಂದು ಖದೀಮರು ಕಳ್ಳತನ ಮಾಡಿದ್ದಾರೆ. ಮಾರ್ಚ್ 16 ರಂದು ನಡೆದಿರುವ ಕಳ್ಳತನ ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಅಪರೂಪದ ಪ್ರಕರಣ ನಡೆದಿದ್ದು, ಮಳೆ ಹಾನಿ ಪರಿಹಾರ ನೀಡದ್ದಕ್ಕೆ ಪಟ್ಟಣ ಪಂಚಾಯಿತಿಯನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಜೆಎಂಎಫ್ ಸಿ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ. 2014ರಲ್ಲಿ ಮಳೆಯಿಂದ ಶ್ರೀಧರ ನಾಯಕ್ ಮನೆಗೆ ನೀರು ನುಗ್ಗಿತ್ತು. ಶ್ರೀಧರ ನಾಯಕ ಮನೆಗೆ ಒಳಚರಂಡಿ ನೀರು ನುಗ್ಗಿ ಹಾನಿ ಆಗಿತ್ತು. ಮಳೆ ಹಾನಿ ಈ ವೇಳೆ ಶ್ರೀಧರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಪರಿಹಾರ ಅರ್ಜಿಯನ್ನು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿರಸ್ಕರಿಸಿದ್ದರು. ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಆದೇಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಶ್ರೀಧರ ನಾಯ್ಕಗೆ 80,000 ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶಿಸಿ 10 ತಿಂಗಳು ಕಳೆದರೂ ಕೂಡ ಪರಿಹಾರ ನೀಡಿಲ್ಲ. ಹಾಗಾಗಿ ಕೋರ್ಟ್ ಆದೇಶ ಉಲ್ಲಂಘನೆಯಾದ ಹಿನ್ನೆಲೆ ಪಟ್ಟಣ ಪಂಚಾಯತಿ ಕಚೇರಿ ಜಪ್ತಿಗೆ ಆದೇಶಿಸಿದೇ. ನ್ಯಾಯಾಲಯದ ಸಿಬ್ಬಂದಿಯಿಂದ ಹೊನ್ನಾವರ ಪಟ್ಟಣ ಪಂಚಾಯಿತಿ ಕಚೇರಿ ಇದೀಗ…

Read More

ಉಡುಪಿ : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಮಹಿಳೆ ಒಬ್ಬಳು ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸ್ಥಳೀಯ ನಿವಾಸಿಗಳಾದ ಲಕ್ಷ್ಮಿಬಾಯಿ, ಸುಂದರ್‌, ಶಿಲ್ಪ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಒಂದು ವಿಡಿಯೋ ವೈರಲ್ ಆಗಿತ್ತು.

Read More

ಬೆಂಗಳೂರು : ಇತ್ತೀಚಿಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಮಾತನಾಡುವ ಬರದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಲಾಗಿದೆ. ಎಸ್ ಕಿರಣ್ ಎಂಬುವವರಿಂದ ಕೋರ್ಟಿಗೆ ಖಾಸಗಿ ದೂರು ಸಲ್ಲಿಕೆಯಾಗಿದೆ. BNS ಸೆಕ್ಷನ್ 299, 352, 356 (2) ರ ಅಡಿ ಕ್ರಮ ಕೋರಿ ಖಾಸಗಿ ದೂರು ದಾಖಲಾಗಿದೆ. ಸಿಎಂ ಹೇಳಿದ್ದೇನು? ವಿಧಾನಸಭೆಯಲ್ಲಿ ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಚರ್ಚೆ ನಡೆಯುವಾಗ, ರಾಜ್ಯದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಗಳಿಂದಲೇ ಅಪರಾಧಗಳು ನಡೆಯುತ್ತವೆ. ನಿಮ್ಮಿಂದ ಹಾಗೂ ಆರ್ ಎಸ್ ಎಸ್ ನವರಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಗೆ ವಿಪಕ್ಷ…

Read More

ಕೊಪ್ಪಳ : ಕೊಪ್ಪಳದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಕೊಪ್ಪಳ ರಸ್ತೆಯ ಸಿಬಿಎಸ್ ವೃತ್ತದ ಸಮೀಪದ ಹಳೇಯ ಪವನಬಾರ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದಾದಾಪೀರ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಹೊಸ ಜನರೇಟರ್, ಕೃಷಿ ಮತ್ತು ರೈತರಿಗೆ ಉಪಯುಕ್ತವಾಗುವ ಯಂತ್ರೋಪಕರಣಗಳ ಮಾರಾಟ ಮಾಡಲಾಗುತಿತ್ತು. ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಉಂಟಾದ ಬೆಂಕಿಯಿಂದ ಹೊಗೆ ಮಳಿಗೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ದಾದಾಪೀರ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ನಾಶವಾಗಿದ್ದವು. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ, ಈ ಹೊತ್ತಿಗಾಗಲೆ ಅಂಗಡಿಯಲ್ಲಿದ್ದ ಬಹುತೇಕ ಹೊಸ ಉಪಕರಣಗಳು ಹಾಗೂ ರೈತರು ರಿಪೇರಿಗೆ ನೀಡಿದ್ದ ಕೃಷಿ ಪರಿಕರಗಳು ಸುಟ್ಟು ಕರಕಲಾಗಿವೆ.…

Read More

ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆಯಿತು. ಕೃಷಿ ಇಲಾಖೆಯ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಈ ಒಂದು ವಿಧೇಯಕವನ್ನು ಮಂಡಿಸಿದರು. ವಿಧಾನಸಭೆಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಂಡ್ಯದಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯವಾಗಿ ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದ್ದು, ಮಂಡ್ಯ ವಿಸಿ ಫಾರ್ಮ್ ನಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಯ ಬೆಳೆಗಳ ಉತ್ಪಾದನಾ ಕ್ಷೇತ್ರದಲ್ಲಿ ಅಧ್ಯಯನ ಸಂಶೋಧನೆಗೆ ಅವಕಾಶವಿದೆ. ಜಿಕೆವಿಕೆ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಕಾಲೇಜುಗಳು ಸಂಶೋಧನಾ ಸಂಸ್ಥೆ, ಪ್ರಯೋಗಾಲಯ, ಹಾಸ್ಟೆಲ್ ಮತ್ತು ಗ್ರಂಥಾಲಯಗಳನ್ನು ವರ್ಗಾವಣೆ ಮಾಡುವ ಬಗ್ಗೆಯೂ ಉಲ್ಲೇಖಿಸಲಾಗಿದೆ. ಇದಕ್ಕೆ ಉತ್ತರ ಕರ್ನಾಟಕ ಮೂಲದ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಯಿತು.

Read More

ಬೆಂಗಳೂರು : ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನದ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಉತ್ತರ ಕರ್ನಾಟಕದ ಹೈಮದ್ ಹುಸೈನ್ (24) ಮತ್ತು ಸಾಧಿಕ್ (20) ಎನ್ನುವ ಆರೋಪಿಗಳನ್ನು ಬಿಡದಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಟಯೋಟೊ ಬಿಷೋಕೋ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಬರಹ ಬರೆಯಲಾಗಿತ್ತು ಕನ್ನಡಿಗರ ಬಗ್ಗೆಯೂ ಕೂಡ ಅವಹೇಳನ ಪದ ಬಳಕೆ ಮಾಡಿದ್ದರು. ದೇಶದ್ರೋಹದ ಆರೋಪದ ಅಡಿ ಇದೀಗ ಹುಸೇನ್ ಮತ್ತು ಸಾಧಿಕ್ ನನ್ನು ಬಿಡದಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾರ್ಖಾನೆಯಲ್ಲಿ ಇಬ್ಬರೂ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಪಾಕಿಸ್ತಾನಕ್ಕೆ ಜೈ’ ಎಂದು ಬರೆದಿರುವ ಜೊತೆಗೆ ಅವಾಚ್ಯ ಶಬ್ದಗಳಿಂದ ಕನ್ನಡಿಗರನ್ನು ನಿಂದಿಸಿದ್ದಾರೆ. ಬಿಡದಿಯ ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆ ಮೇಲೆ ಬರೆದಿರುವ ಈ ಕೃತ್ಯವು ಮಾರ್ಚ್ 15 ರಂದು ಈ ಘಟನೆ ಬೆಳಕಿಗೆ ಬಂದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಡದಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ…

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯಕ್ಕೆ ನಟಿ ರನ್ಯಾರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ರನ್ಯಾ ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಇವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆಯ ಬಳಿಕ ಡಿಆರ್‌ಐ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯವು ಮಾರ್ಚ್ 21ರಂದು ವಿಚಾರಣೆ ಮುಂದೂಡಿತು. ಇಂದು ನಟಿ ರನ್ಯಾ ರಾವ್ ಅವರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು DRI ಕಾಲಾವಕಾಶ ಕೋರಿ ಮನವಿ ಮಾಡಿತು. ಈ ವೇಳೆ ಕೋರ್ಟ್ ಆಕ್ಷೇಪಣೆ ಸಲ್ಲಿಸಲು DRI ಗೆ ಅನುಮತಿ ನೀಡಿತು. ಡಿ ಆರ್ ಐ ಪರವಾಗಿಲ ಮಧು ಎನ್ ರಾವ್ ಅವರಿಂದ ಕಾಲಾವಕಾಶಕ್ಕಾಗಿ ಕೋರಿಕೆ ಮಾಡಲಾಯಿತು. ಬಳಿಕ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಿಚಾರಣೆ ಮಾರ್ಚ್ 21ಕ್ಕೆ ಮುಂದೂಡಿತು.

Read More

ಬಳ್ಳಾರಿ : ಬಳ್ಳಾರಿಯಲ್ಲಿಇಡಿ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಬಳ್ಳಾರಿಯ ಬಿಜೆಪಿ ಮುಖಂಡ ದೇವು ನಾಯಕ್ 7 ವರ್ಷದ ಬಾಳಿಕೆ ಮೇಲೆ ಅತ್ಯಾಚಾರ ಎಸೆಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಠಾಣೆಯ ಪೊಲೀಸರು ಬಿಜೆಪಿ ಮುಖಂಡ ದೇವು ನಾಯಕ್ ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಬಿಜೆಪಿ ಮುಖಂಡ ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಫೋಟೋ ತೆಗೆಸಿಕೊಂಡು, ಅವುಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಅತ್ಯಾಚಾರ…

Read More