Author: kannadanewsnow05

ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ A16 ಆರೋಪಿಯಾಗಿರುವ ಕೇಶವಮೂರ್ತಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆಯ ವೇಳೆ ಕೇಶವಮೂರ್ತಿ ಅವರ ಪರ ವಕೀಲರಾದ ರಂಗನಾಥ್ ರೆಡ್ಡಿ ವಾದ ಮಂಡಿಸಿ, ಕೇವಲ ಕೊಲೆಯ ನಂತರದ ಸಾಕ್ಷಿಯ ನಾಶದ ಆರೋಪ ಮಾತ್ರವಿತ್ತು. ಈ ಜಾಮೀನು ಇತರೆ ಆರೋಪಿಗಳ ಮೇಲಿನ ಕೇಸಿಗೆ ಸಂಬಂಧಿಸಿದಲ್ಲ. ಹಾಗಾಗಿ ಈ ಒಂದು ಕಾರಣಕ್ಕೆ ಜಾಮೀನು ಮಂಜೂರು ಮಾಡಿದೆ. ವಿಚಾರಣೆ ವೇಳೆ ನ್ಯಾಯಾಧೀಶರಾದ ಎಸ್ ವಿಶ್ವಜೀತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಕೇಶವಮೂರ್ತಿ ವಿರುದ್ಧ ಕೊಲೆ ಆರೋಪ ಇರಲಿಲ್ಲ ಕೇವಲ ಕೊಲೆಯ ನಂತರದ ಸಾಕ್ಷ ನಾಶದ ಆರೋಪ ಮಾತ್ರವಿತ್ತು. ಆರೋಪಿ ವಿರುದ್ಧದ ಜಾಮೀನು ನೀಡಬಹುದಾದ ಅಪರಾಧಗಳಿವೆ ಆರೋಪ ಪಟ್ಟಿಯಲ್ಲಿ ಈತನ ಮೇಲೆ ಕೊಲೆ ಆರೋಪವಿಲ್ಲವೆಂದು ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದರು. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ…

Read More

ಹುಬ್ಬಳ್ಳಿ : ಹುಬ್ಬಳ್ಳಿ ಮತ್ತು ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಸುಮಾರು 17 ಕಳ್ಳತನ ಕೇಸ್ ನಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಹುಬ್ಬಳ್ಳಿ ತಾಲೂಕಿನ ಬೆಂಡಿಗೇರಿ ಠಾಣೆಯ ಎಸ್ಐ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಹೌದು ಆರೋಪಿ ವಿನೋದ್ ಕಾಲಿಗೆ ಗುಂಡು ಹಾರಿಸಲಾಗಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಇದೀಗ ಗುಂಡಿನ ದಾಳಿ ನಡೆದಿದೆ. ತಾರಿಹಾಳ ಬಳಿ ಆರೋಪಿ ವಿನೋದ್ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಳ್ಳತನ ಪ್ರಕರಣದಲ್ಲಿ ಪೊಲೀಸರು ನಿನ್ನೆ ವಿನೋದನನ್ನು ಬಂಧಿಸಿದ್ದರು. ತನ್ನ ಸಹಚರನ್ನು ತೋರಿಸುತ್ತೇನೆ ಎಂದು ವಿನೋದ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರ ಮೇಲೆ ವಿನೋದ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಪಿಐ ಜಯಶ್ರೀ ವಿನೋದ ಕಾಲಿಗೆ ಗುಂಡು…

Read More

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ. ಹೌದು ಮುನಿರತ್ನಗೆ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್-9273 ನೀಡಿದ್ದಾರೆ. ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾನೆ ಎಂದು ಇತ್ತೀಚೆಗೆ ಮಹಿಳೆ ಒಬ್ಬರು ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ಈ ಒಂದು ದೂರಿನ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಲಾಗಿದೆ. ಇದಕ್ಕೂ ಮೊದಲು ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಈ ವೇಳೆ ಬಿಡುಗಡೆಯಾದ ತಕ್ಷಣ ಮತ್ತೆ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಬಳಿಕ ರಾಜ್ಯ ಸರ್ಕಾರ ಮುನಿರತ್ನ ಪ್ರಕರಣವನ್ನು ಎಸ್ ಐ ಟಿ ಇ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.ಇದೀಗ ಇಂದು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆ 25ಕ್ಕೆ ಮುಂದೂಡಿದೆ.

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಕ್ಕೆ ಮಂದೂಡಿ ಕೋರ್ಟ್ ಆದೇಶ ನೀಡಿದೆ. ಹೌದು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣೆಯನ್ನು ಸಪ್ಟೆಂಬರ್ 27ಕ್ಕೆ ಮುಂದೂಡಿ ಜಡ್ಜ್ ಆದೇಶ ನೀಡಿದರು.ಅಲ್ಲದೆ ಇದೇ ವೇಳೆ ಪ್ರಕರಣದ A1 ಆರೋಪಿ ಆಗಿರುವಂತಹ ಪವಿತ್ರಗೌಡ ಜಾಮೀನು ಅರ್ಜಿ ಸಹ ಸೆಪ್ಟೆಂಬರ್ 25ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

Read More

ಮಂಡ್ಯ : ಇತ್ತೀಚಿಗೆ ಸರ್ಕಾರ ಹಾಲು, ಪೆಟ್ರೋಲ್, ಅಡುಗೆ ಎಣ್ಣೆ ಏರಿಕೆ ಮಾಡಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕಾವೇರಿ ನೀರಿನ ದರವನ್ನು ಏರಿಕೆ ಮಾಡಲಾಗುತ್ತದೆ. ಯಾವಾಗಿನಿಂದ ನೀರಿನ ದರ ಏರಿಕೆ ಮಾಡುತ್ತೇವೆ ಎಂಬುದರ ಕುರಿತು ಶೀಘ್ರದಲ್ಲಿ ತಿಳಿಸಲಾಗುತ್ತದೆ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ ಬಳಿ ಇರುವ ಪಂಪ್ ಹೌಸ್ ಗೆ ಡಿಸಿಎಂ ಅಡಿಗೆ ಶಿವಕುಮಾರ್ ಭೇಟಿ ನೀಡಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡಿನಹಳ್ಳಿ ಬಳಿ ಇರುವ ಪಂಪ ಹೌಸ್ ಗೆ ಭೇಟಿ ನೀಡಿ, ಬೆಂಗಳೂರು ಜಲ ಮಂಡಳಿಯ ಪಂಪ ಹೌಸನ್ನು ಪರಿಶೀಲಿಸಿದರು. ಕಾವೇರಿ 5ನೇ ಹಂತದಲ್ಲಿ ನಿರ್ಮಿಸಲಾಗಿರುವ ಪಂಪ ಹೌಸ್ ವೀಕ್ಷಣೆ ಮಾಡಿದರು ಈ ವೇಳೆ ಸಚಿವ ಚೆಲುವರಾಯ ಸ್ವಾಮಿ ಸೇರಿದಂತೆ ಹಲವರು ಡಿಕೆ ಶಿವಕುಮಾರ್ ಗೆ ಸಾಥ್ ನೀಡಿದರು. ಇನ್ನು ತಿರುಪತಿ ಲಡ್ಡು ವಿನಲಿ ಕಲಬರಕೆ…

Read More

ಬೆಂಗಳೂರು : ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್‌ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್‌ಟಾಗ್ರಾಮ್‌ ಇನ್‌ಫ್ಲುಯೆನ್ಸರ್‌ ಸುಗಂಧ್‌ ಶರ್ಮ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾಳೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಸುಗಂಧ ಶರ್ಮ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕನ್ನಡಿಗರನ್ನು ಕೆಣಕಿ, ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಳು. ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೀವು ಬೆಂಗಳೂರು ಬಿಟ್ಟು ತೊಲಗಿ ಎಂದು ಸಾಕಷ್ಟು ಮಂದಿ ಹೇಳಿದ್ದರು. ಕರ್ನಾಟಕದ ಬಗ್ಗೆ ಮಾತನಾಡಿದ್ದ ಸುಗಂಧ ಶರ್ಮ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆಕೆ ಕೆಲಸ ಮಾಡುತ್ತಿದ್ದ ಕಂಪನಿ ಕೂಡ ಎಚ್ಚೆತ್ತುಕೊಂಡಿದೆ. ವಿಡಿಯೋ ವೈರಲ್ ಆಗ್ತಿದ್ದಂತೆ ಸುಗಂಧ ಶರ್ಮರನ್ನ ಕಂಪನಿ ಕೆಲಸದಿಂದ ತೆಗೆದುಹಾಕಿದೆ. ಫ್ರೀಡಂ ಕಂಪನಿಯಲ್ಲಿ ಸುಗಂಧ ಶರ್ಮ ಕೆಲಸ ಮಾಡುತ್ತಿದ್ದರು. ಸದ್ಯ ಮಹಿಳೆಯನ್ನ ಫ್ರೀಡಂ ಕಂಪನಿ ಟರ್ಮಿನೇಟ್‌ ಮಾಡಿದೆ. ಫ್ರೀಡಂ ಕಂಪನಿಗೆ ತೆರಳಿ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಇದರ ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ…

Read More

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗಾರ ಯಾರೆಂದು ಗೊತ್ತಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ. ಹೌದು ಇಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾಲಕ್ಷ್ಮೀ ಕೊಲೆ ಪ್ರಕರಣ ಸಂಬಂಧ ಇದೀಗ ಆರೋಪಿಯ ಗುರುತು ಪತ್ತೆಯಾಗಿದ್ದು, ಆರೋಪಿಯ ಹುಡುಕಾಟ ಮುಂದುವರೆದಿದೆ. ಆರೋಪಿ ಹೊರರಾಜ್ಯದವನಗಿದ್ದು, ಬೆಂಗಳೂರಿನಲ್ಲೇ ವಾಸವಾಗಿದ್ದ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಆರೋಪಿಯ ಗುರುತು ಪತ್ತೆ ಹಚ್ಚಲಾಗಿದೆ.

Read More

ಅಮರಾವತಿ : ಇಂದು ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದು, ಸುಮಾರು 40ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ. ಪರತ್ವಾಡ ಸೆಮದೋಹ್ ಘಟಾಂಗ್ ರಸ್ತೆಯಲ್ಲಿ ತಿರುವುಗಳಿರುವ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಬಿದ್ದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಓರ್ವ ಅಪ್ರಾಪ್ತ ಹಾಗೂ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯರನ್ನು 65 ವರ್ಷದ ಇಂದು ಸಮಾಧಾನ್ ಗಂಟ್ರೆ ಮತ್ತು 30 ವರ್ಷದ ಲಲಿತಾ ಚಿಮೋಟೆ ಎಂದು ಗುರುತಿಸಲಾಗಿದೆ. ಸ್ಥಳೀಯ ನಿವಾಸಿಗಳು, ಚಿಕಲ್ದಾರ ಪೊಲೀಸರ ನೆರವಿನೊಂದಿಗೆ ತಕ್ಷಣ ಗಾಯಾಳುಗಳನ್ನು ಅಮರಾವತಿ ಆಸ್ಪತ್ರೆಗೆ ಕಳುಹಿಸಲಾಯಿತು. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯು ತ್ವರಿತಗತಿಯಲ್ಲಿ ಸಾಗಿದೆ.ಅಪಘಾತದ ಕಾರಣಕ್ಕಾಗಿ ತನಿಖೆ ಮುಂದುವರೆದಿದ್ದು, ಅಪಘಾತದ ಸ್ಥಳದಲ್ಲಿ ತುರ್ತು…

Read More

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಮಾದಕ ದ್ರವ್ಯ ಮಾರಾಟ ಹೆಚ್ಚಾಗುತ್ತಿದ್ದು, ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ದಂಪತಿಗಳು ಇಬ್ಬರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೌದು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಮೈಕಲ್ 2018ರಲ್ಲಿ ಬಿಸಿನೆಸ್ ವಿಸಾದ ಮೇಲೆ ಬೆಂಗಳೂರಿಗೆ ಆಗಮಿಸಿದ್ದ.ಮೊದಲು ಮೈಕಲ್ ಕೆಆರ್ ಪುರಂ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಈ ವೇಳೆ ಪಕ್ಕದ ಮನೆಯಲ್ಲಿದ್ದ ಸಹನಾಳನ್ನು ಪ್ರೀತಿಸಿ ಮದುವೆಯಾಗಿದ್ದ. ಬಳಿಕ ಇಬ್ಬರು ಜೊತೆಗೂಡಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು.ಬಳಿಕ ಕೆಆರ್​ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್​​ ಆಗಿದ್ದಾರೆ. ಕಳೆದ ಜುಲೈನಲ್ಲಿ ಸಿಸಿಬಿ ಪೊಲೀಸರು ಡ್ರಗ್ ಹೆಡ್ಲರ್ ಆರೋಪಿಯನ್ನು ಬಂಧಿಸಿದ್ದರು ಆತನನ್ನು ಉಚ್ಚಾರಣೆಗೆ ಒಳಪಡಿಸಿದಾಗ ಮೈಕಲ್ ಮತ್ತು…

Read More

ಚಿಕ್ಕಬಳ್ಳಾಪುರ : ಇತ್ತೀಚಿನ ಪೀಳಿಗೆಯಂತೂ ಬಹಳ ಸೂಕ್ಷ್ಮ ಮನಸ್ಸು ಉಳ್ಳವರಾಗಿದ್ದಾರೆ. ಸ್ವಲ್ಪ ಹೆಚ್ಚು ಕಡಿಮೆ ಗದರಿದರೂ ಏನಾದರೂ ಒಂದು ಅನಾಹುತ ಮಾಡಿಕೊಳ್ಳುತ್ತಾರೆ.ಇದೀಗ ಸಾಲ ಮಾಡಿ ಬೈಕ್ ಕೊಂಡಿದ್ದ ಯುವಕನಿಗೆ ಪೋಷಕರು ತಿಂಗಳು ತಿಂಗಳು ಇಎಂಐ ಹೇಗೆ ಕಟ್ತೀಯಾ? ಎಂದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬೆಳವಂಗಲ ಎಂಬಲ್ಲಿ ನಡೆದಿದೆ. ಹೌದು ದೊಡ್ಡಬೆಳವಂಗಲದ ಮಾಡೇಶ್ವರ ಗ್ರಾಮದ ನಿಖಿಲ್ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಡೇಶ್ವರ ಗ್ರಾಮದ ಹೊರವಲಯದಲ್ಲಿ ಇದ್ದ ಕೆಲಸ ಬಿಟ್ಟು, ಈಗ ಬೈಕ್ ಇಎಂಐ ಕಂತು ಹೇಗೆ ಕಟ್ತೀಯಾ? ಎಂದು ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೇಣಿಗೆ ಶರಣಾದ ಘಟನೆ ಜರುಗಿದೆ. ಆತ್ಮಹತ್ಯೆ ಮಾಡಿಕೊಂಡ ನಿಖಿಲ್ ಹಿಂದೆ ಖಾಸಗಿ ಕಾರ್ಖಾನೆಗೆ ಕೆಲಸಕ್ಕೆ ತೆರಳುತ್ತಿದ್ದ. ಇತ್ತೀಚೆಗೆ ಕೆಲಸ ಬಿಟ್ಟು ಹಸು ಮೇಯುಸುತ್ತಿದ್ದ. ಅಲ್ಲದೇ ಇತ್ತೀಚೆಗಷ್ಟೇ ಸಾಲ ಮಾಡಿ ಬೈಕ್ ಖರೀದಿಸಿದ್ದ. ಇದಕ್ಕೆ ಪೋಷಕರು ತಿಂಗಳು ತಿಂಗಳು ಇಎಂಐ ಹೇಗೆ ಕಟ್ತೀಯಾ ಎಂದು ಬೈದು…

Read More