Author: kannadanewsnow05

ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟದ ರಂಗನಾಥಸ್ವಾಮಿ ದರ್ಶನ ಪಡೆದು ವಾಪಾಸ್ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದ್ದು, 26 ಜನರು ಗಾಯಗೊಂಡಿರುವ ಘಟನೆ ಬಿಳಿಗಿರಿರಂಗನ ಬೆಟ್ಟದ ರಸ್ತೆಯಲ್ಲಿ ಗವಿ ಬೋರೆ ಬಳಿ ನಡೆದಿದೆ. ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೌದು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಅಗಿನವಾಳು ಹಾಗೂ ಸುತ್ತಮುತ್ತಲ ಗ್ರಾಮಗಳ ಬಿಳಿಗಿರಿರಂಗನಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಬಂದಿದ್ದರು. ದೇವರ ದರ್ಶನ ಮುಗಿಸಿಕೊಂಡು ವಾಪಸ್‌ ಆಗುತ್ತಿದ್ದಾಗ ಗವಿಬೋರೆ ಇಳಿಜಾರಿನಲ್ಲಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ನಂಜನಗೂಡು ತಾಲ್ಲೂಕಿನ ಬಾಗೂರು, ಮಡನಳ್ಳಿ, ಹೂರಲ್ವಾಡಿ, ತಗಡೂರು ಕೆಬ್ಬೆಪುರ ಸುತ್ತಮುತ್ತಲ 60ಕ್ಕೂ ಹೆಚ್ಚು ಜನರು ಬಸ್‌ನಲ್ಲಿದ್ದರು. ಬಸ್‌ ಉರುಳಿ ಬಿದ್ದ ರಭಸಕ್ಕೆ ಬಹುತೇಕರಿಗೆ ಎದೆ, ಕೈಕಾಲು ಒತ್ತಿಕೊಂಡಂತೆ ಆಗಿದ್ದು, ಆಘಾತದಿಂದ ಅಸ್ವಸ್ಥಗೊಂಡರು. ಬಸ್ ಗವಿ ಬೋರೆ ಬಳಿ ಬಸ್‌ ಇಳಿಯುತ್ತಿದ್ದಾಗ ಮುಂಭಾಗದಿಂದ ಕಾರು ಬರುವುದನ್ನು ಕಂಡು ಚಾಲಕ ಗಲಿಬಿಲಿಕೊಂಡಿದ್ದ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ…

Read More

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮಧ್ಯ ಮಾರಾಟದಲ್ಲಿ ವ್ಯತ್ಯಯ ಇರಲಿದ್ದು, ಇಂದು ಸಂಜೆ 4 ಗಂಟೆ ನಂತರ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಪರಿಷತ್ ಚುನಾವಣೆ ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಮದ್ಯ ಮಾರಾಟ ಸಮಯದಲ್ಲಿ ಬದಲಾವಣೆಯಾಗಲಿದ್ದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಹೌದು ಜೂನ್ 3 ರಂದು ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಜೂನ್ 6 ರಂದು ಪರಿಷತ್ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಸಂಜೆ ನಾಲ್ಕು ಗಂಟೆಯಿಂದ ಜೂನ್ 3 ರವರೆಗೆ ಮದ್ಯದ ಅಂಗಡಿ ಬಂದ್ ಇರಲಿದೆ. 5 ರಂದು ಸಂಜೆ 4ರ ಬಳಿಕ ಮದ್ಯ ಮಾರಾಟಕ್ಕೆ ಅವಕಾಶ ಇರಲಿದ್ದು. ಅಂದು ಆಯ್ದ ಪ್ರದೇಶಗಳಲ್ಲಿ ಮಾತ್ರ ಮಧ್ಯ ಮಾರಾಟಕ್ಕೆ ಅವಕಾಶ ಇರಲಿದೆ.ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬೆಳಿಗ್ಗೆ 6:00 ಯಿಂದ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧ…

Read More

ಹಾಸನ : ಹಾಸನದಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾಸನದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ಹಾಸನದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಆರೋಪಿಗಳ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಇಬ್ಬರನ್ನು ನ್ಯಾಯಾಂಗ ಬಂದನಕ್ಕೆ ನೀಡಿ ಇದೀಗ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪ ಕುರಿತಂತೆ ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಕ್ಷೇತ್ರವಾಗಿರುವಂತ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಗೆಲ್ಲುವುದಕ್ಕಾಗಿ ಬರೋಬ್ಬರಿ 500 ಕೋಟಿ ರೂ. ಖರ್ಚು ಮಾಡಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಆರೋಪಿಸಿದ್ದಾರೆ. ಡಿಕೆ ಬ್ರದರ್ಸ್ ದೈತ್ಯಶಕ್ತಿ, ಹಣಬಲ, ಅಧಿಕಾರ ಬಲವನ್ನು ಚುನಾವಣೆಯಲ್ಲಿ ತೋರಿಸಿದ್ದಾರೆ. ಅವರೇ ಸಮಸ್ಯೆ ಸೃಷ್ಠಿಸಿ, ಅವರೇ ಅದನ್ನ ಬಗೆಹರಿಸುತ್ತಾರೆ. ಅಂತವರ ನಡುವೆ ನಮ್ಮದು ರೋಚಕ ಹೋರಾಟ ನಡೆದಿದೆ. ಆದರೆ, ಕಾಂಗ್ರೆಸ್ ನವರು ಆಫ್‌ ದ ರೆಕಾರ್ಡ್ 400-500ಕೋಟಿ ಖರ್ಚು ಮಾಡಿದ್ದೀವಿ ಎಂದು ಹೇಳಿದ್ದಾರೆ. ಅಷ್ಟು ಖರ್ಚು ಮಾಡಿ ಗೆಲ್ಲಲೇಬೇಕು ಅನ್ನೋ ಹಠ ಇದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಆಸೆ ಇಟ್ಕೊಂಡಿದ್ದಾರೆ ಎಂದರು. ನಮ್ಮ ಪಕ್ಷದಿಂದ ಡಾ.ಸಿ.ಎನ್. ಮಂಜುನಾಥ್ ಅವರ ಒಳ್ಳೆತನ ಮುಂದಿಟ್ಟುಕೊಂಡು ಜನರ ಓಟ್ ಕೇಳಿದ್ದೇವೆ‌. ಹಾಗಾಗಿ, ಫಲಿತಾಂಶ ಏನಾಗುತ್ತೋ ನೋಡೊಣ. ಡಾಕ್ಟರ್ ಗೆದ್ದರೆ ಜನಶಕ್ತಿಗೆ ಬೆಲೆ ಇದೆ ಅನ್ನೋದು ಗೊತ್ತಾಗುತ್ತದೆ. ಇನ್ನು ಡಿ.ಕೆ. ಶಿವಕುಮಾರ್ ಶತ್ರು ಭೈರವಿ ಯಾಗ ಮಾಡಿದ ವಿಚಾರವನ್ನು ನಾನು…

Read More

ಹಾಸನ : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗಿ ಎಂದು ಭವಾನಿ ರೇವಣಗೆ ನೋಟಿಸ್ ನೆಡಿದೆ ಆದರೆ ಇದುವರೆಗೂ ಭವಾನಿ ರೇವಣ್ಣ ಅವರು ಎಲ್ಲಿಯೂ ಕಾಣಿಸಿಕೊಳ್ಳದೆ ನಾಪತ್ತೆಯಾಗಿದ್ದಾರೆ ಇದೀಗ ಭವಾನಿ ರೇವಣ್ಣ ಅವರ ನಿವಾಸಕ್ಕೆ ಮೂರು ಮಹಿಳಾ ವಕೀಲರು ಭೇಟಿ ನೀಡಿದ್ದು, ಇದೀಗ SIT ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ. ಹೌದು ಮೈಸೂರು ಜಿಲ್ಲೆಯ ಕೆ ಆರ್ ನಗರ ಠಾಣೆಯ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗದ ಭವಾನಿ ರೇವಣಗೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗಲು SIT ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು ಕೂಡ ಇದುವರೆಗೂ ಹಾಜರಾಗಿಲ್ಲ. ಹಾಗಾಗಿ ಸಂಜೆ ಐದು ಗಂಟೆಯ ಒಳಗೆ ಎಸ್ಐಟಿದರೂ ಹಾಜರಾಗದಿದ್ದರೆ ಬಂಧನ ಮಾಡುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಾದರೂ ಭವಾನಿ ಅವರನ್ನು ಎಸ ಐ ಟಿ ಬಂಧಿಸುವ ಸಾಧ್ಯತೆ ಇದೆ ಆದರೆ ಭವಾನಿ ರೇವಣ್ಣ ಅವರು ಎಲ್ಲಿದ್ದಾರೆ ಎಂದು ಇದುವರೆಗೂ ತಿಳಿದು ಬಂದಿಲ್ಲ. ಇದೀಗ ಭವಾನಿ ನಿವಾಸಕ್ಕೆ…

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಾಯ್ಲರ್ ರಿಪೇರಿ ಮಾಡುವಾಗ ಕಾರ್ಮಿಕನೊಬ್ಬ ಶಾಕಕ್ಕೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಹೌದು ಬಾಯ್ಲರ್ ರಿಪೇರಿ ಮಾಡುವಾಗ ಕಾರ್ಮಿಕ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರಿನ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬಾಯ್ಲರ್ ನ ಭಾರಿ ಪ್ರಮಾಣದ ಶಾಖದಿಂದ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಬಾಯ್ಲರ್ ಶಾಖಕ್ಕೆ ಕಾರ್ಮಿಕ ಸುಟ್ಟು ಕರಕಲಾಗಿದ್ದಾನೆ. ಕೊಡಗು ಜಿಲ್ಲೆಯ ಉದಯ್ (27) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಳಗಾವಿ : ಜಮೀನಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯ ಮಾರಾಮಾರಿ ನಡೆದಿದ್ದು ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಆಸ್ತಿ ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯ ಮಾರಾಮಾರಿ ನಡೆದಿದೆ. ಕಟ್ಟಿಗೆ ಕುಡುಗೋಲಿನಿಂದ ಎರಡು ಕುಟುಂಬದವರು ಬಡಿದಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಬಳಿ ಜಮೀನಿನಲ್ಲಿ ಎರಡು ಕುಟುಂಬದವರು ಗಲಾಟೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿದಂತೆ ಏಳು ಜನರ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮದ ನಿವಾಸಿ ಸಿದ್ದರಾಯಿ ತುಂಬರಿ ಎಂಬವರಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯವಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಂಡಾಗಳನ್ನು ಕರೆಸಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಅನಿಲ್ ಗೆ ಸೇರಿದ ಜಮೀನನ್ನು ಲಪಟಾಯಿಸಲು ಸಿದ್ದರಾಯಿ ಪ್ಲಾನ್…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಇರುವ ಹಿನ್ನೆಲೆಯಲ್ಲಿ ಇದೀಗ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್‌ ತಾಯಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದೆ. ಆದರೆ ಭವಾನಿ ರೇವಣ್ಣ ಅವರು ಕಳೆದ 15 ದಿನಗಳಿಂದ ತಲೆಮರಿಸಿಕೊಂಡಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಮನೆಯ ಹತ್ತಿರ ಅವರಿಗಾಗಿ ಕಾದು ಕುಳಿತಿದ್ದಾರೆ. ಸಂಜೆ 5:00 ವರೆಗೂ ಅಧಿಕಾರಿಗಳು ಕಾಯಲಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿಗಮದ ಅಧೀಕ್ಷಕ ರಾಗಿದ್ದ ಚಂದ್ರಶೇಖರನ್ ಅವರ ಸಾವಿಗೆ ನೇರವಾಗಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರಣರಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಗಂಭೀರವಾದಂತಹ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರ, ತೆಲಂಗಾಣದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರ. ಹಾಗಾಗಿ ಕಾಂಗ್ರೆಸ್ ಟು ಕಾಂಗ್ರೆಸ್ ಪ್ಲಾನ್ ಮಾಡಿದ್ದಾರೆ. ಇಡೀ ಕ್ಯಾಬಿನೆಟ್ ಕುಳಿತು ಪ್ಲಾನ್ ಮಾಡಿದ್ದಾರೆ. ಹಾಗಾಗಿ ರಾಜ್ಯದಿಂದ ತೆಲಂಗಾಣಕ್ಕೆ ಹಣ ವರ್ಗಾವಣೆ ಮಾಡಿ ಅಲ್ಲಿಂದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಹಣ ಕಳುಹಿಸುತ್ತಿದ್ದಾರೆ ಎಂದು ಅಶೋಕ್ ಗಂಭೀರವಾದ ಆರೋಪ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕೆ ಈಗ ಸ್ಪಷ್ಟ ದಾಖಲೆಗಳು ಸಿಕ್ಕಿವೆ ಕಾಂಗ್ರೆಸ್ ನವರು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು ಕರ್ನಾಟಕದಿಂದ ರಾಹುಲ್ ಗಾಂಧಿ ಸೋನಿಯಾ ಗಾಂಧಿ ಹೀಗೆ ಹಣ ಕಳುಹಿಸಲು ಹೈದರಾಬಾದ್ ಗೆ ಇಲ್ಲಿನ ಕಾಂಗ್ರೆಸ್ ಸರ್ಕಾರ ಹಣ ವರ್ಗಾವಣೆ…

Read More

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಕೆ ಎಸ್ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಜೂನ್ 6 ರೊಳಗೆ ರಾಜೀನಾಮೆ ಕೊಡದಿದ್ದರೆ ರಾಜ್ಯವ್ಯಾಪಿ ಆಂದೋಲನ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 6ರ ಒಳಗೆ ರಾಜೀನಾಮೆ ಕೊಡದಿದ್ದರೆ ರಾಜ್ಯ ವ್ಯಾಪಿ ಆಂದೋಲನ ಹಮ್ಮಿಕೊಳ್ಳಲಾಗುತ್ತದೆ.ಸಚಿವರ ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ನ ಒತ್ತಡದಿಂದಲೇ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಕಾಂಗ್ರೆಸ್ನ ಒತ್ತಡ ಮತ್ತು ಬೆದರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಂದ್ರಶೇಖರ್ ಆತ್ಮಹತ್ಯೆಗೆ ಸಿದ್ದರಾಮಯ್ಯನವರೇ ಕಾರಣ ಕಾಂಗ್ರೆಸ್ ಫಸ್ಟ್ ವಿಕೆಟ್ ಬಿದ್ದು ಹೋಯಿತು ಅಂತಾನೆ ಅರ್ಥ ಅಧಿವೇಶನ ನಡೆಯಲು ಬಿಡದಂತಹ ಸ್ಥಿತಿ ಆದರೆ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ವಾಗ್ದಾಳಿ ನಡೆಸಿದರು. ಎಲ್ಲಿದ್ದೀಯಪ್ಪ ರಣದೀಪ್ ಸಿಂಗ್ ಸುರ್ಜೆವಾಲಾ? ಸ್ವಲ್ಪ ಬಾಯಿ ಬಿಚ್ಚು. ರಾಹುಲ್ ಗಾಂಧಿಯವರೇ ನೀವು ವಿದೇಶಕ್ಕೆ ಓಡೋಗಿ ಬಿಟ್ಟಿದ್ದೀರಾ? ವಿದೇಶಕ್ಕೆ…

Read More