Subscribe to Updates
Get the latest creative news from FooBar about art, design and business.
Author: kannadanewsnow05
ಭೈರವ ಅಷ್ಟಮಿ 2024 ಈ ಕಾರ್ತಿಕ ಮಾಸದಲ್ಲಿ ಹಲವು ವಿಶೇಷ ದಿನಗಳಿವೆ. ಕಾರ್ತಿಕ ಮಾಸವು ಭಗವಂತನ ಆರಾಧನೆಗೆ ಅತ್ಯಂತ ಪ್ರಶಸ್ತವಾದ ಮಾಸವಾಗಿದ್ದು, ಇಂದು ಭೈರವನ ಅಷ್ಟಮಿ ತಿಥಿ. ಕಾರ್ತಿಕ ಮಾಸದಲ್ಲಿ ಬರುವ ತೇಯ್ಪರೈ ಅಷ್ಟಮಿ ತಿಥಿಯನ್ನು ‘ಭೈರವಾಷ್ಟಮಿ’ ಎಂದು ಕರೆಯಲಾಗುತ್ತದೆ. ಈ ದಿನ ಭೈರವ ಅವತಾರವೆತ್ತಿದ್ದಾನೆ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಬಹಳಷ್ಟು ಅನಾಹುತಗಳು ನಡೆಯುತ್ತಲೇ ಇರುತ್ತವೆ, ಜೀವನದಲ್ಲಿ ನೆಮ್ಮದಿ ಇರುವುದಿಲ್ಲ, ಮನೆಯಲ್ಲಿದ್ದವರಿಗೆ ಅಪಘಾತಗಳು ಸಂಭವಿಸುತ್ತವೆ, ಕೆಲವರು ಮನೆಯಲ್ಲಿ ಇದರಿಂದ ಪ್ರಾಣ ಕಳೆದುಕೊಳ್ಳುತ್ತಾರೆ, ಪದೇ ಪದೇ ರಕ್ತ ಸ್ರಾವ ಆಗುತ್ತಿದೆ, ಈ ಅಶುಭ ಶಕುನಗಳನ್ನು ಇಟ್ಟರೆ ನಂತರ ಕುಟುಂಬ ಸದಸ್ಯರು (23-11-2024) ಭೈರವನನ್ನು ಪೂಜಿಸಬೇಕು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು…
ಬೆಂಗಳೂರು : ಕರ್ನಾಟಕ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಸದ್ಯ ಆರಂಭವಾಗಿದ್ದು, ಈಗಾಗಲೇ 3 ಕ್ಷೇತ್ರಗಳಲ್ಲಿ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್ ರೂಮ್ ಅನ್ನು ಚುನಾವಣಾ ಸಿಬ್ಬಂದಿಗಳು ಓಪನ್ ಮಾಡಿ ಮತ ಎಣಿಕೆಯನ್ನು ಆರಂಭಸಿದ್ದಾರೆ. ಕಳೆದ ನವೆಂಬರ್ 13ರಂದು ರಾಜ್ಯದ ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಉಪಚುನಾವಣೆಗೆ ಮತದಾನ ನಡೆದಿತ್ತು. ಇದೀಗ ಇಂದು ಈ ಒಂದು ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಮಧ್ಯಾಹ್ನದೊಳಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮತ ಎಣಿಕೆ ಕೇಂದ್ರದಿಂದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಿ ನಿಲ್ಲುವಂತಿಲ್ಲ ಹಾಗೂ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಮತ ಎಣಿಕೆ ಕೇಂದ್ರದ ಸುತ್ತಲೂ ಯಾವುದೇ ಅಹಿತಕರ ಘಟನೆ ನಡೆದಂತೆ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಮೂರು…
ಬೆಂಗಳೂರು : ಕಳೆದ 38 ತಿಂಗಳಿನಿಂದ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ ಎಂದು ಆಗ್ರಹಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಮುಷ್ಕರ ಮಾಡಲಾಗುತ್ತದೆ ಎಂದು KSRTC ಮತ್ತು BMTC ಸಾರಿಗೆ ನೌಕರರು ಮುಷ್ಕರಕ್ಕೆ ಸಿದ್ಧರಾಗುತ್ತಿರುವ ಬಗ್ಗೆ ಜಂಟಿ ಕ್ರಿಯಾ ಸಮಿತಿ ಮತ್ತೊಮ್ಮೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಹೌದು 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡಬೇಕಿತ್ತು, ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರುಪಾಯಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೊಮ್ಮೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತಂತೆ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಮಾತನಾಡಿ,ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ನಾವು ನೌಕರರಿಗೆ ಹೇಳಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಮುಷ್ಕರ ವಾಪಸ್ಸು…
ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಶೇ.40 ಸಿಬ್ಬಂದಿ ಭರ್ತಿ ಮಾಡಲು ಹಣಕಾಸು ಇಲಾಖೆ ಜತೆಗೆ ಚರ್ಚೆ ನಡೆಸಲಾಗುತ್ತಿದೆ. ಶುಶ್ರೂಷಕರು, ತಂತ್ರಜ್ಞರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಮುಂದಿನ ತಿಂಗಳಲ್ಲಿ ಪ್ರಕ್ರಿಯೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಗ್ರಾಮೀಣ ಜನರಿಗೆ ಸ್ಪೆಷಾಲಿಟಿ ಸೇವೆ ಒದಗಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಸರ್ಕಾರ ಸನ್ನದ್ಧವಾಗುತ್ತಿದೆ. ತಾಲೂಕು ಆಸ್ಪತ್ರೆಗಳನ್ನು ದೊಡ್ಡ ಮಟ್ಟದಲ್ಲಿ ಕಟ್ಟುವುದಲ್ಲ, ಬದಲಾಗಿ ತಜ್ಞ ವೈದ್ಯರ ನೇಮಕ, ಮೂಲಸೌಕರ್ಯ ಕಲ್ಪಿಸುವ ಮೂಲಕ ಗುಣಮಟ್ಟದ ಸೇವೆ ಒದಗಿಸಲು ಆರೋಗ್ಯ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ಅವರು ತಿಳಿಸಿದರು. ವೈದ್ಯರ ವೇತನವನ್ನು 1.10 ಲಕ್ಷದಿಂದ 1.40 ಲಕ್ಷ ರೂ.ವರೆಗೆ ಹಾಗೂ ಎಂಬಿಬಿಎಸ್ ವೈದ್ಯರ ವೇತನವನ್ನು 45 ರಿಂದ 60 ಸಾವಿರಕ್ಕೆ ಹೆಚ್ಚಿಸಲು ಚಿಂತಿಸಲಾಗಿದೆ. ಪ್ರತಿವರ್ಷ ವೈದ್ಯರ ಸೇವಾ ಅನುಭವ ಪರಿಗಣಿಸಿ ವೇತನ ಹೆಚ್ಚಳ ಮಾಡುವ ಯೋಜನೆಯೂ ಇದೆ. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ…
ಮಂಗಳೂರು : ಮಂಗಳೂರಿನಲ್ಲಿ ಅನೈತಿಕ ಸಂಬಂಧವನ್ನು ಪ್ರಶ್ನಿಸಿದಕ್ಕೆ ಪತ್ನಿಗೆ ಪತಿಯೊಬ್ಬ ತ್ರಿವಳಿ ತಲಾಖ್ ಹೇಳಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಸಿದಂತೆ ಇದೀಗ ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಆರೋಪಿ ಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಉಳ್ಳಾಲದ ಮಹಮ್ಮದ್ ದಿಲ್ಫಾಜ್ ತ್ರಿವಳಿ ತಲಾಖ್ ನೀಡಿದ ಆರೋಪಿ ಎಂದು ತಿಳಿದುಬಂದಿದೆ. ಕಳೆದ 2019 ರಲ್ಲಿ ಮಹಮ್ಮದ್ ದಿಲ್ಫಾಜ್ ಮಾಸ್ತಿಕಟ್ಟೆ ನಿವಾಸಿ ಹೀನಾ ಫಾತಿಮಾ ಎನ್ನುವವರೊಂದಿಗೆ ಮದುವೆಯಾಗಿದ್ದರು. ಬಳಿಕ ಕೆಲವು ವರ್ಷಗಳ ಕಾಲ ಸಂತೋಷವಾಗಿಯೇ ಇದ್ದರು. ಯಾವಾಗ ಪತಿ ಬೇರೆ ಅನ್ಯ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ವಿಷಯ ತಿಳಿತೋ, ಆಗ ಪತಿಯನ್ನು ಹೀನಾ ಪ್ರಶ್ನಿಸಿದ್ದಾಳೆ. ಪತ್ನಿ ವಿಚಾರಿಸಿದಾಗ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. ಪರಿಣಾಮ ಹೀನಾ ಫಾತಿಮಾ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಕುಟುಂಬದ ಹಿರಿಯರು ಪಂಚಾಯಿತಿ ನಡೆಸಿ ಮೊಹಮ್ಮದ್ ದಿಲ್ಫಾಜ್ಗೆ ಬುದ್ಧಿ ಮಾತನ್ನು ಹೇಳಿದ್ದರು. ಆದರೂ ತನ್ನ ಚಾಳಿಯನ್ನು ಮುಂದುವರೆಸಿದ್ದಾನೆ. ನವೆಂಬರ್ 8 ರಂದು ಈ ಬಗ್ಗೆ ಹೀನ ಫಾತಿಮಾ ತಂದೆ…
ಬೆಂಗಳೂರು : ಇತ್ತೀಚೆಗೆ ಅಪ್ರಾಪ್ತೆ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ 16 ವರ್ಷದ ಅಪ್ರಾಪ್ತೆ ಬಾಲಕಿ ಒಬ್ಬಳು ಸೋದರ ಮಾವನಿಂದಲೇ ಗರ್ಭಿಣಿಯಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಹೌದು ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಬಾಲಕಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಸಮಯಕ್ಕೆ ಸರಿಯಾಗಿ ಮುಟ್ಟು ಆಗುತ್ತಿರಲಿಲ್ಲ. ಹೀಗಾಗಿ ಮಗಳನ್ನ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಬಾಲಕಿಯನ್ನ ತಪಾಸಣೆ ಮಾಡಿದ ವೈದ್ಯೆ ಡಾ.ಸೋನಿಯಾ ಅವರು ಮಗಳು ಗರ್ಭಿಣಿಯಾಗಿರುವುದು ಹೇಳಿದ್ದಾರೆ. ವಿಷಯ ತಿಳಿದ ಬಾಲಕಿಯ ತಾಯಿಗೆ ಅಘಾತವಾಗಿದೆ. ಈ ಕುರಿತು ಬಾಲಕನು ವಿಚಾರಿಸಿದಾಗ ಸೆಪ್ಟೆಂಬರ್ ನಲ್ಲಿ ಸೋದರಮಾವ ಮನೆಗೆ ಬಂದಿದ್ದು ಬಲವಂತವಾಗಿ ಅತ್ಯಾಚಾರ ಎಸಿಗಿದ್ದಾನೆ ಎಂಬ ವಿಷಯ ಬೇರಂಗವಾಗಿದೆ ಕೂಡಲೇ ಬಾಲಕಿಯ ತಾಯಿಯು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ನೆಲಮಂಗಲ ಪೊಲೀಸರಿಂದ 30 ವರ್ಷದ…
ಬೆಳಗಾವಿ : ಬಿಜೆಪಿಯವರು 50 ಕೋಟಿ ರೂಪಾಯಿ ಆಫರ್ ನೀಡಿ ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು. ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು ರಾಜ್ಯ ಸರ್ಕಾರ ಬೀಳಿಸೋದಾಗಿದ್ರೆ ನಾನೇ ನೇತೃತ್ವ ವಹಿಸುತ್ತಿದ್ದೆ ಎಂದು ತಿಳಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯವರು ಒಬ್ಬ ಶಾಸಕನಿಗೆ 50 ಕೋಟಿ ರೂಪಾಯಿ ನೀಡಿ ಖರೀದಿಸುತ್ತಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಸರ್ಕಾರ ಬೀಳಿಸುವ ಮನಸ್ಸು ಮಾಡಿದ್ದರೆ ಅದರ ಜವಾಬ್ದಾರಿ ನಾನೇ ತೆಗೆದುಕೊಳ್ಳು ತ್ತಿದ್ದೆ ಎಂದು ಬಿಜೆಪಿ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು. ಆದರೆ ನಮಗ್ಯಾರಿಗೂ ಆ ಉದ್ದೇಶ ಇಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಗೆ ಬರುವ ಇಚ್ಛೆ ವ್ಯಕ್ತಪಡಿಸಿದ್ದರೂ ಕೂಡ ನಾನೇ…
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಹಗರಣದ ಶೀಘ್ರ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲು ಸಿಬಿಐ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಸಿಬಿಐಗೆ ಹೈಕೋರ್ಟ್ ನೋಟಿಸ್ ನೀಡಿದೆ. ಈ ಕುರಿತಂತೆ ಬಿಜೆಪಿಯ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿ ಹೊಳಿ, ಅರವಿಂದ ಲಿಂಬಾವಳಿ ಮತ್ತು ಕುಮಾರ್ಬಂಗಾರಪ್ಪ ಸಲ್ಲಿಸಿರುವ ಅರ್ಜಿ ಗುರುವಾರ ನ್ಯಾ| ಎಂ.ನಾಗ ಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಗೆ ನಡೆಸಿತು.ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಸಿಬಿಐಗೆ ನೋಟಿಸ್ ಜಾರಿ ಗೊಳಿಸಿ ವಿಚಾರಣೆ ಮುಂದೂಡಿದೆ. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಪಿ.ವೆಂಕಟೇಶ್ ದಳವಾಯಿ ವಾದ ಮಂಡಿಸಿ, ದುರ್ಬಲ ವರ್ಗದವರಿಗೆ ಮೀಸ ಲಿಟ್ಟ ಹಣವನ್ನು ಲೂಟಿ ಮಾಡಲಾಗಿದೆ. ಸಿಬಿಐ ಎಫ್ಐಆ ದಾಖಲಿಸಿಕೊಂಡು 5 ತಿಂಗಳಾಗಿವೆ. ತನಿಖೆ ನಡೆಸಿಲ್ಲ. ಇಂತಹ ಪ್ರಕರಣದಲ್ಲಿ ರಾಜಕಾರಣಿಗಳು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಸೂಕ್ತ ರೀತಿ ಯಲ್ಲಿ ತನಿಖೆ ನಡೆಸಬೇಕಾದರೆ ನ್ಯಾಯಾ ಲಯವು ಮೇಲ್ವಿಚಾರಣೆ ನಡೆಸುವ ಅಗತ್ಯವಿದೆ.…
ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13 ರಂದು ಮತದಾನ ನಡೆದಿತ್ತು. ಇದೀಗ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 3 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯ ತಿಳಿದುಬರಲಿದೆ. ಚನ್ನಪಟ್ಟಣದಲ್ಲಿ ಬೆಳಿಗ್ಗೆ 8 ಗಂಟೆಗೆ ಇವಿಎಂ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ. ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಬೆಂಗಳೂರು ಮೈಸೂರು ಹೆದ್ದಾರಿ ಬಳಿ ಇರುವ ಈ ಒಂದು ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ 88.81ರಷ್ಟು ಮತದಾನವಾಗಿತ್ತು. ಕಾಲೇಜಿನ ಮೂರು ಹಾಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಟ್ಟು 20 ಸುತ್ತು ನಡೆಯಲಿರುವ ಮತ ಎಣಿಕೆ ಕಾರ್ಯ. 14 ಟೇಬಲ್ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಫಲಿತಾಂಶ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ…
ಬೆಂಗಳೂರು : ಈಗಾಗಲೇ ಹೇಳಿರುವಂತೆ ಸರ್ಕಾರಿ ನೌಕರರು ಆದಾಯ ತೆರಿಗೆ (IT) ಪವತಿಸುವವರನ್ನು ಹೊರತುಪಡಿಸಿ ಉಳಿದ ಅರ್ಹ ಪಡೀತರ ಚೀಟಿದಾರರ BPL ಕಾರ್ಡ್ ಗಳನ್ನು ರದ್ದು ಮಾಡಲ್ಲ ಎಂದು ಆಹಾರ ಇಲಾಖೆಯ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದರು. ಇದೀಗ ಸರ್ಕಾರ ಈ ಕುರಿತಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (2)ರ ನಡವಳಿಯಲ್ಲಿ ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದ. 1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ…












