Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಿಬಿಐ ಅಧಿಕಾರಿಗಳು ಎಂದು ಅವರ ಸೋಗಿನಲ್ಲಿ ಬೆಂಗಳೂರು ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ಗೆ ನುಗ್ಗಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಹನ್ನೆರಡು ಗಂಟೆ ಒಳಗಡೆ ಪೊಲೀಸರು, ಆರೋಪಿಗಳನ್ನ ಚೇಸ್ ಮಾಡಿ ತಮಿಳುನಾಡಿನ ಧರ್ಮಪುರಿಯಲ್ಲಿ ಹಿಡಿದಿದ್ದಾರೆ. ಹೌದು ರಾತ್ರಿ ಸೆಕ್ಯೂರಿಟಿಗೆ ಸಿಬಿಐ ಪೊಲೀಸರು ಎಂದು ಹೇಳಿ ಅಪಾರ್ಟ್ಮೆಂಟ್ಗೆ ನಾಲ್ವರು ನುಗ್ಗಿದ್ದಾರೆ. ನಂತರ ಆಚಾರ್ಯ ಕಾಲೇಜು ವಿದ್ಯಾರ್ಥಿಗಳು ವಾಸ ಮಾಡುವ ಫ್ಲಾಟ್ಗೆ ಹೋಗಿ, ಫ್ಲಾಟ್ನಲ್ಲಿದ್ದವರಿಗೆ ಲಾಠಿಯಿಂದ ಹಲ್ಲೆ ನಡೆಸಿ, ಲಾಕಪ್ ಮತ್ತು ಗನ್ ತೋರಿಸಿ ಗಾಂಜಾ ಮಾರಾಟ ಮಾಡ್ತಿದ್ದಿರಾ ಎಂದು ಹೇಳಿ ಬೆದರಿಸಿದ್ದಾರೆ. ಒಂದು ಐ 20 ಮತ್ತು ಮಹೇಂದ್ರ XUV 300 ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದ ಟೀಮ್, ಬಂಧಿತ ಆರೋಪಿಗಳಿಂದ CBIT ಹೆಸರಿನ ನಾಲ್ಕು ಐಡಿ ಕಾರ್ಡ್, ಒಂದು ಏರ್ ಗನ್ , ಏರ್ ಗನ್ ಗೆ ಬಳಸುವ ನೂರಕ್ಕು ಹೆಚ್ಚು ಬುಲೆಟ್ಸ್, ಪೊಲೀಸರು ಬಳಸುವ ಹ್ಯಾಂಡ್ ಕಾಫ್, ಲಾಠಿ, ಹಿರಿಯ ಪೊಲೀಸ್…
ಶಿವಮೊಗ್ಗ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಬಂಧನಕ್ಕೆ ವಾರಂಟ್ ಸಿದ್ಧಪಡಿಸಲಾಗಿದೆ. ವಿಶೇಷ ತನಿಕಾ ತಂಡದ ಅಧಿಕಾರಿಗಳು ಮುಂದಿನ ಕರ್ಮ ಕೈಗೊಳ್ಳಲಿದ್ದಾರೆ.ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು. ಆದರೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಮೇಲೆ ಖಚಿತವಾಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಜ್ವಲ್ ಆಗಮಿಸುತ್ತಿರುವ ವಿಮಾನ ಜರ್ಮನಿಯ ಯೂನಿಕ್ ಏರ್ಪೋರ್ಟ್ ಇಂದ ಟೆಕ್ ಆಫ್ ಆಗಿದೆ ಇಂದು ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಬಂದ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಹೊರಟಿದ್ದಾರೆ. ಮಧ್ಯರಾತ್ರಿ 12:30 ಕ್ಕೆ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಹಾಗಾಗಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಏರ್ಪೋರ್ಟ್ ಟರ್ಮಿನಲ್ ಒಳಗೆ ತೆರಳಲು ಪಾಸ್ ನೀಡುವಂತೆ ಎಸ್ ಎಸ್ಐಟಿ ಭದ್ರತಾ ಪಡೆಗೆ ಪತ್ರ ಬರೆದಿದೆ. 8 ರಿಂದ 10 ಅಧಿಕಾರಿಗಳಿಗೆ ಪಾಸ್ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಇದೀಗ ಏರ್ಪೋರ್ಟ್ ನ ಟರ್ಮಿನಲ್ ನ ಇಮಿಗ್ರೇಶನ್ ವರೆಗೆ ಹೋಗಲು ಪಾಸ್ ವ್ಯವಸ್ಥೆ ಮಾಡಲಾಗುತ್ತಿದ್ದೂ, ಪಾಸ್ ನೀಡಿದ ನಂತರ ಏರ್ ಪೋರ್ಟ್ ಗೆ ಆಗಮಿಸುವ ಎಸ್ ಐ ಟಿ ಅಧಿಕಾರಿಗಳು. ರಾತ್ರಿ 10ರ ಸುಮಾರಿಗೆ ಕೆಐಎಬಿಗೆ ಎಸ್ಐಟಿ ಅಧಿಕಾರಿಗಳು ಆಗಮಿಸಲಿದ್ದಾರೆ. ಅಧಿಕಾರಿಗಳ ಆಧಾರ್ ಕಾರ್ಡ್ ಜೊತೆ ವಿವರಣೆ ನೀಡಿರುವ ಎಸ್ಐಟಿ ಪಾಸ್ ಮಾಡಿಕೊಡುವ ಕೆಲಸದಲ್ಲಿ ಇದೀಗ ಸಿಬ್ಬಂದಿಗಳು…
ಶಿವಮೊಗ್ಗ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಮೂಲಕ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ವಾರಂಟ್ ಸಿದ್ಧಪಡಿಸಲಾಗಿದೆ. ವಿಶೇಷ ತನಿಕಾ ತಂಡದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು. ಆದರೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಮೇಲೆ ಖಚಿತವಾಗಲಿದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಜ್ವಲ್ ಆಗಮಿಸುತ್ತಿರುವ ವಿಮಾನ ಜರ್ಮನಿಯ ಯೂನಿಕ್ ಏರ್ಪೋರ್ಟ್ ಇಂದ ಟೆಕ್ ಆಫ್ ಆಗಿದೆ ಇಂದು ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಬಂದ ತಕ್ಷಣ…
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಏರಿದ್ದಾರೆ. ಶೀಘ್ರದಲ್ಲಿ ವಿಮಾನ ಕೂಡ ಟೆಕ್ ಆಫ್ ಆಗಲಿದೆ ಎಂದು ಬಲಮೂಲಗಳಿಂದ ಮಾಹಿತಿ ಬಂದಿದೆ. ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಿಂದ ಬೆಂಗಳೂರಿಗೆ ಬರೋದಕ್ಕಾಗಿ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿ, ತಮ್ಮ ಲಗೇಜ್ ಕೂಡ ಚೆಕ್ ಇನ್ ಮಾಡಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಅಶ್ಲೀಲ ವೀಡಿಯೋ ಪ್ರಕರಣದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ತಿಂಗಳಾನುಗಟ್ಟಲೇ ವಿದೇಶದಲ್ಲೇ ಇದ್ದಂತ ಅವರು, ಈಗ ಬೆಂಗಳೂರಿನತ್ತ ಬರೋದಕ್ಕೆ ಹೊರಟಿದ್ದಾರೆ. ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿದ್ದಾರೆ ಎಂಬುದಾಗಿ ಎಸ್ಐಟಿ ಅಧಿಕಾರಿಗಳ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಮ್ಯೂನಿಚ್ ವಿಮಾನ ನಿಲ್ದಾಣಕ್ಕೆ ಬಂದಿರುವಂತ ಅವರು, 2…
ಬೆಂಗಳೂರು : ಕೇರಳದಲ್ಲಿ ನನ್ನ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ.ಯಾವ ಪೂಜೆ ಯಾರು ಮಾಡುತ್ತಿದ್ದಾರೆ ಎಲ್ಲವು ಗೊತ್ತಿದೆ. ನನ್ನ, ಸಿಎಂ ಹಾಗೂ ಸರ್ಕಾರದ ವಿರುದ್ಧ ಪೂಜೆ ನಡೆಯುತ್ತಿದೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಯಾಗ ನಡೆಯುತ್ತಿದೆ. ನನ್ನ ವಿರುದ್ಧ ಶತ್ರು ಭೈರವಿಯಾಗ ನಡೆಯುತ್ತಿದೆ. ಅಘೋರಿಗಳ ಮೂಲಕ ಈ ಒಂದು ಯಜ್ಞ ಮಾಡಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಪಂಚ ಬಲಿಕೊಡುತ್ತಿದ್ದಾರೆ. 21 ಮೇಕೆ, 3 ಎಮ್ಮೆ ಹಾಗೂ 21 ಕುರಿಗಳನ್ನು ಬಲಿಕೊಡುತ್ತಿದ್ದಾರೆ. ಅವರ ಪ್ರಯತ್ನ ನಡೆಯುತ್ತಿದೆ ನಡೀಲಿ ಆದರೆ ನಾವು ನಂಬಿರುವ ದೇವರು ನಮ್ಮನ್ನು ಕಾಪಾಡುತ್ತಾನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ 3:30ಕ್ಕೆ ಅಲ್ಲಿಂದ ವಿಮಾನ ಟೆಕ್ ಆಫ್ ಅಗಲಿದ್ದು ಮಧ್ಯರಾತ್ರಿ 12:30 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂದ ತಕ್ಷಣ ಅವರ ಬಂಧನಕ್ಕೆ ಎಸ್ಐಟಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಬಂಧನ ಖಚಿತ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಇದೀಗ ಎಸ್ ಐ ಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಈಗಾಗಲೇ ಠಿಕಾಣಿ ಹೂಡಿದ್ದಾರೆ. ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಹಾಗಾಗಿ ಬೆಂಗಳೂರಿಗೆ ಬರುತ್ತಿದ್ದಂತೆ ಇಮಿಗ್ರೇಶನ್ ನಲ್ಲಿ ಪ್ರಜ್ವಲ್ ರನ್ನು ವಶಕ್ಕೆ ಪಡೆಯಲಾಗುತ್ತದೆ. ಅದಾದ ನಂತರ ಇಮಿಗ್ರೇಶನ್ ಅಧಿಕಾರಿಗಳು SIT ವಶಕ್ಕೆ ನೀಡಲಿದ್ದಾರೆ.ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಬೆಂಗಳೂರಿನ…
ಬೆಳಗಾವಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಿನ್ನೆ ಬಾಳು ಮಾಮ ಜಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಈ ವೇಳೆ ಪ್ರಸಾದ ಸೇವಿಸಿದ ಜನರು ವಾಂತಿ ಭೇಧಿಯಿಂದ ಅಸ್ವಸ್ಥರಾಗಿದ್ದರು. ಜಾತ್ರೆಯಲ್ಲಿ ಸಾವಿರಾರು ಜನರು ನಿನ್ನೆ ಪ್ರಸಾದವನ್ನು ಸೇವಿಸಿದ್ದರು ಎನ್ನಲಾಗಿದೆ. ಅಲ್ಲದೆ ಮಧ್ಯಾಹ್ನ ಕೂಡ ಉಳಿದಿದ್ದ ಅಡುಗೆಯನ್ನ ರಾತ್ರಿಯೂ ಜನರು ಸೇವಿಸಿದ್ದಾರೆ. ಇದೀಗ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 59ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಇನ್ನು ಹಲವು ಜನರಿಗೆ ವಾಂತಿ ಭೇದಿ ಆಗುತ್ತಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕವಾಗಿ 1 ಲಕ್ಷ ರುಪಾಯಿ ಹಾಗೂ ತಿಂಗಳಿಗೆ 8 ಸಾವಿರ ಖಾತೆಗೆ ಹಾಗಲಾಗುತ್ತದೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದಕ್ಕೆ ಟ್ವೀಟ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಈಗ ಬಿವೈ ವಿಜಯೇಂದ್ರ ಟ್ವೀಟಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ ಎಂದಿದೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಮಾನ್ಯ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರವರೇ, ಜನ ಕಾಂಗ್ರೆಸ್ ಮೇಲೆ ಇಟ್ಟಿರುವ ನಂಬಿಕೆಯನ್ನು ನೋಡಿ ತಮಗೆ ಸಹಿಸಿಕೊಳ್ಳಲಾಗದಷ್ಟು ತಾಪಮಾನ ಏರುತ್ತಿದೆ! ಜನತೆಗೆ ಈಗಾಗಲೇ ನಾವು “ನುಡಿದಂತೆ ನಡೆಯುತ್ತೇವೆ“ ಎಂಬುದು ಖಾತ್ರಿಯಾಗಿದೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಸಹ ಜನರಿಗೆ ಖಚಿತವಾಗಿದೆ. ಗೃಹಲಕ್ಷ್ಮಿಯಂತೆ ”ಮಹಾಲಕ್ಷ್ಮಿ” ಯೋಜನೆಯೂ ಜಾರಿ ಮಾಡುವುದರ ಬಗ್ಗೆ ಜನತೆಗೆ ಅನುಮಾನ ಉಳಿದಿಲ್ಲ, ಏಕೆಂದರೆ ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ! ಅಂದಹಾಗೆ ಬಿವೈ ವಿಜಯೇಂದ್ರ ಅವರೇ,…
ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚುತಲೆ ಇದೆ. ಇದೀಗ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಹೌದು ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ.ಭಾರಿ ಬೆಂಕಿ ಹಿನ್ನೆಲೆಯಲ್ಲಿ ಸಮೀಪದ ಕಾರ್ಖಾನೆಗಳ ಸಿಬ್ಬಂದಿಯೂ ಆತಂಕಗೊಂಡರು. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಅನಾಹುತ ತಡೆಯುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಗಮ್ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಸುಲಭವಾಗಿ ಹೊತ್ತಿಕೊಳ್ಳುವ ರಾಸಾಯನಿಕ ಇರುವುದು ಬೆಂಕಿಯ ತೀವ್ರತೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಬೆಂಕಿಗೆ ಇಡೀ ಕಾರ್ಖಾನೆ ಆಹುತಿಯಾಗಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು. ಹತ್ತಿರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಆನೇಕಲ್ ಭಾಗದ ಅಗ್ನಿಶಾಮಕ…










