Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಹೇಳಿದ್ದರು. ಆದರೆ ಮೋದಿ ಆಡಳಿತದಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಯಿತು. ಯುವಕರು ಉದ್ಯೋಗ ಕೊಡಿ ಎಂದು ಕೇಳಿದರೆ ಪಕೋಡ ಮಾರಿ ಅಂದರು. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದರು ಮಾಡಿದ್ದಾರಾ? ಎಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರನ್ನು ಬೀದಿಗೆ ನಿಲ್ಲಿಸಿದರು ಹರಿದರು ಜಮೀನು ಮಾಡಿಕೊಂಡು ಬಿಕಾರಿಯಾಗುವಂತೆ ಮಾಡಿದ್ದಾರೆ ದೆಹಲಿ ಗಡಿಯಲ್ಲಿ ರೈತರು ವರ್ಷದವರೆಗೆ ಪ್ರತಿಭಟನೆ ಮಾಡಿದ್ದರು ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ ಬಡವರ ಬದುಕು ಕಷ್ಟವಾಗಿದೆ ಇದಕ್ಕಾಗಿ ನಾವು ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ಜನ ನೀಡುವ ತೀರ್ಪು ಮಹತ್ವದ್ದು 2014ರ ಮೇ 26 ರಿಂದ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದಾರೆ.2004 ರಿಂದ 2014ರ ವರೆಗೆ ಡಾಕ್ಟರ್…
ಧಾರವಾಡ : ಲೋಕಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಉಭಯ ಪಕ್ಷಗಳು ಕೂಡ ರಾಜ್ಯದಲ್ಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ಹಾಗೂ ಸಮಾವೇಶಗಳನ್ನು ನಡೆಸುತ್ತಿವೆ. ಇದಲ್ಲದೆ ಚುನಾವಣಾ ಆಯೋಗ ಕೂಡ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಧಿಕಾರಿಗಳನ್ನು ನೇಮಿಸಿದ್ದು, ಈಗಾಗಲೇ ಅಧಿಕಾರಿಗಳು ಕರ್ತವ್ಯನಿರತರಾಗಿದ್ದಾರೆ. ಇದೀಗ ಧಾರವಾಡದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚುನಾವಣಾ ಅಧಿಕಾರಿಯೊಬ್ಬರು ಹಠಾತ್ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಕೃಷ್ಣಮೂರ್ತಿ(52) ಮೃತ ದುರ್ದೈವಿ. ಕೃಷ್ಣಮೂರ್ತಿ ಅವರು ಹೆಸ್ಕಾಂ ಎ ಇ ಇ ಆಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದರು. ಇಂದು ಮಧ್ಯಾಹ್ನ 1 ಗಂಟೆಗೆ ಕರ್ತವ್ಯದಲ್ಲಿದ್ದ ವೇಳೆ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಘಟನೆ ಮಾಹಿತಿ ಪಡೆದ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ದಿವ್ಯ ಪ್ರಭು ಸಂತಾಪ ಸೂಚಿಸಿದರು.
ಬೆಂಗಳೂರು : ರಾಜ್ಯದ ಹಲವಡೆ ಅತಿ ಹೆಚ್ಚು ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು. ಗದಗ ಜಿಲ್ಲೆಯಲ್ಲಿ 65 ಮಿ.ಮೀ, ಕಲ್ಬುರ್ಗಿ ಜಿಲ್ಲೆಯಲ್ಲಿ 40 ಮಿಲಿ ಮೀಟರ್ ಮಳೆಯಾಗಿದೆ.ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ 7 ಮಿ.ಮೀ, ಹೊನ್ನಾವರದಲ್ಲಿ 3 ಮಿ.ಮೀ, ರಾಯಚೂರು ಜಿಲ್ಲೆಯಲ್ಲಿ 40.4 ಮಿ.ಮೀ ಬೆಂಗಳೂರಲ್ಲಿ 37 ಮಿ.ಮೀರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು. ಸುಳಿ ಗಾಳಿ ಪರಿಣಾಮ ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು
ಮಂಡ್ಯ : ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ನೀಡಿದ ಖಾಲಿ ಚಂಬು ಜಾಹಿರಾತಿಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಕೊಟ್ಟ ಖಾಲಿ ಚೊಂಬನ್ನು ಇದೀಗ ಮೋದಿ ಅವರು ಅಕ್ಷಯಪಾತ್ರ ಮಾಡಿದ್ದಾರೆ ಎಂದು ತಿಳಿಸಿದರು ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಟಾಂಗ್ ನೀಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ಕೊಟ್ಟ ಖಾಲಿ ಚೊಂಬನ್ನು ಮೋದಿಯವರು ಅಕ್ಷಯಪಾತ್ರ ಮಾಡಿದ್ದಾರೆ ಎಂಬ HD ದೇವೇಗೌಡ ಹೇಳಿಕೆಗೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿಯವರು ಕೊಟ್ಟ ಖಾಲಿ ಚೊಂಬನ್ನು ಜನರ ಮುಂದಿಟ್ಟಿದ್ದೇವೆ ಏನು ಅಕ್ಷಯಪಾತ್ರೆ ಎಂದು ಅವರು ಬಿಡಿಸಿ ಹೇಳಲಿ ಹೊಟ್ಟೆ ತುಂಬಿತ? ಅಥವಾ ಜೇಬು ತುಂಬಿತ? ಅಂತ ಹೇಳಲಿ ಎಂದು ಟಾಂಗ್ ನೀಡಿದರು.
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಭದ್ರತಾ ಲೋಪ ನಡೆದಿದ್ದು, ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮಹಮ್ಮದ್ ನಲಪಾಡ್ ಮೋದಿ ಅವರಿಗೆ ಚೊಂಬು ಪ್ರದಶಿಸಿರುವ ಘಟನೆ ನಡೆಯಿತು. ಪ್ರಧಾನಿ ಮೋದಿಯವರು ತೆರಳುತ್ತಿದ್ದಾಗ ಭಾರಿ ಭದ್ರತಾಲೋಪ ನಡೆದಿದ್ದು ಮಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಕೇಳುವಾಗ ಭದ್ರತಾ ಲೋಪ ಆಗಿದ್ದು ಮೋದಿ ತೆರಳುವಾಗ ಚೊಂಬು ಪ್ರದರ್ಶಿಸಿದ ಘಟನೆ ನಡೆಯಿತು. ಮೊಹಮ್ಮದ್ ನಲಪಾಡ್ ಮೆಖ್ರಿ ಸರ್ಕಲ್ ಬಳಿಯ ಎಚ್ ಕ್ಯೂ ಟಿ ಸಿ ಇಂದ ಮೋದಿ ತೆರಳುತ್ತಿದ್ದರು ಅರಮನೆ ಮೈದಾನಕ್ಕೆ ತೆರುಳುವಾಗ ರಸ್ತೆಗೆ ನುಗ್ಗಿ ಮೊಹಮ್ಮದ್ ನಲಪಾಡ್ ಚೊಂಬು ಪ್ರದರ್ಶಿಸಿದರು ತಕ್ಷಣ ಪೊಲೀಸರು ಅವರ ಜೊತೆಗೆ ಹಲವರನ್ನು ವಶಕ್ಕೆ ಪಡೆದುಕೊಂಡರು.
ಬೆಂಗಳೂರು : ಬೆಂಗಳೂರಲ್ಲಿ ಹೆಣ್ಣು ಮಕ್ಕಳ ಮೇಲು ಹಲ್ಲೆಯಾಗುತ್ತಿವೆ.ಭಜನೆ ಮಾಡಿದರು ಹಲ್ಲೆ ಮಾಡುತ್ತಿದ್ದಾರೆ ಬೀದಿ ಬೀದಿಯಲು ಸ್ಫೋಟವಾಗುತ್ತಿವೆ ಎಂದು ಬೆಂಗಳೂರು ಸಮಾವೇಶದಲ್ಲಿ ಪ್ರಧಾನಿ ಮೋದಿ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಮೊದಲಿಗೆ ಕನ್ನಡದಲ್ಲಿ ಭಾಷಣ ಆರಂಭಿಸಿ ಮಾತನಾಡಿದ ಅವರು, ಬೆಂಗಳೂರಿನ ಜನತೆಗೆ ನನ್ನ ನಮಸ್ಕಾರಗಳು ಬೆಂಗಳೂರು ಅರಮನೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು ತಾಯಿ ಭುವನೇಶ್ವರಿ ಅಣ್ಣಮ್ಮ ದೇವಿ ಬನಶಂಕರಿ ತಾಯಿ ದೊಡ್ಡ ಗಣಪತಿ ದೊಡ್ಡ ಬಸವಣ್ಣನ ಪಾದಗಳಿಗೆ ನನ್ನ ನಮನಗಳು 2014-19 ಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಗೆಲ್ಲಿಸಿದ್ದೀರಿ. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಸಂಕಷ್ಟದಲ್ಲಿತ್ತು ಈಗ ಅದು ಬದಲಾಗಿದೆ 21ನೇ ಶತಮಾನದಲ್ಲಿ ಭಾರತದ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿದೆ, ಇಡೀ ದೇಶವೇ ನನ್ನ ಪರಿವಾರವಾಗಿದೆ.ಇಂಡಿಯಾ ಮೈತ್ರಿಕೂಟಕ್ಕೆ ಅವರವರ ಕುಟುಂಬವೇ ಮುಖ್ಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೀಗ ಭಾರತದ ವೇಗವಾಗಿ ಬೆಳೆಯುತ್ತಿದೆ. ಮಧ್ಯಮ…
ಕಲಬುರಗಿ : ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಕಲಬುರಗಿ ಜನತೆಗೆ ಇಂದು ವರುಣ ಕೃಪೆ ತೋರಿದ್ದು ಗುಡುಗು ಸಿಡಿಲುಗಳಿಂದ ಸುಮಾರು ಒಂದು ಗಂಟೆಗಳ ಕಾಲ ನಿರಂತರವಾಗಿ ಭಾರಿ ಮಳೆ ಸುರಿಯಿತು. ಅಲ್ಲದೆ ಜಿಲ್ಲೆಯ ಆಳಂದ ತಾಲೂಕಿನ ನರೋಣದಲ್ಲಿ ಸಿಡಿಲಿಗೆ 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ಹೊಲದಿಂದ ಎತ್ತಿನಗಾಡಿಯಲ್ಲಿ ಮನೆಗೆ ಬರುವಾಗ ಘಟನೆ ಸಂಭವಿಸಿದೆ. ಹೌದು ಕಲ್ಬುರ್ಗಿಯಲ್ಲಿ ಸಿಡಿಲಿಗೆ ಬಾಲಕ ಬಲಿಯಾಗಿದ್ದಾನೆ. ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ಬಾಲಕ ಬಲಿಯಾಗಿದ್ದಾನೆ. ಮಳೆ ನೀರಿನ ರಭಸಕ್ಕೆ ದ್ವಿಚಕ್ರ ವಾಹನಗಳು ಕೂಡ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಆಳಂದ ತಾಲೂಕಿನಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.ಅಲ್ಲದೆ ಖಜುರಿಯಲ್ಲಿ ಲಾರಿ ಒಂದು ಪಲ್ಟಿಯಾಗಿದೆ. ಒಂದು ಲಾರಿ ಕೂಡ ಪಲ್ಟಿಯಾಗಿದೆ. ಬೆಂಗಳೂರಲ್ಲಿ ತುಂತುರು ಮಳೆ ಅಲ್ಲದೆ ಇತ್ತ ಬೆಂಗಳೂರಲ್ಲಿ ಕೂಡ ಮೋಡ ಕವಿದ ವಾತಾವರಣದ ಜೊತೆ ಮಳೆಯಾಗಿದೆ. ಬೆಂಗಳೂರಿನ ಕೆ ಆರ್ ಸರ್ಕಲ್, ವಿಧಾನಸೌಧ ಸೇರಿದಂತೆ ಮಳೆಯಾಗಿದೆ.ಹವಾಮಾನ ಇಲಾಖೆಯಿಂದ ಹಗುರ ಮಳೆ ಮುನ್ಸೂಚನೆ ಇತ್ತು. ಕೆಂಗೇರಿ, ಆರ್…
ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಿಕ್ಕಬಳ್ಳಾಪುರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅಗಲಗುರ್ಕಿ ಬಳಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ದೊಡ್ಡ ದೊಡ್ಡ ನಾಯಕರ ಯತ್ನ ಆದರೆ ನನಗೆ ದೇಶದ ತಾಯಂದಿರ ಆಶೀರ್ವಾದ ಇದೆ ಎಂದು ತಿಳಿಸಿದರು. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಎನ್ ಡಿ ಎ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣದಲ್ಲಿ ತಿಳಿಸಿದರು. ಪ್ರತಿಯೊಬ್ಬ ಮಹಿಳೆಯ ಸುರಕ್ಷತೆಗೆ ನನ್ನ ಮೊದಲ ಆದ್ಯತೆಯಾಗಿದೆ. ಹೈನುಗಾರಿಕೆ ಮೀನುಗಾರಿಕೆ ಮಾಡುವವರಿಗೂ ಕಿಸಾನ್ ಕಾರ್ಡ್ ನೀಡಲಾಗಿದೆ. ಹೆಣ್ಣು ಮಕ್ಕಳಿಗೂ ಡ್ರೋನ್ ತರಬೇತಿ ನೀಡಲಾಗುತ್ತಿದೆ. ಮಹಿಳೆಯರು ರೈತರ ಆದಾಯ ದ್ವಿಗುಣಗೊಳಹಿಸಲು ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರೈತರಿಗೆ ಕಿಸಾನ್ ಸಮ್ಮಾನ್ ಹಣ ಸಿಗುತ್ತಿಲ್ಲ ಇಂಡಿಯಾ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು. ದಿನದ 24 ಗಂಟೆಯೂ ದೇಶಕ್ಕಾಗಿ ನಿಮಗಾಗಿ ದುಡಿಯುತ್ತಿದ್ದೇನೆ. ಉಚಿತವಾಗಿ ಪಡಿತರ ನೀಡುತ್ತಿದ್ದೇವೆ. ಇದು…
ಬೆಳಗಾವಿ : ಹುಬ್ಬಳ್ಳಿಯ ಬಿ ವಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್ ತಂದೆ ಬಾಬಾ ಸಾಹೇಬ್ ಸುಭಾನಿ ಪ್ರತಿಕ್ರಿಯೆ ನೀಡಿದ್ದು ನನ್ನ ಮಗನನ್ನು ಸೈನಿಕನನ್ನಾಗಿ ಮಾಡಬೇಕೆಂಬ ಆಸೆ ಇತ್ತು ಆದರೆ ಅವನು ಕ್ಷಮಿಸಲಾರದಂತ ತಪ್ಪು ಮಾಡಿದ್ದಾನೆ. ಆದ್ದರಿಂದ ಅವನಿಗೆ ಯಾವ ಶಿಕ್ಷೆ ಕೊಟ್ಟರೂ ಅದನ್ನು ಸ್ವೀಕರಿಸುತ್ತೇನೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ತಿಂಗಳ ಹಿಂದೆ ನೇಹಾ ಅವರ ತಂದೆ ಕರೆ ಮಾಡಿ, ಸರ್ ನಿಮ್ಮ ಮಗನಿಂದ ನಮ್ಮ ಮಗಳಿಗೆ ತೊಂದರೆ ಇದೆ. ದಯವಿಟ್ಟು ನಿಮ್ಮ ಮಗನಿಗೆ ಬುದ್ಧಿ ಹೇಳಿ ಎಂದಿದ್ದರು. ಈ ಕಾರಣಕ್ಕಾಗಿ ನಾನು ಅವನನ್ನು ಬೆಳಗಾವಿಗೆ ಕರೆದುಕೊಂಡು ಬಂದು ಇಲ್ಲಿ ಇಟ್ಟುಕೊಂಡಿದ್ದೆ. ಆದರೆ ಕಳೆದ 2 ವರ್ಷದಿಂದ ಆತ ನನ್ನ ಜೊತೆಗೆ ಇರಲಿಲ್ಲ. ಬದಲಾಗಿ ತಾಯಿ ಜೊತೆ ಇದ್ದ. ನಾನು ನನ್ನ ಪಾಡಿಗೆ ಕೆಲಸ ಮಾಡಿಕೊಳ್ಳುತ್ತಾ ಇದ್ದೆ. ಈ ಘಟನೆ ನಡೆದು 6 ಗಂಟೆಗೆ ನನಗೆ ಗೊತ್ತಾಯಿತು.…
ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತೆ ನಿನ್ನೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠಳನ್ನು ಬರ್ಬರವಾಗಿ ಕೊಲೆಗೈಯಲಾಗಿದೆ. ಇದೀಗ ಇದಕ್ಕೆ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ನೇಹಾಳ ಹತ್ಯೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಹುಬ್ಬಳ್ಳಿಯ ಬಿವಿಬಿ ಕಾಲೇಜ್ನಲ್ಲಿ ದಾರುಣವಾಗಿ ಹತ್ಯೆಯಾದ ನೇಹಾ ಹೀರೇಮಠ್ ಸಾವಿಗೆ ಕಂಬನಿ ಮಿಡಿದ್ದಾರೆ. ಕಾಲೇಜು ಕ್ಯಾಂಪನ್ನಲ್ಲಿ ಆಗಿರುವ ಇಂಥ ಹತ್ಯೆ ಆತಂಕ ಮೂಡಿಸಿದೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ನೇಹಾ ಸಾವಿಗೆ ಸಂತಾಪ ಸೂಚಿಸಿದ ಅವರು, ಸಹೋದರಿ ನೇಹಾ ಹಿರೇಮಠ್ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಧ್ರುವ ಸರ್ಜಾ ಟ್ವೀಟ್ ಮಾಡಿದ್ದಾರೆ. https://twitter.com/DhruvaSarja/status/1781327453060800851?t=z_tLta3Xh1eS5nz689xMVQ&s=19












