Author: kannadanewsnow05

ಹುಬ್ಬಳ್ಳಿ : ಬಳ್ಳಾರಿಯ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆರು ಜನ ಬಾಣಂತಿಯರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ. ಅಲ್ಲದೆ ಇತ್ತೀಚಿಗೆ ಬೆಳಗಾವಿಯಲ್ಲಿ ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರು ಹಾಗೂ 322 ಶಿಶುಗಳು ಮೃತಪಟ್ಟಿರುವ ಸಂಗತಿ ಬಯಲಾಗಿತ್ತು. ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೂಡ ಬಾಣಂತಿಯರ ಹಾಗೂ ಶಿಶುಗಳ ಸಾವಾಗಿರುವುದು ಬೆಳಕಿಗೆ ಬಂದಿದೆ. ಹೌದು ಈ ಕುರಿತಂತೆ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್ ಮಾಧ್ಯಮಗಳ ಜೊತೆ ಮಾತನಾಡಿ, ಜನವರಿಯಿಂದ ಈವರೆಗೆ 33 ಗರ್ಭಿಣಿಯರು, 148 ಶಿಶುಗಳ ಸಾವಾಗಿದೆ. ಬೇರೆ ಬೇರೆ ಕಾರಣಗಳಿಂದ ಗರ್ಭಿಣಿಯರು, ನವಜಾತ ಶಿಶುಗಳ ಸಾವಾಗಿದೆ, ಆದರೆ ಡ್ರಗ್ ಡಿಯಾಕ್ಟ್​ನಿಂದ ಯಾರೂ ಮೃತಪಟ್ಟಿಲ್ಲ. ನ್ಯಾಷನಲ್ ಲೇವಲ್ ಡೆತ್​ ರೇಟ್ ಹೇಗಿದೆ, ಹಾಗೆ ಹುಬ್ಬಳ್ಳಿ ಕಿಮ್ಸ್​ನಲ್ಲಿ ಡೆತ್​ ರೇಟ್​ ಶೇಕಡ 3 ರಿಂದ 4 ರಷ್ಟಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಕಿಮ್ಸ್​ನಲ್ಲಿ ಡ್ರಗ್​ ರಿಯಾಕ್ಟ್​ನಿಂದ ಮೃತಪಟ್ಟಿರುವ ವರದಿಯಾಗಿಲ್ಲ, ಆದರೂ ಮುಂಜಾಗ್ರತಾ ಕ್ರಮವಾಗಿ ಸಮಿತಿ ರಚನೆ ಮಾಡಿದ್ದೇವೆ.…

Read More

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಖನದಾಳ ಎಂಬ ಗ್ರಾಮದಲ್ಲಿ ನಡೆದಿದೆ. ಎರಡು ಕುಟುಂಬಗಳ ನಡುವೆ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆಯಿತು. ಈ ವೇಳೆ ಎರಡು ಕುಟುಂಬದ ಸದಸ್ಯರು ಮಾರಕಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಒಂದು ಘಟನೆಯಲ್ಲಿ ಎರಡು ಕುಟುಂಬಗಳ ಸದಸ್ಯರ ಪೈಕಿ ಒಟ್ಟು 5 ಜನರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಮುಗಳಖೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಳುಗಳನ್ನ ರಂಗಪ್ಪ ನಾಯಿಕ, ಪ್ರಹ್ಲಾದ್ ನಾಯಿಕ, ಲಕ್ಷ್ಮೀ ಬಾಯಿ ನಾಯಿಕ, ಗುರುಸಿದ್ದಪ್ಪ ನಾಯಿಕ, ಸುಪ್ರೀತ ನಾಯಿಕ ಗಾಯಗೊಂಡ ಗಾಯಾಳುಗಳು.ತಕ್ಷಣ ಎಲ್ಲರನ್ನು ಮುಗಳಖೋಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳುಗಳನ್ನು ಚಿಕಿತ್ಸೆ ಕೊಡಿಸಲಾಗಿದೆ. ಗೋಪಾಲ ನಾಯಿಕ, ಸುರೇಶ ನಾಯಿಕ ಎಂಬವರು ಹಲ್ಲೆ ನಡೆಸಿರುವ ಆರೋಪಗಳು ಕೇಳಿ ಬಂದಿವೆ.

Read More

ಬೆಳಗಾವಿ : ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು, ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ ಈ ಬೆಳೆ ಸದನದಲ್ಲಿ ಇದೇ ವಿಚಾರ ಇಟ್ಕೊಂಡು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿಸದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಅವರು ಸದನವನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಿದರು. ವಕ್ಫ್ ವಿಚಾರದ ಬಗ್ಗೆ ಬಿಜೆಪಿ ಸದಸ್ಯರು ಚರ್ಚೆಗೆ ಆಗ್ರಹಿಸಿದ್ದಾರೆ. ಈ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ಸ್ಪೀಕರ್ ಯುಟಿ ಖಾದರ್ ವಿಧಾನಸಭೆಯ ಕಲಾಪ ಮುಂದೂಡಿದರು. ವಕ್ಫ್ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಗದ್ದಲ ನಡೆಸಿತು. ಗದ್ದಲದ ನಡುವೆ ಸ್ಪೀಕರ್ ಯುಟಿ ಖಾದರ್ ಮಾತು ಮುಂದುವರಿಸಿದರು. ಅನುಭವ ಮಂಟಪ ತೈಲ ಚಿತ್ರ ಅನಾವರಣದ ಬಗ್ಗೆ ಸ್ಪೀಕರ್ ಮಾತನಾಡಿದರು. ಬಳಿಕ ನಾಳಿನ ಪಂಚಮಸಾಲಿ ಹೋರಾಟಕ್ಕೆ ನಿರ್ಬಂಧ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ವಿಧಾನದ ಬಾವಿಗೆ ಇಳಿದು ಬಿಜೆಪಿ ಪಂಚಮಸಾಲಿ ಸಮುದಾಯದ ಶಾಸಕರು…

Read More

ರಾಯಚೂರು : ರಾಯಚೂರಿನಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ಬಟ್ಟೆ ತೊಳೆಯಲು ಎಂದು ತಾಯಿ ಮತ್ತು ಮಗ ಇಬ್ಬರು ಕೆರೆಗೆ ಹೋಗಿದ್ದಾರೆ.ಈ ವೇಳೆ ಕಾಲು ಜಾರಿ ಮಗ ಕೆರೆಗೆ ಬಿದ್ದಿದ್ದಾನೆ. ತಕ್ಷಣ ತಾಯಿ ಆತನ ರಕ್ಷಣೆಗೆ ತಾನು ಕೂಡ ಕೆರೆಗೆ ಜಿಗಿದಿದ್ದು ಇಬ್ಬರೂ ಕೂಡ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಮಲಯಾಬಾದ್ ಗ್ರಾಮದಲ್ಲಿ ನಡೆದಿದೆ. ಹೌದು ರಾಯಚೂರು ತಾಲೂಕಿನ ಮಲಯಾಬಾದ್ ಗ್ರಾಮದಲ್ಲಿ ತಾಯಿ ರಾಧಮ್ಮ (32) ಹಾಗೂ ಮಗ ಕೆ ಸಂಜು (5) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ಬೆಳಿಗ್ಗೆ ಮಗನೊಂದಿಗೆ ರಾಧಮ್ಮ ಬಟ್ಟೆ ತೊಳೆಯಲು ಹೋಗಿದ್ದರು. ಇ ವೇಳೆ ಕಾಲು ಜಾರಿ ಕೆರೆಯಲ್ಲಿ ಮಗ ಸಂಜು ಬಿದ್ದಿದ್ದಾನೆ.ಮಗನನ್ನು ರಕ್ಷಿಸಲು ಹೋಗಿ ತಾಯಿ ರಾಧಮ್ಮ ಕೂಡ ಸಾವನ್ನಪ್ಪಿದ್ದಾರೆ ಯರಗೇರಾ ಪೊಲೀಸ್ ಠಾಣೆ ಎಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ : ಇದೆ ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ಈ ಒಂದು ಸಮ್ಮೇಳನಕ್ಕೆ ಬರುವ ಎಲ್ಲಾ ಅತಿಥಿಗಳಿಗೆ ಬಾಡೂಟ ಇರಬೇಕು ಎಂದು ಅಗ್ರಹಿಸಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಸಮಾನ ಮನಸ್ಕ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಮಂಡ್ಯದಲ್ಲಿ ಸಮಾನ ಮನಸ್ಕರ ವೇದಿಕೆಯಿಂದ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಬಳಿ ಬೇಯಿಸಿದ ಮೊಟ್ಟೆ ತಿನ್ನುವ ಮೂಲಕ ಧರಣಿ ನಡೆಸಿದ್ದಾರೆ. ನಾಟಿ ಕೋಳಿ ಸಾರು, ಮಟನ್ ಕಬಾಬ್ ನೀಡಬೇಕೆಂದು ಅಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಮಂಡ್ಯ ಅಂದರೆ ಬೆಳೆಯು ಇರಲಿ, ಮೂಳೆಯೂ ಇರಲಿ ನಾವು ಬಾಡೂಟ ನೀಡಿ ಅತಿಥಿ ಸತ್ಕಾರ ಮಾಡಬೇಕು. ಕೋಸಂಬರಿ ಜೊತೆಗೆ ಎಗ್ ಬುರ್ಜಿಯು ಇರಲಿ. ಹಪ್ಪಳ ಜೊತೆಗೆ ಕೊರಬಾಡು, ಕಬಾಬ್ ಇರಲಿ. ಮುದ್ದೆ ಜೊತೆಗೆ ಡ್ಯೂಟಿ ಗೊಜ್ಜು ಇರಲಿ ಎಂದು ಘೋಷಣೆ ಕೂಗಿ ಧರಣಿ ನಡೆಸಿದರು. ಬಾಡೂಟ ಕೊಡದಿದ್ದರೆ…

Read More

ಬಳ್ಳಾರಿ : ಈಗಾಗಲೇ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಭಾರಿ ಸದ್ದು ಮಾಡಿದ್ದು ಇದರ ಬೆನಲ್ಲೇ ಇದೀಗ ಬಳ್ಳಾರಿ ಪಾಲಿಕೆಯಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಮನೆ ತೆರಿಗೆ ಸಂಗ್ರಹ ಹೆಸರಿನಲ್ಲಿ ಪಾಲಿಕೆಯ ಬಿಲ್ ಕಲೆಕ್ಟರ್ ಗಳು ನಕಲಿ ಬಿಲ್ ಸೃಷ್ಟಿಸಿ ಲಕ್ಷಾಂತರ ರೂಪಾಯಿ ತೆರಿಗೆ ಹಣ ವಂಚಿಸಿರುವ ಆರೋಪ ಇದೀಗ ಕೇಳಿ ಬಂದಿದೆ. ಹೌದು ಮನೆ ತೆರಿಗೆ ಹೆಸರಿನಲ್ಲಿ ಒಂದೇ ರಸೀದಿಗೆ ಡಬಲ್ ಬಿಲ್ ಸೃಷ್ಟಿ ಮಾಡಿ ವಂಚನೆ ಎಸಗಲಾಗಿದೆ. ಮನೆತರಿಗೆ ಸಂಗ್ರಹ ನೆಪದಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಇದೀಗ ನುಂಗಿರುವ ಆರೋಪ ಕೇಳಿ ಬಂದಿದೆ. ಯಾರದ್ದು ಮನೆಯ ತೆರಿಗೆಯ ಬಿಲ್ ನಂಬರ್ ಬಳಸಿ ಅಕ್ರಮ ಎಸಗಿದ್ದು, ಮತ್ತೆ ಇನ್ಯಾರದ್ದು ಮನೆಯ ಅಸಲಿ ಬಿಲ್ ಎಂಬಂತೆ ನಂಬಿಸಿ ವಂಚನೆ ಎಸಗಲಾಗಿದೆ. ಬಿಲ್ ಕಲೆಕ್ಟರ್ ಗಳ ವಿರುದ್ಧ ಲಕ್ಷಾಂತರ ಹಣ ವಂಚಿಸಿರುವ ಆರೋಪ ಕೇಳಿ ಬಂದಿದೆ. ಮನೆ ತೆರಿಗೆ ಸಂಗ್ರಹದಲ್ಲಿ ಲಕ್ಷಾಂತರ ರೂಪಾಯಿ ಗೋಲ್ಮಾಲ್ ಯಾರದೋ ಮನೆಯ ತೆರಿಗೆ…

Read More

ತುಮಕೂರು : ತುಮಕೂರಿನ ಸಿದ್ದಗಂಗಾ ಮಠದಲ್ಲಿ ತಡರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಮಠದ ಸ್ಮೃತಿ ವನದ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಚಿರತೆ ಓಡಾಡಿರುವ ವಿಷಯ ತಿಳಿದು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಸಿದ್ದಗಂಗಾ ಮಠದ ಸ್ಮೃತಿ ವನದ ಬಳಿ ಚರಿತೆ ಓಡಾಡಿದೆ ನಾಯಿಯನ್ನು ಬೇಟೆ ಆಡಲು ಚಿರತೆ ಬಂದಿತು ಎಂದು ಶಂಕೆ ವ್ಯಕ್ತವಾಗಿದೆ ಆದರೆ ಇದೇ ವೇಳೆ ಜೋರಾಗಿ ನಾಯಿ ಬೊಗಳಿದ್ದರಿಂದ ಅಲ್ಲಿಂದ ಚಿರತೆ ಓಡಿಹೋಗಿದೆ ಎನ್ನಲಾಗಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಮಠದ ಸಿಬ್ಬಂದಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಓಡಾಡಿದ ಸ್ಥಳ ಪರಿಶೀಲಿಸಿದ ನಂತರ ಸೆರೆಗೆ ಬೋನು ಅಳವಡಿಸಿದ್ದಾರೆ. ಆದಷ್ಟು ಬೇಗ ಚಿರತೆಯನ್ನು ಸರಿ ಹಿಡಿಯಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ.

Read More

ಗುಜರಾತ್ : ಗುಜರಾತ್ ನಲ್ಲಿ ಭೀಕರವಾದಂತಹ ರಸ್ತೆ ಅಪಘಾತ ನಡೆದಿದ್ದು ರಸ್ತೆ ಬದಿಯ ಡಿವೈಡರ್ಗೆ ವೇಗವಾಗಿ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾಲೇಜಿಗೆ ಹೋಗುತ್ತಿದ್ದ ಐವರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಗುಜರಾತ್​ನ ಜುನಾಗಢದಲ್ಲಿ ನಡೆದಿದೆ. ಕಾಲೇಜಿಗೆ ಹೋಗುತ್ತಿದ್ದ ಐವರು ವಿದ್ಯಾರ್ಥಿಗಳು ಒಂದು ಕಾರಿನಲ್ಲಿ ಚಲಿಸುತ್ತಿದ್ದು ವೇಗವಾಗಿ ಬಂದು ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮತ್ತೊಂದು ಕಾರಿಗೆ ಗುದ್ದಿದೆ. ಈ ವೇಳೆ ಮತ್ತೊಂದು ಕಾರಿನಲ್ಲಿ ಚಲಿಸುತ್ತಿದ್ದ ಇನ್ನಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ರಾಯಚೂರು : ಕಾಲೇಜಿಗೆ ಹೋಗುತ್ತಿರುವ ಯುವತಿಯರಿಗೆ, ಮಹಿಳೆಯರಿಗೆ ವಿಕೃತ ಕಾಮಿಯೊಬ್ಬ ತನ್ನ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ರಾಯಚೂರು ನಗರದ ಸಾಯಿಬಾಬಾ ಹಿಂಭಾಗದಲ್ಲಿ ನಡೆದಿದೆ. ಆರೋಪಿಯನ್ನ ಅಕ್ಬರ್ ಎಂದು ಗುರುತಿಸಲಾಗಿದ್ದು, ಅಕ್ಬರ್​​ ರಾಯಚೂರು ನಗರದ ನಿಲ್ದಾಣದ ಬಳಿಯ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಕಾಲೇಜಿಗೆ ಹೋಗುವ ಹಿಂದೂ ವಿದ್ಯಾರ್ಥಿನಿಯರಿಗೆ ಮತ್ತು ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದನು ಎನ್ನಲಾಗಿದೆ. ನಂತರ ಅವರ ಮುಂದೆ ನಿಂತು ಮರ್ಮಾಂಗ ತೋರಿಸುತ್ತಿದ್ದನು. ವಿಕೃತ ಕಾಮಿ ಹಿಂದು ಯುವತಿಯರಿಗೆ ಮಾತ್ರ ಮರ್ಮಾಂಗ ತೋರಿಸುತ್ತಿದ್ದನು. ಈತನ ವಿಕೃತ ಕೃತ್ಯವನ್ನು ಸ್ಥಳೀಯರು ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ನಿತ್ಯ ಇದೇ ರೀತಿಯಾಗಿ ಮಾಡುತ್ತಿದ್ದ, ಅಕ್ಬರ್​​ನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಕೂಡಲೇ ಪೊಲೀಸರು ಕಾಮುಕ ಅಕ್ಬರ್​ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Read More

ಹಾಸನ : ಹಾಸನದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ನೀರು ಕುಡಿಯುತ್ತಲೇ ಕುಸಿದು ಬಿದ್ದು ಹೃದಯಘಾತವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಟೆಕ್ಕಿಯನ್ನು ಸಮರ್ಥ್ (26) ಎಂದು ಹೇಳಲಾಗುತ್ತಿದೆ.ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್‌ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸಮರ್ಥ್ ವರ್ಕ್ ಫ್ರಮ್ ಹೋಂ ಮೂಲಕ ಕೆಲಸ ಮಾಡಿತ್ತಿದ್ದರು. ಅದೇ ರೀತಿ ಭಾನುವಾರ ಬೆಳಗ್ಗೆಯವರೆಗೂ ಕೆಲಸ ಮಾಡಿ ಮಲಗಿದ್ದರು. ಸಂಜೆ ಮೇಲೆದ್ದು ನೀರು ಕುಡಿದ ಸಮರ್ಥ್ ತಕ್ಷಣವೇ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.ಕೂಡಲೇ ಅವರ ತಾಯಿ ವೈದ್ಯರಿಗೆ ಕರೆ ಮಾಡಿ ಮನೆಗೆ ಕರೆಸಿದ್ದಾರೆ. ತಪಾಸಣೆ ಮಾಡಿದ ವೈದ್ಯರು ಸಮರ್ಥ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕೂಡಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Read More