Author: kannadanewsnow05

ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ನಿರೀಕ್ಷಣ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್ ಮಧ್ಯಾಹ್ನ 2:45 ಕ್ಕೆ ಮುಂದೂಡಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಗುರುವಾರ ಅಥವಾ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲು ಭವಾನಿ ರೇವಣ್ಣ ಪರ ವಕೀಲರು ಮನವಿ ಮಾಡಿದರು. ಈವರೆಗೆ ಭವಾನಿ ರೇವಣ್ಣಗೆ ಎಸ್ಐಟಿ ನೋಟಿಸ್ ಹಜಾರಿಗೊಳಿಸಿಲ್ಲ ಹೀಗಾಗಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಎಸ್ಐಟಿ ಪರ ಎಸ್‍ಪಿಪಿ ಬಿಎನ್ ಜಗದೀಶ್ ಮನವಿ ಮಾಡಿದ್ದಾರೆ. ಈ ವೇಳೆ ಮುಂದಿನ ವಿಚಾರಣೆಯವರೆಗೂ ಬಂಧನದಿಂದ ರಕ್ಷಣೆ ನೀಡಲು ಹಾಗೂ ಮಧ್ಯಂತರ ಜಾಮಿನು ನೀಡಲು ಭವಾನಿ ರೇವಣ್ಣ ಪರ ವಕೀಲರು ಮನವಿ ಮಾಡಿದ್ದಾರೆ. ಈಗಾಗಲೇ ಒಂದು ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಜೆಡಿ…

Read More

ಕೊಪ್ಪಳ : ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಪುರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ಅಜ್ಜಿ ಮಗಳು ಮೊಮ್ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್ವರಿ (50), ಮಗಳಾದ ವಸಂತ (28) ಮೊಮ್ಮಗ ಸಾಯಿ ಧರ್ಮತೇಜ (5) ಸಾವನ್ನಪ್ಪಿದ್ದರೆ. ಅಜ್ಜಿ ಮತ್ತು ಮೊಮ್ಮಗನ ಶವ ಬೆಡ್ರೂಮ್ ನಲ್ಲಿ ಪತ್ತೆಯಾಗಿದೆ. ಮಗಳು ವಸಂತ ಮೃತ ದೇಹ ಅಡುಗೆ ಮನೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಏನೋ ಸಾವಿನ ಕುರಿತು ಯಾವುದೇ ಆದಂತಹ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಸಂತ ಗೆಲುವು ವರ್ಷಗಳ ಹಿಂದೆ ಮದುವೆಯಾಗಿದ್ದು ಗಂಡನೊಂದಿಗೆ ಜಗಳವಾಡಿ ತವರು ಮನೆಯಲ್ಲಿ ಇದ್ದಳು ಅಲ್ಲದೆ, ವಸತಿಗೆ ಬೇರೊಬ್ಬರ ಜೊತೆಗೆ ಸಂಪರ್ಕ ಇತ್ತು ಎಂದು ಹೇಳಲಾಗುತ್ತಿದ್ದು, ಈಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಮೇ 31ಕ್ಕೆ ಪ್ರಜ್ವಲ್ ರೇವಣ್ಣನ ಸಂಸದ ಸ್ಥಾನ ಅಂತ್ಯವಾಗುತ್ತದೆ ಪ್ರಜ್ವಲ್ ರೇವಣ್ಣ ಯಾವುದೇ ಕಾರಣಕ್ಕೂ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಾನು ಪ್ರಜ್ವಲ್ ವಿಡಿಯೋ ಗಮನಿಸಿದ್ದೇನೆ. ಬ್ಲೂ ಕರ್ನರ್ ನೋಟಿಸ್ ಮೂಲಕ ತನಿಖೆ ಆಗುತ್ತಿತ್ತು. ಈಗ ವಾಪಸ್ ಬರುತ್ತೇನೆ ಎಂದು ತಿಳಿಸಿದ್ದಾರೆ. ಕಾನೂನು ಮೂಲಕ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಮೇ 31ಕ್ಕೆ ಸಂಸದ ಸ್ಥಾನ ಅಂತ್ಯವಾಗುತ್ತದೆ.ಬಳಿಕ ರಾಜ ತಾಂತ್ರಿಕ ಪಾಸ್ಪೋರ್ಟ್ ಅಂತ್ಯವಾಗುತ್ತದೆ.ಇದೆಲ್ಲವನ್ನು ತಿಳಿದು ಮರಳಿ ಬರಲು ತೀರ್ಮಾನಿಸಿದ್ದಾರೆ. ವಿಡಿಯೋದಲ್ಲಿ ಷಡ್ಯಂತರ ಇದೆ ಅನ್ನೋ ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು ಎಸ್ಐಟಿ ಅಧಿಕಾರಿಗಳು ಇದರ ಬಗ್ಗೆ ಗಮನಿಸುತ್ತಾರೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ರಾವ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆಲುಗು ನಟಿ ಹೇಮಾ ಸೇರಿ 8 ಆರೋಪಿಗಳಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು ಇದೀಗ ಇಂದು ಮತ್ತೆ ಆರೋಪಿಗಳಿಗೆ ಸಿಸಿ ಬೇಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆಲುಗು ನಟಿ ಹೇಮಾ ಸೇರಿ 8 ಜನರಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು. ಆದರೆ ಹೇಮಾ ಸೇರಿದಂತೆ ಕೆಲವರು ವಿಚಾರಣೆಗೆ ಹಾಜರಾಗಿಲ್ಲ.ಹಾಗಾಗಿ ಇದೀಗ ಎಲ್ಲರಿಗೂ ಎರಡನೇ ಬಾರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಿನ್ನೆ ವಿಚಾರಣೆಗೆ ಆರೋಪಿಗಳು ಗೈರಾಗಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡುವಂತಹ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Read More

ತುಮಕೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ, ತುಮಕೂರು ಜಿಲ್ಲೆಯಲ್ಲಿ ಮೀರಿಸಂಹಿತೆಯನ್ನು ಗಾಳಿಗೆ ತೂರಿ ಬೆಳ್ಳಂಬೆಳಗ್ಗೆ ಮಧ್ಯ ಮಾರಾಟ ಮಾಡಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ರಸ್ತೆಯಲ್ಲಿ ಓಡಾಡುವ ಮಹಿಳೆಯರು ಹಾಗೂ ಮಕ್ಕಳು ವಿದ್ಯಾರ್ಥಿಗಳಿಗೆ ಮುಜುಗರ ಉಂಟಾಗಿದ್ದು ಗುಬ್ಬಿ ಪಟ್ಟಣದ ರಾಘವೇಂದ್ರ ವೈನ್ಸ್, ಸಿವಿಆರ್ ಲಿಕ್ಕರ್ ಶಾಪ್ ಹಾಗೂ ಚಾಮುಂಡಿ ವೈನ್ಸ್ ಮಾಲೀಕರಿಂದ ನೀತಿ ಸಂಹಿತೆ ಉಲ್ಲಂಘಿಸಿ ಮದ್ಯ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಾರ್ ಮಾಲೀಕರ ಭಂಡತನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಅಬಕಾರಿ ಅಧಿಕಾರಿಗಳು ಹಾಗೂ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದರು ಯಾವುದೇ ರೀತಿಯಾದಂತಹ ಕ್ರಮ ತೆಗೆದುಕೊಂಡಿಲ್ಲ ಪೊಲೀಸರು ಹಾಗೂ ಅಬಕಾರಿ ಅಧಿಕಾರಿಗಳ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Read More

ತುಮಕೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಸಂಭವಿಸಿದ್ದು ತುಮಕೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ ಪತ್ನಿಯ ನಡುವೆ ಗಲಾಟೆ ಶುರುವಾಗಿದೆ ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪತಿ ಪತ್ನಿಯನ್ನು ಭೀಕರವಾಗಿ ಹೊಂದಿದ್ದಲ್ಲದೆ ದೇಹದ ಅಂಗಾಂಗಗಳನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಹೌದು ಈ ಒಂದು ದುರ್ಘಟನೆ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ ಎಸಗಿದ್ದಾನೆ. ಆರೋಪಿಯು ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಿವರಾಮ್​​ನನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿ ಶಿವರಾಮ್ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಎಂಬವರನ್ನು ಮದುವೆಯಾಗಿದ್ದ. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ…

Read More

ಶಿವಮೊಗ್ಗ : ಹೊಲದಲ್ಲಿ ಬೆಳೆದಿದಂತಹ ಅಣಬೆಯನ್ನು ತಂದು ಸಾಂಬಾರು ಮಾಡಿ ಸೇವಿಸಿದ ಐವರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಗ್ರಾಮದಲ್ಲಿ ಬೆಳೆದಿದಂತ ಅಣಬೆ ಕಿತ್ತು ತಂದು ಸಾಂಬಾರು ಮಾಡಲಾಗಿತ್ತು. ಇದನ್ನು ಮಧ್ಯಾಹ್ನ ಊಟದೊಂದಿಗೆ ತಿಂದ ಐವರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಈ ಮಕ್ಕಳು ಒಂದೇ ಕುಟುಂಬದವರಾಗಿದ್ದಾರೆ. ಇದೇ ಆಹಾರ ಸೇವಿಸಿದ ಮನೆಯ ಇತರೆ ಸದಸ್ಯರಿಗೆ ಯಾವುದೇ ಸಮಸ್ಯೆಯಾಗಿಲ್ಲ.ಕೂಡಲೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ತಪಾಸಣೆ ನಡೆಸಿದ ವೈದ್ಯರು ಶಿಕಾರಿಪುರ ಆಸ್ಪತ್ರೆಗೆ ಕಳುಹಿಸಿದ್ದರು.ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು.ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ನಟರಾಜ್ ಮಾತನಾಡಿ, ಗ್ರಾಮದಲ್ಲಿ ಬೆಳೆದಿದ್ದ ಅಣಬೆಯಿಂದ ತಯಾರಿಸಿದ್ದ ಸಾಂಬಾರು ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದ್ದರು. ಇದೀಗ ಎಲ್ಲರೂ ಆರೋಗ್ಯವಾಗಿದ್ದಾರೆ. ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ಬ್ಯಾಂಕ್ ವ್ಯವಹಾರಗಳಲ್ಲಿ ನಾವು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ಕೆಲವೊಂದು ಬಾರಿ ಸೈಬರ್ ವಂಚಕರಿಗೆ ನಮಗೆ ಗೊತ್ತಿಲ್ಲದಂತೆ ಮೋಸ ಹೋಗಿರುತ್ತೇವೆ. ಇದೀಗ ಖಾಸಗಿ ಕಂಪನಿಯ ಕೆಲಸಕ್ಕೆಂದು ಸಂದರ್ಶನ ಕೊಟ್ಟ ಯುವತಿಗೆ ಫೀಡ್‌ಬ್ಯಾಕ್ ನೆಪದಲ್ಲಿ ಒಟಿಪಿ ಪಡೆದು ಬರೋಬ್ಬರಿ 5.94 ಲಕ್ಷ ರೂ. ಸಾಲ ಪಡೆದು ಸೈಬ‌ರ್ ಕಳ್ಳರು ವಂಚಿಸಿದ್ದಾರೆ. ಹೌದು ಬೆಂಗಳೂರಿನ ಜಯನಗರ 4ನೇ ಹಂತ ಟಿ ಬ್ಲಾಕ್‌ನಲ್ಲಿ ನೆಲೆಸಿರುವ 28 ವರ್ಷದ ಯುವತಿ ವಂಚನೆಗೆ ಒಳಗಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈಕೆ ಕೊಟ್ಟ ದೂರಿನ ಮೇರೆಗೆ ದಕ್ಷಿಣ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 2023ರ ಮೇನಲ್ಲಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಯುವತಿಗೆ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಸಂದರ್ಶನ ಇರುವುದಾಗಿ ಆಹ್ವಾನಿಸಿದ್ದರು. ಅಲ್ಲಿಗೆ ಹೋದಾಗ ಮಹೇಶ್ ಎಂಬಾತ ಸಂದರ್ಶನ ನಡೆಸಿ ಕಳುಹಿಸಿದ್ದ. ಎರಡು ದಿನಗಳ ಬಳಿಕ ಯುವತಿಗೆ ಕರೆ ಮಾಡಿದ ಮಹೇಶ್, ಸಂದರ್ಶನ ಸಂಬಂಧ ಫೀಡ್‌ಬ್ಯಾಕ್ ಕೊಡಬೇಕು. ಅದಕ್ಕಾಗಿ ನಿಮ್ಮ ಮೊಬೈಲ್‌ಗೆ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದುಕೊಂಡೆ ಇದೀಗ ಮೊದಲ ಬಾರಿಗೆ ವಿಡಿಯೋ ಮೂಲಕ ಹೇಳಿಕೆಯನ್ನು ನೀಡಿದ್ದು, ರಾಹುಲ್ ಗಾಂಧಿ ನನ್ನ ವಿಷಯ ಬಹಿರಂಗ ವೇದಿಕೆಯಲ್ಲಿ ಪ್ರಚಾರ ಮಾಡಿದಾಗ ನಾನು ‘ಡಿಪ್ರೆಶನ್’ ಗೆ ಹೋಗಿದ್ದೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ನ್ಯೂಸ್ ಚಾನೆಲ್ ನಲ್ಲಿ ನನ್ನ ಕುರಿತು ಸುದ್ದಿ ಹರಿದಾಡುತ್ತಿರುವುದನ್ನು ಗಮನಿಸಿದೆ. ಹಾಗಾಗಿ ನಮ್ಮ ವಕೀಲರ ಮೂಲಕ 7 ದಿನ ಸಮಯಾವಕಾಶ ಕೇಳಿದ್ದೆ. ಮಾರನೆಯ ದಿನ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ನಾಯಕರು ಬಹಿರಂಗ ವೇದಿಕೆಗಳಲ್ಲಿ ಈ ಒಂದು ವಿಚಾರ ಪ್ರಚಾರ ಮಾಡೋದಕ್ಕೆ ಶುರು ಮಾಡಿದರು. ಆಗ ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೆ. ಅದಾದ ನಂತರ ಹಾಸನದಲ್ಲಿ ಕೆಲವು ಶಕ್ತಿಗಳು ರಾಜಕೀಯ ಪಿತೂರಿ ಮಾಡಿದ್ದಾರೆ. ರಾಜಕೀಯವಾಗಿ ನಾನು ಹೇಗೆ ಬೆಳೆಯುತ್ತಿದ್ದೇನೆ ಎಂದು ನನ್ನನ್ನು ಉಗಿಸಲು ಎಲ್ಲಾ ರೀತಿಯಿಂದ ಅವರು ಪ್ರಯತ್ನ ಮಾಡಿದ್ದಾರೆ. ಈ ಒಂದು…

Read More

ಚಿಕ್ಕಮಗಳೂರು : ಕಳೆದ ಹಲವು ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಜು ದುರಂತಗಳು ಸಂಭವಿಸಿದ್ದು, ಪರಿಣಾಮ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ನಗರದ ಹೊರವಲಯದ ಕೋಟೆ ಕೆರೆಯಲ್ಲಿ ನಡೆದಿದೆ. ಹೌದು ಮೃತ ಬಾಲಕನನ್ನು ಶಶಾಂಕ್ (13) ಎಂದು ಹೇಳಲಾಗುತ್ತಿದ್ದು, ಶಾಲೆಗೆ ರಜೆ ಇದ್ದ ಕಾರಣ ತನ್ನ ಮೂವರು ಸ್ನೇಹಿತರ ಜೊತೆ ಕೋಟೆ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದರು. ಕೆರೆಯಲ್ಲಿ ಊಳು ತುಂಬಿದ್ದ ಕಾರಣ ಬಾಲಕ ಶಶಾಂಕ್ ನ ಕಾಲು ಊಳಿನಲ್ಲಿ ಸಿಕ್ಕಿಕೊಂಡು ಬಾಲಕ ಮೇಲೆ ಸಾಧ್ಯವಾಗದೆ ಸಾವನ್ನಪ್ಪಿದ್ದಾನೆ. ಮೃತ ಶಾಶಂಕ್ ತಾಯಿ ಸ್ಕೂಲ್ ಟೀಚರ್ ಆಗಿದ್ದಾರೆ.ಆದರೆ ಬಾಲಕ ಶಶಾಂಕ್ ಜೊತೆ ಹೋಗಿದ್ದ ಉಳಿದ ಮೂವರು ಅಪಾಯದಿಂದ ಪಾರಾಗಿದ್ದಾರೆ.ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾಲಕನ ಮೃತ ದೇಹವನ್ನು ಕೆರೆಯಿಂದ ಮೇಲೆ ತೆಗೆದಿದ್ದಾರೆ.

Read More