Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಪ್ರಸ್ತುತ ರಾಜ್ಯದಲ್ಲಿ ಯಾವುದೇ ರೀತಿಯಾಗಿ ಆರ್ಥಿಕ ಸಂಕಷ್ಟ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಲೇ ಬಂದಿದೆ. ಗ್ಯಾರೆಂಟಿ ಯೋಜನೆಗಳು ಕುರಿತು ಸುಳ್ಳು ಅಪಪ್ರಚಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದೆ. ಆದರೆ ಬೇರೇ ರಾಜ್ಯಗಳಲ್ಲಿ ಬಿಜೆಪಿಯವರು ಗ್ಯಾರಂಟಿ ಘೋಷಿಸುತ್ತಾರೆ. ರಾಜ್ಯದಲ್ಲಿ ಆರ್ಥಿಕವಾಗಿ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇದು ಇಬ್ಬಗೆ ನೀತಿ ಅಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಬಿಜೆಪಿಗೆ ಸ್ಪಷ್ಟ ನಿಲುವು ಇಲ್ಲ ಬರಿ ಸುಳ್ಳು ಅಪಪ್ರಚಾರ ಮಾಡುತ್ತಾರೆ. ಸರ್ಕಾರದಲ್ಲಿ ದುಡ್ಡು ಇಲ್ಲ ಅಂತ ಸುಳ್ಳು ಹೇಳುತ್ತಿದ್ದಾರೆ. ಯಾವ ಕೆಲಸ ದುಡ್ಡಿಲ್ಲದೆ ನಿಂತಿದೆ ಸಾಬೀತು ಮಾಡಲಿ. ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.ಅಧಿವೇಶನ ಎರಡು ವಾರ ನಡೆಯಬೇಕು ಅಂತ ನಮ್ಮ ಉದ್ದೇಶ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಆದರೆ ವಿಪಕ್ಷ ಹೇಗೆ ಸಹಕಾರ ನೀಡುತ್ತದೆ ಅಂತ…
ಉತ್ತರಕನ್ನಡ : ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಪ್ರವಾಸದ ಬಸ್ ಒಂದು ಪಲ್ಟಿಯಾಗಿದ್ದ ಪರಿಣಾಮ ಬಸ್ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ್ ಗುಡಿ ಬಳಿ ನಡೆದಿದೆ. ಹೌದು ಗಣೇಶ್ ಗುಡಿ ಬಳಿ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 50 ವಿದ್ಯಾರ್ಥಿಗಳ ಪೈಕಿ 40 ವಿದ್ಯಾರ್ಥಿಗಳಿಗೆ ಗೆ ಗಂಭೀರವಾದ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ್ ಗುಡಿಯ ಬಳಿ ಈ ಒಂದು ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಜೋವಿಡಾ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತಂತೆ ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗ ತಾಲೂಕಿನ ಸೇಂಟ್ ಅಂತೋನಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಸೇಂಟ್ ಅಂತೋನಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಆಗಮಿಸಿದ್ದರು.3 ಖಾಸಗಿ ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು. ಮೌಲಂಗಿ ಬಳಿಯ ಹೋಂ ಸ್ಟೇನಲ್ಲಿ ವಿದ್ಯಾರ್ಥಿಗಳು ತಂಗಿದ್ದರು. ಬೆಳಿಗ್ಗೆ ಜಲಸಾಹಸ ಕ್ರೀಡೆ…
ದಾವಣಗೆರೆ : ಬಿಜೆಪಿಯ ಬಣ ಬಡಿದಾಟಕ್ಕೆ ಸಂಬಂಧಿಸಿದಂತೆ ನಿನ್ನೆ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ರಾಜ್ಯಕ್ಕೆ ಭೇಟಿ ನೀಡಿ, ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರೇ ಮುಂದುವರೆಯಲಿದ್ದಾರೆ ಎಂದು ಘೋಷಿಸಿದ್ದಾರೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕ ಯತ್ನಾಳ್ಗೆ ತಿರುಗೇಟು ನೀಡಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಪಡೆದಿರುವುದು ಸಿಎಂ ಆಗಲಿಕ್ಕೆ ಅಲ್ಲ. ಜವಾಬ್ದಾರಿಯಿಂದ ಆ ಸ್ಥಾನವನ್ನು ನಿರ್ವಹಣೆ ಮಾಡುತ್ತಿದ್ದೇನೆ. ಅವರಿಗೆ ಹೋರಾಟ ಮಾಡಬೇಡಿ ಎಂದು ನಾವು ಯಾವತ್ತಿಗೂ ಹೇಳಿಲ್ಲ ಎಲ್ಲವನ್ನೂ ಪಕ್ಷದ ರಾಷ್ಟ್ರೀಯ ನಾಯಕರು ಗಮನಿಸುತ್ತಿದ್ದಾರೆ. ಅವರ ಅನುಮಾನಗಳಿಗೆ ಆಸೆಗಳಿಗೆ ಕಾಲವೇ ಉತ್ತರಿಸುತ್ತದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಒಳ್ಳೆಯದಾಗಲಿ ಎಂದರು. ಅಧಿವೇಶನದಲ್ಲಿ ಸರ್ಕಾರದ ಹಗರಣ ಹೊರೆಗಳಿರುತ್ತೇವೆ. ಅಭಿವೃದ್ಧಿಗಾಗಿ ಸರ್ಕಾರದ ಕಿವಿ ಹಣ್ಣುವ ಕೆಲಸ ಮಾಡುತ್ತೇವೆ. ಯಾವುದೇ ಅಭಿವೃದ್ಧಿ ಇಲ್ಲದೆ ರಾಜ್ಯದ ಜನರು…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು ನಿಯಂತ್ರಣ ಕಳೆದುಕೊಂಡ ಬಿ ಆರ್ ಟಿ ಸಿ ಬಸ್ ಒಂದು, ರಸ್ತೆ ಬಿಟ್ಟು ನೇರವಾಗಿ ಬಾರ್ ಗೆ ನುಗ್ಗಿದೆ ಈ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯಲ್ಲಿ ನೇರವಾಗಿ BRTC ಬಸ್ ಒಂದು ಬಾರ್ ಗೆ ನುಗ್ಗಿದೆ. ಹುಬ್ಬಳ್ಳಿಯ ಬೈರೀದೇವರಕೊಪ್ಪ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಏಕಾಏಕಿ ಚಿಗರಿ ಬಸ್ ಬಾರಿಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ಬಸ್ಸಿಂದ ಕೆಳಗೆ ಇಳಿಸಿ ಅಲ್ಲಿಯೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.
ಗದಗ : ಇಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ 3 ವರ್ಷದ ಬಾಲಕನ ಮೇಲೆ ನಾಯಿ ಒಂದು ಭೀಕರವಾದಂತಹ ದಾಳಿ ಮಾಡಿದ್ದು, ಮೂರು ವರ್ಷದ ಬಾಲಕ ರುದ್ರಪ್ರಿಯನ ಮೇಲೆ ನಾಯಿ ದಾಳಿ ಮಾಡಿ ಕಣ್ಣು, ಕೆನ್ನೆ ಸೇರಿದಂತೆ ದೇಹದ ಇತರೆ ಭಾಗಗಳಲ್ಲಿ ಕಚ್ಚಿ ಭೀಕರವಾಗಿ ಗಾಯಗೊಳಿಸಿತ್ತು. ಇದೀಗ ಈ ಒಂದು ನಾಯಿಯನ್ನು ಸ್ಥಳೀಯರು ಹತ್ಯೆ ಮಾಡಿದ್ದಾರೆ. ಮಗುವಿನ ಮೇಲೆ ದಾಳಿ ಮಾಡಿದ್ದರಿಂದ ಸಹಜವಾಗಿ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದರು ಹೇಗಾದರೂ ಮಾಡಿ ನಾಯಿಯನ್ನು ಹಿಡಿಯಬೇಕು ಎಂದು ರುದ್ರಪ್ರಿಯನ ಮೇಲೆ ದಾಳಿ ಮಾಡಿದ್ದ ನಾಯಿಯನ್ನು ಸ್ಥಳೀಯ ನಿವಾಸಿಗಳು ಹಿಡಿಯಲು ಹೋಗಿದ್ದಾರೆ. ಈ ವೇಳೆ ಇವರ ಮೇಲು ದಾಳಿಗೆ ಮುಂದಾದಾಗ, ಆ ನಾಯಿಯನ್ನು ಹತ್ಯೆ ಗೈದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಎಚ್ಚೆತ್ತುಕೊಂಡ ಮುಂಡರಗಿ ಪುರಸಭೆಯ ಅಧಿಕಾರಿಗಳು, ಬೀದಿ ನಾಯಿಯನ್ನು ಹಿಡಿಯಲು ಪುರಸಭೆ ಅಧಿಕಾರಿಗಳು ಇದೀಗ ಮುಂದಾಗಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಬೀದಿ ನಾಯಿ ಸೆರೆ ಹಿಡಿಯಲಾಗಿದೆ ಎಂದು ಪುರಸಭೆ ಮುಖ್ಯ ಅಧಿಕಾರಿ ಶಂಕರ್ ಹುಲ್ಲಮ್ಮನವರ ಮಾಹಿತಿ…
ಕೋಲಾರ : ಈಗಾಗಲೇ ಕರ್ನಾಟಕದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಇದರ ಬೆನ್ನಲ್ಲೆ ಇದೀಗ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸ್ವ ಪಕ್ಷದ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಗಂಭೀರವಾದ ಆರೋಪ ಮಾಡಿದ್ದಾರೆ. ಹೌದು ಈ ಕುರಿತಂತೆ ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಲೂರು ಕಾಂಗ್ರೆಸ್ ಶಾಸಕರ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪರೋಕ್ಷವಾಗಿ ಕೋಲಾರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಮತ್ತು ಹಾಲಿ ಶಾಸಕ ಕೆ.ವೈ.ನಂಜೇಗೌಡ ವಿರುದ್ದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿರುಗಿಬಿದಿದ್ದಾರೆ. ಎಂವಿಕೆ ಗೋಲ್ಡನ್ ಡೈರಿ ನಿರ್ಮಾಣ ಹಾಗೂ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬರುತ್ತಿದೆ. ಕೋಲಾರ ಹಾಲು ಒಕ್ಕೂಟದ ಕ್ಷೇತ್ರ ವಿಗಂಡಣೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಒಕ್ಕೂಟದ ಎಂಡಿ ಗೋಪಾಲಮೂರ್ತಿ ಅಕ್ರಮ ಕೂಟ ಕಟ್ಟಿಕೊಂಡು ತಮಗೆ ಬೇಕಾದ ರೀತಿಯಲ್ಲಿ ಕ್ಷೇತ್ರದ ವಿಗಂಡಣೆ ಮಾಡಿ ಕೋಲಾರ ಜನತೆಗೆ ಮೋಸ…
ಬೆಳಗಾವಿ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದವರು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದೀಗ ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಪಂಚಮಸಾಲಿ ಸಮುದಾಯದ ಪ್ರಮುಖರು ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಸರ್ಕಾರ ಅವರಿಗೆ ಶಾಕ್ ನೀಡಿದ್ದು ಹೋರಾಟದ ವಾಹನ ಬೆಳಗಾವಿ ಪ್ರವೇಶಿಸಿದಂತೆ ನಿರ್ಬಂಧಿಸಲಾಗಿದೆ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ನೀಡಿದ ಸರ್ಕಾರ ಡಿಸೆಂಬರ್ 9, 10 ಹೋರಾಟದ ವಾಹನ ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಿದೆ. 2 ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಸಲಾಗುತ್ತಿದ್ದು, ಹೋರಾಟಕ್ಕೆ ಬರೋ ಟ್ರ್ಯಾಕ್ಟರ್, ಕ್ರೂಜರ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬಸವ ಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಿಸೆಂಬರ್ 10ರಂದು ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ನಿರ್ಧರಿಸಿದ್ದರು. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರು ಶಾಲಾ ಮಕ್ಕಳು ಆಗಮಿಸಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ…
ಬಾಗಲಕೋಟೆ : ಕಲ್ಯಾಣ ಮಂಟಪದಲ್ಲಿ ಮದುವೆಯ ಸಂಬಂಧಿಕರೆಲ್ಲರೂ ಸಂತೋಷದಿಂದ ಇದ್ದರು. ಆದರೆ ಈ ವೇಳೆ ಕಳ್ಳ ಬೆಕ್ಕಿನಂತೆ ಬಂದ ಖತರ್ನಾಕ್ ಕಳ್ಳನೊಬ್ಬ ಮದುವೆ ಮಂಟಪಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ನೆಕ್ಲೆಸ್ ಅನ್ನು ಕದ್ದು ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹೌದು ಕಲ್ಯಾಣ ಮಂಟಪದಲ್ಲಿ ಕಳ್ಳನೊಬ್ಬ ಚಿನ್ನದ ನೆಕ್ಲೇಸ್ ಎಗರಿಸಿ ಪರಾರಿ ಆಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಇದೀಗ ಬಿಗ್ ಶಾಕ್ ಎದುರಾಗಿದೆ. ಕಳ್ಳ ಬೆಕ್ಕಿನಂತೆ ಮದುವೆ ಮಂಟಪಕ್ಕೆ ನುಗ್ಗಿದ ಖತರ್ನಾಕ್ ಕಳ್ಳನೊಬ್ಬ ರಾಜಾರೋಷವಾಗಿ ಕಲ್ಯಾಣ ಮಂಟಪದಲ್ಲಿ ಓಡಾಟ ನಡೆಸಿದ್ದಾನೆ. ರಾಜಾರೋಷವಾಗಿ ಕಲ್ಯಾಣ ಮಂಟಪದಲ್ಲಿ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರರೆಯಾಗಿದೆ. ಈ ವೇಳೆ ಯಾವುದೇ ಭಯವಿಲ್ಲದೆ ಕಲ್ಯಾಣ ಮಂಟಪದಲ್ಲಿರುವ ರೂಮ್ ಗೆ ಹೋಗಿ ನೆಕ್ಲೇಸ್ ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಗೆ ಮದುವೆ ಸಂಬಂಧಿಕರು ದೂರು ನೀಡಿದ್ದಾರೆ ದೂರು ದಾಖಲಿಸಿಕೊಂಡು ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು : ಗೋಡೆ ಕುಸಿದು ಎರಡು ಬೈಕ್, ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್ ಅಲ್ಲಿಯೇ ಆಟವಾಡುತ್ತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಸುಧಾಮ್ ನಗರದ ಸಿಕೆಸಿ ಗಾರ್ಡನಲ್ಲಿ ಒಂದು ಘಟನೆ ನಡೆದಿದೆ. ನೆನ್ನೆ ಸಂಜೆನೆ ಸರ್ಕಾರಿ ಫಾರ್ಮಸಿ ಕಾಲೇಜಿನ ಗೋಡೆ ಕುಸಿದು ಅವಘಡ ಸಂಭವಿಸಿತ್ತು. ಗೋಡೆ ಶಿಥಿಲಾವಸ್ಥೆಯಲ್ಲಿದ್ದ ಕುರಿತು ಬಿಬಿಎಂಪಿಗೆ ಮಾಹಿತಿ ನೀಡಲಾಗಿತ್ತು, ಸ್ಥಳೀಯರು ಈ ಹಿಂದೆಯೂ ಮಾಹಿತಿ ನೀಡಿದ್ದರೂ ಬಿಬಿಎಂಪಿ ಯಾವುದೇ ಕ್ರಮ ಕೈಗೊಂಡಿಲ್ಲ. ಅರ್ಧದಷ್ಟು ಸರ್ಕಾರಿ ಫಾರ್ಮಸಿ ಕಾಲೇಜಿನ ಕಾಂಪೌಂಡ್ ಕುಸಿದಿದೆ. ಯಾವುದೇ ಕ್ಷಣದಲ್ಲಾದರೂ ಪೂರ್ತಿ ಗೋಡೆ ಕುಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. .
ಬಳ್ಳಾರಿ : ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಜಯಗಳಿಸಿದೆ.ಈ ಹಿನ್ನೆಲೆಯಲ್ಲಿ ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾರಂಭಕ್ಕೆ ಬಂದಿರುವ ಜನರಿಗೆ ಕಾಂಗ್ರೆಸ್ ಮುಖಂಡರು 200 ರೂಪಾಯಿ ಹಂಚಿರುವ ಆರೋಪ ಇದೀಗ ಕೇಳಿಬರುತ್ತಿದೆ. ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣ ಇ ತುಕಾರಾಂ ಅವರು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರ ವಿರುದ್ಧ ಭಾರಿ ಜಯ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಡೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು ಈ ಒಂದು ಸಮಾರಂಭದಲ್ಲಿ, ಸಮಾವೇಶಕ್ಕೆ ಬಂದಿದ್ದವರಿಗೆ ಕಾಂಗ್ರೆಸ್ ಮುಖಂಡರು 200 ರೂಪಾಯಿ ಹಂಚಿದ ಆರೋಪ ಕೇಳಿಬಂದಿದೆ. ಸಂಡೂರಿನ ಅಭಿನಂದನಾ ಸಮಾವೇಶದ ವೇದಿಕೆ ಎಡಭಾಗದಲ್ಲಿ ಸಮಾವೇಶಕ್ಕೆ ಬಂದಿದ್ದವರಿಗೆ ಹಣ ಹಂಚಿಕೆ ಮಾಡಲಾಗಿದೆ. ವೇದಿಕೆಯಿಂದ ಸಿಎಂ ಸಿದ್ದರಾಮಯ್ಯ ಅವರು ನಿರ್ಗಮಿಸುತ್ತಿದ್ದಂತೆ ಹಣ ಹಂಚಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆಯಲ್ಲಿ ಸಂಡೂರಿನಲ್ಲಿ…













