Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ನೋಡಲು ಇದೀಗ ಜೈಲಿನ ಬಳಿ ರಾಜ್ಯದ ಅನೇಕ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಅವರನ್ನು ಭೇಟಿಯಾಗಲು ಆಗಮಿಸುತ್ತಿದ್ದಾರೆ. ಈ ವಿಷಯ ತಿಳಿದು ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದು, ನನ್ನ ಭೇಟಿ ಮಾಡಲು ಯಾರು ಜೈಲಿನ ಬಳಿಗೆ ಬರಬೇಡಿ ಎಂದು ಸಂದೇಶ ರವಾನಿಸಿದ್ದಾರೆ. ಹೌದು ನಟ ದರ್ಶನ್ ಜೈಲು ಸೇರುತ್ತಿದ್ದಂತೆ ಇತ್ತ ಅವರ ಅಭಿಮಾನಿಗಳು ಅನೇಕ ಸಂಖ್ಯೆಯಲ್ಲಿ ಅವರನ್ನು ಭೇಟಿ ಆಗಿಲು ಪರಪ್ಪನ ಅಗ್ರಹಾರ ಜೈಲು ಬಳಿ ಜಮಾಯಿಸಿದ್ದಾರೆ. ಈ ವಿಷಯ ತಿಳಿದು ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ದರ್ಶನ್ ಸಂದೇಶ ರವಾನಿಸಿದ್ದು, ಪರಪ್ಪನ ಅಗ್ರಹಾರ ಜೈಲಿನ ಬಳಿ ಅಭಿಮಾನಿಗಳು ಯಾರು ಕೂಡ ಬರಬೇಡಿ.ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಬೇಟಿ ಅಸಾಧ್ಯ ಎಂದು ಮನವಿ ಮಾಡಿದ್ದಾರೆ. ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು. ನನ್ನ ಭೇಟಿಗೆ ಅವಕಾಶ ಸಿಗದೇ ನಿರಾಸೆಯಿಂದ…
ಮಂಡ್ಯ : ಕಾವೇರಿಯ ಜಲಾನಯ ಪ್ರದೇಶದಲ್ಲಿ ವರುಣ ಅಬ್ಬರಿಸುತ್ತಿದ್ದು, ಇದೀಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಡ್ಯಾಂ ನಲ್ಲಿ ಒಳಹರಿವು ನೀರು ಹೆಚ್ಚಳವಾಗಿದೆ. ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ಕಳೆದ ಮೂರು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಮಳೆಯ ಅಬ್ಬರದಿಂದ ಕೆಆರ್ಎಸ್ಗೆ ಅಧಿಕವಾಗಿ ಒಳಹರಿವು ಹರಿದು ಬಂದಿದೆ. ಇಂದು ಕೆಆರ್ಎಸ್ಗೆ 13,437 ಕ್ಯೂಸೆಕ್ ಒಳಹರಿವು ಈ ವರ್ಷದಲ್ಲಿ ಸದ್ಯ ಇದೇ ಅಧಿಕ ಪ್ರಮಾಣದ ಒಳಹರಿವು ಎಂದು ಹೇಳಲಾಗುತ್ತಿದ್ದು, ನಿನ್ನೆ 3,856 ಕ್ಯೂಸೆಕ್ ಒಳಹರಿವು ಇತ್ತು. 24 ಗಂಟೆಯ ಅವಧಿಯಲ್ಲಿ 10 ಸಾವಿರ ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಅಲ್ಲದೇ ಒಂದೇ ದಿನದಲ್ಲಿ 1 ಟಿಎಂಸಿಗೂ ಅಧಿಕ ನೀರು ಡ್ಯಾಂಗೆ ಹರಿದು ಬಂದಿದೆ. 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯದ ಕೆಆರ್ಎಸ್ನಲ್ಲಿ 16.118 ಟಿಎಂಸಿ ನೀರು ಸಂಗ್ರಹವಾಗಿದ್ದು,ನಿನ್ನೆ 15.007 ಟಿಎಂಸಿ ನೀರು ಇತ್ತು. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 90.30 ಅಡಿ ನೀರು ಇದೆ.…
ಕೊಡಗು : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಇದೀಗ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು ಮಡಿಕೇರಿ ತಾಲೂಕಿನ ದೋಣಿ ಕಡೂರು ಗ್ರಾಮ ಸಂಪೂರ್ಣವಾಗಿ ಜಲಪ್ರತವಾಗಿದೆ. ಅಲ್ಲದೆ 60 ಕುಟುಂಬಗಳು ಜಲ ದಿಗ್ಬಂಧನಕ್ಕೆ ಒಳಗಾಗಿವೆ. ಹೌದು ಮಡಿಕೇರಿಯಲ್ಲಿ ಬೇಂಗೂರು ಪರಂಬು ಪೈಸಾರಿ ಸಂಪರ್ಕ ಕಡಿತವಾಗಿದ್ದು, ಸುಮಾರು 60ಕ್ಕೂ ಅಧಿಕ ಕುಟುಂಬಗಳಿಗೆ ಜಲ ದಿಗ್ಬಂಧನವಾಗಿದೆ. ಪ್ರವಾಹ ದಾಟಲು ಮೋಟಾರ್ ಬೋಟ್ ವ್ಯವಸ್ಥೆ ಮಾಡಲಾಗಿದೆ. ಜನರ ಸಂಕಷ್ಟಕ್ಕೆ ಜಿಲ್ಲಾಡಳಿತ ತ್ವರಿತವಾಗಿ ಸ್ಪಂದಿಸಿದ್ದು ಫೈಬರ್ ಬೋಟ್ ರವಾನೆ ಮಾಡಿದ್ದು ಜಲಾವೃತವಾಗಿರುವ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದುಕೊಂಡು ಹೋಗುತ್ತಿದ್ದಾರೆ.
ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಳವಾದ ಬೆನ್ನೆಲೆ ಕಾಫಿ ಟೀ ಬೆಲೆ ಏರಿಕೆ ಮಾಡಲು ಮುಂದಾಗಿದ್ದ ಹೋಟೆಲ್ ಮಾಳಿಕರು ನಂತರ ಸಿದ್ದರಾಮಯ್ಯ ಅವರ ಖಡಕ್ ಸೂಚನೆಗೆ ದರ ಹೆಚ್ಚಳ ಮಾಡಲಿಲ್ಲ. ಆದರೆ ನಂದಿನಿ ಹಾಲಿನ ದರ ಹೆಚ್ಚಳ ಪರಿಣಾಮದಿಂದ ಇದೀಗ ಮಿಲ್ಕ್ ಶೇಕ್ ಐಸ್ ಕ್ರೀಮ್ ಹಾಗೂ ಧಾರವಾಡ ಪೇಡ ದರದಲ್ಲಿ ದರ ಏರಿಕೆಯಾಗಿದೆ. ಹೌದು ರಾಜ್ಯದಲ್ಲಿ ನಂದಿನಿ ಹಾಲಿನ ಅರ್ಧ ಲೀಟರ್ ಮತ್ತು ಒಂದು ಲೀಟರ್ ಪ್ಯಾಕೆಟ್ಗಳಲ್ಲಿ 50 ಎಂಎಲ್ ಹೆಚ್ಚುವರಿ ಹಾಲು ಸೇರಿಸಿ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರಿಂದ ಹಾಲಿನಿಂದ ಮಾಡುವ ಉತ್ಪನ್ನಗಳಾದ ಸಿಹಿ ತಿಂಡಿಗಳು, ಐಸ್ ಕ್ರೀಂ ಹಾಗೂ ಮಿಲ್ಕ್ ಶೇಕ್ ದರ ಹೆಚ್ಚಳ ಮಾಡಲು ಮಾಲೀಕರು ಮುಂದಾಗಿದ್ದಾರೆ. ಪ್ರತಿ ಲೀಟರ್ ಐಸ್ ಕ್ರೀಂ ಬಾಕ್ಸ್ ಮೇಲೆ 10 ರಿಂದ 15 ರೂಪಾಯಿ ಹೆಚ್ಚಳವಾದರೆ, ಎಲ್ಲಾ ತರಹದ ಮಿಲ್ಕ್ ಶೇಕ್ ಗಳ ಮೇಲೆ 5 ರಿಂದ 10 ರೂಪಾಯಿ ಹೆಚ್ಚಳವಾಗಲಿದೆ. ಸಾಮಾನ್ಯವಾಗಿ ಹೋಟೆಲ್ಗಳಲ್ಲಿ ಯಾವುದೇ…
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಸಂಪೂರ್ಣವಾಗಿ ಜಲಾವೃತವಾಗಿದ್ದು ರಸ್ತೆಗಳೆಲ್ಲ ನದಿಗಳಂತಹ ಆಗಿವೆ ಈ ವೇಳೆ ದೆಹಲಿಯ ಏರ್ಪೋರ್ಟ್ ಮೇಲ್ಚಾವಣಿ, ಕುಸಿದು ಬಿದಿದ್ದು, ಐಟಿ ಅಧಿಕಾರಿಯ ಕಾರಿನ ಬೆಲೆ ಮೇಲ್ಚಾವಣಿ ಕುಸಿದುಬಿಟ್ಟಿದೆ ಈ ವೇಳೆ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು ತಡರಾತ್ರಿ ಸುರಿದ ಮಳೆಗೆ ರಾಷ್ಟ್ರ ರಾಜಧಾನಿ ಸಂಪೂರ್ಣವಾಗಿ ಜಲಾವೃತವಾಗಿದ್ದು ಎಲ್ಲೆಲ್ಲೂ ನೀರು ಹರಿಯುತ್ತಿದ್ದೂ, ದೆಹಲಿಯ ರಸ್ತೆಗಳು ನದಿಯಂತಾಗಿವೆ. ಈ ವೇಳೆ ಐಟಿ ಅಧಿಕಾರಿ ಕಾರಿನ ಮೇಲೆ ಮೇಲ್ಚಾವಣಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದ್ದು ನಾಲ್ವರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಏರ್ಪೋರ್ಟ್ ನ ಟರ್ಮಿನಲ್ 1 ರಲ್ಲಿ ಘಟನೆ ಸಂಭವಿಸಿದೆ. ದೆಹಲಿಯಲ್ಲಿ ಭಾರಿ ಮಳೆಗೆ ಏರ್ಪೋರ್ಟ್ ಮೇಲ್ಚಾವಣಿ ಕುಸಿದು ಬಿದ್ದಿದೆ.
ಹಾವೇರಿ : ಇಂದು ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಸಾವನಪ್ಪಿದು ಇದೀಗ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಹಾವೇರಿಯ ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಇಬ್ಬರು ಪುರುಷರು ಸೇರಿದಂತೆ 9 ಮಹಿಳೆಯರು ಸಾವನಪ್ಪಿದ್ದಾರೆ. ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಪಡೆದು ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವನ್ನಪಪ್ಪಿದ್ದಾರೆ ಎಂದು ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ.ಮೃತರು ಶಿವಮೊಗ್ಗ ಜಿಲ್ಲೆಯ ಮೂಲದವರು ಎಂದು ತಿಳಿದು ಬಂದಿದೆ. ಪರಶುರಾಮ, ಭಾಗ್ಯ, ನಾಗೇಶ್, ವಿಶಾಲಾಕ್ಷಿ,ಅರ್ಪಿತ,ಸುಭದ್ರ, ಬಾಯಿ, ಪುಣ್ಯ, ಮಂಜುಳಾಬಾಯಿ, ಆದರ್ಶ, ಮಾನಸ, ಅಪರೂಪ, ಮಂಜುಳಾ ಮೃತಪಟ್ಟವರ ಎಂದು ಗುರುತಿಸಲಾಗಿದೆ. ಟಿಟಿಯಲ್ಲಿ ಸುಮಾರು 16 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.…
ತುಮಕೂರು : ನಿನ್ನೆ ಬೆಂಗಳೂರಿನ ಯಲಹಂಕದ ರೈಲು ನಿಲ್ದಾಣದ ಬಿನ್ ನಲ್ಲಿ ನವಜಾತ ಗಂಡು ಮಗುವಿನ ಶವ ಪತ್ತೆಯಾದ ಬಳಿಕ ಇದೀಗ ತುಮಕೂರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡರಿಂದ ಮೂರ ದಿವಸದ ಹಸುಗೂಸಿನ ಶವ ಪತ್ತೆಯಾಗಿದೆ. ಹೌದು ತುಮಕೂರು ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ಎರಡರಿಂದ ಮೂರ ದಿವಸದ ಹಸುಗೂಸಿನ ಶವ ಪತ್ತೆಯಾಗಿದೆ. ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮಗು ಕಂಡು ಬಂದಿದ್ದು ಮಗುವಿನ ಶವವನ್ನು ಕಂಡ ಪ್ರಯಾಣಿಕರೊಬ್ಬರು ಪೊಲೀಸಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ನಿನ್ನೆ ಯಲಹಂಕದ ರೈಲು ನಿಲ್ದಾಣದ ಡಸ್ಟ್ ಬಿನ್ ನಲ್ಲಿ ನವಜಾತ ಗಂಡು ಮಗುವಿನ ಶವ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಯಲಹಂಕ ರೈಲ್ವೆ ನಿಲ್ದಾಣಕ್ಕೆ ಬಂದ ಪ್ರಶಾಂತಿ ಎಕ್ಸ್ ಪ್ರೆಸ್ ರೈಲಿನ ಡೆಸ್ಟ್ ಬಿನ್ ನಲ್ಲಿ ನವಜಾತ ಗಂಡು ಮಗುವಿನ ಶವವನ್ನು ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಗು ಡಸ್ಟ್ ಬಿನ್ ನಲ್ಲಿ ನರಳಿ ನರಳಿ ಪ್ರಾಣ ಬಿಟ್ಟಿದೆ. ಗಂಡು ಮಗುವಿನ ಶವವನ್ನು ನಿನ್ನೆ ಮುಂಜಾನೆ…
ಹಾವೇರಿ : ಬೆಳ್ಳಂ ಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಒಂದು ನಡೆದಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಸೌದತ್ತಿ ಯಲ್ಲಮ್ಮನ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸವನ್ನಪಪ್ಪಿದೆ. ಟಿಟಿಯಲ್ಲಿ ಸುಮಾರು 15 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ…
ಬೆಂಗಳೂರು : ಹೆಚ್ಚುವರಿ ಡಿಸಿಎಂ ಸ್ಥಾನ ಹುದ್ದೆಯ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು ನಮ್ಮದು ಹೈಕಮಾಂಡ್ ಪಕ್ಷ. ಹಾಗಾಗಿ ಪಕ್ಷದಲ್ಲಿ ಯಾವುದೇ ಬದಲಾವಣೆ ತರಬೇಕಾದರೂ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಭಜರಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು. ನಿನ್ನೆ ಬೆಂಗಳೂರಿನಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಚಂದ್ರಶೇಖರ ಶ್ರೀಗಳು ಡಿಸೆಂಬ ಡಿಕೆ ಶಿವಕುಮಾರ್ ಗೆ ಸಮ ಸ್ಥಾನ ಬಿಟ್ಟು ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು. ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ,ಕಾಂಗ್ರೆಸ್ ಹೈಕಮಾಂಡ್ ಪಕ್ಷ. ಗೊತ್ತಾಯ್ತಾ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಆ ರೀತಿ ನಡೆದುಕೊಳ್ಳುತ್ತೇವೆ ಎಂದರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಬಾರಿ ಕಾವೇರಿತ್ತಿದ್ದು, ಈ ಒಂದು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗಡೆ ಅವರು ಸ್ಪರ್ಧಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ…
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಇದೀಗ ಜಿಲ್ಲೆಯಾದ್ಯಂತ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಕೂಡ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಹೌದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಆ ಭಾಗಗಳಲ್ಲಿ ಇತ್ತೀಚಿಗೆ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಭಾರಿ ಅವಾಂತರ ಸೃಷ್ಟಿಯಾಗುತ್ತಿವೆ. ಹಾಗಾಗಿ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಗೂ ಕೂಡ ರಜೆ ಘೋಷಸಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮೀನುಗಾರರು ಸಮುದ್ರ ಕೇಳಿಯಾದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ ಸಮುದ್ರ ತೀರದ ಜನರು ಎಚ್ಚರವಹಿಸುವಂತೆ ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಸುರಕ್ಷತೆಗಾಗಿ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.












