Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ನಿನ್ನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ನಲ್ಲಿ ಮಹಿಳೆ ಒಬ್ಬಳು ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸ್ಥಳೀಯ ನಿವಾಸಿಗಳಾದ ಲಕ್ಷ್ಮಿಬಾಯಿ, ಸುಂದರ್, ಶಿಲ್ಪ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು. ಮೀನು ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯನ್ನು ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಈ ಒಂದು ವಿಡಿಯೋ ವೈರಲ್ ಆಗಿತ್ತು.
ಬೆಂಗಳೂರು : ಇತ್ತೀಚಿಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಮಾತನಾಡುವ ಬರದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಹೌದು ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಖಾಸಗಿ ದೂರು ಸಲ್ಲಿಸಲಾಗಿದೆ. ಎಸ್ ಕಿರಣ್ ಎಂಬುವವರಿಂದ ಕೋರ್ಟಿಗೆ ಖಾಸಗಿ ದೂರು ಸಲ್ಲಿಕೆಯಾಗಿದೆ. BNS ಸೆಕ್ಷನ್ 299, 352, 356 (2) ರ ಅಡಿ ಕ್ರಮ ಕೋರಿ ಖಾಸಗಿ ದೂರು ದಾಖಲಾಗಿದೆ. ಸಿಎಂ ಹೇಳಿದ್ದೇನು? ವಿಧಾನಸಭೆಯಲ್ಲಿ ರಾಜ್ಯದಲ್ಲಿ ಅಪರಾಧಗಳ ಕುರಿತಂತೆ ಚರ್ಚೆ ನಡೆಯುವಾಗ, ರಾಜ್ಯದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಗಳಿಂದಲೇ ಅಪರಾಧಗಳು ನಡೆಯುತ್ತವೆ. ನಿಮ್ಮಿಂದ ಹಾಗೂ ಆರ್ ಎಸ್ ಎಸ್ ನವರಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆಗೆ ವಿಪಕ್ಷ…
ಕೊಪ್ಪಳ : ಕೊಪ್ಪಳದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ವಾಣಿಜ್ಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಕೊಪ್ಪಳ ರಸ್ತೆಯ ಸಿಬಿಎಸ್ ವೃತ್ತದ ಸಮೀಪದ ಹಳೇಯ ಪವನಬಾರ್ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ದಾದಾಪೀರ್ ಎಂಬುವರಿಗೆ ಸೇರಿದ ಈ ಅಂಗಡಿಯಲ್ಲಿ ಹೊಸ ಜನರೇಟರ್, ಕೃಷಿ ಮತ್ತು ರೈತರಿಗೆ ಉಪಯುಕ್ತವಾಗುವ ಯಂತ್ರೋಪಕರಣಗಳ ಮಾರಾಟ ಮಾಡಲಾಗುತಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿಯಿಂದ ಹೊಗೆ ಮಳಿಗೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಕೂಡಲೇ ದಾದಾಪೀರ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸುವ ಹೊತ್ತಿಗೆ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗೆ ನಾಶವಾಗಿದ್ದವು. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ, ಈ ಹೊತ್ತಿಗಾಗಲೆ ಅಂಗಡಿಯಲ್ಲಿದ್ದ ಬಹುತೇಕ ಹೊಸ ಉಪಕರಣಗಳು ಹಾಗೂ ರೈತರು ರಿಪೇರಿಗೆ ನೀಡಿದ್ದ ಕೃಷಿ ಪರಿಕರಗಳು ಸುಟ್ಟು ಕರಕಲಾಗಿವೆ.…
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆಯಿತು. ಕೃಷಿ ಇಲಾಖೆಯ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಈ ಒಂದು ವಿಧೇಯಕವನ್ನು ಮಂಡಿಸಿದರು. ವಿಧಾನಸಭೆಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಂಡ್ಯದಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯವಾಗಿ ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದ್ದು, ಮಂಡ್ಯ ವಿಸಿ ಫಾರ್ಮ್ ನಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಯ ಬೆಳೆಗಳ ಉತ್ಪಾದನಾ ಕ್ಷೇತ್ರದಲ್ಲಿ ಅಧ್ಯಯನ ಸಂಶೋಧನೆಗೆ ಅವಕಾಶವಿದೆ. ಜಿಕೆವಿಕೆ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಕಾಲೇಜುಗಳು ಸಂಶೋಧನಾ ಸಂಸ್ಥೆ, ಪ್ರಯೋಗಾಲಯ, ಹಾಸ್ಟೆಲ್ ಮತ್ತು ಗ್ರಂಥಾಲಯಗಳನ್ನು ವರ್ಗಾವಣೆ ಮಾಡುವ ಬಗ್ಗೆಯೂ ಉಲ್ಲೇಖಿಸಲಾಗಿದೆ. ಇದಕ್ಕೆ ಉತ್ತರ ಕರ್ನಾಟಕ ಮೂಲದ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಯಿತು.
ಬೆಂಗಳೂರು : ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನದ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಉತ್ತರ ಕರ್ನಾಟಕದ ಹೈಮದ್ ಹುಸೈನ್ (24) ಮತ್ತು ಸಾಧಿಕ್ (20) ಎನ್ನುವ ಆರೋಪಿಗಳನ್ನು ಬಿಡದಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಟಯೋಟೊ ಬಿಷೋಕೋ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಬರಹ ಬರೆಯಲಾಗಿತ್ತು ಕನ್ನಡಿಗರ ಬಗ್ಗೆಯೂ ಕೂಡ ಅವಹೇಳನ ಪದ ಬಳಕೆ ಮಾಡಿದ್ದರು. ದೇಶದ್ರೋಹದ ಆರೋಪದ ಅಡಿ ಇದೀಗ ಹುಸೇನ್ ಮತ್ತು ಸಾಧಿಕ್ ನನ್ನು ಬಿಡದಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾರ್ಖಾನೆಯಲ್ಲಿ ಇಬ್ಬರೂ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಪಾಕಿಸ್ತಾನಕ್ಕೆ ಜೈ’ ಎಂದು ಬರೆದಿರುವ ಜೊತೆಗೆ ಅವಾಚ್ಯ ಶಬ್ದಗಳಿಂದ ಕನ್ನಡಿಗರನ್ನು ನಿಂದಿಸಿದ್ದಾರೆ. ಬಿಡದಿಯ ಪ್ರತಿಷ್ಠಿತ ಕಂಪನಿಯ ಶೌಚಾಲಯದ ಗೋಡೆ ಮೇಲೆ ಬರೆದಿರುವ ಈ ಕೃತ್ಯವು ಮಾರ್ಚ್ 15 ರಂದು ಈ ಘಟನೆ ಬೆಳಕಿಗೆ ಬಂದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಡದಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ…
ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯಕ್ಕೆ ನಟಿ ರನ್ಯಾರಾವ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ರನ್ಯಾ ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಇವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆಯ ಬಳಿಕ ಡಿಆರ್ಐ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯವು ಮಾರ್ಚ್ 21ರಂದು ವಿಚಾರಣೆ ಮುಂದೂಡಿತು. ಇಂದು ನಟಿ ರನ್ಯಾ ರಾವ್ ಅವರ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು DRI ಕಾಲಾವಕಾಶ ಕೋರಿ ಮನವಿ ಮಾಡಿತು. ಈ ವೇಳೆ ಕೋರ್ಟ್ ಆಕ್ಷೇಪಣೆ ಸಲ್ಲಿಸಲು DRI ಗೆ ಅನುಮತಿ ನೀಡಿತು. ಡಿ ಆರ್ ಐ ಪರವಾಗಿಲ ಮಧು ಎನ್ ರಾವ್ ಅವರಿಂದ ಕಾಲಾವಕಾಶಕ್ಕಾಗಿ ಕೋರಿಕೆ ಮಾಡಲಾಯಿತು. ಬಳಿಕ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಿಚಾರಣೆ ಮಾರ್ಚ್ 21ಕ್ಕೆ ಮುಂದೂಡಿತು.
ಬಳ್ಳಾರಿ : ಬಳ್ಳಾರಿಯಲ್ಲಿಇಡಿ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಬಳ್ಳಾರಿಯ ಬಿಜೆಪಿ ಮುಖಂಡ ದೇವು ನಾಯಕ್ 7 ವರ್ಷದ ಬಾಳಿಕೆ ಮೇಲೆ ಅತ್ಯಾಚಾರ ಎಸೆಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಠಾಣೆಯ ಪೊಲೀಸರು ಬಿಜೆಪಿ ಮುಖಂಡ ದೇವು ನಾಯಕ್ ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಬಿಜೆಪಿ ಮುಖಂಡ ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಫೋಟೋ ತೆಗೆಸಿಕೊಂಡು, ಅವುಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಅತ್ಯಾಚಾರ…
ವಿಜಯನಗರ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದ್ದರೂ ಸಹ ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ನಿಲ್ಲುತ್ತಿಲ್ಲ. ಇದೀಗ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಫಲಕಾರಿಯಾಗದೆ ಕುಟುಂಬದ ಯಜಮಾನ ಸಾವನ್ನಪ್ಪಿದ್ದಾರೆ. ಹೌದು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಸ್ನಾನಘಟ್ಟದ ಬಳಿ ಸಾಲ ಬಾಧೆಗೆ ಬೇಸತ್ತು, ಒಂದೇ ಕುಟುಂಬದ ಇಬ್ಬರು ಮಕ್ಕಳ ಸಹಿತ ದಂಪತಿಗಳು ಸೇರಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ದಂಪತಿಗಳು ತಾವು ವಿಷ ಸೇವಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸೌಮ್ಯ ಪತಿ ಚಂದ್ರಯ್ಯ (42) ಸಾವನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ನಿವಾಸಿ ಚಂದ್ರಯ್ಯ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸೌಮ್ಯ (35) ಮತ್ತು ಮಕ್ಕಳಾದ ಭವಾನಿ ಶಿವಕುಮಾರ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೊಸಪೇಟೆಯ ನೂರು ಹಾಸಿಗೆ ಉಳ್ಳ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ಮುಂದುವರೆದಿದೆ. ಕಳೆದ…
ಬೆಂಗಳೂರು : ಇತ್ತೀಚಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ-2025 ಅನ್ನು ಮಂಡಿಸಿದರು. ಇದಕ್ಕೆ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತು. ಇದೀಗ ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗವು ದೂರು ನೀಡಿದೆ. ಇಂದು ಗ್ರೇಟರ್ ಬೆಂಗಳೂರು ವಿಧೇಯಕ ವಿಚಾರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ವಿರೋಧ ಪಕ್ಷ ಬಿಜೆಪಿ ನಿಯೋಗದಿಂದ ರಾಜಭವನದಲ್ಲಿ ಇಂದು ರಾಜಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ದೂರು ಸಲ್ಲಿಸಲಾಯಿತು. ವಿಪಕ್ಷ ನಾಯಕರಾದ ಆರ್ ಅಶೋಕ್, ನಾರಾಯಣಸ್ವಾಮಿ ನೇತ್ರತ್ವದಲ್ಲಿ ದೂರು ಸಲ್ಲಿಸಲಾಗಿದೆ. ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.
ಬೆಂಗಳೂರು : ರಾಜ್ಯದ ತೊಗರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಸರ್ಕಾರ, ತೊಗರಿ ಖರೀದಿ ನೋಂದಣಿ ಅವಧಿಯು ಮಾರ್ಚ್ ತಿಂಗಳಾಂತ್ಯದವರೆಗೆ ಅಂದರೆ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಈ ಕುರಿತು ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಶಿವಾನಂದ್ ಪಾಟೀಲ್ ಮಾತನಾಡಿ, ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೊಂದಣಿ ಅವಧಿಯನ್ನು ಮಾರ್ಚ್ 31 ವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಸಹಕಾರ ಕಂಪನಿ, ಹುಟ್ಟುವಳಿ ಸಹಕಾರ ಸಂಘಗಳಲ್ಲಿ ರೈತರು ನೋಂದಣಿ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಕ್ವಿಂಟಲ್ ಗೆ ರೂ. 7550 ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರ ಕೂಡ 450 ಪ್ರೋತ್ಸಾಹ ಧನ ಘೋಷಣೆ ಮಾಡಿತ್ತು. ಕೆಲವು ಕಡೆ ರಾಜ್ಯದ ಪ್ರೋತ್ಸಾಹ ಧನ ಬಿಲ್ ನಲ್ಲಿ ಸೇರ್ಪಡೆ ಆಗುತ್ತಿಲ್ಲ. ಈ ಕುರಿತು ದೂರುಗಳು ಬಂದಿದ್ದು ಅದನ್ನು ಪರಿಶೀಲನೆ ಮಾಡುತ್ತೇವೆ. ರೈತರಿಗೆ ಪ್ರತಿ ಕುಂಟಲ್ ಗೆ ರೂ.…