Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನ್ಯಾಯಾಲಯದ ಅನುಮತಿ ಇಲ್ಲದೆ ಬೆಂಗಳೂರು ಮಹಾನಗರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಫ್ಲೆಕ್ಸ್, ಹೋರ್ಡಿಂಗ್ಸ್ಗಳ ಜಾಹೀರಾತು ಬೈಲಾ 2024ರ lಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೊರ್ಟ್ ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಜಾಹೀರಾತು ಪ್ರಕಟಿಸುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ಜಾಹೀರಾತು ಹೊರಡಿಸುವುದಕ್ಕೆ ಸಂಬಂಧಿಸಿದಂತೆ ಬೈಲಾ ನಿಯಮಗಳನ್ನು ತಿದ್ದುಪಡಿ ಮಾಡುವುದಕ್ಕೆ ಬಿಬಿಎಂಪಿ ಮುಂದಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಸಂಬಂಧಪಟ್ಟವರು ಮತ್ತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಪೀಠ, ನಗರದಲ್ಲಿ ಅಳವಡಿಸಿರುವ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಅಕ್ರಮ ಜಾಹೀರಾತುಗಳಿಗೆ ಸಂಬಂಧಿಸಿದ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಬೇಕಾದರೂ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 8ಕ್ಕೆ ಮುಂದೂಡಿತು.
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಭೀಕರ ದುರಂತ ಸಂಭವಿಸಿದ್ದು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೆಣ್ಣೂರು ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಣ್ಣೂರು ಠಾಣೆ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ.ಬಂಧಿತರನ್ನ ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿಯಪ್ಪ ಎಂದು ಹೇಳಲಾಗುತ್ತಿದೆ.ನಾಲ್ಕು ಮಹಡಿ ಕಟ್ಟಡ ನಿರ್ಮಾಣಕ್ಕೆ ಭುವನ್ ರೆಡ್ಡಿ ಅನುಮತಿ ಪಡೆದಿದ್ದ. 6ನೇ ಮಹಡಿ ನಿರ್ಮಾಣದ ವೇಳೆ ನಿನ್ನೆ ಕಟ್ಟಡ ಕುಸಿದು ಬಿದ್ದಿತ್ತು. ಕಟ್ಟಡ ಕುಸಿದು ಇದುವರೆಗೂ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮುಂದುವರೆದ ಕಾರ್ಯಾಚರಣೆ ಮೊಹಮ್ಮದ್ ಸಾಹಿಲ್, ತಿರುಪಾಲಿ, ಅರ್ಮಾನ್, ಶಂಕರ್, ಸತ್ಯರಾಜ್ ಮೃತಪಟ್ಟವರು. ರಾತ್ರಿ ಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆದಿದೆ. ಕಾಮಗಾರಿಯ ವೇಳೆಗೆ 21 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಈಗಾಗಲೇ ಅಗ್ನಿಶಾಮಕ, ಎನ್ಡಿಆರ್ಎಫ್, ಪೊಲೀಸರು…
ದಾವಣಗೆರೆ : ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗ್ರಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಬಹಳ ಸಹಕಾರಿಯಾಗಿದೆ. ಈ ಒಂದು ಹಣವನ್ನು ತರಲು ಬ್ಯಾಂಕಿಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಕೊಳೆಯಾದ ಮಹಿಳೆಯನ್ನು ಸತ್ಯಮ್ಮ ಎಂದು ಗುರುತಿಸಲಾಗಿದ್ದು ಇನ್ನು ಹತ್ಯೆಗೈದ ಪತಿಯನ್ನ ಅಣ್ಣಪ್ಪ ಎಂದು ಹೇಳಲಾಗುತ್ತಿದೆ.ಗೃಹಲಕ್ಷ್ಮೀ ಯೋಜನೆ ಹಣ ಪಡೆಯಲು ಸತ್ಯಮ್ಮ ನಿನ್ನೆ ಜಗಳೂರು ತಾಲೂಕಿನ ಅಸಗೋಡ್ ಬ್ಯಾಂಕ್ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮಳನ್ನ ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿದ್ದಾನೆ. ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು…
ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ನಡೆ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರ ಮೂಲಕ ಅಂತ್ಯ ಹಾಡಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇಂದು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಚರ್ಚಿಸಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿರೇಂದ್ರ ಅವರಿಗೆ ವಾಟ್ಸಪ್ ಮುಖಾಂತರ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ನಂತರ ಡಿಕೆ ಶಿವಕುಮಾರ್ ಅವರೊಂದಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಅಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಡಿಸಿಎಂ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಚನ್ನಪಟ್ಟಣದ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರು ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಂಜೆ ಎಲ್ಐಸಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಎಂದು ಹೆಸರಿಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು. ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.
ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಗೆ ಬಿಗ್ ಶಾಕ್ ನೀಡಿ ಇಂದು ಅಧಿಕೃತವಾಗಿ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಸಿಪಿ ಯೋಗೇಶ್ವರ್ ಅವರು ನಾನು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಿಪಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಪಿ ಯೋಗೇಶ್ವರ್ ಅವರಿಗೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಬಳಿಕ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ನಾನು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ ಎಂದು ತಿಳಿಸಿದರು. ಕೆಲ ಸಂದರ್ಭದಲ್ಲಿ ನಾವು ಕಟ್ಟಿದ ಮನೆಗಳಲ್ಲಿ ನಾವೇ ಇರಲು ಆಗುವುದಿಲ್ಲ. ಸ್ವಯಂ ಪ್ರೇರಿತವಾಗಿ ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ.ಯಾವುದೆ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಳಿಕ ಹೇಳಿಕೆ ನೀಡಿದರು.…
ಬೆಂಗಳೂರು : ಬಿಜೆಪಿಯ ಮಾಜಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಗೊಳ್ಳುವಲ್ಲಿ ಕೊನೆಗೂ ಡಿಕೆ ಬ್ರದರ್ಸ್ ಅವರ ತಂತ್ರಗಾರಿಕೆ ಫಲಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ಬೆಳವಣಿಗೆ ಆಗಿದ್ದು, ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯೆ ಎಲ್ಲಾ ಪಕ್ಷಗಳಿಗೂ ಕಗ್ಗಂಟಾಗಿ ಪರಿಣಮಿಸಿತ್ತು.ಇದೀಗ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ ಎನ್ನಲಾಗಿದೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮರಳಿ ಗೂಡಿಗೆ ಬಂದಿದ್ದಾರೆ. ಹಿಂದೆ ಕೆಲವರು ಬಿಜೆಪಿಗೆ ಹೋಗಿದ್ದರು ಈಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಅವರು ತಿಳಿಸಿದರು.ನಾನು ವಯನಾಡು…
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಸಂಚಲನ ಸೃಷ್ಟಿಯಾಗಿದ್ದು ಬಿಜೆಪಿ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ.ಈ ಕುರಿತಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಬಹುದು ಎಂದು ತಿಳಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಒಂದೇ ಕಾರಿನಲ್ಲಿ ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಹಿಂದೆ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರು. ಬಳಿಕ ಬೇರೆ ಪಕ್ಷಕ್ಕೆ ಹೋಗಿದ್ದಾರೆ, ಇದೀಗ ಅವರು ಘರ್ ವಾಪಸಿ ಆಗಿದ್ದಾರೆ.ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಯಾವುದೇ ರೀತಿಯಾದಂತಹ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು.
ಬೆಂಗಳೂರು : ಇಂದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು ಮೈತ್ರಿ ಪಕ್ಷಗಳಿಗೆ ಕೈ ಕೊಟ್ಟ ಬಿಜೆಪಿ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಇದೀಗ ಒಂದೇ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜಿನಾಮೆ ನೀಡಿದರು. ಇದೀಗ ವಾಟ್ಸಾಪ್ ಮುಖಾಂತರ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ಕೂಡ ಸಿಪಿ ಯೋಗೇಶ್ವರ್ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…
ವಿಜಯನಗರ : ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮದ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತಪಟ್ಟವರನ್ನು ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು ಎಂಟು ತಿಂಗಳ ಗಂಡು ಮಗು ಎಂದು ಹೇಳಲಾಗುತ್ತಿದೆ. ಇವರ ಸಾವಿಗೆ ಕಲುಷಿತ ನೀರು ಸೇವನೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಕಳೆದ 15 ದಿನಗಳಿಂದ ಗ್ರಾಮಕ್ಕೆ ಚರಂಡಿ ನೀರು ಕಲುಷಿತವಾಗಿ ನೀರು ಪೂರೈಕೆ ಆಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಜನರು ವಾಂತಿಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಆದರೆ ಇದೀಗ ಕಲುಷಿತ ನೀರು ಸೇವಿಸಿ 8 ತಿಂಗಳ ಗಂಡು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗರ್ಭಿಣಿ ನಿಂಗಮ್ಮ ಎಂಬುವರು ವಾಂತಿ-ಭೇದಿಯಿಂದ…













