Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಮಹದೇವಪುರದ ಪಾರ್ಕಿನ ಸರ್ವಿಸ್ ರಸ್ತೆಯಲ್ಲಿ ಯುವಕನೊಬ್ಬ ಯುವತಿಯ ಮುಂದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಸಂಭವಿಸಿದೆ. ಈ ಕುರಿತಂತೆ ಯುವತಿ ಇದನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾಳೆ. ಮಹದೇವಪುರ ಪಾರ್ಕಿಂಗ್ ರಸ್ತೆಯಲ್ಲಿ ಕಾರ್ ಪಾರ್ಕ್ ಮಾಡಿ ಯುವತಿ ಕಾರಿನಲ್ಲಿ ಕುಳಿತುಕೊಂಡಿದ್ದಳು.ಈ ವೇಳೆ ಕಾರಿನ ಮುಂಭಾಗದಲ್ಲಿ ಯುವಕ ಅಸಭ್ಯವಾಗಿ ವರ್ತಿಸಿದ್ದಾನೆ.ಹಸ್ತ ಮೈಥುನ ಮಾಡಿಕೊಂಡು ಯುವಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿ ತಿಳಿಸಿದ್ದಾಳೆ. ಇದರಿಂದ ಹೆದರಿದ ಯುವತಿಯು ತಕ್ಷಣ ಕಾರ್ ಡೋರ್ ಅನ್ನು ಲಾಕ್ ಮಾಡಿಕೊಂಡಿದ್ದಾಳೆ. ಆನಂತರ ಕಾರಿನ ಬಳಿ ಬಂದು ಅಪರಿಚಿತ ವ್ಯಕ್ತಿ ಕಾರಿನ ಸುತ್ತ ಓಡಾಡಿದ್ದಾನೆ. ನಂತರ ಬೆದರಿಕೆ ಆಗೋ ದೃಷ್ಟಿಯಲ್ಲಿ ಯುವತಿಯನ್ನು ನೋಡಿದ್ದಾನೆ ಇದರಿಂದ ತಪ್ಪಿಸಿಕೊಳ್ಳಲು ಯುವತಿ ಕಾರಿನ ಸ್ಟಿಯರಿಂಗ್ ಕೆಳಗೆ ಅವಿತುಕೊಂಡಿದ್ದಾಳೆ. ನಂತರ ಸ್ನೇಹಿತರೊಬ್ಬರು ಬಂದ ನಂತರ ಕಾರಿನಿಂದ ಯುವತಿ ಕೆಳಗಿಳಿದಿದ್ದಾಳೆ ಟ್ವೀಟ್ ನಲ್ಲಿ ತಾನು ಅನುಭವಿಸಿದ ಸಮಸ್ಯೆ ಬಗ್ಗೆ ಯುವತಿ ಮಾಹಿತಿ ಹಂಚಿಕೊಂಡಿದ್ದಾಳೆ.ಜನವರಿ 5ರಂದು ಮಹದೇವಪುರದಲ್ಲಿ ನಡೆದಿರುವ ಘಟನೆ ಬಗ್ಗೆ ಉಲ್ಲೇಖಿಸಲಾಗಿದೆ.ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ…
ಕೋಲಾರ : ಜಿಲ್ಲೆಯ, ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ನಂಜೇಗೌಡ ಮನೆಯಲ್ಲಿ ಇಡಿ ಹಾಗೂ ಐಟಿ ಅಧಿಕಾರಿಗಳಿಂದ ಶೋಧಕಾರ್ಯ ಮುಂದುವರಿಡಿದ್ದು, ಕಳೆದ 24 ಗಂಟೆಯಿಂದ ಇಡೀ ಅಧಿಕಾರಿಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಶಾಸಕ ಕೆ ವೈ ನಂಜೇಗೌಡ ಮನೆ ಸೇರಿದಂತೆ 15 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ವೇಳೆ ಲಕ್ಷಾಂತರ ರೂಪಾಯಿ ಹಣ ಹಾಗೂ ದಾಖಲೆಗಳು ಸಿಕ್ಕಿರುವ ಮಾಹಿತಿ ಬಂದಿದ್ದು, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೋಮ್ಮನಹಳ್ಳಿ ಶಾಸಕರ ನಿವಾಸ ಕೋಚಿಮಲ್ ಕಚೇರಿ, ಕೋಚಿಮಲ್ ಎಂಡಿ ಗೋಪಾಲಮೂರ್ತಿ ಅವರ ಮನೆ ಹಾಗೂ ಅಡ್ಮಿನ್ ಮ್ಯಾನೇಜರ್ ನಾಗೇಶ್, ಹಿಂದಿನ ತಹಶೀಲ್ದಾರ್ ಆಗಿದ್ದ ನಾಗರಾಜ್ ಮನೆ ಕಚೇರಿಗಳಲ್ಲಿ ಇಡಿ ಹಾಗು ಐಟಿ ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ. ಸರ್ಕಾರಿ ಜಮೀನು ಅಕ್ರಮ ಮಂಜೂರಾತಿ ಹಾಗೂ ವಿದೇಶಿ ಹಣ ವರ್ಗಾವಣೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಎಲ್ಲಿ ನಿನ್ನೆ ಇಡಿ ಹಾಗು ಐಟಿ ಅಧಿಕಾರಿಗಳು ನಿನ್ನೆ ಕೆ ವೈ…
ಬೆಂಗಳೂರು: ರಾಜ್ಯದ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ 1 ರೂ ಹೆಚ್ಚಳ ಮಾಡಿದ್ದೂ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬಸ್ ಗಳಲ್ಲಿ ಜ.1 ರಿಂದ 50 ರೂ. ಮೇಲ್ಪಟ್ಟು ಟಿಕೆಟ್ ಖರೀದಿಸುವ ಪ್ರಯಾಣಿಕರಿಂದ 1 ರೂ. ಹೆಚ್ಚಿಗೆ ಸಂಗ್ರಹ ಮಾಡಲಾಗುತ್ತಿದೆ. ಹೆಚ್ಚಿಗೆ ಪಡೆದ 1 ರೂ.ಗಳನ್ನು ಅಪಘಾತ ವಿಮೆಗೆ ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ. ಅಪಘಾತ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ನಿಗಮದ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದು ಜನೆವರಿ 1ಕ್ಕೆ ಜಾರಿಯಾಗಿದೆ ಹೀಗಾಗಿ ಪ್ರಯಾಣಿಕರಿಂದ 1 ರೂ. ಹೆಚ್ಚಿಗೆ ಸಂಗ್ರಹ ಮಾಡಲಾಗುತ್ತಿದೆ.ನಿಗಮದ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ…
ವಿಜಯಪುರ : ಮೇಯರ್ ಮೀಸಲಾತಿ ವಿಚಾರ ಕುರಿತಂತೆ ವಿಜಯಪುರ ಮೇಯರ್ ಹಾಗೂ ಉಪಮೆಯರ್ ಚುನಾವಣೆಗೆ ಸಂಬಂಧಸಿದಂತೆ ಹೈಕೋರ್ಟ್ ಮೆಟ್ಟಿಲೇರಿತ್ತು ಇದೀಗ ವಿಚಾರಣೆ ನಂತರ ಮೇಯರ್ ಚುನಾವಣೆಗೆ ಹೈಕೋರ್ಟ್ ಅನುಮತಿ ನೀಡಿದೆ ಕಲಬುರ್ಗಿ ಹೈಕೋರ್ಟ್ ಪೀಠದಿಂದ ಚುನಾವಣೆಗೆ ಹಸಿರು ನಿಶಾನೆ ದೊರಕಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದಂತೆ ಇಂದು ಚುನಾವಣೆ ನಡೆಸಲಾಗುತ್ತಿದ್ದು, ವಿಜಯಪುರ ಮಹಾನಗರ ಪಾಲಿಕೆಯು , ಒಟ್ಟು 35 ಸದಸ್ಯರ ಬಲ ಹೊಂದಿದೆ. ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರರು 5, ಎಂಐಎಂ2, ಜೆಡಿಎಸ್ ಒಂದು ಸ್ಥಾನ ಹೊಂದಿವೆ. ವಿಜಯಪುರ ಪಾಲಿಕೆ ಅಧಿಕಾರಕ್ಕಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರ ರಾಜಕೀಯ ಚಾಣಾಕ್ಷತೆಯಿಂದ ಬಹುತೇಕ ಕಾಂಗ್ರೆಸ್ ನಗರ ಪಾಲಿಕೆ ಅಧಿಕಾರಿ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಕಾಂಗ್ರೆಸ್ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ ಕಟಕಡದೊಂಡ, ಎಂಎಲ್ಸಿಗಳಾದ ಸುನಿಲ್ ಗೌಡ, ಪಾಟೀಲ್ ಪ್ರಕಾಶ್ ರಾಥೋಡ್, ನಗರ ಪಾಲಿಕೆ ಸದಸ್ಯರು ಸೇರಿದಂತೆ ಕಾಂಗ್ರೆಸ್…
ಧಾರವಾಡ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ. ಪಕ್ಷವು ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರಿಗೆ ನಾವು ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆ ಹಿನ್ನೆಲೆ ಧಾರವಾಡ ನೌಕರರ ಭವನದಲ್ಲಿ ಸಭೆಗೂ ಮುಂಚೆ ಮಾತನಾಡಿದ ಅವರು, ಪಕ್ಷದ ರಾಜ್ಯ ಅಧ್ಯಕ್ಷರು, ಸಿಎಂ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಬಗ್ಗೆ ಆ ಸಭೆಯಲ್ಲಿ ಚರ್ಚೆ ಆಗಲಿದೆ. ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಆ ಸಭೆಯಲ್ಲಿ ಚರ್ಚೆ ಆಗುತ್ತದೆ ಎಂದರು. ಪಕ್ಷಕ್ಕೆ ಹೊಸಬರ ಸೇರ್ಪಡೆ ವಿಚಾರಕ್ಕೆ ಮಾತನಾಡಿದ ಅವರು, ಪಕ್ಷಕ್ಕೆ ತತ್ವ ಸಿದ್ಧಾಂತ ಒಪ್ಪಿ ಯಾರೇ ಬಂದರು ತೆಗೆದುಕೊಳ್ಳುತ್ತೇವೆ. ಯಾರೇ ಬಂದರೂ ತೆಗೆದುಕೊಳ್ಳಲು ಸಿದ್ಧವಿದ್ದೇವೆ ಎಂದು ಹೇಳಿದರು. ಮುನೇನಕೊಪ್ಪ ಸೇರ್ಪಡೆ ವಿಚಾರಕ್ಕೆ ಮಾತನಾಡಿ, ಮುನೇನಕೊಪ್ಪ ಜೊತೆ ಈ ವಿಷಯವಾಗಿ ನಾನು ಮಾತನಾಡಿಲ್ಲ. ನಾನಾಗಿಯೇ ಯಾರನ್ನು ಕರೆಯುತ್ತಿಲ್ಲ. ಸ್ವಯಂ ಪ್ರೇರಣೆಯಿಂದ ಅನೇಕರು ಬಂದಿದ್ದಾರೆ. ಹಾಗೆಯೇ ಅನೇಕರು ಬರುತ್ತಾರೆ. ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ.…
ರಾಜ್ಯದ ನಗರ ಪ್ರದೇಶದಲ್ಲಿ 329 ಕೋಟಿ ರು. ವೆಚ್ಚದಲ್ಲಿ 17 ನೂತನ ‘ಅಗ್ನಿಶಾಮಕ ಠಾಣೆ’ ನಿರ್ಮಾಣ : ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು : ಇತ್ತೀಚ್ಚಿಗೆ ರಾಜ್ಯದ ನಗರ ಭಾಗಗಳಲ್ಲಿ ಅಗ್ನಿ ದುರಂತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 329 ಕೋಟಿ ರು. ವೆಚ್ಚದಲ್ಲಿ 17 ನೂತನ ಅಗ್ನಿಶಾಮಕ ಠಾಣೆ ನಿರ್ಮಾಣ ಹಾಗೂ ಹಲವು ಠಾಣೆಗಳ ಉನ್ನತೀಕರಣಕ್ಕೆ ನಿರ್ಧರಿಸಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಳೆದ ವರ್ಷ ಅತ್ತಿಬೆಲೆ ಪಟಾಕಿ ದುರಂತ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು. ನಂತರ ಸತತವಾಗಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇದ್ದವು.ಅಲ್ಲದೆ, ಬೇಸಿಗೆಯಲ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಆಧುನಿಕ ಉಪಕರಣಗಳನ್ನು ಮತ್ತು ಅಗತ್ಯವಿರುವ ಠಾಣೆಗಳಿಗೆ ಹೆಚ್ಚುವರಿಯಾಗಿ ನೂತನ ವಾಹನಗಳನ್ನು ಖರೀದಿಸಬೇಕು. ಈ ಕೆಲಸಗಳನ್ನು ಫೆಬ್ರವರಿ ಅಂತ್ಯದೊಳಗೆ ಮುಗಿಸಲು ಪ್ರತ್ಯೇಕ ಟೆಂಡರ್ ಕರೆದು ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಅನ್ವಯ ರಾಜ್ಯದ ಅಗ್ನಿಶಾಮಕ ದಳಕ್ಕೆ 2022-23 ರ ಸಾಲಿನಲ್ಲಿ 329 ಕೋಟಿ ರು. ಹಣ ಮಂಜೂರಾಗಿದೆ. ಈ ಹಣದ…
ಬೆಂಗಳೂರು : ಎರಡು ಗಂಟೆ ಸಮಯದಲ್ಲಿ ರಸ್ತೆ ಪ್ರಯಾಣದ ಮೂಲಕ ತಲುಪಬಲ್ಲ ರಾಜ್ಯದ ವಿಮಾನ ನಿಲ್ದಾಣಗಳ ಸುತ್ತಮುತ್ತ ಪ್ರದೇಶಗಳಲ್ಲಿ ಐದರಿಂದ ಹತ್ತು ಸಾವಿರ ಎಕರೆಯಷ್ಟು ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ರಾಜ್ಯದಲ್ಲಿ ಇನ್ವೆಸ್ಟ್ ಕರ್ನಾಟಕ ಫೋರಂ (ಐಕೆಎಫ್) ಪುನಾರಚನೆ ಯಾದ ಬಳಿಕ ಇದೇ ಮೊದಲ ಬಾರಿಗೆ ಫೋರಂನ ಅಧ್ಯಕ್ಷ ಉದ್ಯಮಿ ಸಜ್ಜನ್ ಜಿಂದಾಲ್ ಸೇರಿ ಇನ್ನಿತರೆ ನಿರ್ದೇಶಕರೊಂದಿಗೆ ಮಂಗಳವಾರ ನಡೆಸಿದ ಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಸಜ್ಜನ್ ಜಿಂದಾಲ್ ಅವರು ಕರ್ನಾಟಕದಲ್ಲಿ ನೆಲೆಸಿರುವ ಒಬ್ಬ ಉದ್ಯಮಿಯಾಗಿ ಈ ರಾಜ್ಯದಲ್ಲಿ ಹೂಡಿಕೆ ಮಾಡುವುದು ಎಷ್ಟು ಸೂಕ್ತ ಎಂಬುದು ನನಗೆ ಚೆನ್ನಾಗಿ ಗೊತ್ತು. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣಗಳಿಂದ ಸುಮಾರು 2 ಗಂಟೆ ರಸ್ತೆ ಪ್ರಯಾಣದ ಮೂಲಕ ತಲುಪಬಹುದಾದ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸಿದರೆ ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ಸೆಳೆಯಲು ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು. ಇದಕ್ಕೆ, ಪ್ರತಿಕ್ರಿಯಿಸಿದ ಸಚಿವರು,…
ಬೆಂಗಳೂರು : ರಾಜ್ಯದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲ ಅವರು, ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷರ ನೇಮಕದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಸಿದ್ಧತೆ ಹಾಗೂ ನಿಗಮ- ಮಂಡಳಿ ನೇಮಕದ ಬಗ್ಗೆ ಚರ್ಚಿಸಲು ಸೋಮವಾರ ಸಂಜೆ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದಾರೆ. ಮಂಗಳವಾರ ಬೆಳಗ್ಗೆ ಸುರ್ಜೇವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾರ್ಗದರ್ಶನ ಪಡೆಯುವ ಸಾಧ್ಯತೆಯಿದೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಮೂವರೂ ನಾಯಕರು ಪ್ರತ್ಯೇಕ ಸಭೆ ನಡೆಸಿ ನಿಗಮ-ಮಂಡಳಿ ನೇಮಕದಲ್ಲಿ ಕಾರ್ಯಕರ್ತರಿಗೆ ಆದ್ಯತೆ ನೀಡುವ ಬಗ್ಗೆ…
ಬೆಂಗಳೂರು : ಈ ಹಿಂದೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ರದ್ದಾಗಿದ್ದ 545 PSI PSI ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಮರುಪರೀಕ್ಷೆಯನ್ನು ಜ. 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಪ್ರಕಟಿಸಿದೆ.ಕಳೆದ ಡಿ.23ರಂದು ಬೆಂಗಳೂರಿನಲ್ಲಿ ಮಾತ್ರ ಮರು ಪರೀಕ್ಷೆ ನಡೆಸಲು ಪ್ರಾಧಿಕಾರ ದಿನಾಂಕ ಪ್ರಕಟಿಸಿತ್ತು. ಆದರೆ, ಅಭ್ಯರ್ಥಿಗಳು ಪರೀಕ್ಷೆಗೆ ತಯಾರಾಗಲು ಹೆಚ್ಚಿನ ಕಾಲಾವಕಾಶ ನೀಡಲು ಪರೀಕ್ಷೆ ಮುಂದೂಡ ಬೇಕೆಂದು ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಸರ್ಕಾ ರವನ್ನು ಒತ್ತಾಯಿಸಿದ್ದರು. ಇದಕ್ಕೆ ಮಣಿದ ಸರ್ಕಾರ ಒಂದು ತಿಂಗಳ ಕಾಲ ಪರೀಕ್ಷೆಯನ್ನು ಮುಂದೂಡುವು ದಾಗಿ ಪ್ರಕಟಿಸಿತ್ತು. ಈಗ ದಿನಾಂಕ ಪ್ರಕಟಿಸಿದೆ. ಪಿಎಸ್ಐ ನೇಮಕಾತಿಗೆ 2021ರ ಅಕ್ಟೋಬರ್ನಲ್ಲಿ ಪೊಲೀಸ್ ಇಲಾಖೆ ನಡೆಸಿದ್ದ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಇಡೀ ಪರೀಕ್ಷೆಯನ್ನೇ ರದ್ದುಪಡಿಸಿ ಮರು ಪರೀಕ್ಷೆಗೆ ಆದೇಶಿಸಿತ್ತು. ಇದನ್ನು ಕೆಲ ಅಭ್ಯರ್ಥಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಆದರೆ ಹೈಕೋರ್ಟ್ ನೇಮಕಾತಿ ಪರೀಕ್ಷೆ ರದ್ದುಪಡಿಸಿ…
ಬೆಂಗಳೂರು : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು 25 ಅಡಿ ಕಟೌಟ್ ಅನ್ನು ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಮೂರು ಯುವಕರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಇಂದು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಸೊರಣಗಿ ಗ್ರಾಮಕ್ಕೆ ನಟ ಯಶ್ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಯಶ್ ಅವರು ಇಂದು ಸಂಜೆ 4:00ಗೆ ಗದಗದ ಸೊರಣಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಮೃತರ ಸಂಬಂಧಿಕರಿಗೆ ನಟ ಯಶ್ ಸಾಂತ್ವನ ಹೇಳಲಿದ್ದಾರೆ.ಯಶ್ ಕಟೌಟ್ ಅಲಡಿಸುವಾಗ ಅವರ ಅಭಿಮಾನಿಗಳು ಮೂವರು ಸಾವನಪ್ಪಿದ್ದರು. ಘಟನೇ ಹಿನ್ನೆಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು 25 ಅಡಿ ಕಟೌಟ್ ಅನ್ನು ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ ಮೂರು ಯುವಕರು ಸಾವನ್ನಪ್ಪಿದ್ದಾರೆ.…













