Author: kannadanewsnow05

ಬೆಳಗಾವಿ : ನಿನ್ನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ನನ್ನನ್ನು ಮುಟ್ಟಿದರೆ ಕರ್ನಾಟಕದ ಜನ ಸುಮ್ನೆ ಬಿಡಲ್ಲ ಎಂದು ವಿಪಕ್ಷಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಈ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವ ವಿ ಸೋಮಣ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಅವರನ್ನು ಯಾರಾದರೂ ಮುಟ್ಟೋಕೆ ಆಗುತ್ತಾ? ಅವರನ್ನು ಮುಟ್ಟಿದರೆ ಪೊಲೀಸರು ಕೇಸ್ ಹಾಕುತ್ತಾರೆ ಎಂದು ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮುಟ್ಟಿದರೆ ಜನ ಸುಮ್ಮನೆ ಇರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಯಾರಾದರೂ ಅವರನ್ನು ಮುಟ್ಟಿದರೆ ಪೊಲೀಸರು ಕೇಸ್ ಹಾಕುತ್ತಾರೆ ಸಿಎಂ ಅವರನ್ನು ಯಾರಾದರೂ ಮುಟ್ಟೋಕೆ ಆಗುತ್ತಾ? ಯಾರಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟಿದರೆ ಪೊಲೀಸರು ಕೆಎಸ್ ಹಾಕುತ್ತಾರೆ ಎಂದರು. ಹಾಗಾಗಿ ಸಿಎಂ ಸಿದ್ದರಾಮಯ್ಯ ಆ ಅರ್ಥದಲ್ಲಿ ಮಾತನಾಡಿರಬಹುದು. ಸಿದ್ದರಾಮಯ್ಯ ಅವರು ಅನುಭವಿ ರಾಜಕಾರಣಿ. ಅವರು ಏನು ಮಾತನಾಡುತ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಜನರ ಭಾವನೆಗೆ…

Read More

ಬೆಂಗಳೂರು : ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ. ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಈ ನದಿಗಳ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹೀಗಾಗಿ ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನದಿಗಳು ತುಂಬಿ ಹರಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಂಗಾರು ಮಳೆಯ ಮಾರುತಗಳನ್ನು ತಡೆದು ದೇಶದಾದ್ಯಂತ ವ್ಯಾಪಕ ಮಳೆ ಆಗುವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್ ನಲ್ಲಿ ಕೆಲವೇ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೋಳಿಸಿದ್ದು, ಇದೀಗ ಮಾಜಿ ಅಧ್ಯಕ್ಷ ಮರಿಗೌಡ ಜಾರಿ ನಿರ್ದೇಶನಾಲಯದ (ED) ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಮುಡಾ ಹಗರಣದ ತನಿಖೆ ಯಾವಾಗ ತೀವ್ರ ಸ್ವರೂಪ ಪಡೆದುಕೊಂಡಿತೊ ಆಗ ಮರೀಗೌಡ ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ED ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರಿಂದ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಮರೀಗೌಡ ವಿಚಾರಣೆಗೆ ಹಾಜರಾಗಿದ್ದಾರೆ. ಇತ್ತೀಚಿಗಷ್ಟೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡಿದ್ದರು. ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊನ್ನೆ ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಸಿಟಿ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಅಲ್ಲದೆ ನಿನ್ನೆ ರಾಯಚೂರು ಸಂಸದ ಕುಮಾರ್ ನಾಯಕ್ ಅವರನ್ನು ಕೂಡ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಈ ಹಿಂದೆ ಕುಮಾರನಾಯಕ್ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಆಗಿದ್ದರು.

Read More

ಬೆಂಗಳೂರು : 66/11 kV ರಾಜನಕುಂಟೆ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಇಂದು ಹಾಗೂ ನಾಳೆ ದಿನಾಂಕ 15.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ ಇಂದು ಯಾವ್ಯಾವ ಪ್ರದೇಶ? ವಿಜಯಪುರ ಪಟ್ಟಣ, ಯಲ್ಲಮ್ಮ ಧರ್ಮಾಪುರ, ಬೀಡಿಗನ ಹಳ್ಳಿ, ಬಡವನಹಳ್ಳಿ, ವೆಂಕಟಗಿರಿ, ಕೋಟೆ, ಹುರುಲುಗುರ್ಕಿ, ಮುದುಗುರ್ಕಿ, ಬಿಜ್ಜವಾರ, ಹಾರೋಹಳ್ಳಿ, ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಂಡಿಗನಹಳ್ಳಿ, ಕಮ್ಮಸಂದ್ರ, ತಿಮ್ಮಸಂದ್ರ, ಮುದ್ದೇನಹಳ್ಳಿ, ನಾರಾಯಣಪುರ, ಗೋಡೆ ಮುದ್ದೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳು. ನಾಳೆ ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

Read More

ಶಿವಮೊಗ್ಗ : ನಿನ್ನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮೂವರ ಯುವಕರ ಮೃತ ದೇಹಗಳು ಪತ್ತೆಯಾಗಿವೆ. ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ ಈ ಒಂದು ದುರಂತ ಸಂಭವಿಸಿತ್ತು. ಚೇತನ ಜೈನ್ (28) ಸಿಗಂದೂರು, ರಾಜು (28) ಗಿಣಿವಾರ, ಹಾಗೂ ಸಂದೀಪ್ (30) ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ ಯುವಕರ ಮೃತ ದೇಹ ಇದೀಗ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ? ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದ ಚೇತನ್ ಸಂದೀಪ್ ರಾಜು ಎನ್ನುವವರು ಕಣ್ಮರೆಯಾಗಿದ್ದರು. ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ.ಈ ವೇಳೆ ಇನ್ನಿಬ್ಬರು ಯುವಕರು ದಡ ಸೇರಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ನಾಪತ್ತೆಯಾಗಿರುವ ಮೂವರು ಯುವಕರು ಮೃತಪಟ್ಟಿದ್ದಾರೆ. ತೆಪ್ಪದಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದರು. ನಿನ್ನೆಯಿಂದ ಶರಾವತಿ ನೀರಿನಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧಕಾರ್ಯ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದೆ. ನಾಗರಬಾವಿಯ ವಿನಾಯಕ ಲೇಔಟ್ ನಲ್ಲಿ ಚಾಕು ಇರಿದಿರುವ ಘಟನೆ ನಡೆದಿದೆ ವಕೀಲ ದಳಪತಿ (70) ಎನ್ನುವವರಿಗೆ ರಾಘವೇಂದ್ರ ಎನ್ನುವ ವ್ಯಕ್ತಿ ಚಾಕು ಇರಿದಿದ್ದಾನೆ. ದಳಪತಿ ಮನೆಯ ಬಳಿ ರಾಘವೇಂದ್ರ ಚಾಕುವಿನಿಂದ ಇರದಿದ್ದಾನೆ. ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ನಡೆದಿದು, ಚಾಕುವಿನಿಂದ ಬೆನ್ನಿಗೆ ಚುಚ್ಚಿ ಆರೋಪಿ ರಾಘವೇಂದ್ರ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸದ್ಯ ನಾಗರಬಾವಿಯ ಜಿಎಂ ಆಸ್ಪತ್ರೆಯಲ್ಲಿ ವಕೀಲ ದಳಪತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಈ ಬಗ್ಗೆ ಆರೋಪಿಯ ಕುಟುಂಬಸ್ಥರು ದೂರು ನೀಡಿದ್ದಾರೆ. ಕೊಲೆ ಯತ್ನ ಕೇಸ್ ದಾಖಲಿಸಿ ಪೊಲೀಸರು ರಾಘವೇಂದ್ರನನ್ನು ಅರೆಸ್ಟ್ ಮಾಡಿದ್ದಾರೆ.

Read More

ಹನುಮನ ಹೆಸರುಗಳ ರಹಸ್ಯವೇನು? ಭಗವಾನ್ ಹನುಮಂತನಿಗೆ ಹಲವು ಹೆಸರುಗಳಿವೆ ಮತ್ತು ಪ್ರತಿ ಹೆಸರಿನ ಹಿಂದೆ ಕೆಲವು ರಹಸ್ಯಗಳಿವೆ. ಹನುಮಂತನಿಗೆ ಸುಮಾರು 108 ಹೆಸರುಗಳಿವೆ. ಅವುಗಳಲ್ಲಿ ಆತನ 12 ಹೆಸರುಗಳನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಹನುಮಂತನು ಶಕ್ತಿಶಾಲಿಗಳಲ್ಲಿ ಶ್ರೇಷ್ಠನು. ಕಲಿಗಾಲದಲ್ಲಿ ಭಕ್ತನು ಭಕ್ತಿಯಿಂದ ಹನುಮಂತನನ್ನು ಪೂಜಿಸಿದರೆ ಆತನು ಉದ್ಧಾರವಾಗುತ್ತಾನೆ. ಹನುಮಂತನ ನಾಮ ಸ್ಮರಣೆಯನ್ನು ಮಾಡುವ ಭಕ್ತನು ತನ್ನೆಲ್ಲಾ ನೋವುಗಳಿಂದ ಮುಕ್ತಿಯನ್ನು ಪಡೆದುಕೊಳ್ಳುತ್ತಾನೆ ಮತ್ತು ಅವನ ಎಲ್ಲಾ ಕೆಲಸಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಜಾರಿ ನಿರ್ದೇಶನಾಲಯದ ಟೆನ್ಶನ್ ಶುರುವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕುಮಾರ್ ನಾಯಕ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಹಾಗಾಗಿ ಸಹಜವಾಗಿ ಸಿಎಂ ಸಿದರಾಮಯ್ಯ ಅವರಿಗೆ ಇದೀಗ ಇಡಿ ಅಧಿಕಾರಿಗಳ ಟೆನ್ಶನ್ ಹೆಚ್ಚಾಗಿದೆ. ಹಾಗಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಮಲ್ಲಿಕಾರ್ಜುನ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಶೀಘ್ರದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತರಲಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಯನ್ನು ಕೂಡ ಎದುರಿಸಿದ್ದಾರೆ ಹಾಗಾಗಿ ಸಹಜವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿ ಅಧಿಕಾರಿಗಳ ಭಯ ಶುರುವಾಗಿದೆ ಎನ್ನಲಾಗುತ್ತಿದೆ.

Read More

ಚಿತ್ರದುರ್ಗ : ಡೆತ್ ನೋಟ್ ಬರೆದಿಟ್ಟು ಅಡಿಕೆ ವ್ಯಾಪಾರಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗದ ಸಿದ್ದಾಪುರ ಬಳಿ ನಡೆದಿದೆ. ಸಿದ್ದಾಪುರ ಸಮೀಪದಲ್ಲಿರುವ ಗೋದಾಮಿನಲ್ಲಿ ಶೈಲೇಶ್ (45) ಎನ್ನುವ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಡೆತ್ ನೋಟ್ ನಲ್ಲಿ ಉಲ್ಲೆಖಿಸಿರುವ ಶೈಲೇಶ್, ಅಡಿಕೆ ವರ್ತಕ ಉದಯ ಶೆಟ್ಟಿ ವಿರುದ್ಧ ವಂಚನೆ ಹಾಗೂ ನಿಂದನೆ ಆರೋಪ ಮಾಡಿದ್ದಾರೆ. ವ್ಯಾಪಾರಿ ಶೈಲೇಶ್ ಬಳಿ ಉದಯಶೆಟ್ಟಿ ಅಡಿಕೆಯನ್ನು ಖರೀದಿಸಿದ್ದರು. ಸುಮಾರು 6.60 ಕೋಟಿ ಮೌಲ್ಯದ ಅಡಿಕೆಯನ್ನು ಉದಯಶಟ್ಟಿ ಶೈಲೇಶ್ ಬಳಿ ಖರೀದಿಸಿದ್ದರು. ಅಡಿಕೆ ಖರೀದಿ ಮಾಡಿದ್ದರ ಹಣ ಕೇಳಲು ಹೋದಾಗ ಉದಯಶೆಟ್ಟಿ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಶೈಲೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಉದಯಶೆಟ್ಟಿ ಕಾರಣ ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೆಖಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕೊರೋನಾ ಸಮಯದಲ್ಲಿ ಅಗತ್ಯವೇ ಇಲ್ಲದೆ ಇರುವ ಸಂದರ್ಭದಲ್ಲಿ ಸುಮಾರು 84.99 ಕೋಟಿ ವೆಚ್ಚದಲ್ಲಿ ಸಿಟಿ ಸ್ಕ್ಯಾನ್ ಯಂತ್ರೋಪಕರಣಗಳನ್ನು ಖರೀದಿಸಿದ್ದು ಅದರಲ್ಲಿ 15.83 ಕೋಟಿ ರೂಪಾಯಿಗಳ ಅಕ್ರಮ ನಡೆದಿದೆ ಎಂದು ನ್ಯಾ.ಕುನ್ಹಾ ಆಯೋಗದ ವರದಿಯಲ್ಲಿನ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಕೊರೋನಾ ವೈರಾಣು ಪತ್ತೆಗೆ ಯಾವ ರೀತಿಯಲ್ಲೂ ನೆರವಿಗೆ ಬರದ 17 ಸಿ.ಟಿ ಸ್ಕ್ಯಾನ್ ಯಂತ್ರಗಳನ್ನು, ಕೋವಿಡ್ ನಿರ್ವಹಣೆಗಾಗಿ ಬಿಡುಗಡೆ ಮಾಡಿದ ಅನುದಾನದಲ್ಲೇ ಖರೀದಿಸಲಾಗಿದೆ. ಇದರಿಂದ ಕೋವಿಡ್ ನಿಯಂತ್ರಣಕ್ಕೆ ಯಾವ ಪ್ರಯೋಜನವೂ ಆಗಿಲ್ಲ ಎಂದು ವರದಿ ಹೇಳಿದೆ.128 ಸ್ಟೈಸ್ ಸಾಮರ್ಥ್ಯದ ಸಿ.ಟಿ ಸ್ಕ್ಯಾನ್ ಯಂತ್ರಗಳ ಖರೀದಿಗೆ ಸಂಬಂಧಿಸಿದಂತೆ ಪಿಲಿಪ್ಸ್ ಇಂಡಿಯಾ 128 ಸ್ಟೈಸ್ ಸಾಮರ್ಥ್ಯದ ಯಂತ್ರಕ್ಕೆ ದರ ನಮೂದಿಸಿ, ಫೋರ್ಸಸ್ ಹೆಲ್ತ್ಕೇರ್ 160 ಸ್ಟೈಸ್ ಸಾಮರ್ಥ್ಯದ ಯಂತ್ರಕ್ಕೆ ದರ ನಮೂದಿಸಿ ಬಿಡ್ ಸಲ್ಲಿಸಿದ್ದವು. 2020-2022ರ ನಡುವೆ ವಿವಿಧ ಜಿಲ್ಲಾಸ್ಪತ್ರೆಗಳಿಗೆಂದು 128 ಸ್ಟೈಸ್ ಸಾಮರ್ಥ್ಯದ 11 ಸಿ.ಟಿ ಸ್ಕ್ಯಾನ್ ಯಂತ್ರಗಳನ್ನು ಖರೀದಿಸಲಾಗಿದೆ. ಸೇವ್ ಮೆಡಿಟೆಕ್ ಸಿಸ್ಟಮ್ಸ್ ಎಂಬ ಕಂಪನಿಯು 2020ರ ಆಗಸ್ಟ್‌ನಲ್ಲಿ ಒಂದು…

Read More