Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಇದರಲ್ಲಿ ನನ್ನದು ಯಾವುದೇ ತಪ್ಪು ಇಲ್ಲ ಯಾವುದೇ ಕಾರಣಕ್ಕೂ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ. ಯಾವುದೇ ಕಾರಣಕ್ಕೂ ನಾನು ಜಗ್ಗಲ್ಲ ಬಗ್ಗುವುದಿಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದರು.ಇನ್ನು ಇದೇ ವಿಚಾರವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದು, ನಿಮನ್ನು ಹೇಗೆ ಜಗ್ಗಿಸಬೇಕು ಬಗ್ಗಿಸಬೇಕು ಎಂಬುದು ಗೊತ್ತಿದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು, ಇಡಿ ತನಿಖೆ ಮನೆ ಅಂಗಳಕ್ಕೆ ಅಲ್ಲ ಮುಖ್ಯಮಂತ್ರಿ ಕುತ್ತಿಗೆಗೆ ಬಂದಿದೆ.ನಾನು ಜಗ್ಗಲ್ಲ ಬಗ್ಗಲ್ಲ ಎಂದವರು ಯಾಕೆ ಸೈಟ್ ಹಿಂತಿರುಗಿಸಿದರು? ಕಳ್ಳ ಮಾಲು ವಾಪಸ್ ಪ್ರಕರಣ ಅಲ್ವಾ ಇಂತಹ ಅಘೋಷಿತ ನ್ಯಾಯ ಯಾವ ಪುಸ್ತಕದಲ್ಲೂ ಇಲ್ಲ. ಕದಿರಿ ಸಿಕ್ಕಿಹಾಕಿ ಕೊಡರೆ ಮಾಲ್ ವಾಪಸ್ ಕೊಡಬೇಕು. ಆಗ ನಿಮ್ಮ ಮೇಲೆ ಕೇಸ್ ಇಲ್ಲ ಎಂಬುದು ಕಾಂಗ್ರೆಸ್ಸಿನ ನೀತಿಯಾಗಿದೆ. ನಿಮ್ಮನ್ನು ಹೇಗೆ ಜಗ್ಗಿಸಬೇಕು ಬಗ್ಗಿಸಬೇಕು ಎಂಬುವುದು ನಮಗೆ ಗೊತ್ತಿದೆ ಎಂದು ವಿಧಾನ…
ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾನ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ವೇದಿಕೆ ಮೇಲೆ ಜನರತ್ತ ಕೈ ಬೀಸುವ ವೇಳೆ ಸಿಎಂ ಸಿದ್ದರಾಮಯ್ಯ ಮುಗ್ಗರಿಸಿದರು. ತಕ್ಷಣ ಸಿಎಂ ಸಿದ್ದರಾಮಯ್ಯ ಅವರನ್ನು ಜೊತೆಗಿದ್ದ ಆಪ್ತರು ಬೀಳದಂತೆ ಹಿಡಿದುಕೊಂಡರು. ವೇದಿಕೆಗೆ ಆಗಮಿಸಿದ ವೇಳೆ ಕಾಲಿಗೆ ಕೇಬಲ್ ಸಿಲುಕಿ ಮುಗ್ಗರಿಸಿದ್ದಾರೆ. ತಕ್ಷಣ ಅಕ್ಕ ಪಕ್ಕದಲ್ಲಿ ಇದ್ದಂತಹ ಆಪ್ತರು ಅವರನ್ನು ಹಿಡಿದುಕೊಂಡರು. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇಂದಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಹೆಚ್. ಮುನಿಯಪ್ಪ, ಜಮೀರ್ ಅಹ್ಮದ್ ಖಾನ್,ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಸಮಾವೇಶಕ್ಕೆ ಲಕ್ಷಾಂತರ ಜನರು ಸೇರಿದ್ದು, ಸಮಾವೇಶಕ್ಕೆ…
ಹಾಸನ : ಹಾಸನದಲ್ಲಿ ಕಾಂಗ್ರೆಸ್ ಪಕ್ಷವು ಇಂದು ಬೃಹತ್ ಜನಕಲ್ಯಾಣ ಸಮಾವೇಶವನ್ನು ಹಮ್ಮಿಕೊಂಡಿದ್ದು, ಎಸ್.ಎಂ ಕೃಷ್ಣ ನಗರದಲ್ಲಿ ಈಗಾಗಲೇ ಬೃಹತ್ ವೇದಿಕೆ ಸಿದ್ಧಾವಾಗಿದೆ.ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಹಾಸನಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಸಮಾವೇಶದ ವೇದಿಕೆಗೆ ತೆರಳಿದ್ದಾರೆ. ಹಾಸನ ಹೊರವಲಯದ ಭುವನಹಳ್ಳಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯು ವಕ್ಫ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ, ಬೆಳಗಾವಿ ಅಧಿವೇಶನ ಇರುವುದರಿಂದ ಬಿಜೆಪಿ ಈ ರೀತಿ ಪ್ರತಿಭಟನೆ ಮಾಡುತ್ತಿದೆ. ಬಿಜೆಪಿಯು ವಕ್ಫ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ.ವಕ್ಫ್ ವಿಚಾರವಾಗಿ ಮೊದಲು ನೋಟಿಸ್ ನೀಡಿದ್ದು ಯಾರು? ಬಸವರಾಜ್ ಬೊಮ್ಮಾಯಿ ಆಡಳಿತದಲ್ಲಿ ಅತೀ ಹೆಚ್ಚು ನೋಟಿಸ್ ನೀಡಲಾಗಿದೆ ಎಂದರು. ಅಧಿವೇಶನದಲ್ಲಿ ಅವರಿಗೆ ಚರ್ಚಿಸಲು ಬೇರೆ ಯಾವ ವಿಷಯ ಕೂಡ ಇಲ್ಲ. ಬೈ ಎಲೆಕ್ಷನ್ ನಲ್ಲಿ ಮೂರು ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ. 25 ವರ್ಷದ ನಂತರ ಶಿಗ್ಗಾವಿಯಲ್ಲಿ,…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎನ್.ವಿ ಅಂಜಾರಿಯ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದು, ಅಲ್ಲದೇ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದರು. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ವಾದಿಸುತ್ತಿದ್ದು, ಏಕ ಸದಸ್ಯ ಪೀಠದ ಆದೇಶದಲ್ಲಿನ ಲೋಕವನ್ನು ತೋರಿಸುತ್ತೇನೆ 17ಎ ನಿಯಮವನ್ನು ಸಂಪೂರ್ಣವಾಗಿ ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಪೊಲೀಸ್ ಅಧಿಕಾರಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎನ್.ವಿ ಅಂಜಾರಿಯ, ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯ ಅಭಿಪ್ರಾಯ ತಿಳಿಸಿದರು. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ…
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೊಲೆ ಆರೋಪಿ ನೌಷದ್ ಮನೆಯ ಮೇಲೆ ಐವರು NIA ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳ ದಾಳಿಯ ಮಾಹಿತಿಯನ್ನು ತಿಳಿದ ಆರೋಪಿಯ ಕುಟುಂಬಸ್ಥರು ಮನೆ ಲಾಕ್ ಮಾಡಿ ಪರಾರಿಯಾಗಿದ್ದಾರೆ. ಹೌದು ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ನೌಷದ್ ಮನೆಯ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐವರು ಅಧಿಕಾರಿಗಳಿಂದ ಮನೆಯ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ದಾಳಿ ವಿಚಾರ ತಿಳಿದು ಮನೆಯನ್ನು ಲಾಕ್ ಮಾಡಿಕೊಂಡು ಕುಟುಂಬ ಪರಾರಿಯಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾಗಿರುವ ನೌಷದ, ಬೆಳ್ತಂಗಡಿ ಠಾಣೆಯ ಇಬ್ಬರು ಪೊಲೀಸರ ಜೊತೆಗೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಆರೋಪಿ ನೌಷದ್ ಪತ್ತೆಗಾಗಿ 2 ಲಕ್ಷ ರಿವಾರ್ಡ್ ಘೋಷಿಸಿದ್ದಾರೆ.
ಬೆಂಗಳೂರು : ಇಂದು ಹಾಸನದ ಎಸ್ಎಮ್ ಕೃಷ್ಣ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ವೇದಿಕೆ ಮುಂಭಾಗ ಜಮಾಯಿಸಿದ್ದಾರೆ. ಇದರ ಮಧ್ಯ ಇಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ ವಿಚಾರಣೆ ಕೂಡ ನಡೆಯಲಿದೆ. ಹೌದು ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಯಲಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದ ಜನ ಕಲ್ಯಾಣ ಸಮಾವೇಶಕ್ಕೂ ತೆರಳುವ ಮುಂಚೆ ಆಪ್ತ ಸಚಿವರ ಜೊತೆಗೆ ಹಾಗೂ ಕಾನೂನು ತಜ್ಞರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಇಂದು ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್ ನಲ್ಲಿ…
ಬೆಂಗಳೂರು : ಡಿಕೆ ಶಿವಕುಮಾರ್ ಅವರ ಅಧಿಕಾರ ಹಂಚಿಕೆ ಒಪ್ಪಂದದ ಹೇಳಿಕೆ ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಯಾವುದೇ ಒಪ್ಪಂದವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಒಪ್ಪಂದ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಪ್ಪಂದ ಇದ್ದರೆ ಅವರಿಬ್ಬರೇ ಸರ್ಕಾರ ನಡೆಸಲಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಒಪ್ಪಂದ ಆಗಿದೆ ಎಂದು ಡಿಕೆ ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದರು ನನಗೆ ಗೊತ್ತಿಲ್ಲ. ದೆಹಲಿಯಲ್ಲಿ ಮೂರ್ನಾಲ್ಕು ಜನರಿಗೆ ನಾನು ಕೇಳಿದೆ ಹಾಗೂ ಇಲ್ಲೂ ಕೇಳಿದೆ ಯಾವುದೇ ಒಪ್ಪಂದ ಆಗಿಲ್ಲ ಎಂದು ಹೇಳಿದ್ದಾರೆ. ಒಪ್ಪಂದ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಣೆ ನೀಡಿದ್ದಾರೆ. ಒಪ್ಪಂದ ಆಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಲಿ ಬಿಡಿ. ಬೇರೆಯವರು ಇರುವುದೇ ಬೇಡವಾ ಎಂದು ಪ್ರಶ್ನಿಸಿದ್ದಾರೆ. ಜನ ಕಲ್ಯಾಣ ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಜನ ಸ್ವಾಭಿಮಾನಿ ಒಕ್ಕೂಟಗಳನ್ನು ಮಾಡಿಕೊಂಡಿದ್ದಾರೆ. ಅವರು…
ಬೆಂಗಳೂರು : ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಒಡೆದು ಹಾಕಲು ಕನಸಿನಲ್ಲಿ ಯೇಸು ಹೇಳಿದ್ದ ಎಂದು ಕಿಡಿಗೇಡಿಯೊಬ್ಬ ಸ್ವಾಮೀಜಿಯವರ ಪುತ್ಥಳಿಯನ್ನು ಒಡೆದು ವಿರೂಪಗೊಳಿಸಿದ್ದ, ಇದೀಗ ಆರೋಪಿಯನ್ನು ಬೆಂಗಳೂರಿನ ಗಿರಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ರಾಜ್ ಶಿವು ಎಂದು ಗುರುತಿಸಲಾಗಿದ್ದು, ಕಳೆದ ಶನಿವಾರ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. 7 ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಶನಿವಾರ ರಾತ್ರಿ ಸುತ್ತಿಗೆ ಸಮೇತ ಆರೋಪಿ ಬಂದು, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಎಸ್ಕೇಪ್ ಆಗಿದ್ದ. ಅಲ್ಲದೆ ಇದರ…
ನವದೆಹಲಿ : ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಜನಕಲ್ಯಾಣ ಸಮಾವೇಶ ಮಾಡುತ್ತಿರುವ ವಿಚಾರವಾಗಿ, ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದು,ಕಾಂಗ್ರೆಸ್ನವರು ಎಷ್ಟು ಸಮಾವೇಶಗಳನ್ನು ಮಾಡುತ್ತಾರೋ ಮಾಡಲಿ ಆದರೆ 2028 ರಲ್ಲಿ ಎಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು 10 ಸಮಾವೇಶ ಮಾಡಲಿ ನಾವು ಹೆದರುವುದಿಲ್ಲ. ಹಾಸನ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನು? ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗಲೂ ಕ್ಷೇತ್ರಕ್ಕೆ ಏನು ಮಾಡಿಲ್ಲ. ಕಾಂಗ್ರೆಸ್ ನವರಿಗೆ ಹಾಸನದಲ್ಲಿ ಒಂದು ಫ್ಲೈ ಓವರ್ ಮಾಡಲು ಆಗಿಲ್ಲ. ಹಾಸನಕ್ಕೆ ಮಂಜೂರಾಗಿದ್ದ ರೈಲ್ವೆ ಯೋಜನೆಯನ್ನು ಸಹ ತಡೆದಿದ್ದಾರೆ ಅಧಿಕಾರದಲ್ಲಿರುವ ಕಾಂಗ್ರೆಸ್ ಹಾಸನದ ಅಭಿವೃದ್ಧಿಗೆ ಕೆಲಸ ಮಾಡಲಿ ಎಂದರು. ಅಧಿಕಾರ ಇಲ್ಲದಾಗ ಕೈಕಾಲು ಹಿಡಿದುಕೊಳ್ಳುತ್ತಾರೆ. ಕಳೆದ 2018 ರಲ್ಲಿ ನಮ್ಮ ಪಕ್ಷದ ಶಾಸಕರನ್ನು ಕರೆದುಕೊಂಡು ಹೋದರು. ಆಮೇಲೆ ಬಂದು ಕಾಂಗ್ರೆಸ್ನವರು ನಮ್ಮ ಕೈ ಕಾಲು ಹಿಡಿದರು.…









