Author: kannadanewsnow05

ತುಮಕೂರು : ಕಲುಷಿತ ನೀರು ಸೇವಿಸಿ ಸುಮಾರು 10ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಓರ್ವ ಮಹಿಳೆ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಸೋರಲಮಾವು ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕಲುಷಿತ ನೀರು ಸೇವಿಸಿ ಗುಂಡಮ್ಮ (60) ಸಾವನ್ನಪ್ಪಿದ್ದರೆ. ಅಲ್ಲದೆ ಸೋರಲಮಾವು ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ.ಇನ್ನು ಘಟನೆಯಲ್ಲಿ ಅಸ್ವಸ್ಥಗೊಂಡಂತಹ ಎಲ್ಲಾ 10 ಜನರನ್ನು ಚಿಕ್ಕನಾಯಕನಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ. ಹೌದು ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳೀಯರು ಹೇಳುತ್ತಿರುವ ಪ್ರಕಾರ ಈ ಒಂದು ನಿರ್ಮಾಣ ಹಂತದ ಕಟ್ಟಡದ ಕೆಳಗಡೆ ಅನೇಕ ಕಾರ್ಮಿಕರು ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘೋರ ದುರಂತವೊಂದು ನಡೆದಿದ್ದು, ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿ ಅಣ್ಣ, ತಂಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಂಗಿ ಮಹಾಲಕ್ಷ್ಮಿ ಶವ ಪತ್ತೆಯಾಗಿದೆ. ಹೌದು ಬೆಂಗಳೂರು ನಗರದಲ್ಲಿ ಸುರದ ಬಾರಿ ಮಳೆಗೆ ಇಡೀ ಬೆಂಗಳೂರು ನಗರದ ಜನತೆ ತತ್ತರಿಸಿ ಹೋಗಿದೆ. ಈ ವೇಳೆ ಕೆಂಗೇರಿಯ ಕೆರೆಯ ಬಳಿ ಅಣ್ಣ ತಂಗಿ ಇಬ್ಬರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಅಗ್ನಿಶಾಮಕ ದಳ ಸಿಬ್ಬಂದಿಗಳ ಶೋಧ ಕಾರ್ಯದಿಂದ ಅಣ್ಣನ ಶವ ಸಿಕ್ಕಿದ್ದು ಇದೀಗ ತಂಗೆ ಮಹಾಲಕ್ಷ್ಮಿ ಶವ ಪತ್ತೆಯಾಗಿದೆ. ಬಾಲಕಿ ಮಹಾಲಕ್ಷ್ಮಿ ಬಿದ್ದಂತಹ ಸ್ಥಳದಿಂದ ಸುಮಾರು 100 ಮೀಟರ್ ದೂರದಲ್ಲಿ ಬಾಲಕಿ ಮಹಾಲಕ್ಷ್ಮಿಯ ಶವ ಪತ್ತೆಯಾಗಿದೆ. ಮಗಳ ಮೃತದೇಹವನ್ನು ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿತು. ಇಂದು ಬೆಳಿಗ್ಗೆ ಮಹಾಲಕ್ಷ್ಮಿಯ ಅಣ್ಣ ಜಾನ್ ಸೇನಾ ಮೃತದೇಹವನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರ ತೆಗೆದಿದ್ದರು.

Read More

ಬೆಂಗಳೂರು : ಬೆಂಗಳೂರಿನ ಕೆಂಗೇರಿಯ ಗುರೂರು ಕೆರೆಯಲ್ಲಿ ಅಣ್ಣ ತಂಗಿ ಬಿದ್ದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಕ ಜಾನ್ ಸೇನಾ ಮೃತದೇಹ ಹೊರ ತೆಗೆಯಲಾಗಿದೆ.ಆದರೆ ಮಹಾಲಕ್ಷ್ಮಿಯ ಶವ ಪತ್ತೆಯ ವೇಳೆ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಹೌದು ಕೆಂಗೇರಿಯ ಕೆರೆಯಲ್ಲಿ ಅಣ್ಣ ತಂಗಿ ಬಿದ್ದು ಸಾವನ್ನಪ್ಪಿದ್ದರು. ಈ ವೇಳೆ ಬಾಲಕ ಜಾನ್ ಸೇನಾ ಶವವನ್ನು ಅಗ್ನಿಶಾಮಕ ದಳ ಸಿಬ್ಬಂದಿಯವರು ಹೊರಗಡೆ ತೆಗೆದಿದ್ದಾರೆ. ಆದರೆ ಇದೇ ವೇಳೆ ಮತ್ತೊಂದು ಮೃತದೇಹ ಪತ್ತೆಯಾಗಿದೆ.ಇದು ಮಹಾಲಕ್ಷ್ಮಿ ಮೃತದೇಹನ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಮಳೆರಾಯ ತಣ್ಣಗಾಗಿದ್ದ ಆದರೆ ಇದೀಗ ಮತ್ತೆ ಅಬ್ಬರಿಸುತ್ತಿದ್ದು ಬೆಂಗಳೂರಿನ ಜನತೆ ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದಾರೆ. ಇಂದು ಬೆಂಗಳೂರು ಮಹಾನಗರದಲ್ಲಿ ಮತ್ತೆ ಭಾರಿ ಮಳೆ ಆಗುತ್ತಿದ್ದು ಮಲ್ಲೇಶ್ವರಂ ನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದೆ. ಹೌದು ಬೆಂಗಳೂರು ಮಹಾನಗರದ ಹಲವೆಡೆ ಭಾರಿ ಮಳೆಯಾಗುತ್ತಿ. ಇದೆ ವೇಳೆ ಮಲ್ಲೇಶ್ವರಂ ನಲ್ಲಿ ಆಟೋ ಬೈಕ್ ಗಳ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಈ ವೇಳೆ ಕೆಲ ವಾಹನಗಳು ನುಜ್ಜುಗುಜ್ಜಾಗಿವೆ.ಈ ವೇಳೆ ಆಟೋದಲ್ಲಿ ಒಬ್ಬರು ಮಹಿಳೆ ಹಾಗೂ ಇಬ್ಬರೂ ಪುರುಷರು ಇದ್ದಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾಜಾಜಿನಗರ, ಭಷ್ಯಂ ಸರ್ಕಲ್ ರಸ್ತೆ, ವಿಜಯನಗರ, ಮಂಜುನಾಥ ನಗರ ಮಾಗಡಿ ರಸ್ತೆ ಸೇರಿ ಹಲವೆಡೆ ಭಾರಿ ಮಳೆ ಆಗುತ್ತಿದೆ. ಮಳೆಗೆ ರಾಜಾಜಿನಗರದ ಒಂದು ಭಾಗದ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದೆ. ಮಳೆಯ ರಭಸಕ್ಕೆ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿಯುತ್ತಿದೆ ಮಳೆಯಿಂದ ಫುಲ್ ಟ್ರಾಫಿಕ್ ಜಾಮ್ ಆಗಿದ್ದು…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಈ ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡಿನ ಕರಾವಳಿ ತೀರದಲ್ಲಿ ಗಾಳಿ ಪರಿಚಲನೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಈ ಕುರಿತು ಮಾಹಿತಿ ನೀಡಿದರು. ಬೆಳಗಾವಿ, ಧಾರವಾಡ, ಹಾವೇರಿ, ಗದಗ,b ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹಾಗಾಗಿ ಬೆಂಗಳೂರಿಗೆ ಆರೇಂಜ್…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು, ನನ್ನ ಭಾಮೈದ ತಂಗಿಗೆ ಅರಿಶಿನ ಕುಂಕುಮಕ್ಕೆ ಕೊಟ್ಟ ಜಮೀನನ್ನು ವಿವಾದ ಮಾಡಿದರು. ಅದಕ್ಕೇ ನಿವೇಶನವನ್ನೇ ವಾಪಸ್ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರು ಜಿಲ್ಲೆಯ ಸ್ವ ಕ್ಷೇತ್ರ ವರುಣಾದಲ್ಲಿ ಸುಮಾರು 501 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವರು, ಸಿದ್ದರಾಮಯ್ಯ 42 ವರ್ಷದ ರಾಜಕಾರಣದಲ್ಲಿ ಎಂದೂ ಬಡವರಿಗೆ ಅನ್ಯಾಯ ಮಾಡಿಲ್ಲ. ಒಂದು ರೂಪಾಯಿ ಲಂಚ ಪಡೆದಿಲ್ಲ. ನನ್ನ ಮೇಲಿನ ಸುಳ್ಳು ಆರೋಪವನ್ನು ಸಹಿಸುತ್ತೀರ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ, ಯಡಿಯೂರಪ್ಪ, ಜೋಶಿ, ವಿಜಯೇಂದ್ರ ಮೊದಲಾದವರಿಗೆ ನನ್ನನ್ನು ಕಂಡರೆ ಹೊಟ್ಟೆ ಉರಿ. ಮೂರು ವರ್ಷದಿಂದ ಮೈಸೂರಿನ ಕುವೆಂಪು ರಸ್ತೆಯಲ್ಲಿ ಮನೆ ಕಟ್ಟಿಸುತ್ತಿದ್ದೇನೆ. ಒಬ್ಬ ಮುಖ್ಯಮಂತ್ರಿ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತಿದೆ. ಕಾಯಾ ವಾಚ ಮನಸಾ ಪ್ರಾಮಾಣಿಕವಾಗಿ ರಾಜಕಾರಣದಲ್ಲಿ ಇದ್ದೇನೆ.…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಳ್ಳಾರಿ ಹಾಗೂ ರಾಯಚೂರು ಕ್ಷೇತ್ರದ ಚುನಾವಣೆಗೆ ಹಣ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಇದೀಗ ಬಿಜೆಪಿ ದೂರು ನೀಡಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಣವನ್ನು ರಾಯಚೂರು ಹಾಗೂ ಬಳ್ಳಾರಿ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆಯಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ದೂರು ನೀಡಲಾಗಿದೆ. ಈಗಾಗಲೇ ಈ ಒಂದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ತಿಂಗಳುಗಳ ಕಾಲ ಜೈಲಿನಲ್ಲಿದ್ದ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ರಾಜ್ಯ ಬಿಜೆಪಿ ನಾಯಕರು ಮತ್ತೊಂದು ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು…

Read More

ವಿಜಯನಗರ : ವಿಜಯನಗರ ಜಿಲ್ಲೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ. ಮೃತಪಟ್ಟವರನ್ನ ಗ್ರಾಮದ ಸುರೇಶ ಭೋವಿ (32) ಎಂಬುವರು ನಿನ್ನೆ ಮೃತಪಟ್ಟಿದ್ದರೆ, ಮಹಾಂತೇಶ ಭೋವಿ (35) ಎನ್ನುವವರು ಕಳೆದ ನಾಲ್ಕು ದಿನದ ಹಿಂದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು, ಅದಕ್ಕೆ ಚರಂಡಿ ನೀರು ಸೇರಿ ನೀರು ಕಲುಷಿತಗೊಂಡಿದೆ. ಅದೇ ಕಲುಷಿತ ನೀರು ಕುಡಿದ ಜನರು ವಾಂತಿ- ಭೇದಿಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದ್ದು, ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಗ್ರಾಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮೈಸೂರು : ಸಿಎಂ ಸಿದ್ದರಾಮಯ್ಯ ಯಾವತ್ತೂ ಭ್ರಷ್ಟಾಚಾರ ಮಾಡಿದವರಲ್ಲ. ಸೇಮ ಸಿದ್ದರಾಮಯ್ಯ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೇ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ತಾಯೂರು ಗೇಟ್ ನಲ್ಲಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಆಕ್ರೋಶ ಹೊರಹಾಕಿದರು. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಾಯೂರು ಗೇಟ್ ಬಳಿ ಮಾತನಾಡಿದ ಅವರು, ಕೆಲವರು ಸೂರ್ಯನಿಗೆ ಉಗಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸೂರ್ಯನಿಗೆ ಉಗುಳು ತಗುವುದಿಲ್ಲ ಸೂರ್ಯನಿಗೆ ಅಪಮಾನ ಮಾಡುವ ಕೆಲಸ ಮಾಡಲಾಗುತ್ತಿದೆ. ಕೆಲವರು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಧ್ವನಿ ಅಡಗಿದರೆ ಶೋಷಿತರ ಧ್ವನಿ ಅಡಗುತ್ತದೆ. ಹೀಗಾಗಿ ಸಿದ್ದರಾಮಯ್ಯ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೆ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ ಹೇಳಿ ಎಂದು ಮಹದೇವಪ್ಪ ಆಕ್ರೋಶ ಹೊರಹಾಕಿದರು.

Read More