Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಟಿ ಆಶಿಕ ಮಾವನ ಮಗಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಪ್ರಿಯತಮನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಇದೀಗ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಹಾಸನದ ಅಚಲ (22) ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೇ ನವೆಂಬರ್ 22ರಂದು ಅಚಲ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪಾಂಡುರಂಗ ನಗರದಲ್ಲಿ ಅಚಲ ಆತ್ಮಹತ್ಯೆಗೆ ಶರಣಾಗಿದ್ದಾಳೆ ತಮ್ಮ ಸಂಬಂಧಿಕರ ಮನೆಯಲ್ಲಿ ಅಚಲ ನೇಣಿಗೆ ಶರಣಾಗಿದ್ದಾಳೆ, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು ಎಂಟು ದಿನವಾದರೂ ಆರೋಪಿಯ ಬಂಧನ ಆಗಿಲ್ಲ ಅಂತ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಮೃತ ಅಚಲ ಇಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುತ್ತಿದ್ದರು. ತನ್ನ ಸಂಬಂಧಿ ಆರೋಪಿ ಮಾಯಾಂಕ್ ಜೊತೆಗೆ ಆಚಲ ಸ್ನೇಹ ಹೊಂದಿದಳು. ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಬಂಧಕ್ಕೆ ಪೀಡಿಸಿದ ಆರೋಪ ಕೇಳಿ ಬಂದಿದೆ. ಈಕೆ ಒಪ್ಪದಿದ್ದಾಗ ದೈಹಿಕವಾಗಿ ಹಲ್ಲೆ ಮಾಡಿದ್ದು ಅಲ್ಲದೆ ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಆತನ ಕಿರುಕುಳದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ…
ಬೆಂಗಳೂರು : ಕಾಂಗ್ರೆಸ್ ಬಣದಾಟಕ್ಕೆ ಬ್ರೇಕ್ಫಾಸ್ಟ್ ಮೂಲಕ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಜೊತೆಯಾಗಿ ಉಪಾಹಾರ ಸೇವಿಸಿ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ನಿನ್ನೆ ಬೆಳಗ್ಗೆಯೇ ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್, ಸಿಎಂ ಜೊತೆ ಉಪಾಹಾರಕ್ಕೆ ಜೊತೆಯಾದರು.ಇದೀಗ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯತನ್ನು ಡಿನ್ನರ್ ಪಾರ್ಟಿಗೆ ಕರೆಯುತ್ತೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ನನ್ನ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ನಾನಂತು ಗುಂಪುಗಾರಿಕೆ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶಾಸಕರ ಜೊತೆ ದೆಹಲಿಗೆ ಹೋಗೋದು ದೊಡ್ಡ ಕೆಲಸ ಅಲ್ಲ. 7, 9.ಶಾಸಕರನ್ನು ಕರೆದುಕೊಂಡು ಹೋಗೋದು ದೊಡ್ಡ ಕೆಲಸವಲ್ಲ. ಅದರಿಂದ ಯಾವುದೇ ಪ್ರಯೋಜನ ಇಲ್ಲ. ಪಾರ್ಟಿ ಪ್ರೆಸಿಡೆಂಟ್ ಅಂದರೆ ಫಾದರ್ ಇದ್ದಂತೆ. ನಾನು 140 ಶಾಸಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವವನು. ನನ್ನ ಸಿಎಂ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಷ್ಟು ನಿಷ್ಠೆಯಿಂದ…
ವಿದೇಶದಲ್ಲಿ ಕೆಲಸ ಮಾಡುವ ನಿಮ್ಮ ಕನಸನ್ನು ನನಸಾಗಿಸಲು ವಾಸ್ತು ಶಾಸ್ತ್ರದಲ್ಲಿ ಕೆಲವು ಸಲಹೆಗಳು ಮತ್ತು ಪರಿಹಾರಗಳಿವೆ. ಇವು ನಿಮ್ಮ ಮನೆಯಲ್ಲಿ ಶಕ್ತಿಯ ಹರಿವನ್ನು ಸುಧಾರಿಸುತ್ತದೆ, ಸಕಾರಾತ್ಮಕ ಕಂಪನಗಳನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ವಿದೇಶ ಪ್ರಯಾಣದ ಪ್ರಯತ್ನಗಳಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ನಂಬಲಾಗಿದೆ. ನಿಮ್ಮ ವಿದೇಶಿ ಕನಸು ಏನೇ ಇರಲಿ, ಅದು ವಿದೇಶಿ ಉದ್ಯೋಗ, ಶಿಕ್ಷಣ ಅಥವಾ ವಲಸೆಯಾಗಿರಬಹುದು, ಈ ಲೇಖನದಲ್ಲಿ ಒದಗಿಸಲಾದ ವಾಸ್ತು ಸಲಹೆಗಳು ನಿಮಗೆ ಸಹಾಯ ಮಾಡಬಹುದು. ವಿದೇಶ ಪ್ರಯಾಣಕ್ಕಾಗಿ ಪಾಸ್ಪೋರ್ಟ್ಗಳು, ವೀಸಾ ದಾಖಲೆಗಳು, ಶೈಕ್ಷಣಿಕ ಪ್ರಮಾಣಪತ್ರಗಳು ಇತ್ಯಾದಿಗಳನ್ನು ಸರಿಯಾದ ದಿಕ್ಕಿನಲ್ಲಿ ಇಡಬೇಕು. ಇದು ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ಅಡೆತಡೆಗಳನ್ನು ತೆಗೆದುಹಾಕುತ್ತದೆ. ನಿಮ್ಮ ವಿದೇಶ ಪ್ರವಾಸಕ್ಕಾಗಿ ಎಲ್ಲಾ ಪ್ರಮುಖ ದಾಖಲೆಗಳನ್ನು ಮನೆಯ ವಾಯುವ್ಯ ದಿಕ್ಕಿನಲ್ಲಿ (ಗಾಳಿಯ ಮೂಲೆಯಲ್ಲಿ) ಇಡಬೇಕು. ಈ ದಿಕ್ಕು ಗಾಳಿ ಮತ್ತು ಚಲನೆಗೆ ಸಂಬಂಧಿಸಿದೆ ಮತ್ತು ಪ್ರಯಾಣ ಮತ್ತು ಹೊಸ ಅವಕಾಶಗಳಿಗೆ ಅನುಕೂಲಕರವೆಂದು ಪರಿಗಣಿಸಲಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್…
ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಅವರು ಕಳೆದ ಕೆಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿ ಹಾಕದೆ ಉಮೇಶ್ ಅವರು ಕೊನೆಯುಸಿರೆಳೆದಿದ್ದಾರೆ. ಉಮೇಶ್ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಪ್ರಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಎಂ.ಎಸ್. ಉಮೇಶ್ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ತಮ್ಮ ನವಿರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸುತ್ತಿದ್ದ ಉಮೇಶ್ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಟರು. ‘ಗುರು ಶಿಷ್ಯರು’, ‘ಹಾಲು ಜೇನು’, ‘ಅಪೂರ್ವ ಸಂಗಮ’ ಸೇರಿ ಅನೇಕ ಚಿತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿದ್ದ ಉಮೇಶ್ ಅವರ ಅಗಲಿಕೆ ಕನ್ನಡ ಕಲಾಜಗತ್ತಿಗೆ ಬಹುದೊಡ್ಡ ನಷ್ಟ.ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ ಎಂದು…
ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಅವರು ಕಳೆದ ಕೆಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿ ಹಾಕದೆ ಉಮೇಶ್ ಅವರು ಕೊನೆಯುಸಿರೆಳೆದಿದ್ದಾರೆ. ಇದೀಗ ಆಸ್ಪತ್ರೆಯಿಂದ ಉಮೇಶ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಶಿಫ್ಟ್ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಅರವೀಂದ್ರ ಕಲಾಕ್ಷೇತ್ರಕ್ಕೆ ಸ್ಥಳಾಂತರಿಸಲಾಗುತ್ತದೆ. ಅಲ್ಲಿ ಸಂಜೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ನಂತರ ವಿಲ್ಸನ್ ಗಾರ್ಡನ್ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಆಕಸ್ಮಿಕ ಬೆಂಕಿ ತಗುಲೋ ಪ್ಲಾಸ್ಟಿಕ್ ಗೋಡೌನ್ ಒಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.ಇಂದು ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಆಕಸ್ಮಿಕ ಬೆಂಕಿ ತಗುಲಿ ಘಟನೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಪಿಳ್ಳಗುಂಟೆ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಡೀ ಪ್ಲಾಸ್ಟಿಕ್ ಗೋಡೌನ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ವರದಿಯಾಗಿದೆ. ಆದರೆ ಘಟನೆಯಲ್ಲಿ ಯಾವುದೇ ಸಾವನವ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ನೆಲಮಂಗಲ : ಕಳೆದ ಕೆಲವು ದಿನಗಳ ಹಿಂದೆ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದು ದುರಂತ ನಡೆದಿತ್ತು. ಇದೀಗ ಮನೆಯ ಬಳಿ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿದ ಪರಿಣಾಮ ಬಾಲಕ ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದಲ್ಲಿ ನಡೆದಿದೆ. ಎರ್ಟಿಗಾ ಕಾರು ಚಾಲಕನ ಬೇಜವಾಬ್ದಾರಿತನದ ರೀತಿಯಲ್ಲಿ ಕಾರು ಚಾಲನೆ ಮಾಡಿ ಬಾಲಕನ ಮೇಲೆ ಕಾರನ್ನು ಚಲಾಯಿಸಿದ್ದಾನೆ. ಇನ್ನೂ ಅದೃಷ್ಟವಶಾತ್ ಬಾಲಕ ಪವಾಡ ಸದೃಶ್ಯದಂತೆ ಪಾರಾಗಿದ್ದಾನೆ. ಇನ್ನೂ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರು ಹರಿಯುತ್ತಿದ್ದಂತೆ ಬಾಲಕನ ಚೀರಾಟ ಕಂಡು ಮನೆಯಿಂದ ಜನರು ಓಡಿ ಬಂದಿದ್ದಾರೆ. ಬಾಲಕನ ಮೇಲೆ ಕಾರು ಹರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮೂರು ವರ್ಷದ ದಕ್ಷಿತ್ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಾಲಕನ ತಲೆ, ಮುಖ, ಬೆನ್ನಿನ ಮೇಲೆ ಕಾರು ಹರಿದಿದೆ. ಮಾರುತಿ ಎರ್ಟಿಗಾ ಕಾರು ತಿರುವಿನಲ್ಲಿ ವೇಗವಾಗಿ ಬಂದು ಮಗುವಿನ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡ…
ಬೆಂಗಳೂರು : ದಿತ್ವಾ ಚಂಡಮಾರುತದಿಂದ ಕರ್ನಾಟಕದಲ್ಲೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ.ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬೆಂಗಳೂರು, ಯಾದಗಿರಿ ರಾಯಚೂರು, ಕೊಪ್ಪಳದಾಳಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಯಲ್ಲಿ ಮಳೆ ಆಗೋ ಸಾಧ್ಯತೆ ಇದೆ. ಅಲ್ಲದೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್ಜ್ ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್ : ಬೀದರ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಡಿಶಾ ಮೂಲದ ಪಿಕಪ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ, ಹೈದ್ರಾಬಾದ್ ನಿಂದ ಸೊಲ್ಲಾಪುರಕ್ಕೆ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿ 6.60 ಕೋಟಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಸಮೀಪ ದಾಳಿ ನಡೆಸಿದ್ದಾರೆ. ಬಸವಕಲ್ಯಾಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ವೇಳೆ 6.60 ಕೋಟಿ ರೂ. ಮೌಲ್ಯದ 660 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು, ಮಹಾರಾಷ್ಟ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು : ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರಿಗೆ ಲ್ಯಾಪ್ಟಾಪ್ ನೀಡುವ ಮೂಲಕ ಶೇ.100 ರಷ್ಟು ಇಲಾಖೆಯ ಎಲ್ಲಾ ಕೆಲಸಗಳನ್ನು ಆನ್ಲೈನ್ ಅಡಿಯಲ್ಲಿ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶನಿವಾರ ವಿಕಾಸಸೌಧದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಸಭೆ ಸಂಬಂಧ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಆಡಳಿತದಲ್ಲಿ ಪಾರದರ್ಶಕತೆ ತರಬೇಕು. ಸಚಿವರಿಂದ ವಿಎ ವರೆಗೂ ಎಲ್ಲರೂ ಇ-ಆಫೀಸ್ ಮೂಲಕವೇ ಕೆಲಸ ಮಾಡಬೇಕು. ಕಾಗದ ವ್ಯವಹಾರಕ್ಕೆ ಇತಿಶ್ರೀ ಹಾಡಬೇಕು ಎಂಬ ಏಕೈಕ ಕಾರಣಕ್ಕೆ ಕ್ಯಾಬಿನೆಟ್ ಅನುಮತಿಯೊಂದಿಗೆ ಈಗಾಗಲೇ 5000 ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ನೀಡಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರಿಗೆ (ಆರ್ಐ) ಲ್ಯಾಪ್ಟಾಪ್ ನೀಡುವ ಶೇ.100 ರಷ್ಟು ಇಲಾಖೆಯ ಎಲ್ಲಾ ಕೆಲಸಗಳನ್ನು ಆನ್ಲೈನ್ ಅಡಿಯಲ್ಲಿ ತರಲಾಗುವುದು ಎಂದರು.














