Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು ಭಾನುವಾರ ಉಡುಪಿ, ಉತ್ತರ ಕನ್ನಡ ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಗಾಳಿಯ ಪರಿಚಲನೆ 5.8 ಕಿ.ಮೀ ಎತ್ತರದಲ್ಲಿದೆ. ಪರಿಣಾಮ ಅಕ್ಟೋಬರ್ 23ರ ವರೆಗೆ ದಕ್ಷಿಣ ಒಳನಾಡಿನಲ್ಲಿ, ಕರಾವಳಿ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿ ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವು…
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಬೆಳಗಾವಿಯ ಉದ್ಯಮಿ ಸಂತೋಷ್ ಪದ್ಮಣ್ಣನವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಮನೆಯಲ್ಲಿದ್ದ 13 ಹಾರ್ಡ್ ಡಿಸ್ಕ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ವಶಕ್ಕೆ ಪಡೆದ ಹಾರ್ಡ್ ಡಿಸ್ಕ್ ನಲ್ಲಿ ಮಹಿಳೆಯರ ಜೊತೆಗೆ ಖಾಸಗಿ ಕ್ಷಣದ ಫೋಟೋ ಮತ್ತು ವಿಡಿಯೋ ಪತ್ತೆಯಾಗಿವೆ. ಉದ್ಯಮಿ ಸಂತೋಷ್ ನೂರಾರು ಮಹಿಳೆಯರೊಂದಿಗೆ ಕಳೆದ ಖಾಸಗಿ ಕ್ಷಣವನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ನಂತರ ಅವುಗಳನ್ನು ಹಾರ್ಡ್ ಡಿಸ್ಕ್ನಲ್ಲಿ ಸಂಗ್ರಹಿಸಿ ಇಡುತ್ತಿದ್ದರು. ಪೊಲೀಸರು 13 ಹಾರ್ಡ್ ಡಿಸ್ಕ್, ಮನೆಯ ಸಿಸಿಟಿವಿ ಡಿವಿಆರ್, ಮೂರು ಪೆನ್ ಡ್ರೈವ್ಗಳನ್ನು ವಶಕ್ಕೆ ಪಡೆದು, ಎಫ್ಎಸ್ಎಲ್ಗೆ ಕಳುಹಿಸಿದ್ದಾರೆ. ಪ್ರಕರಣ ಹಿನ್ನೆಲೆ ಅಕ್ಟೋಬರ್ 9ರಂದು ಸಂತೋಷ್ ಪದ್ಮಣ್ಣನವರ್ ಸಾವನಪ್ಪಿದ್ದಾರೆ. ಈ ವೇಳೆ ಕುಟುಂಬ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ವೇಳೆ ಸಂತೋಷ ಪುತ್ರಿ ತನ್ನ ತಂದೆಯ ಸಾವು ಹೃದಯಘಾತದಿಂದ ವಾಗಿಲ್ಲ ಎಂದು ಅನುಮಾನ…
ಬೆಂಗಳೂರು : ಇಂದು ಸ್ಯಾಂಡಲ್ ವುಡ್ ಬಾದ್ ಷಾ, ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಸಾವನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಅವರ ಕುಟುಂಬಕ್ಕೆ ಬಹಳ ಆತ್ಮೀಯರಾಗಿರುವಂತಹ ಸಂಸದ ಬಸವರಾಜ್ ಬೊಮ್ಮಾಯಿ ಅವರು ಇಂದು ಅವರ ಮನೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ,ಸರೋಜಕ್ಕ ನನಗೆ ಅತ್ಯಂತ ಪ್ರೀತಿ, ವಿಶ್ವಾಸ ಇದ್ದಂತಹ ವ್ಯಕ್ತಿ. ಮನೆಗೆ ಬಂದಾಗೆಲ್ಲ ಒಮ್ಮೆಯೂ ಹಾಗೆ ಕಳುಹಿಸದೆ ನಮಗೆ ಊಟ ಹಾಕಿದ್ದರು. ಅವರು ಅನ್ನಪೂರ್ಣೇಶ್ವರಿ. ಕುಟುಂಬಕ್ಕೆ ಅವರು ಆಧಾರಸ್ಥಂಭ ಆಗಿದ್ದರು. ಸುದೀಪ್ ಅವರನ್ನು ತುಂಬ ಪ್ರೀತಿಯಿಂದ ಬೆಳೆಸಿದ್ದರು ಎಂದು ಬೊಮ್ಮಾಯಿ ಹೇಳಿದ್ದಾರೆ. ನಟ ಸುದೀಪ್ ಅವರನ್ನು ಸರೋಜಕ್ಕ ಅವರು ಬಹಳ ಪ್ರೀತಿಯಿಂದ ಬೆಳೆಸಿದ್ದಾರೆ. ಪ್ರತಿಯೊಂದು ಹೆಜ್ಜೆಯಲ್ಲೂ ಸುದೀಪ್ ಅವರಿಗೆ ಅವರು ಬೆಂಬಲ ನೀಡಿದ್ದಾರೆ. ಶಾಲೆ ಕಾಲೇಜಿಗೆ ಹೋಗಬೇಕಾದರೆ ಕ್ರಿಕೆಟಡ ಬೇಕಾದರೆ ಸಿನಿಮಾ ರಂಗಕ್ಕೆ ಕಾಲಿಟ್ಟಾಗ, ಆರಂಭದ ದಿನಗಳಲ್ಲಿ ಹೋರಾಟ…
ಬೆಂಗಳೂರು : ಇಂದು ಬೆಂಗಳೂರಲ್ಲಿ ಬಿಎಂಟಿಸಿ ಬಸ್ ನಲ್ಲಿ ಸಂಚರಿಸುವಾಗ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದೆ. ಬೆಂಗಳೂರಿನ ಹೇಸರಘಟ್ಟ ರಸ್ತೆಯ ಬೋನ್ ಮಿಲ್ ಬಳಿ ಈ ಒಂದು ಘಟನೆ ನಡೆದಿದೆ. ಬಸ್ ನಲ್ಲಿ ಸುಮಾರು 2, ಮೌಲ್ಯದ 25 ಗ್ರಾಂ ಚಿನ್ನವನ್ನು ಪ್ರೇಮಮ್ಮ ಎನ್ನುವವರು ಕಳೆದುಕೊಂಡಿದ್ದಾರೆ. ಕೆ ಎ 57 ಎಫ್ 4760 ಸಂಖ್ಯೆಯ ಬಿಎಂಟಿಸಿ ಬಸ್ ನಲ್ಲಿ ಈ ಒಂದು ಘಟನೆ ನಡೆದಿದೆ.ಸಂಬಂಧಿ ನಿಖಿಲ್ ಮನೆಗೆ ಬಸ್ ನಲ್ಲಿ ಬರುತ್ತಿದ್ದಾಗ ಈ ಒಂದು ಕೃತ್ಯ ನಡೆದಿದೆ. ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ಕಾಂಗ್ರೆಸ್ ಸರ್ಕಾರ ಐದು ವರ್ಷ ಇರಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, ಬಿಲ್ಲ ರಂಗ ಜೊತೆ ಎಚ್ ಡಿ ಕುಮಾರಸ್ವಾಮಿ ಸೇರಿದ್ದಾರೆ ಎಂದು ಬಿಜೆಪಿ ಜೆಡಿಎಸ್ ಮೈತ್ರಿ ಕುರಿತು ವ್ಯಂಗ್ಯವಾಡಿದರು. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆ ಈಗ ಜೆಡಿಎಸ್ ಪಕ್ಷ ಸೇರಿಕೊಂಡಿದೆ. ಕಮಲದ ಬದಲು ಬೇರೆ ಹೆಸರಲ್ಲಿ ಆಪರೇಷನ್ ಮಾಡ್ತಾರ ನೋಡಬೇಕು. ಕಾಂಗ್ರೆಸ್ ಪಕ್ಷ ಅಷ್ಟೊಂದು ದುರ್ಬಲ ಆಗಿಲ್ಲ. ಬಿಜೆಪಿ ಜೆಡಿಎಸ್ ಪಕ್ಷ ಹಗಲು ಗನಸು ಕಾಣುವುದರಲ್ಲಿ ತಪ್ಪೇನಿಲ್ಲ ಎಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದರು. ಮುಡಾ ಕಚೇರಿಯಿಂದ ಇಡಿ ದಾಖಲೆ ತೆಗೆದುಕೊಂಡ ಹೋದ ವಿಚಾರವಾಗಿ ಇಡಿ ಅಧಿಕಾರಿಗಳು ನ್ಯೂಸ್ ಪೇಪರ್ ತೆಗೆದುಕೊಂಡು ಹೋಗಿರುತ್ತಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು 2 ಬ್ಯಾಗ್ ನಷ್ಟು ಇರಲ್ಲ. ರಾಜಕೀಯ ಲಾಭವನ್ನು ಪಡೆಯಲು ಎರಡು ಬ್ಯಾಗ್ ಪ್ರದರ್ಶನ ಮಾಡಿದ್ದಾರೆ.ಬಿಜೆಪಿ ವಿವಿಧ ಪ್ರಕರಣಗಳಲ್ಲಿ ದೋಚಿದಂತೆ ತೋರಿಕೆಗಾಗಿ…
ಬೆಂಗಳೂರು : ನವೆಂಬರ್ 13ರಂದು ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಶಿಗ್ಗಾವಿ ಸಂಡೂರು ಕ್ಷೇತ್ರಗಳಿಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದೆ. ಇನ್ನು ಚನ್ನಪಟ್ಟಣ ಜೆಡಿಎಸ್ ಗೆ ಸೇರಿದ್ದು ಯಾರಿಗೆ ಬೇಕಾದರೂ ಟಿಕೆಟ್ ಘೋಷಿಸಬಹುದು ಎಂದು ಬೆಂಗಳೂರಿನಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಜೆಡಿಎಸ್ ನವರು ಅವರಿಗೆ ಬೇಕಾದವರಿಗೆ ಟಿಕೆಟ್ ಘೋಷಿಸಬಹುದು.ಬಿಜೆಪಿ ಜೆಡಿಎಸ್ ಒಟ್ಟಾಗಿ ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲು ಶ್ರಮ ವಹಿಸುತ್ತೇವೆ. ಸಿಪಿ ಯೋಗೇಶ್ವರ್ ಸ್ಪರ್ಧೆಯ ಬಗ್ಗೆ ದೆಹಲಿಯವರು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು. ಅದರ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿ ತೀರ್ಮಾನಿಸುವಲು ಆಗುವುದಿಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೋ ಅದರಂತೆ ಮಾಡುತ್ತೇವೆ. ಜೆಡಿಎಸ್ ಚಿನ್ಹೆಯ ಅಡಿ ಬಿಜೆಪಿಯವರು ಸ್ಪರ್ಧಿಸುವ ಯೋಚನೆ ಇಲ್ಲ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅವರು ಯಾರನ್ನು ಬೇಕಾದರೂ ನಿಲ್ಲಿಸಬಹುದು ಎಂದರು. ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಹಾಡು ಹಗಲೇ 17 ವರ್ಷದ ಬಾಲಕಿಯ ಮೇಲೆ ದುರುಳನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಸದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ರವಿಕುಮಾರ್ (39) ನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಆರೋಪಿಯ ಬಳಿ 70,000 ಹಣ ಪಡೆದಿದ್ದ ಎನ್ನಲಾಗಿದೆ. ಈ ಹಿಂದೆ 30 ಸಾವಿರ ರೂಪಾಯಿಯನ್ನು ಬಾಲಕಿಯ ತಂದೆ ಸಾಲವನ್ನು ತೀರಿಸಿದ್ದ. ಇನ್ನುಳಿದ 40,000 ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಎನ್ನಲಾಗಿದೆ. ಬಾಲಕಿಯ ತಂದೆ ಹಣ ವಾಪಸ್ ನೀಡಲು ವಿಳಂಬವಾಗಿದ್ದಕ್ಕೆ ಆರೋಪಿ ರವಿಕುಮಾರ್ ಪಿಡಿಸುತ್ತಿದ್ದ.ಈ ಹಿಂದೆ ಬಲವಂತವಾಗಿ ಬಾಲಕಿಗೆ ರವಿಕುಮಾರ್ ಕಿಸ್ ಕೊಟ್ಟಿದ್ದ.ಕಿಸ್ ಕೊಟ್ಟಿರುವುದನ್ನು ರವಿಕುಮಾರ್ ಫೋಟೋ ತೆಗೆದುಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಕೂಡ ಹಾಕಿದ್ದ. ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಾಲಕಿ ನೀಡಿದ…
ಕಲಬುರ್ಗಿ : ಕಲಬುರ್ಗಿ ಜೈಲಿನಲ್ಲಿ ಕರ್ಮಕಾಂಡ ಮುಂದುವರೆದಿದ್ದು ಇದೀಗ ಜೈಲಿನಲ್ಲಿ ಮಾದಕ ವಸ್ತುಗಳಾದಂತಹ ಬೀಡಿ, ಸಿಗರೇಟ್ ಗುಟ್ಕಾ, ಪಾನ್ ಮಸಾಲಗಳಂತಹ ಮಾದಕ ವಸ್ತುಗಳು ಪತ್ತೆಯಾಗಿದ್ದು ಈ ಕುಡಿದಂತೆ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ಕಳೆದ ಕೆಲವು ದಿನಗಳ ಹಿಂದೆ ಜೈಲಿನಲ್ಲಿ ಇರುವಂತಹ ಕೆಲವು ಕೈದಿಗಳು ಮೊಬೈಲ್ ಬಳಸಿಕೊಂಡು ವಿಡಿಯೋ ಕಾಲ್ ಮಾಡುವುದರ ಮೂಲಕ ಜೈಲಿನಲ್ಲಿ ರಾಜಾರೋಷವಾಗಿ ಎಲ್ಲ ರೀತಿಯ ಅನುಕೂಲಗಳನ್ನು ಪಡೆಯುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಲಬುರ್ಗಿ ಕಮಿಷನರ್ ಡಾ.ಶರಣಪ್ಪ ಅವರ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ಮಾಡಲಾಗಿತ್ತು. ಇದೀಗ ಜೈಲಿನ ಗೋಡೆಯ ಬಳಿ ಕೆಲವು ಕೈದಿಗಳಿಗೆ ಸಂಬಂಧಪಟ್ಟವರು ಕಾಗದದಲ್ಲಿ ಬೀಡಿ, ಸಿಗರೇಟ್, ಗುಟ್ಕಾ ಹಾಗೂ ಪಾನ್ ಮಸಾಲ ಗಳನ್ನು ಉಂಡೆ ಮಾಡಿ ಚೆಂಡಿನ ರೂಪದಲ್ಲಿ ಎಸೆದು ಹೋಗುತ್ತಿರುವ ಆರೋಪ ಕೇಳಿ ಬಂದಿದೆ.ಜೈಲಿನ ಒಳಭಾಗದ ಗೋಡೆಗಳ ಬಳಿ ಚೆಂಡಿನ ಆಕಾರದ ಪ್ಲಾಸ್ಟಿಕ್ ಚೀಲಗಳಿಂದ ಮಾಡಿದ ಉಂಡೆಗಳು ಪತ್ತೆಯಾಗಿದ್ದು, ಈ ಉಂಡೆಗಳಲ್ಲಿ ತಂಬಾಕು, ಗುಟ್ಕಾ, ಬೀಡಿ,…
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟರಾಗಿ ಗುರುತಿಸಿಕೊಂಡಿರುವ ಗುರುಪ್ರಸಾದ ಅವರ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ಹೌದು ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 2019ರಲ್ಲಿ ಟೋಟಲ್ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು.75 ಪುಸ್ತಕಗಳ ಐದು ಸೆಟ್ ಖರೀದಿಸಿದ್ದರಂತೆ. ಒಂದು ಸೆಟ್ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕು ಎಂದು ದೂರಿನಲ್ಲಿ ಉಲ್ಲೇಖಸಿದ್ದಾರೆ. ಇದಾದ ಬಳಿಕ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ಅವರಿಗೆ ಈ…
ಬೆಂಗಳೂರು : ಸಾಮಾನ್ಯವಾಗಿ ಮಹಿಳೆಯರು ಎಲ್ಲೇ ಸಭೆ ಸಮಾರಂಭಕ್ಕೆ ತೆರಳುವಾಗ ಚಿನ್ನ ಧರಿಸುವುದು ರೂಢಿ. ಆದರೆ ರಸ್ತೆಯಲ್ಲಿ ಹೋಗುವಾಗ ಮಾತ್ರ ತುಂಬಾ ಎಚ್ಚರದಿಂದ ಇರಬೇಕು. ಇದೀಗ ಬೆಂಗಳೂರಿನಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಮೇಲಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಳ್ಳರು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ಪಲ್ಸರ್ ಬೈಕ್ ನಲ್ಲಿ ಬಂದಂತಹ ಇಬ್ಬರು ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಮತ್ತು ಹಾರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಓಬಳಾಪುರ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. 7 ಲಕ್ಷಕ್ಕೂ ಹೆಚ್ಚು ಮೌಲ್ಯದ 90 ಗ್ರಾಂ ತೂಕದ ಚಿನ್ನಾಭರಣ ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಒಬಳಾಪುರ ಗ್ರಾಮದ ನಿವಾಸಿ ವನಿತ ಚಿನ್ನಾಭರಣ ಕಳೆದುಕೊಂಡ ಮಹಿಳೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














