Subscribe to Updates
Get the latest creative news from FooBar about art, design and business.
Author: kannadanewsnow05
ಕೊಪ್ಪಳ : ಮನೆಯಲ್ಲಿ ಗ್ಯಾಸ್ ಗೀಸರ್ ಸ್ಫೋಟಗೊಂಡು ಮನೆಯಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗಂಗಾವತಿ ನಗರದ ಸಾರಿಗೆ ಬಸ್ ಡಿಪೋ ಸಮೀಪದ ಕಾಲೋನಿಯಲ್ಲಿ ನಡೆದಿದೆ. ಘಟನೆಯಲ್ಲಿ ಕವಿತಾ, ಪ್ರೀತಿ, ಶೋಭಾ, ಶೃತಿ, ಭಾಗ್ಯಮ್ಮ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕವಿತಾ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೇ ಇನ್ನುಳಿದವರನ್ನು ಗಂಗಾವತಿಯ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಡೆಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ ಹಾಗೂ ಗಂಗಾವತಿ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಈಗಾಗಲೇ ಜಾತಿನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಬಂದಿದ್ದು, ಮಾಜಿ ಕಾರ್ಪೊರೇಟರ್ ಒಬ್ಬರ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಸ್ಫೋಟಕವಾದ ಆರೋಪ ಕೇಳಿ ಬಂದಿದೆ. ಹೌದು ಶಾಸಕ ಮುನಿರತ್ನ ಅವರ ವಿರುದ್ಧ ಒಂದು ಗಂಭೀರವಾದ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ವತಃ ಮಾಜಿ ಕಾರ್ಪೊರೇಟರ್ ಮಂಜುಳಾ ಹಾಗೂ ಅವರ ಪತಿ ಲಗ್ಗೆರೆ ನಾರಾಯಣ ಸ್ವಾಮಿ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ವಿರುದ್ಧ ಶಾಸಕ ಮುನಿರತ್ನ ಹನಿ ಟ್ರ್ಯಾಪ್ ಮಾಡಿಸಿದ್ದರು ಎಂಬ ಸ್ಪೋಟಕ ಆರೋಪ ಮಾಡಿದರು. ಮುನಿರತ್ನ ಶಾಸಕನಾಗಿ ಹನಿ ಟ್ರ್ಯಾಪ್ ಮಾಡುವ ಕೆಲಸ ಮಾಡ್ತಿದ್ದ ಜನ ಸಾಮಾನ್ಯರಿಂದ ಹಿಡಿದು ರಾಜ್ಯದ ಓರ್ವ ಮುಖ್ಯ ಮಂತ್ರಿಯವರೆಗೆ ಹನಿ ಟ್ರ್ಯಾಪ್ ಮಾಡಿದ್ದಾನೆ ಎಂದು ಶಾಸಕ…
ನವದೆಹಲಿ : ರಾಜ್ಯಾಧ್ಯಕ್ಷರ ನಾಯಕತ್ವದ ವಿರುದ್ಧ ನಿಲುವು ತೋರಿದ್ದರೆ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯು ಕಾರಣ ನೀಡುವಂತೆ ನೋಟಿಸ್ ನೀಡಿದೆ. ಈ ವಿಚಾರವಾಗಿ ಶಾಸಕ ಯತ್ನಾಳ್ ನನಗೆ ಬಿಜೆಪಿಯಿಂದ ಅಧಿಕೃತವಾಗಿ ಯಾವುದೇ ನೋಟಿಸ್ ಬಂದಿಲ್ಲ. ವಾಟ್ಸಾಪ್ನಲ್ಲಿ ಬಂದಿರುವಂತಹ ನೋಟಿಸ್ ಅನ್ನು ಅವರೆ ಕಳಿಸಿದ್ದಾರೆ ಎಂದು ಹೇಗೆ ನಂಬಲಿ? ನನಗೆ ಬಂದಿರುವಂತಹ ನೋಟೀಸ್ ಡುಬ್ಲಿಕೇಟ್ ಆಗಿದ್ದು, ಇದೆಲ್ಲ ವಿಜಯೇಂದ್ರನದ್ದೇ ಕೆಲಸ ಎಂದು ಸ್ಪೋಟಕ ಹೇಳಿಕೆ ನೀಡಿದರು. ನವದೆಹಲಿಯಲ್ಲಿ ಮಾತನಾಡಿರುವ ಅವರು, ನನಗೆ ಇಲ್ಲಿಯವರೆಗೆ ಮೂರು ಸಲ ನೋಟಿಸ್ ಕೊಟ್ಟಿದ್ದಾರೆ. ಎರಡು ಸಲ ಉತ್ತರ ಕೊಟ್ಟಿದ್ದೇನೆ. ಇದೀಗ ಮೂರನೇ ಬಾರಿ ಬಂದಿರುವಂತ ನೋಟಿಸ್ ಡುಬ್ಲಿಕೇಟ್ ಇದೆ ಅಂತ ಅನಿಸುತ್ತಿದೆ. ಆವಾಗ ನಾನು ಉತ್ತರನೇ ಕೊಡಲಿಲ್ಲ. ನನಗೆ ಗೊತ್ತಾಯ್ತು ಇದು ವಿಜಯೇಂದ್ರ ಮಾಡಿಸಿರುವ ಕೆಲಸ ಇರಬಹುದು ಅಂತ ಅನಿಸಿದೆ ಎಂದು ವಾಗ್ದಾಳಿ ನಡೆಸಿದರು. ನೋಟಿಸ್ ಅಧಿಕೃತವಾಗಿ ನನಗೆ ಮೇಲ್ ಮೂಲಕ ಬಂದಿಲ್ಲ. ಅಥವಾ ಪೋಸ್ಟ್ ಮೂಲಕವು…
ಬೆಳಗಾವಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಬಿವೈ ವಿಜಯೇಂದ್ರ ನಡುವಿನ ಬಡಿದಾಟ ಇದೀಗ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು, ರಾಜ್ಯಾಧ್ಯಕ್ಷ ನಾಯಕತ್ವವನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದು, ಹೈಕಮಾಂಡ್ಗೆ ಯಾವ ರೀತಿ ಉತ್ತರ ನೀಡಬೇಕು ನೀಡುತ್ತೇವೆ ಆದರೆ ಪಾಪ ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಕೂಡಲೇ ಸ್ಥಾನವನ್ನು ಬಿಡಲಿ ಎಂದು ಸಲಹೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈ ಕಮಾಂಡ್ ಗೆ ಸಮರ್ಥವಾದ ಉತ್ತರ ಕೊಡುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ವಿಜಯೇಂದ್ರ ಅವರು ಪಾಪ ಸಣ್ಣ ಹುಡುಗ ಅವನು ರಾಜ್ಯಾಧ್ಯಕ್ಷ ಸ್ಥಾನ ತ್ಯಾಗ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ. ಅವನಿಗೆ ರಾಜಕಾರಣ ಗೊತ್ತಿಲ್ಲ. ಬಿ.ಎಸ್ ಯಡಿಯೂರಪ್ಪ ಹುಟ್ಟು ಹೋರಾಟಗಾರ ಅವರಿಗೆ ಎಲ್ಲವೂ ಗೊತ್ತಿದೆ. ಆದರೆ ವಿಜಯೇಂದ್ರ ಸಣ್ಣ ಹುಡುಗ ಮುಂದೆ ಭವಿಷ್ಯದಲ್ಲಿ ಅವರು ರಾಜ್ಯಾಧ್ಯಕ್ಷ ಆಗಲಿ ಎಂದು ಸಲಹೆ…
ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ FIR ದಾಖಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿ ಎಂದು ಪೊಲೀಸರು ಎರಡು ದಿನಗಳ ಹಿಂದೆ ನೋಟಿಸ್ ನೀಡಿದ್ದರು. ಈ ವಿಚಾರವಾಗಿ ಚಂದ್ರಶೇಖರನಾಥ ಸ್ವಾಮೀಜಿಯವರು ನಾನು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹುಷಾರಿಲ್ಲ ಎಲ್ಲಿಗೂ ಹೋಗುವುದಕ್ಕೆ ಆಗುತ್ತಿಲ್ಲ. ಹೀಗಾಗಿ ನಾನು ಇಂದು ವಿಚಾರಣೆಗೆ ಹಾಜರಾಗುವುದಿಲ್ಲ. ಮಠದವರೆಗೂ ಬಂದು ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ಮಠಕ್ಕೆ ಬಂದರೆ ಹೇಳಿಕೆ ಕೊಡುತ್ತೇನೆ ಎಂದು ಅವರು ತಿಳಿಸಿದರು. ಎಂತೆಂತಹ ವಿಷಯಗಳಲ್ಲಿ ಏನು ಮಾಡಲ್ಲ. ಆದರೆ ನನ್ನ ವಿಚಾರಕ್ಕೆ ಕೇಸ್ ಹಾಕಿದ್ದಾರೆ ಎಂದು ಪೊಲೀಸ್ ಇಲಾಖೆಯ ವಿರುದ್ಧ ಚಂದ್ರಶೇಖರನಾಥ ಸ್ವಾಮೀಜಿ ಅಸಮಾಧಾನ ಹೊರಹಾಕಿದರು. ಎಚ್ ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ. ವಿಧಾನಸೌಧದಲ್ಲಿ ಪಾರ್ಕ್…
ತುಮಕೂರು : ಇಂದು ನಸುಕಿನ ಜಾವ 4 ಗಂಟೆಗೆ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ನಡೆದಿದ್ದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ಹೇಮಾವತಿ ನಾಲೆಗೆ ಉರುಳಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕಲ್ಲಹಳ್ಳ ಬಳಿ ನಡೆದಿದೆ. ಹೌದು ನಿಯಂತ್ರಣ ತಪ್ಪಿ ಹೇಮಾವತಿಗೆ ನದಿ ನಾಲೆಗೆ ಕೆಎಸ್ಆರ್ಟಿಸಿ ಬಸ್ ಒಂದು ಉರುಳಿದೆ. ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದಂತ ಗಾಯಗಳಾಗಿವೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡ ಕಲ್ಲಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್ ಕಡೆಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಹೇಮಾವತಿ ನದಿ ನಾಲೆಗೆ ಬಸ್ ನುಗ್ಗಿದೆ. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕುಣಿಗಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಪರಿಶೀಲನೆ…
ಉತ್ತರಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಹೈದರಾಬಾದ್ ನಲ್ಲಿ ಒಮ್ಮೆಲೆ ಮೂರು ಪೂರಿ ತಿನ್ನಲು ಹೋಗಿ ಗಂಟಲಲ್ಲಿ ಸಿಲುಕಿ ಬಾಲಕನೊಬ್ಬ ಸಾವನ್ನಪ್ಪಿದ್ದ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ನವೀನ್ ನಾರಾಯಣ್ ಬೆಳಗಾವ್ಕರ್ (13) ಎನ್ನುವ ಬಾಲಕ ಮೃತ ದುರ್ದೇವಿ ಎಂದು ತಿಳಿದುಬಂದಿದೆ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನವೀನ್ ನಾರಾಯಣ್ ಬೆಳಗಾಂವ್ಕರ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಬಲೂನ್ ಊದುವಾಗ ಒಮ್ಮೆಲೇ ಗಂಟಲಲ್ಲಿ ಸಿಲುಕಿ ದುರಂತ ಸಂಭವಿಸಿದೆ. ಉಸಿರು ತೆಗೆದುಕೊತ್ತಿರುವಾಗಲೇ ಗಂಟಲಲ್ಲಿ ಬಲೂನ್ ಸಿಲುಕಿದೆ. ಉಸಿರುಗಟ್ಟಿ ನಾರಾಯಣ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಬಾಯಲ್ಲಿ ಊದುವಾಗ…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಒಂದು ನೋಟಿಸ್ ಗೆ ಶಾಸಕ ತಾಳವರು ಟ್ವೀಟ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲರಿಗೆ ನೋಟಿಸ್ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ…
ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳ ಬೆಳಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಬೆಳಿಗ್ಗೆ ಎದ್ದು ಮನೆಯಲ್ಲಿ ಲೈಟ್ ಹಾಕುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಬಾಗಿಲು ಪೀಸ್ ಪೀಸ್ ಆಗಿವೆ. ಗಾಯಾಳುಗಳಿಗೆ ಕೂಡಲೇ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪಾಸ್ ಪೋರ್ಟ್ ನೆಪದಲ್ಲಿ ಯುವತಿ ಒಬ್ಬಳಿಗೆ ಕಾನ್ಸ್ಟೇಬಲ್ ಒಬ್ಬ ಮನೆಗೆ ಬಂದು ಒಂದೇ ಒಂದು ಬಾರಿ ತಬ್ಬಿಕೋ, ಯಾರಿಗೂ ಹೇಳಲ್ಲ ಎಂದು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಯುವತಿಯ ದೂರಿನ ಮೇರೆಗೆ ಇದೀಗ ಕಾನ್ಸ್ಟೇಬಲ್ ಕಿರಣನ್ನು ಅಮಾನತುಗೊಳಿಸಿ ಪಶ್ಚಿಮ ವಿಭಾಗದ ಡಿಸಿಪಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಬಾಪೂಜಿ ನಗರದ ಯುವತಿ ಒಬ್ಬಳು ಪಾಸ್ ಪೋರ್ಟ್ ಗಾಗಿ ಇತ್ತೀಚಿಗೆ ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಕಾನ್ಸ್ಟೇಬಲ್ ಕಿರಣ್ ಡಾಕುಮೆಂಟ್ಸ್ ವೆರಿಫಿಕೇಶನ್ ನೆಪದಲ್ಲಿ ಎರಡು ಮೂರು ಬಾರಿ ಯುವತಿಯ ಮನೆಗೆ ತೆರಳಿದ್ದಾನೆ. ಈ ವೇಳೆ ಯುವತಿಯೊಂದಿಗೆ ಕಿರಣ್ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿಯು ದೂರಿನಲ್ಲಿ ಆರೋಪಿಸಿದ್ದಾಳೆ. ನಿನ್ನೆ ಕೂಡ ಕಿರಣ್ ಯುವತಿಯ ಮನೆಗೆ ಬಂದಿದ್ದಾನೆ. ಈ ವೇಳೆ ನಿನ್ನ ಅಣ್ಣ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾನೆ. ನನಗೆ ಸಹಕರಿಸದಿದ್ದರೆ ಪಾಸ್ಪೋರ್ಟ್ ಕ್ಯಾನ್ಸಲ್ ಮಾಡುವುದಾಗಿ ಹೇಳಿ ಒಂದೇ ಒಂದು ಬಾರಿ ತಬ್ಬಿಕೋ ಯಾರಿಗೂ ಹೇಳಲ್ಲ ಎಂದು ಹೇಳಿದ್ದಾನೆ.ಯುವತಿ ಒಪ್ಪದಿದ್ದಾಗ ತಾನೇ ಹೋಗಿ…













