Author: kannadanewsnow05

ದಾವಣಗೆರೆ : ಸಿದ್ದರಾಮಯ್ಯನದ್ದು ಟಿಪ್ಪು ಸಂಸ್ಕೃತಿ, ಮುಸ್ಲಿಮರು ಏನೇ ಕೇಳಿದರು ಕೊಟ್ಟುಬಿಡುತ್ತಾಮೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಆರ್ ಅಶೋಕ್ ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಮುಸ್ಲಿಂರು ನಾಲ್ಕು ಕೇಳಿದರೆ ಎಂಟು ಕೊಡುತ್ತಾನೆ. ಉತ್ತರ ಕರ್ನಾಟಕದ ಅವನ್ಯಾರು ಮಾಜಿ ಸಚಿವ ಹೇಳಿದ್ದಾನಲ್ಲ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಎಲ್ಲವನ್ನು ಬಾಚಿಕೊಳ್ಳಿ ಎಂದು ಹಾಗಾಗಿ ಸಿದ್ದರಾಮಯ್ಯ ಮುಸ್ಲಿಮರು ನಾಲ್ಕು ಕೇಳಿದರೆ ಎಂಟು ಕೊಡುತ್ತಾನೆ ಎಂದು ಏಕವಚನದಲ್ಲಿ ವಾಗ್ದಾಳಿ ಮಾಡಿದರು.

Read More

ಮೈಸೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಶಾಸಕ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ. ಇದೀಗ ಮೈಸೂರಿನಲ್ಲಿ ವಾಲ್ಮೀಕಿ ಜಯಂತಿ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಬಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಹೌದು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನಲ್ಲಿ ನಡೆದ ಸಮಾವೇಶ ಒಂದರಲ್ಲಿ ಮಾತನಾಡಿದ ಅವರು, ಶಾಸಕ ಚಿಕ್ಕಮಾದು ಅಭಿಮಾನಿಗಳು ಅವರಿಗೆ ಸಚಿವ ಸ್ಥಾನ ನೀಡಿ ಎಂದು ಮನವಿ ಮಾಡಿದರು.ಇದಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸ್ಥಾನ ಎಲ್ಲಿ ಖಾಲಿ ಇದೆ? ಹಾಗಾಗಿ ಚಿಕ್ಕ ಮಾದುಗೆ ಸಚಿವ ಸ್ಥಾನ ನೀಡಲು ಸದ್ಯಕ್ಕೆ ಆಗಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗವಾಗಿದೆ. ಆ ಪ್ರಕರಣದ ತನಿಖೆ…

Read More

ಬೆಂಗಳೂರು : ಕೊರೋನ ಹಗರಣದ ಮತ್ತೊಂದು ಸ್ಪೋಟಕ ವರದಿ ಬಹಿರಂಗವಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ನ್ಯಾ.ಕುನ್ಹ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಇಬ್ಬರ ವಿರುದ್ಧ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ಬಿಎಸ್ ಯಡಿಯೂರಪ್ಪ ಹಾಗೂ ಶ್ರೀರಾಮುಲು ಕಾರ್ಯವೈಖರಿಗೆ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಕೊರೊನ ವೇಳೆ ಖಾಸಗಿ ಲ್ಯಾಬ್ ಗಳಿಗೆ 6.93 ಕೋಟಿ ಹಣ ಸಂದಾಯವಾಗಿದೆ. ಆದರೆ ಖಾಸಗಿ ಲ್ಯಾಬ್ ಗಳು ICMR ನಿಂದ ಮಾನ್ಯತೆ ಪಡೆದಿಲ್ಲ. ಅಧಿಕೃತ ICMR ಲ್ಯಾಬ್ ಗಳು ಅಲ್ಲ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. RTPCR ಟೆಸ್ಟಿಗೆ ಲ್ಯಾಬ್ ಗಳ ಸಾಮರ್ಥ್ಯ ಕ್ಷಮತೆ ಗುರುತಿಸಿಲ್ಲ. ಸಾಮರ್ಥ್ಯ ಹಾಗೂ ಕ್ಷಮತೆ ಪರಿಶೀಲಿಸದೆ ಖಾಸಗಿ ಲ್ಯಾಬ್ ಗೆ ಅನುಮತಿ ನೀಡಲಾಗಿದೆ. 6 ಲ್ಯಾಬ್ ಗಳಿಗೆ ಒಪ್ಪಂದವಿಲ್ಲದೆ ಹಣ ಸಂದಾಯ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅನಧಿಕೃತವಾಗಿ ಲ್ಯಾಬ್ ಗಳಿಗೆ ಹಣ ಸಂದಾಯದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. 8 ಲ್ಯಾಬ್ ಗಳಿಗೆ ಅನುಮತಿ ಪಡೆಯದೆ 4.28…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ದಂಧೆ ಮುಂದುವರೆದಿದ್ದು, ಇದೀಗ ಬಡ್ಡಿ ಹಣ ನೀಡಿಲ್ಲ ಎಂದು ಯುವಕನಿಗೆ ಥಳಿಸಿದ ಆರೋಪ ಕೇಳಿಬಂದಿದೆ. ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹುಬ್ಬಳ್ಳಿಯ ಪಿಂಜಾರ ಓಣಿಯ ನಿವಾಸಿ ಸಾಬಿರ್ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಮದುವೆಗೆ ಎಂದು ಪ್ರಕಾಶ್ ಅಂಬಿಗೇರ ಬಳಿ ಸಾಬೀರ್ 80,000 ಹಣವನ್ನು ಸಾಲವಾಗಿ ಪಡೆದುಕೊಂಡಿದ್ದ. ಒಂದುವರೆ ವರ್ಷದ ಹಿಂದೆ ತಿಂಗಳ ಬಡ್ಡಿಗೆ ಹಣ ಪಡೆದಿದ್ದ. ಈಗ ದಿನಕ್ಕೆ ರೂ.1,000 ನೀಡುವಂತೆ ಪ್ರಕಾಶ್ ಪಿಡಿಸುತ್ತಿದ್ದಾನೆ. ದುಡಿಮೆ ಇಲ್ಲ ಹಣ ನೀಡುವೆ ಅಂದರು ಸಹ ಮನೆಯಿಂದ ಕರೆದುಕೊಂಡು ಹೋಗಿ ಹಲ್ಲೆ ಮಾಡಿದ್ದಾನೆ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ನನಗೆ ಏನಾದರೂ ಆದರೆ ಪ್ರಕಾಶ್ ಅಂಬಿಗೇರ್ ಕಾರಣ ಎಂದು ಸಾಬೀರ್ ತಿಳಿಸಿದ್ದಾನೆ. ಮೀಟರ್ ದಂಧೆ ವಿರುದ್ಧ ಹುಬ್ಬಳ್ಳಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಲಾಗಿದ್ದು, ಆದರೂ ಕೂಡ ಮೀಟರ್ ಬಡ್ಡಿ ದಂಧೆ ನಿಂತಿಲ್ಲ.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೆ ಇಡಿ ಅಧಿಕಾರಿಗಳು ಸಹ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದರು. ಈ ವಿಚಾರವಾಗಿ ಯತಿಂದ್ರ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದೀಗ ಕೋರ್ಟ್ ಗಳು ಸಹ ಕೇಂದ್ರ ಸರ್ಕಾರ ಹೇಳಿದಂತೆ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದ್ದಾರೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು , ಕೋರ್ಟ್ಗಳು ಸಹ ಕೇಂದ್ರದ ಮಾತನ್ನು ಕೇಳುವ ಪರಿಸ್ಥಿತಿ ಬಂದಿದೆ. ನಾವು ತಪ್ಪು ಮಾಡಿಲ್ಲ ನಮಗೆ ತನಿಖೆಯ ಬಗ್ಗೆ ಯಾವುದೇ ಭಯ ಇಲ್ಲ. ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಡಾ.ಯತಿಂದ್ರ ಹೇಳಿಕೆ ನೀಡಿದರು. ಇಡಿ, ಸಿಬಿಐ, ಐಟಿ ಎಲ್ಲವೂ ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿವೆ. ಎಲ್ಲ ಸಂಸ್ಥೆಗಳು ಅದರ ನಿಯಂತ್ರಣದಲ್ಲಿವೆ. ಕೇಂದ್ರ ಸರ್ಕಾರ ಏನು ಹೇಳುತ್ತದೆ ಅದೇ ರೀತಿ ತನಿಖೆ…

Read More

ಕೊಡಗು : ಆಹಾರವನ್ನು ಅರಸಿ ಕಾಡಿನಿಂದ ಹುಲಿ ಒಂದು ತಪ್ಪಿಸಿಕೊಂಡು ನಾಡಿಗೆ ಬಂದಿದೆ. ಹೌದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಯ ಅಕ್ಕಪಕ್ಕ ಹುಲಿ ಸಂಚರಿಸಿದ್ದು, ಈ ಕುರಿತು ಹುಲಿಯ ಹೆಜ್ಜೆಗಳು ಸಹ ಮೂಡಿವೆ. ಇದರಿಂದ ಮಕ್ಕಳು ಶಾಲೆಗೆ ಬರುವಾಗ ಮತ್ತು ಶಾಲೆಯಿಂದ ಮನೆಗೆ ಹೋಗುವಾಗ ಭಯದಲ್ಲಿ ಓಡಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ಹುಲಿ ಭಯ ಶುರುವಾಗಿದೆ. ವಿರಾಜಪೇಟೆಯ ಚಂಬೇಬೆಳ್ಳೂರಿನಲ್ಲಿ ಹುಲಿ ಸಂಚರಿಸಿದೆ. ಸರ್ಕಾರಿ ಶಾಲೆಯ ಪಕ್ಕದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ. ಗ್ರಾಮದ ನಾಲ್ಕು ಕಡೆಗಳಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ. ಹುಲಿ ಒಂದು ಹೊಸ ಒಂದು ಕರು ಕೊಂದಿದೆ. ಹುಲಿಯನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯ ಪೊಲೀಸರು ಮುಂಬೈನಲ್ಲಿ ನೇಪಾಳಿ ಗ್ಯಾಂಗಿನ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಅವರ ಮನೆಯಲ್ಲಿ ಕೆಲಸಕ್ಕೆ ಇದ್ದಂತಹ ನೇಪಾಳ ಮೂಲದ ಗಣೇಶ್ ಹಾಗೂ ಗೀತಾ ಎನ್ನುವವರು ನಾಗೇಶ್ ಅವರ ಮನೆಯಲ್ಲಿದ್ದ ಕೋಟ್ಯಾಂತರ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದು, ಇನ್ನು ದಂಪತಿ ಗಣೇಶ್ ಹಾಗೂ ಗೀತಾಳಿಗೆ ಶೋಧಕಾರ್ಯ ಮುಂದುವರೆದಿದೆ. ಈ ಕುರಿತು ಥೀಯೇಟರ್ ಮಾಲೀಕ ನಾಗೇಶ್ ಅವರು ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಮುಂಬೈನಲ್ಲಿ ನೇಪಾಳಿ ಗ್ಯಾಂಗ್ನ ಮೂವರನ್ನು ಬಂಧಿಸಿದ್ದಾರೆ.ಸಿಸಿಟಿವಿ ಹಾಗೂ ಮೊಬೈಲ್ ನೆಟ್ವರ್ಕ್ ಆಧರಿಸಿ ಕಾರ್ಯಾಚರಣೆ ಮಾಡಿ ಅರೆಸ್ಟ್ ಮಾಡಿದ್ದಾರೆ. ಪ್ರಕಾಶ್ ಶಾಹಿ ಅಪಿಲ್ ಶಾಹಿ ಹಾಗೂ ಜಗದೀಶ್…

Read More

ಬೆಂಗಳೂರು : ಮನೆ ಮಾರಿದ ಹಣಕ್ಕಾಗಿ ಹೆತ್ತ ತಾಯಿಯನ್ನೇ ಮಗನೊಬ್ಬ ಭೀಕರವಾಗಿ ಕೊಲೆ ಮಾಡಿದ್ದಾನೆ. ಇದಕ್ಕೆ ಮಗನಿಗೆ ಕೈ ಜೋಡಿಸಿದ ಸ್ನೇಹಿತ ಕೂಡ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಒಂದು ಘಟನೆ ಬೆಂಗಳೂರಿನ ಹೊಂಗಸಂದ್ರದಲ್ಲಿ ನಡೆದಿದೆ. ಹೌದು ಜಯಮ್ಮ (45) ಎಂಬಾಕೆಯನ್ನು ಮಾರಕಾಸ್ತ್ರದಿಂದ ಹೊಡೆದು, ತಲೆಯನ್ನು ಗೋಡೆಗೆ ಗುದ್ದಿ ಹತ್ಯೆಗೈದಿದ್ದ ಮಗ ಉಮೇಶ್ ಹಾಗೂ ಮತ್ತೋರ್ವನನ್ನು ಬಂಧಿಸಲಾಗಿದೆ. ಬೊಮ್ಮನಹಳ್ಳಿ ವ್ಯಾಪ್ತಿಯ ಹೊಂಗಸಂದ್ರದ ಮನೆಯಲ್ಲಿ ಶನಿವಾರ ಘಟನೆ ನಡೆದಿತ್ತು.ಕೊಲೆಯಾದ ಜಯಮ್ಮ ಅವರಿಗೆ ಇಬ್ಬರು ಮಕ್ಕಳು ಎರಡನೆಯ ಮಗ ಗಿರೀಶ್ ಕೆಎಸ್ಆರ್ಟಿಸಿ ಸಂಸ್ಥೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಇನ್ನು ಕೊಲೆಗೈದ ಮೊದಲನೇ ಮಗ ಉಮೇಶ್ ತಾಯಿಗೆ ತಮ್ಮನ ಮೇಲೆ ಪ್ರೀತಿ ಇದೆ ಮತ್ತು ನನ್ನ ಮೇಲೆ ಇಲ್ಲ ಎಂದು ಸದಾ ಗಲಾಟೆ ಮಾಡುತ್ತಿದ್ದ.ಹಾಗಾಗಿ ಮೊದಲ ಮಗ ಉಮೇಶನನ್ನು ಮನೆಯಿಂದ ಹೊರಹಾಕಿದ್ದ ಜಯಮ್ಮ, ಮನೆ ಮಾರಾಟ ಮಾಡಿ ಕಿರಿಯ ಪುತ್ರನೊಂದಿಗೆ ಹೊಂಗಸಂದ್ರದಲ್ಲಿ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯರಾತ್ರಿ ಉಮೇಶ್ ತನ್ನ ಸ್ನೇಹಿತನೊಂದಿಗೆ ಬಂದು ತಾಯಿಯನ್ನು ಕೊಂದು ಪರಾರಿಯಾಗಿದ್ದ.…

Read More

ಮಂಡ್ಯ : ದೇಗುಲದ ಗೇಟ್ ಬಿದ್ದು ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಂಜನಕೆರೆ ಗ್ರಾಮದ ಚೆನ್ನಕೇಶವ ದೇಗುಲದಲ್ಲಿ ಈ ಒಂದು ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ನಿನ್ನೆ ಕುಟುಂಬಸ್ಥರ ಜೊತೆಗೆ ಬಾಲಕ HS ಜಿಷ್ಣು (5) ದೇವಸ್ಥಾನಕ್ಕೆ ಬಂದಿದ್ದ. ಗ್ರಾಮದ ಚೆನ್ನಕೇಶವ ದೇಗುಲಕ್ಕೆ ಎಚ್ ಎಸ್ ಜಿಷ್ಣು ತೆರಳಿದ್ದ. ಈ ವೇಳೆ ದೇಗುಲದ ಗೇಟ್ ಬಿದ್ದು ಬಾಲಕ ಗಾಯಗೊಂಡಿದ್ದ. ಕೂಡಲೇ ಬಾಲಕನ ಪೋಷಕರು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದಾರೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಜಿಷ್ಣು ಕೊನೆಯಯುಸಿರೆಳಿದಿದ್ದಾನೆ. ಘಟನೆ ಕುರಿತಂತೆ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಜರಾಯಿ ಇಲಾಖೆ ವಿರುದ್ಧ ಪೋಷಕರು ಇದೀಗ ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು : ಕಳೆದ ಒಂದು ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇದುವರೆಗೂ 140 ಕೆಜಿ ಗಾಂಜಾ ವನ್ನು ಜಪ್ತಿ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ವಿದೇಶಿ ಪ್ರಜೆಗಳು ಸೇರಿದಂತೆ 64 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಮಾಹಿತಿ ನೀಡಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ 42 ಪ್ರಕರಣ ದಾಖಲಾಗಿವೆ. ಬಂಧಿತ ಎಲ್ಲ ಆರೋಪಿಗಳಿಂದ 140 ಕೆಜಿ ಗಾಂಜಾ, 1 ಕೆಜಿ ಗಾಂಜಾ ಆಯಿಲ್, 609 ಗ್ರಾಂ ಆಫೀಮು, 770 ಗ್ರಾಂ ಹೆರಾಯಿನ್, 2ಕೆಜಿ 436 ಗ್ರಾಂ ಚರಸ್, 509 ಗ್ರಾಂ ಕೊಕೇನ್, 5 ಕೆಜಿ 397 ಗ್ರಾಂ ಎಂಡಿಎಂಎ, 2569 LSD ಸ್ಟ್ರಿಪ್, 6 ಕೆಜಿ 725 ಗ್ರಾಂ ಅಂಫಟಮೈನ್, 11,908 ಎಕ್ಸ್ ಟೆಸಿ ಮಾತ್ರೆ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

Read More