Author: kannadanewsnow05

ಬೆಂಗಳೂರು : ತನ್ನ ಅಜ್ಜಿ ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲವೆಂದು ಮನನೊಂದ ಯುವಕನೊಬ್ಬ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲಲ್ ಶಿವನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪೃಥ್ವಿ (20) ಎಂದು ತಿಳಿದುಬಂದಿದೆ. ಯುವಕ ಡಿಗ್ರಿ ಓದುತ್ತಿದ್ದು ಅದರ ಜೊತೆಗೆ ಚಾಲಕನಾಗಿಯೂ ಕೂಡ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ತಾಯಿ ಪದ್ಮ ಕೋಣೆಗೆ ಹೋಗಿ ನೋಡಿದಾಗ ಪೃಥ್ವಿ ಫ್ಯಾನಿಗೆ ನೇಣು ಹಾಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಜಿ ಕುಳಯಮ್ಮ ಮತ್ತಿಕೆರೆಯ ಮನೆಯೊಂದನ್ನ ತನ್ನ ಮಗನ ಮಕ್ಕಳಿಗೆ ಆಸ್ತಿ ಕೊಡದೆ ಹೆಣ್ಣು ಮಗಳಿಗೆ ಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ವಿಷಯವಾಗಿ ಸಂಬಂಧಿಕರನ್ನ ಸೇರಿಸಿ ಮಾತುಕತೆ ಮಾಡಲಾಗಿದ್ದು, ಆದರೆ ಮಾತುಕತೆ ವಿಫಲವಾಗಿದೆ. ಈ ಘಟನೆಯಿಂದ ಮನನೊಂದ ಪೃಥ್ವಿ, ಮನೆಯ ಕೋಣೆಯಲ್ಲಿ ವೇಲ್​ ಬಳಸಿ ಪ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಪ್ಪಳ : ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ಒಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬೆಲೆಗೆ ಬಿದ್ದಿರುವ ಘಟನೆ ಕೊಪ್ಪಳದ ತೋಟಗಾರಿಕಾ ಇಲಾಖೆಯ ಕಛೇರಿಯಲ್ಲಿ ನಡೆದಿದೆ. ಹೌದು 1 ಲಕ್ಷ ಲಂಚ ಸ್ವೀಕರಿಸುವಾಗ ಹಿರಿಯ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ತೋಟಗಾರಿಕೆ ಕಚೇರಿಯಲ್ಲಿ ಅಧಿಕಾರಿ ಬಲೆಗೆ ಬಿದ್ದಿದ್ದಾರೆ.ಹಿರಿಯ ಸಹಾಯಕ ನಿರ್ದೇಶಕ ಎಚ್ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದೀಗ ಎಚ್ ಮಹೇಶ್ ಅವರನ್ನು ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ವೇಗವಾಗಿ ಬಂದಂತಹ ಬೈಕ್ ಒಂದು ಆಟವಾಡುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾದೇವಪುರದಲ್ಲಿ ನಡೆದಿದೆ. ಮಹದೇವಪುರದ ನ್ಯೂ ಟೆಂಪಲ್ ರಸ್ತೆಯ ಬದಿಯಲ್ಲಿ ಆಟವಾಡುತ್ತಿದ್ದ ಪರಶುರಾಮ್ (8) ಎಂಬ ಬಾಲಕನಿಗೆ ಬೈಕ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.ಈ ಕುರಿತು ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಚನ್ನಪಟ್ಟಣ : ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ದೊಡ್ಡ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ.ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರವಾಗಿ ಮತಯಾಚನೆ ಮಾಡಿದ ಅವರು, ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಅವರು,ಯೋಗೇಶ್ವರ್ ಅವರು ಚನ್ನಪಟ್ಟಣ ಮಣ್ಣಿನ ಮೇಲೆ, ಇಲ್ಲಿನ ರೈತ ಸಮುದಾಯ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ, ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ಧಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು.ಈಗ ಯೋಗೇಶ್ವರ್ ಅವರಿಗೆ…

Read More

ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಇದೆ ಎಂದು ಹಾವೇರಿಯ ಎಸ್ಪಿ ಅಂಶು ಕುಮಾರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಯಾಸಿರ್ ಪಠಾಣ್ ಎಸ್ ಪಿ ಅವರಿಗೆ ಕನ್ನಡ ಅಷ್ಟಾಗಿ ಬರಲ್ಲ. ನಿಮಗೆ ಗೊಂದಲ ಆಗಿದೆ. ಅಲ್ಲದೆ ಭರತ್ ಬೊಮ್ಮಾಯಿ ಮೇಲೆ ಬಿಟ್ ಕಾಯಿನ್ ಆರೋಪವಿದೆ ಎಂದು ತಿರುಗೇಟು ನೀಡಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಯಡಗುಂದ ಗ್ರಾಮದಲ್ಲಿ ಅಭ್ಯರ್ಥಿ ಯಾಸಿರ್ ಪಠಾಣ್ ಪ್ರತಿಕ್ರಿಯೆ ನೀಡಿದ್ದು ಹಾವೇರಿ ಎಸ್ ಪಿ ಅವರಿಗೆ ಕನ್ನಡ ಅಷ್ಟಾಗಿ ಬರಲ್ಲ. ನಿಮಗೆ ಗೊಂದಲ ಆಗಿದೆ. ಮಾಜಿ ಮುಖ್ಯಮಂತ್ರಿ ನನ್ನ ಮೇಲೆ ಹಲವು ಆರೋಪ ಮಾಡಿದ್ದಾರೆ. ಅಕ್ರಮ ಮಾಡಿದ್ದೇನೆ ಎಂದು ಹೇಳುತ್ತಾರೆ ಆದರೆ ಅದನ್ನು ತಡೆಯುವ ಶಕ್ತಿ ಇಲ್ವಾ ಅವರಿಗೆ? ಸೋಲಿನ ಭಯದಿಂದ ಈ ರೀತಿಯಾಗಿ ಮಾಡುತ್ತಿದ್ದಾರೆ. ಹಿಂದೆ ಅಜ್ಜಂಪಿರ್ ಖಾದ್ರಿ ಆತಂಕವಾದಿ ಎಂದಿದ್ದರು. ಟೆರರಿಸ್ಟ್ ಹೌದೋ…

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಇದೀಗ ಮತ್ತೆ ನಕ್ಸಲರ ಚಟುವಟಿಕೆ ಆರಂಭವಾಗಿದ್ದು, ಮಲೆನಾಡಿನ ಹಲವು ಗ್ರಾಮಗಳಿಗೆ ನಕ್ಷತ್ರರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸ್ ವರಿಷ್ಠ ಅಧಿಕಾರಿ ವಿಕ್ರಂ ಆಂಟಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹೌದು ಮಲೆನಾಡಿನ ಹಲವು ನಿವಾಸಿಗಳ ಮನೆಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಚಿಕ್ಕಮಂಗಳೂರು ಪೊಲೀಸ್ ವರಿಷ್ಠ ಅಧಿಕಾರಿ ವಿಕ್ರಂ ಅಮ್ಟೆ ಮತ್ತು ನಕ್ಸಲ್ ಅನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಜಯಪುರ ಠಾಣಾ ವ್ಯಾಪ್ತಿಯ ಮನೆಗಳಿಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಗ್ರಾಮದ ಒಂಟಿ ಮನೆಗಳಿಗೆ ನಕ್ಸಲರು ಭೇಟಿ ನೀಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಯಡಗುಂದಿ ಗ್ರಾಮದಲ್ಲಿ ಕಾರ್ಯಾಚರಣೆ ಇದೀಗ ತೀವ್ರಗೊಂಡಿದೆ. ಗ್ರಾಮಸ್ಥರಿಂದ ANF ಹಾಗೂ ಪೊಲೀಸರು ಸಂಪೂರ್ಣವಾದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಅರಣ್ಯ ಒತ್ತುವರಿ ಕಸ್ತೂರಿರಂಗನ್ ವರದಿ ಸಂಬಂಧ ಯಡಗುಂದಿ ಗ್ರಾಮಸ್ಥರ ಜೊತೆ…

Read More

ಬಾಗಲಕೋಟೆ : ಸದ್ಯ ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿದ್ದು, ಈ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ವಕ್ಫ್ ಮಂಡಳಿಯ ಸಭೆ ನಡೆಸಿ ಅಧಿಕಾರಿಗಳಿಗೆ ರೈತರಿಗೆ ನೀಡಿದ್ದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ಆದೇಶ ನೀಡಿದ್ದಾರೆ. ಆದರೂ ಸಹ ಬಿಜೆಪಿ ನಾಯಕರು ಪ್ರತಿಭಟನೆ ಹೋರಾಟ ಮಾಡುತ್ತಲೇ ಇದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಅಹೋರಾತ್ರಿ ಪ್ರತಿಭಟನೆ ಮಾಡಿ ಮತ್ತಷ್ಟು ಕಿಚ್ಚು ಹೊತ್ತಿಸಿದರು. ಆದರೆ ಇದೀಗ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಇಂದು ಅಲ್ಲಮ ಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲೂ ಕೂಡ ಅವರು ವಕ್ಫ್ ವಿಚಾರ ಕುರಿತು ಮಾತನಾಡಿದಾಗ ಭಕ್ತರು ಹಾಗೂ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡರು. ಹೌದು ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲೂ ಪ್ರಸ್ತಾಪಿಸಿದ್ದಾರೆ. ಆದ್ರೆ, ಸ್ಥಳೀಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಇಲ್ಲಿ ರಾಜಕೀಯ ಮಾಡಬೇಡಿ. ಇದು ಯಾವ ಕಾರ್ಯಕ್ರಮ ನೀವು ಏನು ಮಾತಾಡ್ತೀರಿ? ದೇವಸ್ಥಾನ ನಿರ್ಮಾಣಕ್ಕೆ…

Read More

ಚಿಕ್ಕಮಗಳೂರು : ಮನುಷ್ಯ ಎಷ್ಟು ಕಿಳು ಮಟ್ಟಕ್ಕೆ ಇಳಿದಿದ್ದಾನೆ ಎಂದರೆ ಇಷ್ಟು ದಿನ ಬಾಲಕಿಯರು, ಯುವತಿಯರು, ಮಹಿಳೆಯರು ಹಾಗೂ ವೃದ್ಧೆಯರ ಮೇಲು ಸಹ ಅತ್ಯಾಚಾರ ಎಸಗಲಾಗುತ್ತಿತ್ತು. ಇದೀಗ ಚಿಕ್ಕಮಂಗಳೂರಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು ನಾಯಿಯ ಮೇಲೆ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಅಕ್ಟೋಬರ್‌ 18 ರಂದು ಜಯಪುರ ಬಸ್‌ನಿಲ್ದಾಣದಲ್ಲಿ ವ್ಯಕ್ತಿಯ ಕೃತ್ಯ ಸೆರೆಯಾಗಿದೆ. ಕೊಪ್ಪ ತಾಲೂಕಿನ ಜಯಪುರ ಎಂಬಲ್ಲಿ ಈ ಒಂದು ಕೃತ್ಯ ನಡೆದಿದೆ ಇನ್ನೂ ನ್ಯಾಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಶಿವರಾಜ್ ಎಂದು ಗುರುತಿಸಲಾಗಿದೆ. ಇದೀಗ ಶಿವರಾಜ್‌ ಎಂಬ ವ್ಯಕ್ತಿಯ ವಿರುದ್ಧ ಜಯಪುರ ಠಾಣೆ ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿಕೊಂಡಿದ್ದಾರೆ. ಆರೋಪಿ ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ಕೃತ್ಯ ಎಸಗಿರುವುದು ಕಂಡುಬಂದಿದೆ. ಅಂಗಡಿಯ ಮುಂಭಾಗದ ಕಟ್ಟೆಯ ಮೇಲೆ ಕುಳಿತುಕೊಂಡ ವ್ಯಕ್ತಿ ಬೀದಿ ನಾಯಿಯನ್ನು ಹಿಡಿದುಕೊಂಡು ಆದರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.ಈ ಕೃತ್ಯದ ಬಗ್ಗೆ ನವೆಂಬರ್‌ 9 ರಂದು ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯಗಳನ್ನು…

Read More

ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಪ್ ಎದುರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿಯ ವಿಧಾನಸಭಾ ಉಪಚುನಾವಣೆ ಕಣಕ್ಕೆ ಇಳಿದಿರುವ ಯಾಸಿರ್ ಪಠಾಣ್ ವಿರುದ್ಧ ರೌಡಿಶೀಟರ್ ಇದೆ ಎಂದು ಹಾವೇರಿಯ ಎಸ್‌ಪಿ ಅಂಶುಕುಮಾರ್ ಇದೀಗ ಮಾಹಿತಿ ನೀಡಿದ್ದಾರೆ. ಹೌದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಯಾಸಿರ್ ಪಠಾಣ್ ಮೇಲೆ ರೌಡಿ ಶೀಟ್ ಇದೆ. ಆದರೆ ನಾಮಪತ್ರ ಸಲ್ಲಿಕೆ ವೇಳೆ ಉಲ್ಲೇಖಿಸಿರಲಿಲ್ಲ. ನಾಮಪತ್ರ ಸಲ್ಲಿಕೆಯ ವೇಳೆ ಯಾವುದೇ ಪ್ರಕರಣ ಇಲ್ಲ ಎಂದು ಯಾಸಿರ್ ಪಠಣ್ ಹೇಳಿದ್ದಾರೆ. ಅಲ್ಲದೇ ನಾಮಪತ್ರ ಸಲ್ಲಿಕೆಯ ವೇಳೆ ರೌಡಿಶೀಟರ್ ಎಂದು ಅಜ್ಜಂಪಿರ್ ಖಾದ್ರಿ ಹೇಳಿಕೆಯನ್ನು ಕೂಡ ನೀಡಿದ್ದರು. ಇದೀಗ ಹಾವೇರಿ ಎಸ್‌ಪಿ ಅಂಶುಕುಮಾರ್ ಹೇಳಿಕೆ ಬಿಜೆಪಿಗೆ ಪ್ರಬಲ ಅಸ್ತ್ರವಾಗಲಿದೆ. ಎಸ್ ಪಿ ಅಂಶು ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ವಿರುದ್ಧ ರೌಡಿಶೀಟರ್ ಇದೆ ಎಂದು ಮಾಹಿತಿ ನೀಡಿದ ಬೆನ್ನಲ್ಲೆ, ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು, ಇದೀಗ ಕಾನೂನು ಹೋರಾಟ ನಡೆಸಲಿದ್ದಾರೆ.…

Read More

ಬೆಂಗಳೂರು : ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತಯಾಚಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ದಾಖಲಾಗಿತ್ತು. ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದ ಕೇಸ್ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.ಅರ್ಜಿ ವಿಚಾರಣೆ ನಡೆಸಿದ ಬಳಿಕ ನೀತಿ ಸಂಹಿತೆಗಿಂತ ಮೊದಲು ಆಹ್ವಾನಪತ್ರಿಕೆ ಮುದ್ರಣ ಹಿನ್ನೆಲೆ ಕೇಸ್​​ಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯವರಾದ ಶಿವಪ್ರಸಾದ್ ಅವರ ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಗೆ ಮತ ಯಾಚಿಸಿದ್ದಕ್ಕೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಆದರೆ, ಆಹ್ವಾನ ಪತ್ರಿಕೆ ನೀತಿ ಸಂಹಿತೆ ಜಾರಿಗೆ ಮೊದಲು ಮುದ್ರಣವಾಗಿದ್ದ ಕಾರಣ ಹೈಕೋರ್ಟ್ ಕೇಸ್‌ಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣ ಹಿನ್ನೆಲೆ? ಮದುಮಗ ಶಿವಪ್ರಸಾದ್​ ಅವರು ತಮ್ಮ ವಿವಾಹದ ಆಹ್ವಾನ ಪತ್ರಿಕೆಯಲ್ಲಿ ‘ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ’ ಎಂದು ಮುದ್ರಿಸಿದ್ದರು. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ವರನ ವಿರುದ್ಧ ಏಪ್ರಿಲ್ 17ರಂದು ಚುನಾವಣಾ ನೋಡಲ್​ ಅಧಿಕಾರಿಗಳಿಗೆ ದೂರು…

Read More