Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ನಾಳೆ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಆಸ್ಪತ್ರೆಯ ವೈಶಿಷ್ಟತೆಗಳು ಕಲಬುರಗಿಯಲ್ಲಿ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಿದ್ದು, ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್ಗಳನ್ನು ಒಳಗೊಂಡ 371 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ ಲೋಕಾರ್ಪಣೆಗೊಳ್ಳುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.ಕಲಬುರಗಿಯಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳುತ್ತಿರುವ ಜಯದೇವ ಆಸ್ಪತ್ರೆಯ ಬಗ್ಗೆ…
ಬೆಂಗಳೂರು : ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದರೆ. ಇದೀಗ ಈ ಒಂದು ಪ್ರಕರಣ ವಿಶೇಷ ತನಿಖಾಧಿಕಾರಿಯಾಗಿ Dysp ಜಗದೀಶ್ ನೇಮಕವಾಗಿದ್ದರೆ. ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಜಗದೀಶ್ ನೇಮಕವಾಗಿದ್ದಾರೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ಕುರಿತ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಹಿನ್ನೆಲೆ? ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಮೃತಪಟ್ಟಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ಈ ಭೀಕರ ಅಪಘಾತ…
ಚಿಕ್ಕಮಗಳೂರು : ಇತ್ತೀಚಿಗೆ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ 5 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ನಡೆದಿದೆ. ಹೌದು ಶಾಲೆಯಿಂದ ಮನೆಗೆ ಬರುವಾಗ ದಾಳಿ ಮಾಡಿದ ನಾಯಿಗಳು, ಬಾಲಕಿಯ ತುಟಿ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಎಂ ಸಿ ಹಳ್ಳಿಯಲ್ಲಿ ಏಂಜಲಿನ (5) ಎನ್ನುವ ಬಾಲಕಿಯ ಮೇಲೆ ನಾಯಿ ದಾಳಿ ಮಾಡಿವೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಸದ್ಯ ಬಾಲಕಿಗೆ ಶಿವಮೊಗ್ಗದ ಸಜ್ಜಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ತುಮಕೂರು : ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿ ಹಾಗೂ ಭಾವನ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪೂಜಾ (25) ಎಂದು ತಿಳಿದುಬಂದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಸಬ್ಬೆನಹಳ್ಳಿಯ ಹೊಂಡದಲ್ಲಿ ಉಗಳ ಮೃತ ದೇಹ ಸಿಕ್ಕಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೂಜಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ಕೂಡ ಇದೀಗ ಮೂಡುತ್ತಿದೆ. ಪತಿ ಓಂಕಾರ್ ಹಾಗೂ ಆತನ ಅಣ್ಣ ರಾಜಣ್ಣ ಸೇರಿ ಪೂಜಾಳಿಗೆ ಕಿರುಕುಳ ನೀಡುತ್ತಿದ್ದರು ಇದರಿಂದಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪ ಕೇಳಿಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆ ರಾಜಣ್ಣ, ಪೂಜಾಳನ್ನ ಗಂಡನ ಮನೆಗೆ ಕರೆದೊಯ್ದಿದ್ದ. ಆದ್ರೆ, ಎರಡು ದಿನಗಳಿಂದ ನಾಪತ್ತೆಯಾಗಿದ್ದ ಪೂಜಾ, ಇಂದು ಸೆಬ್ಬೇನಹಳ್ಳಿಯ ಹೊಂಡದಲ್ಲಿ ಪೂಜ ಶವ ಪತ್ತೆಯಾಗಿದೆ. ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ತನಿಖೆ ನಡೆಸಿದ್ದಾರೆ.
ಶಿವಮೊಗ್ಗ : ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕಾಲೇಜು ಆಡಳಿತ ಅಧಿಕಾರಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಕಾಲೇಜು ಆಡಳಿತ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನರ್ಸಿಂಗ್ ಕಾಲೇಜಿನ ಆಡಳಿತ ಅಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಇದೀಗ ಆಕ್ರೋಶ ಹೊರ ಹಾಕುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಮಂಜುನಾಥ್ ವಿರುದ್ಧ ವಿದ್ಯಾರ್ಥಿನಿಯರು ಈ ಒಂದು ಆರೋಪ ಮಾಡಿದ್ದಾರೆ. ಆಡಳಿತಾಧಿಕಾರಿಯ ವರ್ತನೆಯ ವಿರುದ್ಧ ಸಚಿವ ಮಧು ಬಂಗಾರಪ್ಪಗೆ ದೂರು ನೀಡಿದ್ದಾರೆ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸಚಿವರು ಸೂಚಿಸಿದ್ದಾರೆ. ಸೊರಬ ಠಾಣೆಯಲ್ಲಿ ಆಡಳಿತಾಧಿಕಾರಿಯ ಮಂಜುನಾಥ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಮಂಜುನಾಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಶಿವಮೊಗ್ಗ : ಈಗಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು, ಪೋಷಕರು ಸ್ವಲ್ಪ ಬೈದರು ಸಾಕು ಏನಾದರೂ ಒಂದು ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವಂತಹ ಕೆಲಸ ಮಾಡಿಕೊಳ್ಳುತ್ತಾರೆ. ಇದೀಗ ಶಿವಮೊಗ್ಗದಲ್ಲೂ ಕೂಡ ಇಂಥ ಘಟನೆ ನಡೆದಿದ್ದು, ರಿಮೋಟ್ ಗಾಗಿ ಗಲಾಟೆ ನಡೆದು, ಈ ವೇಳೆ ಅಜ್ಜಿ ಮೊಮ್ಮಕ್ಕಳಿಗೆ ಬೈದಿದ್ದರಿಂದ ಯುವತಿ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೌದು ಈ ಒಂದು ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಅವಾಚ್ಯ ಪದಗಳಿಂದ ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಮೂರು ಜಿಲ್ಲೆಗಳನ್ನು ಸುತ್ತಾಡಿಸಿಕೊಂಡು ಕೊನೆಗೆ ಖಾನಾಪುರ ಠಾಣೆಗೆ ಕರೆದೋಯ್ದಿದ್ದಾರೆ.ಈ ವಿಚಾರವಾಗಿ ಸಿಟಿ ರವಿ ಅವರು ನನ್ನ ವಿರುದ್ಧ ಕೊಲೆಗೆ ಸಂತು ರೂಪಿಸಿದ್ದರು. ಆದರೆ ಅವರು ಯಾರು ಎಂಬುದನ್ನು ತಿಳಿದುಕೊಳ್ಳಲು ನ್ಯಾಯಾಂಗ ತನಿಖೆ ಆಗಬೇಕು ಎಂದು ಸಿಟಿ ರವಿ ಅವರು ಆಗ್ರಹಿಸಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಕಿಟಾಕಿ ಮೂಲಕ ಸೂಚನೆ ಬಂದರೆ ಉಳಿದೆಲ್ಲವೂ ಫೋನ್ ಮೂಲಕ ಸೂಚನೆ ಬರುತ್ತಿತ್ತು. ಪೊಲೀಸರ ಬಳಿ ಎರಡು, ಮೂರು ಫೋನ್ಗಳಿದ್ದವು. ಹಿರಿಯ ಅಧಿಕಾರಿಗಳು ಅಥವಾ ಮಂತ್ರಿಯಿಂದ ನಿರಂತರ ಫೋನ್ ಬರುತ್ತಿತ್ತು. ನಾನು ಕ್ರಿಮಿನಲ್ ಅಲ್ಲ, ಯಾಕೆ ಹೀಗೆ ಮಾಡಿದ್ದಾರೆ ಎಂದು ಸಿಟಿ ರವಿ ಅವರು ಇದೆ ವೇಳೆ ಪ್ರಶ್ನಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಡಿಕೆ ಶಿವಕುಮಾರ್ ಅಥವಾ ಯಾರು ನನ್ನ ವಿರುದ್ಧ ಸಂಚು ಮಾಡಿದ್ದಾರೆ ಎನ್ನುವುದರ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಪೊಲೀಸರ ವೈಯಕ್ತಿಕ, ಇಲಾಖೆ…
ಮಂಡ್ಯ : ಕಳೆದ ಕೆಲವು ಗಂಟೆಗಳ ಹಿಂದೆ ಲಾರಿ ಹಾಗೂ ಕಾರಿನ ಮಧ್ಯ ಭೀಕರ ಅಪಘಾತ ಸಂಭವಿಸಿ ಬೆಂಗಳೂರು ಮೂಲದ ಮೂರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ನಡೆದಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರೂ ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇಶ್ವರಪುರದಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ಮಹಿಳೆಯರನ್ನು ನೀಲನಹಳ್ಳಿ ಗ್ರಾಮದ ಶಿಲ್ಪ (35) ಸಂಧ್ಯಾ (19) ಎಂದು ತಿಳಿಬಂದಿದೆ. ಇನ್ನು ಘಟನೆಯಲ್ಲಿ ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಶಿಲ್ಪಾ ಮತ್ತು ಸಂಧ್ಯಾ ಆಂಧ್ರಪ್ರದೇಶದ ತಿರುಪತಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಬಸ್ ನಿಲ್ದಾಣದವರೆಗೆ ಗೆಳತಿ ಶೈಲಜಾ ಡ್ರಾಪ್ ನೀಡುತ್ತಿದ್ದಾಗ ಈ ಒಂದು ಘಟನೆ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕಿನಲ್ಲಿ ಚಲಿಸುತ್ತಿದ್ದ ಶಿಲ್ಪ ಹಾಗೂ ಸಂಧ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಂಭೀರವಾಗಿ ಗಾಯಕೊಂಡ ಶೈಲಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಘಟನೆ ಬಳಿಕ…
ಧಾರವಾಡ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು ಇದೀಗ ಈ ಒಂದು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಹೌದು ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ಕೆಳಲಾಗಿದೆ. ಲಾಠಿಚಾರ್ಜ್ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಈ ಕುರಿತು…
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಬೆಂಗಳೂರು ಮೂಲದ ಮೂವರು IIT ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಗ್ರಾಮದ ಬಳಿ KSRTC ಬಸ್ ಒಂದನ್ನು ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಬಂದಂತಹ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಪ್ರಣವ್ ಆಕಾಶ್, ಆದರ್ಶ್ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಇನ್ನು ಪೃಥ್ವಿ ಎನ್ನುವ ಇನ್ನೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮಳವಳ್ಳಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.













