Subscribe to Updates
Get the latest creative news from FooBar about art, design and business.
Author: kannadanewsnow05
ಬಳ್ಳಾರಿ : ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿಜೆಪಿ ಸರ್ಕಾರ ಮತ್ತು ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ, ನೀವೂ ಕ್ಷಮಿಸಬೇಡಿ ಎಂದು ಬಳ್ಳಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದರು. ಬಳ್ಳಾರಿಯ ಸಂಡೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಡಿ ಕುನ್ಹಾ ಅವರ ತನಿಖಾ ಆಯೋಗ ಶಿಫಾರಸು ಮಾಡಿದೆ. ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿಜೆಪಿ ಸರ್ಕಾರ…
ಕಲಬುರ್ಗಿ : ಬೆಳೆ ಬೆಳೆಯಲು ಫೈನಾನ್ಸ್ ಒಂದರಲ್ಲಿ ಲಕ್ಷಾಂತರ ಸಾಲ ಪಡೆದಿದ್ದ ರೈತ ಅವರ ಕಿರುಕುಳ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನರನಾಳ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ನರನಾಳ ಗ್ರಾಮದ ನಾಗಪ್ಪ ಎಂದು ತಿಳಿದು ಬಂದಿದೆ. ನಾಗಪ್ಪ ಫೈನಾನ್ಸ್ ಒಂದರಲ್ಲಿ ಎರಡು ಲಕ್ಷ ರೂಪಾಯಿ ಬೆಳೆ ಸಾಲ ತೆಗೆದಿದ್ದ. ಈ ವೇಳೆ ಫೈನಾನ್ಸ್ ನವರು ಮನೆಗೆ ಬಂದು ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ನಾಗಪ್ಪ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆ ಕುರಿತಂತೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಜುವೆಲ್ಲರೀ ಶಾಪ್ ಒಂದರ ಮಾಲೀಕರ ಮೆನೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ವ್ಯಕ್ತಿ ಒಬ್ಬ ಮಾಲೀಕರು ಇಲ್ಲದ ಸಮಯದಲ್ಲಿ ಉಂಡ ಮನೆಗೆ ಕನ್ನ ಹಾಕಿದ್ದು ಮನೆಯಲ್ಲಿದ್ದ ಸುಮಾರು 15 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಹೌದು ವಿಜಯನಗರದ ಹೊಸಹಳ್ಳಿ ಎಕ್ಸ್ಟೆನ್ಸನ್ ನಿವಾಸಿ ಸುರೇಂದ್ರ ಕುಮಾರ್ಜೈನ್ ಅವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ದೂರುದಾರ ಸುರೇಂದ್ರ ಕುಮಾರ್ ಜೈನ್ ಮಾಗಡಿ ರಸ್ತೆಯ ವಿದ್ಯಾರಣ್ಯ ನಗರದಲ್ಲಿ ಸುಮಾರು 30 ವರ್ಷಗಳಿಂದ ಅರಿಹಂತ್ ಜ್ಯುವೆಲ್ಲರಿ ಅಂಗಡಿ ಹೊಂದಿದ್ದಾರೆ.ನೇಪಾಳ ಮೂಲದ ನಮ್ರಾಜ್ಗೆ ಮನೆ ಇಲ್ಲದ ಕಾರಣ ಮಾಲೀಕ ಸುರೇಂದ್ರ ಕುಮಾರ್ಜೈನ್ ಅವರ ಮನೆಯ ಪಾರ್ಕಿಂಗ್ ಸ್ಥಳದಲ್ಲಿರುವ ಸೆಕ್ಯೂರಿಟಿ ರೂಮ್ನಲ್ಲಿ 6 ತಿಂಗಳಿನಿಂದ ಪತ್ನಿ ಜತೆಗೆ ವಾಸವಿದ್ದ. ಮಾಲೀಕ ಸುರೇಂದ್ರ ಕುಮಾರ್ಜೈನ್ ದೇವರ ಜಾತ್ರೆ ಪ್ರಯುಕ್ತ ನ.1ರಂದು ಕುಟುಂಬದ ಜತೆ ಗುಜರಾತ್ಗೆ ತೆರಳಿದ್ದರು. ಜಾತ್ರೆ ಮುಗಿಸಿ ನ.7ರಂದು ಮುಂಜಾನೆ ಮನೆಗೆ ವಾಪಾಸಾದಾಗ…
ಬೆಂಗಳೂರು : ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ನೋಂದಣಿ ವಿಚಾರವಾಗಿ ರಾಜ್ಯದ 4 ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಕರ್ನಾಟಕದಲ್ಲಿ 21167 ವಕ್ಫ್ ಆಸ್ತಿಗಳ ಖಾತೆ ಬದಲಾವಣೆ ಪ್ರಕರಣಗಳು ಬಾಕಿ ಇವೆ. ಹೀಗಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ರಾಜ್ಯದ ನಾಲ್ಕು ಪ್ರಾದೇಶಿಕ ಆಯುಕ್ತರಿಗೆ ತುರ್ತಾಗಿ ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ. ಬಾಕಿ ಇರುವ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಇಂದೇ ವರದಿ ಸಲ್ಲಿಸಬೇಕೆಂದು ತಿಳಿಸಲಾಗಿದೆ. ವಕ್ಫ್ ಆಸ್ತಿಗಳ ಖಾತೆ ಬದಲಾವಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಅನುಪಾಲನಾ ವರದಿ ಇಂದೇ ಸರ್ಕಾರಕ್ಕೆ ಸಲ್ಲಿಸುವಂತೆ ರಾಜ್ಯದ ನಾಲ್ಕು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಮಲಮ್ಮ ಸಿ. ಪತ್ರ ಬರೆದಿದ್ದಾರೆ. ರಾಜ್ಯಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯ ಪ್ರಕಾರ್ಯಗಳಲ್ಲಿ ಸಾಧಿಸಿದ ಪ್ರಗತಿಯ ನಾಲ್ಕನೇ ಪರಿಶೀಲನಾ ಸಭೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಖಾತೆ ಬದಲಾವಣೆಗೆ ಬಾಕಿಯಿರುವ ಒಟ್ಟು 21167 ಪ್ರಕರಣಗಳಲ್ಲಿ ಅಗತ್ಯ ಕ್ರಮ ವಹಿಸಿ, ಅನುಪಾಲನಾ ವರದಿಯನ್ನು ತುರ್ತಾಗಿ ಸರ್ಕಾರಕ್ಕೆ…
ಹುಬ್ಬಳ್ಳಿ : ರಾಜ್ಯದ ಮೂರೂ ಕ್ಷೇತ್ರಗಳ ಉಪಚುನಾವಣೆ ಇದೆ ನವೆಂಬರ್ 13ರಂದು ನಡೆಯಲಿದ್ದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ನಡೆಯಲಿದೆ. ಈ ಚುನಾವಣೆ ಬಳಿಕ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಒಂದು ಉಪಚುನಾವಣೆಯ ಬಳಿಕ ಬಿಜೆಪಿ ಹಲವು ಶಾಸಕರು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಹಲವು ಸ್ನೇಹಿತರು ನನ್ನ ಸಂಪರ್ಕದಲ್ಲಿ ಇದ್ದು, ಹೈಕಮಾಂಡ್ ಅವರಿಗೆ ತಿಳಿಸಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ನಿರ್ಧರಿಸಲಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿಳಿಸಿದರು. ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಗಡುವು ಫಿಕ್ಸ್ ಮಾಡುತ್ತಾ ಹೋಗುತ್ತಾರೆ, ಮುಂದಿನ ಮೂರೂವರೆ ವರ್ಷಗಳ ಕಾಲ ಅವರು ಇದನ್ನೇ ಮಾಡಲಿದ್ದಾರೆ. ನಂತರ ಚುನಾವಣೆ ನಡೆದು ಪುನಃ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ಇದನ್ನೇ ಮುಂದುವರಿಸಲಿದ್ದಾರೆ ಎಂದು ಸವದಿ ವ್ಯಂಗ್ಯವಾಡಿದರು.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರ ವಿಶೇಷ ಅಧಿಕಾರಿ ಹಾಗೂ ಅವರ ಆಪ್ತ ಇದ್ದೇನೆ ಎಂದು ಸರ್ಕಾರಿ ನೌಕರರಿಗೆ ವಂಚನೆ ಎಸಗುತ್ತಿದ್ದ ತುಮಕೂರು ಮೂಲದ ಆರೋಪಿ ಒಬ್ಬನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಾನು ಆಪ್ತ ಆಗಿದ್ದೇನೆ ನಿಮಗೆ ವರ್ಗಾವಣೆ ಬೇಕಾದರೆ ನನಗೆ ಹೇಳಿ ಎಂದು ಸರ್ಕಾರಿ ನೌಕರರಿಗೆ ಕರೆ ಮಾಡಿ ರಘುನಾಥ್ ಎನ್ನುವ ವ್ಯಕ್ತಿ ಆಮೀಷ ಒಡ್ದುತ್ತಿದ್ದ. ಅಲ್ಲದೇ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಕಾರ್ಯದರ್ಶಿ ವಿಶೇಷ ಅಧಿಕಾರಿಯಂದು ವಂಚನೆ ಮಾಡಿದ್ದಾನೆ. ಇದೀಗ ತುಮಕೂರು ಮೂಲದ ರಘುನಾಥನನ್ನು ಪೊಲೀಸರು ಬಂಧಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಹಾಗೂ ವಿಶೇಷ ಕಾರ್ಯದರ್ಶಿ ಎಂದು ರಘುನಾಥ್ ಸರ್ಕಾರಿ ನೌಕರರಿಗೆ ಕರೆ ಮಾಡುತ್ತಿದ್ದ. ನಿಮಗೆ ವರ್ಗಾವಣೆ ಮಾಡಿಸಿಕೊಡುತ್ತೇನೆ ಎಂದು ರಘುನಾಥ್ ಸರ್ಕಾರಿ ಅಧಿಕಾರಿಗಳಿಗೆ ಆಮಿಷ ಒಡ್ದುತ್ತಿದ್ದ.ಅದೇ ರೀತಿ ಸಚಿವ ಪ್ರಿಯಾಂಕರಿಗೆ ವಿಶೇಷ ಅಧಿಕಾರಿ ಎಂದು…
ಬೆಂಗಳೂರು : ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರವಾಗಿ ಹತ್ಯೆ ನಡೆದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿಯ ಹೊಂಗಸಂದ್ರ ಮನೆಯಲ್ಲಿ ಈ ಒಂದು ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಕಳೆದ ಮಧ್ಯ ರಾತ್ರಿ 1:30 ಗಂಟೆ ಸುಮಾರಿಗೆ ಈ ಒಂದು ಕೊಲೆ ನಡೆದಿದೆ ಎಂದು ತಿಳಿದುಬಂದಿದೆ. ಜಯಮ್ಮ (45) ಕೊಲೆಗೀಡಾದ ಮಹಿಳೆ ಎಂದು ತಿಳಿದು ಬಂದಿದೆ. ಪರಿಚಿತರೇ ಯಾರೋ ಮಹಿಳೆಯನ್ನು ಕೊಲೆ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಸದ್ಯ ಮಹಿಳೆಯ ಮೃತ ದೇಹವನ್ನು ಬೆಂಗಳೂರಿನ ಸೈನ್ಸ್ ಜಾನ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಒಂದು ಹತ್ಯೆ ಕುರಿತಂತೆ ಬೊಮ್ಮನ ಹಳ್ಳಿಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿದೆ.
ಹೈದ್ರಾಬಾದ್ : ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಸಂಸ್ಥೆಯ ಐರಾವತ ಬಸ್ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಸಿರುವ ಘಟನೆ ಹೈದರಾಬಾದ್ ಸಮೀಪದ ಶಂಶಾಬಾದ್ ನಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ಕಳೆದ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಸಂಭವಿಸಿದೆ. ಕೇವಲ ರಾಜ್ಯದ ಕೆಎಸ್ಆರ್ಟಿಸಿ ಬಸ್ ಅಲ್ಲದೆ ತೆಲಂಗಾಣದ ಒಂದು ಸರ್ಕಾರಿ ಬಸ್, ಖಾಸಗಿ ಬಸ್ ಸೇರಿದಂತೆ ಒಟ್ಟು 4 ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಈ ವೇಳೆ ಯಾರಿಗೂ ಅಪಾಯ ಆಗಿಲ್ಲ. ಬಸ್ಸಿನ ಕಿಡಕಿಯ ಗಾಜುಗಳು ಒಡೆದು ಹೋಗಿವೆ. ಹೈದರಾಬಾದ್ನಿಂದ ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಸಾರಿಗೆ ಬಸ್ ಮೇಲೆ ದಾಳಿ ನಡೆದಿದೆ.ರಾತ್ರಿ 10:45ರ ಸುಮಾರಿನಲ್ಲಿ ಹೈದರಾಬಾದ್ನಿಂದ ಸಾರಿಗೆ ಬಸ್ ಬೆಂಗಳೂರಿನತ್ತ ಹೊರಟಿತ್ತು. ಈ ವೇಳೆ ಹೈದರಬಾದ್ನ ಶಂಶಾಬಾದ್ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದ ಬಸ್ಸಿನ ಕಿಟಕಿ ಗಾಜಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ.ಈ ಸಂಬಂಧ ಶಂಶಾಬಾದ್…
ರಾಮನಗರ : ಕನಕಪುರದಲ್ಲಿರುವ ನಾವೆಲ್ಲರೂ ಬೆಂಗಳೂರು ಜಿಲ್ಲೆಗೆ ಸೇರಿದವರು ಹಾಗಾಗಿ ಶೀಘ್ರದಲ್ಲಿ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು. ಕನಕಪುರ ತಾಲೂಕಿನ ನಾವೆಲ್ಲರೂ ಬೆಂಗಳೂರು ಜಿಲ್ಲೆಗೆ ಸೇರಿದವರು ಎಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸಚಿವ ಸಂಪುಟ ಅಸ್ತು ಅಂದಿದೆ. ಈಗಾಗಲೇ ದೆಹಲಿಗೂ ಕೂಡ ಕಳುಹಿಸಿದ್ದೇವೆ. ಆದಷ್ಟು ಬೇಗ ಕನಕಪುರ ತಾಲೂಕು, ಬೆಂಗಳೂರು ಜಿಲ್ಲೆಗೆ ಸೇರ್ಪಡೆಯಾಗುತ್ತದೆ ಎಂದು ತಿಳಿಸಿದರು. ಎಚ್ಡಿಕೆ ನಾವು ರಿಯಲ್ ಎಸ್ಟೇಟ್ ಮಾಡೋದಕ್ಕೆ ಬಂದಿದ್ದೇವೆ ಅಂತ ಹೇಳುತ್ತಾರೆ. ಇಲ್ಲಿ ನನ್ನ ಜಮೀನು ಏನಾದರೂ ಇದೆಯಾ ಎಂದು ಪ್ರಶ್ನಿಸಿದರು. ನೀನು ಹಾಸನದಿಂದ ಬಂದು ಬಿಡದಿಯಲ್ಲಿ 200 ಎಕರೆ ಭೂಮಿ ಖರೀದಿಸಿದೆ. ಕುಂಬಳಗೋಡು ಸಮೀಪ ಕುಮಾರಸ್ವಾಮಿ ಭೂಮಿ ಖರೀದಿಸಿದ್ದಾರೆ. ದೊಡ್ಡ ಆಲಹಳ್ಳಿ ನನ್ನೂರು. ಸಿಪಿ ಯೋಗೇಶ್ವರ್ ಅವರದ್ದು ಚೆಕ್ಕರೆ ಗ್ರಾಮ. ನಿಮ್ಮ ಪಲ್ಲಕ್ಕಿ ಹೊರುವವನು ನಾನೇ. ನಾನು ಸತ್ತ ಬಳಿಕ ನನ್ನ ಹೆಣ ಹೋಗೋದು ದೊಡ್ಡ ಆಲಹಳ್ಳಿಗೆ. ಯೋಗೇಶ್ವರ್ ಹಣ…
ಗುಜರಾತ್ : ಸಾಮಾನ್ಯವಾಗಿ ಮನುಷ್ಯರು ಅಥವಾ ಪ್ರಾಣಿಗಳು ಸತ್ತರೆ ಅವುಗಳ ಆಂಟಿ ಸಂಸ್ಕಾರ ಮಾಡುವುದನ್ನು ನಾವು ನೋಡಿದ್ದೇವೆ ಕೇಳಿದ್ದೇವೆ. ಆದರೆ ಗುಜರಾತ್ ನಲ್ಲಿ 4 ಲಕ್ಷ ಖರ್ಚು ಮಾಡಿ ಒಂದು ಕಾರನ್ನೇ ಸಂಪೂರ್ಣವಾಗಿ ಹೂವಿನಿಂದ ಅಲಂಕಾರ ಮಾಡಿ 15 ಅಡಿ ಭೂಮಿಯೊಳಗೆ ಅಂತ್ಯ ಸಂಸ್ಕಾರ ಮಾಡಿರುವ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯ ಲಾಠಿ ತಾಲೂಕಿನ ಪಾದರಶಿಂಗ ಗ್ರಾಮದಲ್ಲಿ ನಡೆದಿದೆ. ಹೌದು ಉದ್ಯಮಿ ಸಂಜಯ ಪೋಲಾರ್ ಮತ್ತು ಕುಟುಂಬ ತಮ್ಮ ಬದುಕಿನಲ್ಲಿ ಅದೃಷ್ಟ ತಂದು ಕೊಟ್ಟ ಕಾರಿಗೆ ಅದ್ಧೂರಿ ಸಮಾಧಿ ಕಾರ್ಯಕ್ರಮವನ್ನು ನಡೆಸಿರುವ ವಿರುದ್ಧ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗುತ್ತಿದೆ.ವಿಡಿಯೋದಲ್ಲಿ 12 ವರ್ಷ ಹಳೆಯದಾದ ವ್ಯಾಗನ್ ಆರ್ ಕಾರನ್ನು ಜಮೀನಿನಲ್ಲಿ 15 ಅಡಿ ಆಳದ ಹೊಂಡವನ್ನು ಅಗೆದು ಧಾರ್ಮಿಕ ಕ್ರಿಯೆಗಳನ್ನು ನಡೆಸುವ ಸಮಾಧಿ ಮಾಡಿರುವುದನ್ನು ಕಾಣಬಹುದಾಗಿದೆ. ವಾಹನಕ್ಕೆ ಹಸುರು ಬಟ್ಟೆಯನ್ನು ಹೊದಿಸಿ, ಪುರೋಹಿತರು ಮಂತ್ರ ಪಠಿಸುತ್ತಿದ್ದಂತೆ ಕುಟುಂಬಸ್ಥರು ಪೂಜೆ ಸಲ್ಲಿಸಿ ಗುಲಾಬಿ ದಳಗಳನ್ನು ಸುರಿಸುವುದರ ಮೂಲಕ ಕಾರನ್ನು ಸಮಾಧಿ ಹೊಂಡಕ್ಕೆ ಇಳಿಸಲಾಗಿದೆ.ಜೆಸಿಬಿ…














