Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ಉತ್ತರ ಕನ್ನಡದ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆಯ ಶಿಕ್ಷಕ ಹಾಗೂ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಲೈಫ್ ಗಾರ್ಡ್ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ರಕ್ಷಣೆ ಮಾಡಿದ್ದಾರೆ. ಸದ್ಯ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ನಿಯಾಜ್(15), ಮೊಹಮ್ಮದ್ ಜಿಲಾಲ್(15), ಆಕಾಶ್(15) ಸೇರಿ ಇನ್ನೋರ್ವನ ರಕ್ಷಣೆಗೊಳಗಾದವರು. ಲೈಫ್ಗಾರ್ಡ್ ಸಿಬ್ಬಂದಿ ದರ್ಶನ್ ಹರಿಕಾಂತ್, ಚಿದಾನಂದ ಲಕ್ಕುಮನೆ, ದೀಪಕ್ ಗೌಡ, ಅಶೋಕ್ ಹರಿಕಾಂತ್, ಮಹೇಶ್ ಮತ್ತು ಜಗ್ಗುರಿಂದ ರಕ್ಷಣೆ ಮಾಡಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾಲುವೆ ನೀರಲ್ಲಿ ನಾಪತ್ತೆಯಾದ ಮೂವರ ಶೋಧಕ್ಕೆ ಮುಂದಾಗಿದ್ದರು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿತ್ತು.
ಮಂಡ್ಯ : ನನಗೆ ಉನ್ನತ ಹುದ್ದೆ ಸಿಗಲೆಂದು ಹೋಮ ಮಾಡಿದ್ದು ಗೊತ್ತಿಲ್ಲ. ಎಲ್ಲ ಹಿರಿಯರು, ಶ್ರೀಗಳು ನನ್ನ ಪ್ರೀತಿಯಿಂದ ಕಾಣ್ತಿದಾರಾಷ್ಟೇ ಎಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕಲ್ಲಹಳ್ಳಿಯಲ್ಲಿರುವ ಭೂವರಾಹನಾಥ ದೇವಾಲಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ದೇಗುಲಕ್ಕೆ ಭೇಟಿ ನೀಡಿ ಮೃತ್ಯುಂಜಯ ಹೋಮದಲ್ಲೋ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಒಳಿತಾಗಲಿ ಎಂದು ದೇವರ ಬಳಿ ಪ್ರಾರ್ಥಿಸಿದ್ದೆನೆ. 2ವರ್ಷಗಳಿಂದ ನನ್ನ ಸ್ನೇಹಿತರು ಈ ದೇಗುಲಕ್ಕೆ ಹೋಗಿ ಅಂತಿದ್ರು ಬೇರೆ ಪಕ್ಷದ ಸ್ನೇಹಿತರೊಬ್ಬರೂ ಇಲ್ಲಿಗೆ ಹೋಗಲು ಹೇಳ್ತಿದ್ರು. ಇಲ್ಲಿ ಬಂದುನೋಡಿದಾಗ ನನಗೆ ಮಹಿಮೆ ಅರ್ಥ ಆಯ್ತು. ಇದು ಅದ್ಭುತ, ಐತಿಹಾಸಿಕ ದೇವಾಲಯ. ಈ ದೇವಾಲಯಕ್ಕೆ ಬರಲು ಕಾರಣ ಆ ದೇವರ ಪ್ರೇರಣೆ. ಇಂದು ಬೆಳಿಗ್ಗೆಯಷ್ಟೇ ದೇಗುಲ ಭೇಟಿ ನಿಗದಿಯಾಗಿತ್ತು. ಬರುವಾಗ ಏನಾದ್ರು ತರಬೇಕಾ ಎಂದು ಅರ್ಚಕರನ್ನು ಕೇಳಿದೆ. ಏನು ಬೇಡ ಬಂದು ದರ್ಶನ ಮಾಡಿ ಸಾಕು ಎಂದಿದ್ದರು ಎಂದು ತಿಳಿಸಿದರು.
ದಾವಣಗೆರೆ : ದಾವಣಗೆರೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮನೆಯಲ್ಲಿಯೇ ಬಂದುಕಿನಿಂದ ಗುಂಡು ಹರಿಸಿಕೊಂಡು ತುರಾಯಿ (70) ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ ಕಚೇರಿ, ಬಳಿ ಇರುವ ಮನೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸದ್ಯ ಘಟಕದ ಸ್ಥಾಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹೆಚ್.ವೈ ತುರಾಯಿ ಘಟನೆ ಕುರಿತು ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಂಗಳೂರಿನ ವಿಚಾರಗಳನ್ನೇ ಕೈಗೆತ್ತಿಕೊಳ್ಳುವುದಾದರೆ, ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಔಚಿತ್ಯ ಏನು? 20 ದಿನವಾದರೂ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ, ಅಲ್ಲಿನ ಸಮಸ್ಯೆಗಳನ್ನು ಚರ್ಚಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು. ಖಾಸಗಿ ಹೋಟೆಲ್ನಲ್ಲಿ ಇಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಬ್ರೇಕ್ ಫಾಸ್ಟ್ ಮೀಟಿಂಗ್ ಬ್ರೇಕ್ ಆಗಿದೆ. ಬ್ರೇಕ್ ಆದ ಲಕ್ಷಣ ಕಾಣಿಸುತ್ತಿದೆ. ರಾಜ್ಯದ ಅಭಿವೃದ್ಧಿಗೆ ಇದರಿಂದ ತೊಂದರೆ ಆಗಿದೆ. ಇದನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇವೆ. ನಾವು, ಜೆಡಿಎಸ್ ಹಾಲು-ಜೇನಿನಂತೆ ಜೊತೆಯಾಗಿ ಹೋಗುತ್ತೇವೆ. ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದರು. ರಾಜ್ಯ ಸರ್ಕಾರ ಕಾಟಾಚಾರಕ್ಕೆ ಬೆಳಗಾವಿ ಅಧಿವೇಶನ ನಡೆಸುತ್ತಿದೆ. ಅದು 8 ದಿನಕ್ಕಿಂತ ಹೆಚ್ಚು ಕಾಲ ನಡೆಯಲಾರದು. ಹಾಲಿ ಶಾಸಕರು ಮೃತಪಟ್ಟ ಕಾರಣ ಒಂದು ದಿನ ನಡೆಯಲಾರದು. ಆಡಳಿತ ಪಕ್ಷ ಕಾಂಗ್ರೆಸ್ ತನ್ನ ಮರ್ಜಿಗೋಸ್ಕರ, ಮಸೂದೆ ಅಂಗೀಕಾರಕ್ಕೆ ಈ ಅಧಿವೇಶನವನ್ನು ಬಳಸಿಕೊಳ್ಳುತ್ತಿದೆ. ಬೆಂಗಳೂರು ಅಭಿವೃದ್ಧಿ, ಬೆಂಗಳೂರು ಪಾಲಿಕೆ ಈ ತರಹದ ವಿಚಾರಗಳನ್ನು ತಂದಿದ್ದಾರೆ ಎಂದರು.…
BREAKING : ಬೆಂಗಳೂರಲ್ಲಿ IT ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ : 100 ಕೋಟಿ ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ!
ಬೆಂಗಳೂರು : ತೆರಿಗೆ ಅಕ್ರಮದಲ್ಲಿ ಭಾಗಿಯಾಗಿದ್ದ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ)ದ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ನಗರದ ಕೇಂದ್ರ ವಲಯದ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ, ಜೆ.ಸಿ ರಸ್ತೆ, ಎಸ್.ಪಿ ರಸ್ತೆಯಲ್ಲಿರುವ ವಿವಿಧ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಈ ವೇಳೆ ವ್ಯಾಪಾರಿಗಳ ಕಳ್ಳಾಟ ಬಹಿರಂಗವಾಗಿದೆ. ದೆಹಲಿ ಮತ್ತಿತರ ಕಡೆಗಳಿಂದ ಬಿಲ್ ರಹಿತವಾಗಿ ಹೆಚ್ಚಿನ ಸರಕು ಖರೀದಿಸಿ ತಂದು ಅವುಗಳನ್ನು ಬಿಲ್ ನೀಡದೆಯೇ ಮಾರಾಟ ಮಾಡುತ್ತಿದ್ದುದನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಳೆದ 15 ದಿನಗಳಲ್ಲಿ ಬೆಂಗಳೂರಿನ ಚಿಕ್ಕಪೇಟೆ, ಅವೆನ್ಯೂ ರೋಡ್, ಬಿ.ವಿ.ಕೆ. ಆಯ್ಯಂಗಾರ್ ರೋಡ್, ಜೆ.ಸಿ ರಸ್ತೆ, ಎಸ್.ಪಿ.ರಸ್ತೆಗಳಲ್ಲಿ 500ಕ್ಕೂ ಹೆಚ್ಚು ವ್ಯಾಪಕ ತಪಾಸಣೆ ನಡೆಸಲಾಗಿದ್ದು 100 ಕೋಟಿ ಮೌಲ್ಯದ ತೆರಿಗೆ ಮರೆಮಾಚಿ ನಡೆಸುತ್ತಿದ್ದ ವಹಿವಾಟು ಪತ್ತೆ ಮಾಡಲಾಗಿದೆ.ದಾಖಲೆ ಪರಿಶೀಲನೆ, ಡೇಟಾ ವಿಶ್ಲೇಷಣೆ ಮತ್ತು ಮುಂದಿನ ತನಿಖೆಗಳು ಪ್ರಗತಿಯಲ್ಲಿವೆ ಎಂದು ವಾಣಿಜ್ಯ ತೆರಿಗೆ ಇಲಾಖೆ ತಿಳಿಸಿದೆ. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಎಲೆಕ್ಟ್ರಾನಿಕ್ಸ್,…
ಬೆಂಗಳೂರು: ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರತಿಪಾದಿಸಿದ್ದಾರೆ. ಈ ವಿಷಯದ ಸಂಬಂಧ ಶುಕ್ರವಾರ ಮಾನ್ಯ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇರುವುದರಿಂದ, ಈ ಇಲಾಖೆಯು ಬಹಳ ದೊಡ್ಡ ಇಲಾಖೆಯಾಗಿರುವುದರಿಂದ ತ್ವರಿತಗತಿಯಲ್ಲಿ ವಿಶೇಷಚೇತರ ಹಕ್ಕುಗಳ ಜಾರಿ ಸೂಕ್ತ ಕಾಲದಲ್ಲಿ ತಲುಪಿಸಲು ತೊಂದರೆಯಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಮುಂದುವರಿದು, ಸರ್ಕಾರವು ವಿಶೇಷಚೇತನರಿಗೆ ಎಲ್ಲ ರೀತಿಯ ಹಕ್ಕುಗಳನ್ನು ನೀಡಿದ್ದರೂ ಆ ಹಕ್ಕುಗಳಿಗೆ ತಕ್ಕಂತೆ ಸೇವೆ ಒದಗಿಸಲು ವಿಳಂಭವಾಗುತ್ತಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿ ಮತ್ತು ವಿಸ್ತಾರವೂ ಮತ್ತೊಂದು ಕಾರಣವಿರಬಹುದೆಂದು ಭಾವಿಸಬಹುದಾಗಿದೆ ಎಂದಿರುವ ಸಚಿವರು, ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯನ್ನು ಸ್ಥಾಪಿಸಿದರೆ…
ಬೆಂಗಳೂರು : ದಾಖಲೆ ಅವಧಿಯಲ್ಲಿ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ನಡೆಸಿ, ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಅಷ್ಟೇ ತ್ವರಿತವಾಗಿ ಅರ್ಹರ ದಾಖಲೆ ಪರಿಶೀಲಿಸಿ ಪ್ರಮಾಣ ಪತ್ರ ಕೊಡುವ ಕೆಲಸವನ್ನೂ ಶನಿವಾರ ಆರಂಭಿಸಿತು. ನ.2ರಂದು ಕೆಸೆಟ್ ಲಿಖಿತ ಪರೀಕ್ಷೆ ಹಾಗೂ ನ.15ರಂದು ಫಲಿತಾಂಶ ಪ್ರಕಟಿಸಿತು. ನ.29ರಿಂದ ದಾಖಲೆ ಪರಿಶೀಲಿಸಿ, ಪ್ರಮಾಣ ಪತ್ರ ವಿತರಿಸುವ ಕೆಲಸಕ್ಕೂ ಚಾಲನೆ ನೀಡಿತು. ಕೆಇಎ ಕಚೇರಿಯ ನವೀಕೃತ ಸಭಾಂಗಣದಲ್ಲಿ ನಡೆದ ಪರಿಶೀಲನೆ ವೇಳೆ ಅರ್ಹರಾದ ಅಭ್ಯರ್ಥಿಗಳಿಗೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸಾಂಕೇತಿಕವಾಗಿ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು. ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ, ಕೆ-ಸೆಟ್ ಅಧ್ಯಕ್ಷರಾದ ವಿಶ್ರಾಂತ ಕುಲಪತಿ ಪ್ರೊ ಬಿ.ತಿಮ್ಮೇಗೌಡ ಅವರೂ ಈ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಿ, ಶುಭ ಕೋರಿದರು. ಬೆಳಗಿನ ಸಮಯದಲ್ಲಿ ಕನ್ನಡ ಹಾಗೂ ಮಧ್ಯಾಹ್ನದ ನಂತರ ಮ್ಯಾನೇಜ್ಮೆಂಟ್ ವಿಷಯಗಳ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯಿತು. ಬಳಿಕ ಅಲ್ಲೇ ದಾಖಲೆ ಸರಿ ಇದ್ದವರಿಗೆ ಪ್ರಮಾಣ…
ಬೆಂಗಳೂರು : ಇಂದು ಬೆಳಿಗ್ಗೆ ತಾನೇ ಮಂತ್ರಾಲಯದಿಂದ ಕೋಲಾರಕ್ಕೆ ವಾಪಸ್ ಬರುವಾಗ ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬಳಿ ಈ ಒಂದು ಅಪರಾಧ ಸಂಭವಿಸಿದೆ. ಸ್ಟೇರಿಂಗ್ ಸಮಸ್ಯೆಯಿಂದ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ ಪಲ್ಟಿ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಸರ್ಕಾರಿ ಬಸ್ ಪಲ್ಟಿಯಾಗಿದೆ. 29 ಪ್ರಯಾಣಿಕರ ಪೈಕಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತಂತೆ ಕರ್ನೂಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲಂಬೊ: ದಿತ್ವಾಹ್ ಚಂಡಮಾರುತದ ಅಬ್ಬರಕ್ಕೆ ಶ್ರೀಲಂಕಾದಲ್ಲಿ 123 ಜನರು ಸಾವನ್ನಪ್ಪಿದ್ದು, ಇನ್ನೂ 120ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.ಈ ಹಿನ್ನೆಲೆ ಸದ್ಯ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸಾವನ್ನಪ್ಪಿರುವವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈವರೆಗೆ 123 ಜನರು ಬಲಿಯಾಗಿದ್ದಾರೆ. 120ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಅಗತ್ಯ ಆಹಾರ ವಸ್ತುಗಳು, ನೈರ್ಮಲ್ಯ ಸಾಮಗ್ರಿಗಳನ್ನ ಹೊತ್ತ ಅ130 ವಿಮಾನವು ಮಧ್ಯರಾತ್ರಿ 1.30ರ ಸುಮಾರಿಗೆ ಕೊಲಂಬೊದ ಬಂಡರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ. ಬಳಿಕ ಅಲ್ಲಿನ ಭಾರತೀಯ ಹೈಕಮಿಷನ್ ಅಧಿಕಾರಿಗಳು ಮತ್ತು ಶ್ರೀಲಂಕಾ ವಾಯುಪಡೆಯ ಅಧಿಕಾರಿಗಳು ಪರಿಹಾರ ಸಾಮಗ್ರಿಗಳನ್ನ ಸ್ವೀಕರಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವುದನ್ನು ತಪ್ಪಿಸಲು ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ನಾಪತ್ತೆಯಾದ 34 ಮಂದಿಗಾಗಿ ಶೋಧ…
ಮಂಗಳೂರು : ಮಗಳಿಂದಲೇ ತಾಯಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಚಪ್ಪಲಿಯಲ್ಲಿ ತಾಯಿಗೆ ಪಾಪಿ ಮಗಳು ಥಳಿಸಿದ್ದಾಳೆ. ಕಾವೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಮಂಗಳೂರಿನ ಕಾವುರು ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಮಗಳು ತಾಯಿಯ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡುತ್ತಿರುವುದು ಮೊಬೈಲ್ನಲ್ಲಿ ಸೆರೆಯಾಗಿದೆ. ನೀನು ಮಗಳೇ ಅಲ್ಲ ಅಂತ ತಾಯಿ ಹೇಳುತ್ತಿದ್ದ ಆರೋಪ ಕೇಳಿಬಂದಿದೆ. ಮಾನಸಿಕ ಅಸ್ವಸ್ಥ ತಾಯಿ ನೀನು ಮಗಳೇ ಅಲ್ಲ ಅಂತ ಹೇಳುತ್ತಿದ್ದಳಂತೆ. ಮಗಳ ಮೇಲೆ ದೂರು ಹೊತ್ತು ಬರುತ್ತಿದ್ದಳಂತೆ. ಪದೇಪದೇ ಇದೇ ರೀತಿ ಆರೋಪ ಕೇಳಿ ಬಂದಿತ್ತು. ನಿನ್ನೆಯು ಸಹ ಮೆಟ್ಟಿಲ್ನಿಂದ ಇಳಿಯುವಾಗ ಪಾಪಿ ಮಗಳು ತಾಯಿಯನ್ನು ನೂಕಿದ್ದಾಳೆ ಅಲ್ಲದೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ್ದಾಳೆ. ತಾಯಿ ನಿರ್ಮಲ ಮತ್ತು ಮಗಳು ನೇತ್ರಾವತಿ ಉತ್ತರ ಕರ್ನಾಟಕದ ಮೂಲದವರು ಎಂದು ತಿಳಿದುಬಂದಿದೆ. ತಾಯಿ ಮಗಳ ನಡುವೆ ಆದಾಗ ಗಲಾಟೆ ನಡೆಯುತ್ತಿರುತ್ತದೆ. ತಾಯಿ ಸ್ವಲ್ಪ ಮಾನಸಿಕ ಅಸ್ವಸ್ಥತೆ ಎಂದು ತಿಳಿದುಬಂದಿದೆ. ಪ್ರತಿದಿನ…














