Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಾಮಾನ್ಯವಾಗಿ ಕುಡುಕರಿಗೆ ವೈದ್ಯರು ಕುಡಿಯಬೇಡಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಹೇಳುವುದು ಸಹಜ ಆದರೆ ಇದೀಗ ಬೆಂಗಳೂರಿನಲ್ಲಿ ಇದರ ತದ್ವಿರುದ್ಧವಾಗಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ವೈದ್ಯ ಹಾಗೂ ನರ್ಸ್ ಕುಡಿದ ಮತ್ತಿನಲ್ಲೇ ನಾಲ್ಕರಿಂದ ಐದು ಬಾರಿ ಇಂಜೆಕ್ಷನ್ ನೀಡಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ಕುಮಾರಸ್ವಾಮಿ ಲೇಔಟ್ ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಈ ಒಂದು ಅವಾಂತರ ನಡೆದಿದ್ದು, ಮತ್ತಿನಲ್ಲೇ ಡಾಕ್ಟರ್ ಮತ್ತು ನರ್ಸ್ ಯುವತಿ ಜೀವಕ್ಕೆ ಕುತ್ತು ತರುತ್ತಿದ್ದರು. ನವೆಂಬರ್ 3 ರಂದು ಜ್ವರ ನಿತ್ರಾಣದಿಂದ ಆಸ್ಪತ್ರೆಗೆ ಯುವತಿ ಭೇಟಿ ನೀಡಿದ್ದಾಳೆ. ಈ ವೇಳೆ ಕುಡಿದ ಮತ್ತಿನಲ್ಲಿದ್ದ ವೈದ್ಯ ಪ್ರದೀಪ್ ಮತ್ತು ನರ್ಸ್ ಮಹೇಂದ್ರ ಯುವತಿಯ ಕೈಹಿಡಿದು ಒಂದು ಇಂಜೆಕ್ಷನ್ ನೀಡಿದ್ದಾರೆ. ಬಳಿಕ ವೈದ್ಯ ಪ್ರದೀಪ್ ಕರೆದು ಯುವತಿಗೆ ನತ್ತೊಂದು ಇಂಜೆಕ್ಷನ್ ನೀಡುತ್ತಾನೆ. ಅಲ್ಲದೇ ಹಾಗೆ 4 ರಿಂದ 5 ಬಾರಿ ಇಂಜೆಕ್ಷನ್ ನೀಡಿದ್ದಾರೆ. ಮೈ ಕೈಗೆ ನಾಲ್ಕೈದು ಇಂಜೆಕ್ಷನ್ ಹಾಕಿದ್ದರಿಂದ…
ಬಳ್ಳಾರಿ : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯು ತೀವ್ರ ರಂಗೇರಿದ್ದು, ಇದರ ಮಧ್ಯೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಘಟ್ಟದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿ, ಮುಂದಿನ ಮೂರುವರೆ ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಇರಲಿದ್ದು ರಾಜ್ಯದ ಪೂರ್ಣ ಪ್ರಮಾಣದ ಮುಖ್ಯಮಂತ್ರಿ ನಾನೇ ಆಗಿರುತ್ತೇನೆ ಎಂದು ತಿಳಿಸಿದರು. ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬೊಮ್ಮಘಟ್ಟದಲ್ಲಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಂಡೂರಿನಲ್ಲಿ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್ ಗೆ ಮತ ನೀಡಿ. ಅನಿವಾರ್ಯವಾಗಿ ಸಂಡೂರು ಕ್ಷೇತ್ರದ ಉಪಚುನಾವಣೆ ಬಂದಿದೆ. ಈ ತುಕಾರಾಂ ಗೆ ನಾವೇ ಒತ್ತಡ ಹಾಕಿ ಎಂಪಿ ಚುನಾವಣೆ ಗೆಲ್ಲಿಸಿದ್ದೀರಿ. ಲೋಕಸಭಾ ಚುನಾವಣೆಯಲ್ಲಿ ತುಕಾರಾಮಗೆ ಆಶೀರ್ವಾದ ಮಾಡಿದ್ದೀರಿ.ಹೀಗಾಗಿ ಅನಿವಾರ್ಯವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು ಎಂದರು.
ರಾಮನಗರ : ಇಂದಿನ ಯುವಜನತೆಯ ಮನಸ್ಸು ಎಷ್ಟು ಸೂಕ್ಷ್ಮವಾಗಿದೆ ಎಂದರೆ ಕ್ಷುಲ್ಲಕ ಕಾರಣಕ್ಕೂ ಕೂಡ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇದೀಗ ರಾಮನಗರ ಜಿಲ್ಲೆಯ ಕನಕಪುರದಲ್ಲೂ ಕೂಡ ಅಂತಹ ಘಟನೆ ನಡೆದಿದ್ದು, ಮೊಬೈಲ್ ನೋಡುವ ವಿಚಾರಕ್ಕೆ ಸಹೋದರಿಯರಿಬ್ಬರ ನಡುವೆ ಗಲಾಟೆ ನಡೆದಿದ್ದು ಇದರಲ್ಲಿ ಓರ್ವ ಯುವತಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೌದು ಮೊಬೈಲ್ ನೋಡುವ ವಿಚಾರಕ್ಕೆ ಜಗಳವಾಗಿ ಕೆರೆಗೆ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿ ನಡೆದಿದೆ. ಕೂನೂರು ಗ್ರಾಮದ ನಿವಾಸಿ ಲಾವಣ್ಯ(17) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೊಬೈಲ್ ನೋಡುವ ವಿಚಾರವಾಗಿ ಲಾವಣ್ಯ ತನ್ನ ಸಹೋದರಿಯೊಂದಿಗೆ ಗಲಾಟೆ ಮಾಡಿಕೊಟ್ಟಿದ್ದಾಳೆ.ಇದರಿಂದ ಬೇಸರಗೊಂಡಿದ್ದ ಲಾವಣ್ಯ ಅಜ್ಜಿ ಮನೆಗೆ ಹೋಗುವುದಾಗಿ ತಿಳಿಸಿ ಮನನೊಂದು ಬಳಿಕ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಕುರಿತಂತೆ ಕನಕಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಪ್ರಕರಣದ A1 ಆರೋಪಿ ಆಗಿರುವಂತಹ ಪವಿತ್ರ ಗೌಡ ಜಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ಅನ್ವಯ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನವೆಂಬರ್ 21ಕ್ಕೆ ವಿಚಾರಣೆಯನ್ನು ಮುಂದೂಡಿತು. ಇಂದು ಪವಿತ್ರಾ ಗೌಡ ಜೊತೆಗೆ ಇತರೆ ಆರೋಪಿಗಳಾದ ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪವಿತ್ರ ಗೌಡ ಜಮೀನು ಅರ್ಜಿ ವಿತರಣೆ ನವೆಂಬರ್ 21ಕ್ಕೆ ಮಂದೂಡಿ ಹೈಕೋರ್ಟ್ ಆದೇಶಿಸಿತು. ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನೀಡಿ ಕಳೆದ ಒಂದು ವಾರದ ಹಿಂದೆ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಇದೀಗ ನಟ ದರ್ಶನವರು ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ…
ಶಿವಮೊಗ್ಗ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ ಗ್ರಾಮ ಲೆಕ್ಕೀಗ 25,000 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕಸಬಾ ಹೋಬಳಿಯಲ್ಲಿ ನಡೆದಿದೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತ್ 25,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವವರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಅವರನ್ನು ಹಿಡಿದಿದ್ದಾರೆ. ಅಗಸವಳ್ಳಿ ಬಳಿ ಇರುವ 2 ಎಕರೆ ಜಮೀನು ಕಿರಣ್ ಅಜ್ಜನ ಹೆಸರಿನಲ್ಲಿ ಇತ್ತು. ಅಜ್ಜನ ಹೆಸರಿನಿಂದ ಅಜ್ಜಿಯ ಹೆಸರಿಗೆ ಪೌತಿ ಖಾತೆ ಮಾಡಿಕೊಡಲು ಕಿರಣ್ ಅರ್ಜಿ ಸಲ್ಲಿಸಿದ್ದರು. ಪೌತಿ ಖಾತೆ ಮಾಡಿಕೊಡಲು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಪೌತಿ ಖಾತೆ ಮಾಡಿಕೊಡಲು ವಿಎ 25,000 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ ಲಂಚ ಸ್ವೀಕರಿಸುವವ ವೇಳೆ ಶಿವಮೊಗ್ಗ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ ಅವರು ಮಧ್ಯಂತರ ಜಾಮೀನು ಮೇಲೆ ಹೊರಗಡೆ ಇದ್ದಾರೆ. ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ಹೈ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈಲಿನಿಂದ ಬಿಡುಗಡೆ ಆದ ಕೂಡಲೇ ಒಂದು ವಾರದ ಒಳಗೆ ನಟ ದರ್ಶನ್ ಅವರ ಆರೋಗ್ಯದ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅವರ ಆರೋಗ್ಯದ ವೈದ್ಯಕೀಯ ವರದಿ ಸಲ್ಲಿಸಿದ್ದಾರೆ. ಹೈ ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಸರ್ಜರಿಗೆ ನಟ ದರ್ಶನ್ ಅವರು ಇನ್ನು ಒಪ್ಪಿಗೆ ಸೂಚಿಸಿಲ್ಲ. ಅತ್ಯಗತ್ಯವಾಗಿದ್ದರೆ ಮಾತ್ರ ಅವರಿಗೆ ಸರ್ಜರಿ ಮಾಡಲಾಗುತ್ತದೆ ಎಂದು ಹೈ ಕೋರ್ಟ್ ಗೆ ಸಲ್ಲಿಸಿರುವ ವರದಿ ಕುರಿತು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹಾಗಾಗಿ ನಟ ದರ್ಶನ್ ಗೆ ಇನ್ನು ಫಿಸಿಯೋಥೆರಪಿ ಮಾಡಬೇಕಾ…
ಬೆಂಗಳೂರು : ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಿನ್ನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಡಿ ಕುಮಾರಸ್ವಾಮಿ, ನಿಖಿಲ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಈ ಕುರಿತು ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ಈ ಕುರಿತಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯ ವೇಳೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ ನೀಡಿದೆ. ಪೊಲೀಸರನ್ನು ಕಳಿಸಿ ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದು ಪಡಿಸಲು ಯತ್ನಿಸುತ್ತಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಹಶ್ಮತ್ ಪಾಷಾ ವಾದ ಮಂಡಿಸಿದರು. ಎಫ್ಐಆರ್…
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಸತತ 2 ಗಂಟೆಗಳ ಕಾಲ ಲೋಕಾಯುಕ್ತ ವಿಚಾರಣೆಯನ್ನು ಎದುರಿಸಿದರು. ಇದೀಗ ಲೋಕಾಯುಕ್ತ ಎಸ್ಪಿ ಆಗಿರುವ ಉದೇಶ್ಶ್ ವಿರುದ್ಧವೇ ಸ್ನೇಹಮಯಿ ಕೃಷ್ಣ ಅವರು ದೂರು ಸಲ್ಲಿಸಿದ್ದಾರೆ. ಹೌದು ಸ್ನೇಹಮಯಿ ಕೃಷ್ಣ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಕರ್ತವ್ಯಲೋಪ ಎಸಗಿದ್ದಾರೆ ಎಚ್ಚರಿಕೆ ನೀಡಿ ಎಂದು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ದೂರಿನಲ್ಲಿ ಪ್ರಕರಣದ A1 ಆರೋಪಿಯ ವಿಚಾರಣೆ ನಡೆಸಬೇಕಿತ್ತು. ಆದರೆ ಅವರನ್ನು ಬಿಟ್ಟು A2, A3 ಹಾಗೂ A4 ವಿಚಾರಣೆ ನಡೆಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಅಲ್ಲದೇ ಮಹಜರಿನಲ್ಲಿ ಲೋಪ, ದಾಖಲೆ ಅವರ ಬಳಿಯೇ ಇಟ್ಟುಕೊಳ್ಳಬೇಕಿತ್ತು. ಆದರೆ ಅವರ ಬಳಿ ಇಟ್ಟುಕೊಳ್ಳದೇ ಕರ್ತವ್ಯಲೋಪವೆಸಗಿದ್ದಾರೆ. ದಾಖಲೆ ಪತ್ರಕ್ಕೆ ವೈಟ್ನರ್ ಹಾಕಿದ ಸಂಬಂಧ ವಿಚಾರಣೆ ನಡೆಸಿಲ್ಲ. ಲೈಟ್ ಬಿಟ್ಟವರನ್ನು ವಿಚಾರಣೆ ಮಾಡಿಲ್ಲ, ಈ ಬಗ್ಗೆ ತನಿಖೆ ನಡೆಸಿಲ್ಲ ಎಂದಿದ್ದಾರೆ. ಸಿಬಿಐಗೆ…
ಗದಗ : ತಂದೆಯೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇಸತ್ತು ತನ್ನ ಮೂರು ಮಕ್ಕಳೊಂಡಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಅಗ್ನಿಶಾಮಕದಳ ಸಿಬ್ಬಂದಿಗಳು ಓರ್ವ ಗಂಡು ಮಗುವಿನ ಶವವನ್ನು ಹೊರ ತೆಗೆದಿದ್ದಾರೆ. ಹೌದು ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೇದಾಂತ (3) ಪವನ (4) ಹಾಗೂ ಧನ್ಯಾ (6) ನದಿ ಪಾಲಾದ ಮಕ್ಕಳು ಎಂದು ಗುರುತಿಸಲಾಗಿದೆ. ಇದೀಗ ಓರ್ವ ಗಂಡು ಮಗುವಿನ ಶವ ಪತ್ತೆ ಹಚ್ಚಿ ಸಿಬ್ಬಂದಿ ಹೊರಗಡೆ ತೆಗೆದಿದ್ದಾರೆ. ಮಗುವಿನ ಶವ ಪತ್ತೆ ಹಚ್ಚಿರುವ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಮೀನುಗಾರರು, ಮತ್ತೆ ಇಬ್ಬರು ಮಕ್ಕಳು ಹಾಗೂ ತಂದೆಯ ಶವಕ್ಕಾಗಿ ಶೋಧ ಕಾರ್ಯ ಇದೀಗ ಮುಂದುವರೆದಿದೆ. ನಿನ್ನೆ ಮೂವರು ಮಕ್ಕಳ…
BREAKING : ಬೆಂಗಳೂರಲ್ಲಿ ‘ಆನ್ಲೈನ್ ರಮ್ಮಿ’ ಆಡಿ 5 ಲಕ್ಷ್ಮ ಹಣ ಕಳೆದುಕೊಂಡ ವ್ಯಕ್ತಿ : ಮನನೊಂದು ಆತ್ಮಹತ್ಯೆಗೆ ಶರಣು!
ಬೆಂಗಳೂರು : ಇತ್ತೀಚಿಗೆ ಜನರು ಕಷ್ಟಪಟ್ಟು ದುಡಿಯದೆ, ಅಡ್ಡ ದಾರಿಯಲ್ಲಿ ಬಹಳ ಬೇಗ ಶ್ರೀಮಂತರಾಗಲು ಬಯಸುತ್ತಿದ್ದಾರೆ. ಹಾಗಾಗಿ ಬಹಳಷ್ಟು ಜನರು ಆನ್ಲೈನ್ ಗೇಮ್ ಗೀಳಿಗೆ ಒಳಗಾಗಿ ಬೀದಿಗೆ ಬಂದದ್ದು ಅಲ್ಲದೆ, ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದೀಗ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಆನ್ಲೈನ್ ರಮ್ಮಿ ಗೇಮ್ ಆಡಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೆಪೇಟೆಯಲ್ಲಿ ಲಾರಿ ಮಾಲೀಕ ಚಂದ್ರಶೇಖರ್ (45) ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೆಪೇಟೆಯಲ್ಲಿ ಈ ಘಟನೆ ನಡೆದಿದೆ.ಮನೆಯಲ್ಲಿ ಪತ್ನಿ ಸೀರೆ ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಂದ್ರಶೇಖರ್ ಅವರು ಆನ್ಲೈನ್ ಗೇಮ್ ಅಲ್ಲಿ 5 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡಿದ್ದರು.ಘಟನೆ ಕುರಿತಂತೆ ಇದೀಗ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.













