Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅತ್ಯಂತ ಪ್ರಮುಖವಾದಂತಹ ಕ್ಷೇತ್ರ ಹಾಗೂ ಜಿದ್ದಾಜಿದ್ದಿ ಕ್ಷೇತ್ರ ಅಂದರೆ ಬೆಂಗಳೂರು ಗ್ರಾಮಾಂತರವಾಗಿತ್ತು. ಈ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸಿ ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದಾರೆ. ತಮ್ಮನ ಸೋಲಿನ ವಿಚಾರವಾಗಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಇದು ನನ್ನ ವಯಕ್ತಿಕ ಸೋಲು ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಸೋಲಿನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ನನ್ನ ವೈಯಕ್ತಿಕ ಸೋಲು.ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರದಲ್ಲಿ ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದೆ. ಬಿಜೆಪಿ ನಾಯಕರು ಕೂಡ ಒಳ್ಳೆಯ ತಂತ್ರಗಾರಿಕೆಯನ್ನು ಮಾಡಿದ್ದರು ಎಂದರು. ಜೆಡಿಎಸ್ ಬದಲಿ ಬಿಜೆಪಿಯಿಂದಲೇ ಅಭ್ಯರ್ಥಿಯನ್ನು ನಿಲ್ಲಿಸಿದರು. ಮಾಗಡಿ ರಾಮನಗರ ಕ್ಷೇತ್ರದಲ್ಲಿ ನಮಗೆ ಚೆನ್ನಾಗಿ ಮತ ಬಂದಿತ್ತು. ಆದರೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಕಡಿಮೆ ಮತಗಳು ಬಂದಿವೆ.ಎಚ್…
ಬೆಂಗಳೂರು : ಬೆಂಗಳೂರಲ್ಲಿ ಅತ್ಯಂತ ಭೀಕರವಾದ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದಂತಹ ಟ್ಯಾಂಕರ್ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ ತಮ್ಮನ ಮೇಲೆ ಹರಿದಿದೆ ಈ ವೇಳೆ ಸ್ಥಳದಲ್ಲೇ ಅಕ್ಕ-ತಮ್ಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡ ನಾಗಮಂಗಲದಲ್ಲಿ ನಡೆದಿದೆ. ಹೌದು ಇಂದು ಬೆಳಿಗ್ಗೆ ಕಾಲೇಜಿಗೆ ಹೋಗುವಾಗ ಈ ಒಂದು ದುರ್ಘಟನೆ ನಡೆದಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ದೊಡ್ಡ ನಾಗಮಂಗಲದಲ್ಲಿ ಈ ಒಂದು ದುರಂತ ಸಂಭವಿಸಿದೆ. ಮೃತ ಪಟ್ಟವರನ್ನು ಮಧುಮಿತ (20) ಹಾಗೂ ಆಕೆಯ ತಮ್ಮ ರಂಜನ್ (19)ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವೇಗವಾಗಿ ಬರುತ್ತಿದ್ದ ವಾಟರ್ ಟ್ಯಾಂಕರ್ ಮೊದಲು ಬೈಕ್ ಮಿರರಿಗೆ ಟಚ್ ಆಗಿದೆ. ಈ ವೇಳೆ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ತಮ್ಮ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಆಗ ಇಬ್ಬರ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ…
ವಿಜಯನಗರ : ಕಳೆದ ಎರಡು ದಿನಗಳ ಹಿಂದೆ ಇಡೀ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಅತ್ಯಂತ ಸಡಗರದಿಂದ ಶಾಲೆಗೆ ಆಗಮಿಸಿದ್ದಾರೆ.ಆದರೆ ವಿಜಯನಗರದಲ್ಲಿ ಒಂದು ಘೋರ ದುರಂತ ಸಂಭವಿಸಿದ್ದು ಬೆಳಿಗ್ಗೆ ಶಾಲೆಗೆ ತೆರಳಿದ ಬಾಲಕಿ ವಿದ್ಯುತ್ ಕಂಬವನ್ನು ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ಮೃತಪಟ್ಟ ಬಾಲಕಿ ಕಾತ್ರಿಕಾಯನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಶಾಲೆಗೆ ಹೋಗಿದ್ದ ಬಾಲಕಿಯು, ಗ್ರಾಮದಲ್ಲಿ ಮಳೆ ಬಂದಿರೋ ಹಿನ್ನೆಲೆ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿದೆ. ಬಾಲಕಿ ವಿದ್ಯುತ್ ಕಂಬ ಸ್ಪರ್ಶಿಸಿದ್ದರಿಂದ ಶಾಕ್ ಹೊಡೆದಿದೆ.ಕಣ್ಮುಂದೆ ಶಾಲೆಗೆ ಹೋಗಿದ್ದ ಬಾಲಕಿ ಕೆಲವೇ ಸಮಯಕ್ಕೆ ದುರ್ಮರಣಕ್ಕೀಡಾದದ್ದು ಕೇಳಿ ಕುಟುಂಬಸ್ಥರು ಸಹಜವಾಗಿ ಅಘಾತಕ್ಕೆ ಒಳಗಾಗಿದ್ದಾರೆ. ಗ್ರಾಮದಲ್ಲಿ ವಿದ್ಯುತ್ ಕಂಬಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾದ ಕಂಬಗಳನ್ನ ಹಾಕದೇ ಬೇಕಾಬಿಟ್ಟಿ ಹಾಕಿರುವ ವಿದ್ಯುತ್ ಕಂಬಗಳಿಂದ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿಯ ಈ ಒಂದು ಸಾವಿಗೆ ಹೊಣೆ ಯಾರು…
ಚಿಕ್ಕಮಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ನನ್ನು ಇದೀಗ ಎಸ್ಐಟಿ ಅಧಿಕಾರಿಗಳು ಬುಧವಾರ ಚಿಕ್ಕಮಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬುಧವಾರ ರಾತ್ರಿ ಚಿಕ್ಕಮಗಳೂರಿನಲ್ಲಿ ಅಜಿತ್ ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿದ್ದ ಚಾಲಕ ಅಜಿತ್ ಇರುವ ಮಾಹಿತಿಯನ್ನು ಆಧರಿಸಿ ಇದೀಗ ಆತನನ್ನು ಬಂಧಿಸಿದ್ದಾರೆ. ಮನೆಯಿಂದ ಸಂತ್ರಸ್ತೆ ಮಹಿಳೆಯನ್ನು ಕರೆದೋಯ್ದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಂಗಳೂರಿನಲ್ಲಿ ಅಜಿತ್ ಆಗಿ SIT ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಎಸ್ಐಟಿ ಅಧಿಕಾರಿಗಳು ಶೋಧ ನಡೆಸಿದರು. ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಅಜಿತ್ ಮಾವನ ಮನೆಯಲ್ಲಿ ಕೂಡ ಅಜಿತ್ ಕಾಗಿ ಹುಡುಕಾಟ ನಡೆಸಿದರು. ಸತ್ರಸ್ತೆ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಹಾಗೂ ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಆತನನ್ನು ಬಂಧಿಸಲಾಗಿದೆ. ಭವಾನಿ ರೇವಣ್ಣ ಸೂಚನೆಯ ಮೇರೆಗೆ…
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ ಐ ಟಿ ಪೊಲೀಸರು ತನಿಖೆಯನ್ನು ಚುರುಕುಗೋಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. 18 ನಕಲಿ ಖಾತೆಯನ್ನು ಸೃಷ್ಟಿಸಿ ಹಣ ವರ್ಗಾಯಿಸಿದ ಆರೋಪದ ಅಡಿ ಇದೀಗ ಆತನನ್ನು ಬಂಧಿಸಲಾಗಿದೆ. ಎಂಟು ದಿನಗಳ ಕಸ್ಟಡಿಗೆ SIT ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದರು. ತೆಲಂಗಾಣದ ನಲ್ಲಕುಂಟ ಪ್ರದೇಶದಲ್ಲಿರುವ ಸಹಕಾರ ಸಂಘದ ಅಧ್ಯಕ್ಷ ಎಂದು ಹೇಳಲಾಗುತ್ತಿದೆ.
ನವದೆಹಲಿ : ನಿನ್ನೆ ಪ್ರಕಟವಾದ ಲೋಕಸಭಾ ಚುನಾವಣೆ-2024 ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ ಕಡೆ ಜೂನ್ 8ರಂದು ಸಂಜೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದು, ಮತ್ತೆ ಪ್ರಧಾನಿ ಹುದ್ದೆಗೆ ಆಯ್ಕೆಯಾಗುವ ಸಾಧ್ಯತೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದಿರುವುದರಿಂದ 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲಿದ್ದಾರೆ ಎಂದು ವರದಿಯಾಗಿವೆ. ಇತ್ತ ಕಾಂಗ್ರೆಸ್ ಕೂಡ ಅಧಿಕಾರ ರಚನೆಗೆ ಪ್ರಯತ್ನ ಶುರು ಮಾಡಿದೆ. ಇಂದು ಎನ್ಡಿಎ ಮತ್ತು ಇಂಡಿ ಒಕ್ಕೂಟ ಮಹತ್ವದ ಸಭೆಯನ್ನು ನಡೆಸಲಿವೆ. ಇನ್ನೂ ಇತ್ತ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟಕ್ಕೆ (ಎನ್ಡಿಎ) ನಿಷ್ಠೆಯನ್ನು ಬದಲಾಯಿಸುವ ವದಂತಿಗಳನ್ನು ತಳ್ಳಿಹಾಕಿದ ತೆಲುಗು ದೇಶಂ ಪಕ್ಷ (ಟಿಡಿಪಿ) ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಗೆ ಬೆಂಬಲ ನೀಡುವುದನ್ನು…
ಬೆಂಗಳೂರು : ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಭರ್ಜರಿ ಜಯಗಳಿಸಿದ್ದಾರೆ. ಆ ಮೂಲಕ ರಾಜ್ಯದ ಅತ್ಯಂತ ಹಿರಿಯ ಸದಸ್ಯ ಎಂದು ಸಂಸತ್ತಿಗೆ ಪ್ರವೇಶಿಸಲಿದ್ದಾರೆ. ತಮ್ಮ ಗೆಲುವು ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಅಡ್ವಾನ್ಸ್ ಆಗಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಮೋಸದಿಂದ 9 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಮೋಸದಿಂದ 9ಸ್ಥಾನ ಗೆದ್ದಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಜೇತ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿಕೆ ನೀಡಿದರು. ಕಾಂಗ್ರೆಸಿಗರು ಅಡ್ವಾನ್ಸ್ ಆಗಿ ಗ್ಯಾರಂಟಿ ಕೊಟ್ಟು ಮೋಸ ಮಾಡಿದ್ದರು ಎಂದು ಅವರು ತಿಳಿಸಿದರು. ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇಲ್ಲಿ ಲೂಟಿ ಹೊಡೆದು ನೆರೆ ರಾಜ್ಯಗಳಿಗೆ ಹಣ ಕಳುಹಿಸಿಕೊಟ್ಟಿದ್ದಾರೆ.ಮೋಸದಿಂದ ಗೆದ್ದ ಕಾಂಗ್ರೆಸ್ ಜಯ ನಿಜವಾದ ಜಯ ಅಲ್ಲ ಜನರ ನಿರೀಕ್ಷೆಯಂತೆ ನಾವು ಕೆಲಸ ಮಾಡುತ್ತೇವೆ ಎಂದು ನೂತನ ಸಂಸತ್ ಸದಸ್ಯ ಗೋವಿಂದ ಕಾರಜೋಳ ಹೇಳಿಕೆ ನೀಡಿದರು.
ನಮ್ಮ ಬೆರಳಿನಲ್ಲಿರುವ ಉಗುರು ಬಹಳ ಶಕ್ತಿಶಾಲಿಯಾದ ನಮ್ಮ ದೇಹದ ಒಂದು ಅಂಶ ಎಂಬುದು ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ, ಏಕೆಂದರೆ ಕೇವಲ ಉಗುರಿನಿಂದ ಸಾಕಷ್ಟು ರೀತಿಯ ಮಾಟ-ಮಂತ್ರ ಪ್ರಯೋಗಗಳನ್ನು ಮಾಡಬಹುದು. ಹಾಗಾದರೆ ಉಗುರಿನಲ್ಲಿ ಯಾವ ರೀತಿಯ ಶಕ್ತಿ ಇದೆ ಹಾಗೂ ಇದರಿಂದ ಯಾವ ರೀತಿ ಲಾಭವನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…
ಬೆಂಗಳೂರು : ಉತ್ತರಾಖಂಡದ ಸಹಸ್ತ್ರತಾಲ್ಗೆ ಟ್ರೆಕ್ಕಿಂಗ್ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆಯಾಗಿದ್ದಾರೆ.ಪ್ರಸ್ತುತ ಕೆಲವರು ಈಗ ಕೊಖ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಹೌದು ಉತ್ತರಾಖಂಡದ ಸಹಸ್ತ್ರತಾಲ್ಗೆ ಟ್ರೆಕ್ಕಿಂಗ್ಗೆ ತೆರಳಿದ್ದ ಕರ್ನಾಟಕದ 18 ಮಂದಿ ನಾಪತ್ತೆಯಾಗಿದ್ದಾರೆ ಅದರ ಜೊತೆಗೆ ಮಹಾರಾಷ್ಟ್ರದ ಒಬ್ಬರು ಮತ್ತು ಮೂವರು ಸ್ಥಳೀಯ ಮಾರ್ಗದರ್ಶಕರನ್ನು ಒಳಗೊಂಡ ಚಾರಣ ತಂಡವು ಮೇ 29 ರಂದು ಸಹಸ್ತ್ರ ತಾಲ್ಗೆ ಟ್ರೆಕ್ಕಿಂಗ್ ಯಾತ್ರೆಗೆ ತೆರಳಿದ್ದು, ಜೂನ್ 7 ರಂದು ಹಿಂತಿರುಗಬೇಕು ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್ ತಿಳಿಸಿದ್ದಾರೆ. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ತಂಡವು ದಾರಿ ತಪ್ಪಿದೆ ಮತ್ತು ಟ್ರೆಕ್ಕಿಂಗ್ ಏಜೆನ್ಸಿ, ಹಿಮಾಲಯನ್ ವ್ಯೂ ಟ್ರ್ಯಾಕಿಂಗ್ ಏಜೆನ್ಸಿ, ನಾಲ್ವರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದರು ಮತ್ತು 13 ಮಂದಿಯನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದರು. ಈ ಕುರಿತಂತೆ…
ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿಆರ್ ಫಾರ್ಮರ್ಸ್ ನಲ್ಲಿ ಇತ್ತೀಚಿಗೆ ರೇವ್ ಪಾರ್ಟಿ ನಡೆದಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾಳನ್ನು ಕಸ್ಟಡಿಗೆ ಪಡೆಯಲು ಇದೀಗ ಸಿಸಿಬಿ ಮುಂದಾಗಿದೆ. ಎಂದು ತಿಳಿದು ಬಂದಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರನ್ನು ಸಿಸಿಬಿ ಅಧಿಕಾರಿಗಳು ಕಸ್ಟಡಿಗೆ ಪಡೆಯಲಿದ್ದು, ಹೆಚ್ಚಿನ ತನಿಖೆಯ ಸಲುವಾಗಿ ಸಿಸಿಬಿ ಅಧಿಕಾರಿಗಳು ಇದೀಗ ಹೇಮಾ ಅವರನ್ನು ಕಸ್ಟಡಿಗೆ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಹೇಮಾ ಪರಪ್ಪನ ಅಗ್ರಹಾರ ಜೈಲಲ್ಲಿ ಇದ್ದಾರೆ. ಜೈಲಿನಿಂದ ಸಿಸಿಬಿ ಕೋರ್ಟಿಗೆ ಹಾಜರುಪಡಿಸಲಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಡ್ರಗ್ಸ್ ಸೇವನೆ ಪಾರ್ಟಿ ಆಯೋಜನೆ ಸೇರಿ ಎಲ್ಲಾ ಆಯಾಮದಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ ಇಂದು ಕಸ್ತಡಿಯ ಪಡೆದು ಸಿಸಿಬಿ ತನಿಖೆ ಚುರುಕುಗೊಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಹಾಗಾಗಿ ತೆಲುಗು ನಟಿ ಹೇಮಾಳನ್ನು ಕಸ್ಟಡಿಗೆ ಪಡೆಯಲು ಸಿಸಿಬಿ ಮುಂದಾಗಿದೆ ಈಗಾಗಲೇ ಪೊಲೀಸರು ಹೇಮಾ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಿದ್ದಾರೆ.













