Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಕಳೆದ ಎಂಎಲ್ಸಿ ಚುನಾವಣೆ ಗಿಂತ ನಮ್ಮ ಪರ್ಫಾರ್ಮೆನ್ಸ್ ಉತ್ತಮವಾಗಿದೆ ರಾಜ್ಯದಲ್ಲಿ ಬಿಜೆಪಿಗೆ ಶೇಕಡ 9 ರಷ್ಟು ವೋಟ್ ಜಾಸ್ತಿಯಾಗಿದೆ ಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಕಾದುನೋಡಿ ಎಂದು ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಆಪರೇಷನ್ ಕಮಲದ ಮುನ್ಸೂಚನೆ ನೀಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನಕ್ಕೆ ಮಾತ್ರ ಸೀಮಿತವಾಗಿತ್ತು ಆದರೆ ಈ ಬಾರಿ ಆ ಒಂದು ಸ್ಥಾನಗಳನ್ನು 9ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಬಿಜೆಪಿಗೆ ಟಕ್ಕರ್ ನೀಡಿದೆ. ಹೀಗಾಗಿ ಈ ಬಾರಿ ಒಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 17 ಕಾಂಗ್ರೆಸ್ ಒಂಬತ್ತು ಹಾಗೂ ಜೆಡಿಎಸ್ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ. ಇನ್ನು ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದ ಜನರಿಗಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ರಾಜ್ಯ ಸರ್ಕಾರದ ಹಣಬಲ ಅಧಿಕಾರ ಬಲ ಹಾಗೂ ಗ್ಯಾರೆಂಟಿ ಯಿಂದ ನಮಗೆ…
ಬೆಂಗಳೂರು : ರಾಜ್ಯದ ಪ್ರಮುಖ ಲೋಕಸಭಾ ಕ್ಷೇತ್ರ ಆಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಯ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಹ್ಯಾಟ್ರಿಕ್ ಗೆಲುವು ಕಂಡ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಗೆಲವು ಖಚಿತವಾದ ನಂತರ ಸುದ್ದಿಗಾರರನ್ನಾಗಿ ಮಾತನಾಡಿದವರು ಇದೊಂದು ಕಾರ್ಯಕರ್ತರ ಐತಿಹಾಸಿಕ ಗೆಲುವಾಗಿದೆ ಎಂದು ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕರ್ತರ ಗೆಲುವು ನೂತನ ಸಂಸದ ಡಾ. ಸಿ.ಎನ್ ಮಂಜುನಾಥ್ ಹೇಳಿಕೆಯನ್ನು ನೀಡಿದ್ದು, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಈ ಒಂದು ಚುನಾವಣೆಯಲ್ಲಿ ಒಟ್ಟಾಗಿ ಶ್ರಮಿಸಿದ್ದಾರೆ. ಗೆಲವು ಕಾರ್ಯಕರ್ತರು ಮತದಾರರಿಗೆ ಅರ್ಪಿಸುತ್ತೇನೆ.ಆರೋಗ್ಯ ಕೃಷಿ ಶಿಕ್ಷಣ ಕ್ಷೇತ್ರದಲ್ಲಿ ಗಮನಹರಿಸುತ್ತೇನೆ ಎಂದು ಬೆಂಗಳೂರಲ್ಲಿ ನೂತನ ಸಂಸದ ಡಾ. ಸಿಎಂ ಮಂಜುನಾಥ್ ಹೇಳಿದರು. ಬಹಳ ಪ್ರಮುಖವಾದದ್ದು ಅಂದರೆ ಆರೋಗ್ಯ ಕ್ಷೇತ್ರ ಈ ಒಂದು ಕ್ಷೇತ್ರದಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತೇನೆ ಅಲ್ಲದೆ ಮೂಲಭೂತ ಸೌಕರ್ಯಗಳ ಕುರಿತಂತೆ, ಕೃಷಿಯಾಗಿರ್ಬೋದು ಶಿಕ್ಷಣ ಆಗಿರಬಹುದು ಉಳಿದ ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕವಾಗಿ ಕೆಲಸ ಮಾಡಿ ಅಭಿವೃದ್ಧಿಯ…
ಕ್ಕಬಳ್ಳಾಪುರ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ಮನೆಯ ಮೇಲೆ ಇದೀಗ ಕಲ್ಲುತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೆಡಿಗಳು ಕಲ್ಲು ತೂರಾಟ ನಡೆಸಿದ್ದು, ಮನೆಯ ಕಿಟಕಿ, ಗಾಜು ಒಡೆದು ಪುಡಿ ಪುಡಿ ಮಾಡಿದ್ದಾರೆ. ಚುನಾವಣೆಯಲ್ಲಿ ಡಾ. ಸುಧಾಕರ್ ಗೆ ಗೆಲುವು ಸಿಕ್ಕ ಹಿನ್ನೆಲೆಯಲ್ಲಿ ಇದೀಗ ಕಲ್ಲು ತೂರಾಟ ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ. ತಕ್ಷಣ ಚಿಕ್ಕಬಳ್ಳಾಪುರ ನಗರ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ…
ಹುಬ್ಬಳ್ಳಿ : ಈ ಬರಿಯಾ ಲೋಕಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಆನಂದ್ ಅಸೂಟಿ ಎದುರು ಬಿಜೆಪಿಯ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.ಈ ಮೂಲಕ ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ. ಗೆಲುವು ಕಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನವರು ಕ್ಷೇತ್ರದಲ್ಲಿ ಹಣ ಹಂಡ ಹಂಚಿದರೂ ಕೂಡ ಕ್ಷೇತ್ರದ ಜನತೆ ನನ್ನ ಕೈ ಬಿಡಲಿಲ್ಲ.ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಪಪ್ರಚಾರದ ಪರಾಕಾಷ್ಠೆ ಮುಟ್ಟಿತ್ತು. ಅವರು ಪ್ರಚಾರ ಮಾಡುವುದನ್ನು ಬಿಟ್ಟು ಕೇವಲ ಅಪಪ್ರಚಾರದಲ್ಲೇ ತೊಡಗಿದ್ದರು. ದೇಶ ಮತ್ತು ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡುತ್ತಿರಲಿಲ್ಲ ಎಂದರು. ನಿರೀಕ್ಷೆಗೆ ತಕ್ಕಂತೆ ಸೀಟು ಬಂದಿಲ್ಲ. ಎಲ್ಲಿ ಏನಾಗಿದೆ ಎಂಬ ವಾಸ್ತವವನ್ನು ನೋಡಬೇಕಾಗಿದೆ. ಆದಷ್ಟು ಶೀಘ್ರವೇ ದೆಹಲಿಗೆ ತೆರಳುತ್ತೇನೆ. ಈ ಬಗ್ಗೆ ವರಿಷ್ಠರ ಜೊತೆಗೆ ಚರ್ಚಿಸುತ್ತೇನೆ. ದೇಶದಲ್ಲಿ ಚುನಾವಣೆ ಆಗಿದ್ದು ಎನ್ಡಿಎ ಹಾಗೂ ‘ಇಂಡಿ’ ಮೈತ್ರಿ ಮಧ್ಯೆ. ಆದ್ದರಿಂದ ನಮ್ಮ ಜೊತೆಗೆ ನಿಂತವರು ಗಟ್ಟಿಯಾಗಿ ನಿಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನತಾ…
ಬೆಂಗಳೂರು : ಮುಂಗಾರು ಮಾರುತಗಳು ಬಹತೇಕ ರಾಜ್ಯವನ್ನು ಆವರಿಸಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳ ಕಾಲಕ್ಕೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ, ಉತ್ತರ ಕರ್ನಾಟಕ ಭಾಗದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಗೋವಾ, ಕರ್ನಾಟಕ ಮತ್ತು ತೆಲಂಗಾಣದ, ರಾಯಲಸೀಮೆಯಲ್ಲಿ ಮುಂದುವರೆದಿದೆ. ಮುಂದಿನ 3 ರಿಂದ 4 ದಿನಗಳಲ್ಲಿ ಪಶ್ಚಿಮ, ಕೇಂದ್ರ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮುಂಗಾರು ಮಾರುತಗಳು ಅವರಿಸಕೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು…
ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಕರ್ನಾಟಕ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳು ಸಂಸತ್ತು ಪ್ರವೇಶಿಸಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹಾವೇರಿಯಿಂದ ಸ್ಪರ್ದಿಸಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಂಡ್ಯದಿಂದ ಸ್ಪರ್ಧಿಸಿದ್ದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಭಾರಿ ಗೆಲುವು ಕಂಡು ಸಂಸತ್ತು ಪ್ರವೇಶಿಸಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಇದಕ್ಕೂ ಮೊದಲೇ ಸಂಸದರಾಗಿದ್ದರು. ಆದರೆ, ಈಗ ಮತ್ತೆ ಲೋಕಸಭೆ ಪ್ರವೇಶಿಸುವುದಿಲ್ಲ ಎಂದೇ ಭಾವಿಸಲಾಗಿತ್ತು. ಬದಲಾದ ಮೈತ್ರಿ ರಾಜಕೀಯ ಸನ್ನಿವೇಶದಲ್ಲಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ. ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲವೆಂದು ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ , ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಹಾಗೂ ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ನೀಡಿ ಬಿಜೆಪಿಗೆ ವಾಪಸ್ ಆಗಿದ್ದರು ಇದೀಗ ಬೆಳಗಾವಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು…
ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಫಲಿತಾಂಶ ಬಂದಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ 17 ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಗೆದ್ದಿವೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ 20ಮಂದಿ ಮೊದಲ ಬಾರಿಗೆ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಲಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಬೆಂ. ಗ್ರಾಮಾಂತರದ ಡಾ.ಸಿ.ಎನ್.ಮಂಜುನಾಥ್, ತುಮಕೂರಿನ ವಿ.ಸೋಮಣ್ಣ, ಮೈಸೂರಿನ ಯದುವೀರ್, ಉಡುಪಿ- ಚಿಕ್ಕಮಗಳೂರಿನ ಕೋಟ ಶ್ರೀನಿವಾಸ ಪೂಜಾರಿ, ಚಿತ್ರದುರ್ಗದ ಗೋವಿಂದ ಕಾರಜೋಳ, ಬೆಳಗಾವಿಯ ಶೆಟ್ಟರ್, ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್, ಹಾವೇರಿಯ ಬೊಮ್ಮಾಯಿ, ಉತ್ತರ ಕನ್ನಡದ ಹೆಗಡೆ ಕಾಗೇರಿ, ದಕ್ಷಿಣ ಕನ್ನಡದ ಕ್ಯಾ.ಬ್ರಿಜೇಶ್ ಚೌಟ, ಕೋಲಾರದ ಮಲ್ಲೇಶ್ ಮೊದಲ ಸಲ ಗೆದ್ದಿದ್ದಾರೆ. ಅದೇ ರೀತಿಯಾಗಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬೀದರ್ ನ ಸಾಗರ್ ಖಂಡ್ರೆ, ರಾಯಚೂರಿನ ಕುಮಾರ ನಾಯಕ್, ಬಳ್ಳಾರಿಯ ತುಕಾರಾಂ, ಚಿಕ್ಕೋಡಿಯ ಪ್ರಿಯಾಂಕಾ, ದಾವಣಗೆರೆಯ ಪ್ರಭಾ, ಗುಲ್ಬರ್ಗಾದ ರಾಧಾಕೃಷ್ಣ, ಕೊಪ್ಪಳದ ರಾಜಶೇಖರ್, ಹಾಸನದ ಶ್ರೇಯಸ್, ಚಾಮರಾಜ ನಗರದ ಸುನೀಲ್ ಬೋಸ್ ಮೊದಲ ಬಾರಿಗೆ ಗೆಲುವು ಸಾಧಿಸಿದ್ದಾರೆ.
ಪಂಜಾಬ್ : ಯಾವುದೇ ಚುನಾವಣೆ ಇರಲಿ ಅಭ್ಯರ್ಥಿಗಳು ಭರ್ಜರಿಯಾಗಿ ರ್ಯಾಲಿ, ಸಮಾವೇಶ ನಡೆಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸರ್ಕಸ್ ಮಾಡುವುದನ್ನು ನಾವು ನೋಡಿದ್ದೇವೆ. ಆದರೆ ಇದರ ನಡುವೆ ಇಬ್ಬರು ಅಭ್ಯರ್ಥಿಗಳು ಜೈಲಿನಲ್ಲಿದ್ದುಕೊಂಡೇ ಈ ಬಾರಿ ಗೆಲುವು ಸಾಧಿಸಿದ್ದಾರೆ. ಹೌದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪಂಜಾಬ್ನ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಕುಲ್ಲೀರ್ಸಿಂಗಾ ಜೀರಾ ವಿರುದ್ಧ 1.97 ಲಕ್ಷ ಅಂತರದಿಂದ ಜಯ ಸಾಧಿಸಿದ್ದಾರೆ. ಇನ್ನು ಕಾಶ್ಮೀರದ ಬಾರಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಬ್ದುಲ್ ರಶೀದ್ ಗೆಲುವು ಪಡೆದಿದ್ದಾರೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮಾಜಿ ಮುಖ್ಯಮಂತ್ರಿ ನ್ಯಾಷನಲ್ ಕಾನ್ವರೆನ್ಸ್ ಪಕ್ಷದ ಒಮರ್ ಅಬ್ದುಲ್ಲಾ ಅಬ್ದುಲ್ಲಾ ವಿರುದ್ದ ವಿರುದ್ದ ಅಬ್ದುಲ್ ಅಬ್ದುಲ್ ರಶೀದ್ ಸ್ಪರ್ಧಿಸಿದ್ದು, 1 ಲಕ್ಷ ಮತ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಭಯೋತ್ಪಾದನಾ ಕಾನೂನಿನಡಿಯಲ್ಲಿ 2019ರಲ್ಲಿ ರಶೀದ್ ಅವರ ಬಂಧನವಾಗಿತ್ತು. ರಶೀದ್ ಪರ ಅವರ ಪುತ್ರ ಅಬ್ರಾರ್ ಪ್ರಚಾರ ನಡೆಸಿದ್ದರು.
ನವದೆಹಲಿ : ನಿನ್ನೆ ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಗದ್ದುಗೆ ಇರುವ ಸಂಭ್ರಮದಲ್ಲಿದ್ದರೆ, ಇತ್ತ ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕಚೇರಿ ಎದುರು ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಹೌದು ರಾಜಧಾನಿ ದೆಹಲಿಯಲ್ಲಿರುವ ಬಿಜೆಪಿ ಕಚೇರಿ ಎದುರು ವ್ಯಕ್ತಿಯೊಬ್ಬರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಸಂಜೆ ವೇಳೆಗೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ವ್ಯಕ್ತಿಯೊಬ್ಬರು ಈ ಕೃತ್ಯಕ್ಕೆ ಕೈ ಹಾಕಿದ್ದಾರೆ. ಸೀಮೆ ಎಣ್ಣೆಯನ್ನು ಮೈ ಮೇಲೆ ಸುರಿದು ಕೊಳ್ಳುವುದನ್ನು ಗಮನಿಸಿದ ಪೊಲೀಸರು ಕೂಡಲೇ ಆತನನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ.
ನಿರುದ್ಯೋಗ ನೆಪ ಹೇಳಿ ವಿಚ್ಛೇದಿತ ಪತ್ನಿ, ಪುತ್ರಗೆ ಜೀವನಾಂಶ ನೀಡುವುದರಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ : ಹೈಕೋರ್ಟ್
ಬೆಂಗಳೂರು : ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ ಹಾಗಾಗಿ ಪತಿ ವಿಚ್ಚೆಧೀತ ಪತ್ನಿ ಹಾಗೂ ಆಕೆಯ ಅಪ್ರಾಪ್ತ ಮಗುವಿಗೆ ಜೀವನಾಂಶ ನೀಡಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿತು. ವಿಚ್ಛೇದಿತ ಪತ್ನಿಗೆ ಮಾಸಿಕ ಏಳು ಸಾವಿರ ಹಾಗೂ ಅಪ್ರಾಪ್ತ ಮಗುವಿಗೆ ಮೂರುಸಾವಿರ ರು. ಜೀವನಾಂಶ ಪಾವತಿಸುವಂತೆ ತನಗೆ ಸೂಚಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯ ಮೂರ್ತಿ ಸಚಿನ್ ಶಂಕರ್ ಮುಗ್ದಮ್ ಅವರ ಪೀಠ ಈ ಸ್ಪಷ್ಟನೆ ನೀಡಿ, ಕೌಟುಂಬಿಕ ನ್ಯಾಯಾಲಯದ ಆದೇಶ ದಂತೆ ವಿಚ್ಛೇದಿತ ಮತ್ತು ಮಗುವಿಗೆ ಜೀವನಾಂಶ ಪಾವತಿಸುವಂತೆ ಅರ್ಜಿದಾರನಿಗೆ ಸೂಚಿಸಿದೆ. ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಅರ್ಜಿದಾರ ಸದ್ಯ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು. ಈವಾದ…












