Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೌದು ಬಂಧಿತ ಆರೋಪಿಗಳನ್ನ ಭರತ್ ಅಲಿಯಾಸ್ ರಕ್ಷಿತ್, ಹಾಗೂ ದಿನೇಶ್ ಕುರ್ತಾ ಎಂದು ಹೇಳಲಾಗುತ್ತಿದೆ. ಸಿಸಿ ಕ್ಯಾಮೆರಾ ದೃಶ್ಯದ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ. ರಾಜ್ಯಪಾಲರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೇಸೆದಿರುವಾಗಿ ಇದೀಗ ತಪ್ಪು ಒಪ್ಪಿಕೊಂಡಿದ್ದಾರೆ. ಪೊಲೀಸರ ವಿಚಾರಣೆ ಭರತ್ ಮತ್ತು ದಿನೇಶ್ ತಪ್ಪನ್ನು ಒಪ್ಪಿಕೊಂಡಿದ್ದಾರೆ.ಭರತ್ ವಿರುದ್ಧ ಈ ಹಿಂದೆ ಹಲ್ಲೆ ಆರೋಪದ ಅಡಿ ಇದುವರೆಗೂ 3 ಪ್ರಕರಣಗಳು ದಾಖಲಾಗಿವೆ. ಭರತ್ ಬಂಟ್ವಳ ತಾಲೂಕಿನ ಬೋಳಂತೂರಿನ ರಾಘವ ಭಂಡಾರಿ ಪುತ್ರನಾಗಿದ್ದು, ಇನ್ನೂ ದಿನೇಶ್ ಕನ್ಯಾನದಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ಬಂಟ್ವಾಳ ತಾಲೂಕಿನ…
ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್ಐಟಿ ಅಧಿಕಾರಿಗಳು ಎಚ್ಡಿ ರೇವಣ್ಣ ವಿರುದ್ಧ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಎಸ್ ಐ ಟಿ ಸಲ್ಲಿಸಿದ್ದ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ. ಹೌದು ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಸಿದಂತೆ ಎಚ್ ಡಿ ರೇವಣ್ಣ ಜಾಮೀನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. . ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದ ಹೈಕೋರ್ಟ್, ಸತೀಶ್ ಬಾಬು, ಮಧು ಗೌಡ, ಕೆಎ ರಾಜಗೋಪಾಲ್, ಎಚ್ ಕೆ ಸುಜಯ್, ಹೆಚ್ ಏನ್ ಮಧು, ಎಸ್ ಟಿ ಕೀರ್ತಿಗೆ ಜಾಮೀನು ಮಂಜೂರು ಮಾಡಿ ನ್ಯಾ.ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.
ಬೆಂಗಳೂರು : ಇತ್ತೀಚಿಗೆ ಯುವ ಜನತೆ ಆನ್ಲೈನ್ ಗೇಮ್ ಎಂಬ ಮಾಯಾ ಲೋಕಕ್ಕೆ ಮರುಳಾಗಿ ಮಾಡಬಾರದ ಕೆಲಸವನ್ನು ಮಾಡಿ, ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದೀಗ ಉದಾಹರಣೆ ಎಂಬಂತೆ ಬೆಂಗಳೂರಿನಲ್ಲಿ ಆನ್ಲೈನ್ ಗೇಮಿನ ಹುಚ್ಚಾಟಕ್ಕೆ ಮನೆಯಿಂದ ಒಂದು ಲಕ್ಷ ರೂಪಾಯಿ ತೆಗೆದುಕೊಂಡು ಯುವಕನೊಬ್ಬ ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ಟಿ.ದಾಸರಹಳ್ಳಿಯಲ್ಲಿ ನಿವಾಸಿಗಳಾದ ಗೌರಮ್ಮ ಮತ್ತು ನಾಗರಾಜ್ ದಂಪತಿಗಳ ಪುತ್ರ ವರುಣ್ (18) ಯಲಹಂಕದ ಶೇಷಾದ್ರಿಪುರ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದನು. ಈತನಿಗೆ ವಿಪರೀತ ಆನ್ಲೈನ್ ಗೇಮ್ ಆಡುತ್ತಿದ್ದನು. ಒಂದು ತಿಂಗಳ ಹಿಂದೆ ಆನ್ಲೈನ್ ಗೇಮ್ನಲ್ಲಿ 20 ಸಾವಿರ ಕಳೆದಿದ್ದಲ್ಲದೆ, ಮನೆಯಲ್ಲಿದ್ದ ಒಂದು ಲಕ್ಷ ರೂಪಾಯಿ ನಗದು ಸಮೇತ ನಾಪತ್ತೆಯಾಗಿದ್ದಾನೆ. ತಿಂಗಳಿಂದ ಮನೆಗೆ ಬಾರದ ಮಗನಿಗಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ. ವರುಣ್ ಬೆಂಗಳೂರಿನ ಯಲಹಂಕದ ಶೇಷಾದ್ರಿಪುರ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ. ವರುಣ್ ಆನ್ಲೈನ್ ಗೇಮ್ನಲ್ಲಿ 20 ಸಾವಿರ ರೂ. ಕಳೆದು, ಮನೆಯಿಂದ ಪರಾರಿಯಾಗಿದ್ದಾನೆ. ಮಗನನ್ನು ಹುಡುಕಿಕೊಡುವಂತೆ ಪೋಷಕರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಇದೀಗ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಳ್ಳಾರಿ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮತ್ತೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತರು ಹಾಗೂ ಸಂಬಂಧಿಕರ ಮನೆ ಕಚೇರಿ ಸೇರಿದಂತೆ ವಿವಿದೇಡೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು. ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆದಿದೆ. ಆಪ್ತ ನಾಗೇಂದ್ರ ಸಂಬಂಧಿ ನಿವಾಸ ಸೇರಿದಂತೆ, ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೂ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ…
ಶಿವಮೊಗ್ಗ : ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಪಿಸಿ ಹಾಗು ವ್ಯಾಪಾರಿ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸಂಚಾರಿ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ರಮೇಶ್ ಬೀದಿ ಬದಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದಾನೆ. ತಕ್ಷಣ ಹಲ್ಲೆಗೆ ಒಳಗಾದ ವ್ಯಾಪಾರಿಯನ್ನು ಮೆಗಾನ್ ಆಸ್ಪತ್ರೆಗೆ ದಾಖಲೆ ಸಿಹಿ ಚಿಕಿತ್ಸೆ ನೀಡಲಾಗುತ್ತಿದೆ. ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದವನ ಜೊತೆ ಪಿಸಿ ವಾಗ್ವಾದ ನಡೆಸಿದ್ದಾರೆ. ಬಸವರಾಜ ಎನ್ನುವ ವ್ಯಾಪಾರಿ ಮೇಲೆ ಪಿಸಿ ರಮೇಶ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಪರಿಣಾಮ ಬೀದಿ ಬದಿ ವ್ಯಾಪಾರಿ ಬಸವರಾಜ್ ತಲೆಯಿಂದ ರಕ್ತ ಸೋರುತ್ತಿದೆ. ಗಾಯಾಳು ಬಸವರಾಜ ನಾನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪಿ ಸಿ ರಮೇಶ್ ವರ್ತನೆಯನ್ನು ಖಂಡಿಸಿ, ಇದೀಗ ರಸ್ತೆ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹಲ್ಲೆ ನಡೆಸಿದ ಕಾನ್ಸ್ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಎಸ್ ಪಿ ಭರವಸೆಯ…
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುತ್ತಿದ್ದು ಅಲ್ಲಿನ ಎರಡು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೇ ರೀತಿಯಾಗಿ ಭಾರಿ ಮಳೆ ಮುಂದುವರೆದರೆ ಇನ್ನೂ ಕೆಲವು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ. ಉಡುಪಿಯಲ್ಲಿ ಜನ ಜೀವನ ಅಸ್ತವ್ಯಸ್ಥ ಉಡುಪಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಸೊತ್ತುಗಳು ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನೆರೆ ಯಿಂದ ಸಿಲುಕಿರುವ ಮನೆಗಳಿಂದ 30ಕ್ಕೂ ಅಧಿಕ ಮಂದಿಯನ್ನು ಅಗ್ನಿಶಾಮಕ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಪುಂಡು ಪೋಕರಿಗಳ ಜೊತೆಗೆ ಕಾಮುಕರ ಅಟ್ಟಹಾಸ ಕೂಡ ಮಿತಿ ಮೀರಿದೆ. ಇದೀಗ ಕಾಲೇಜು ಹುಡಿಗಿಯರು ಪಾದಚಾರಿ ರಸ್ತೆಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ತನ್ನ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ವಿಕೃತಿ ಮೆರೆದ ಪಾಪಿಯನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಹೌದು ಬೆಂಗಳೂರಿನ ವಿ.ವಿ.ಪುರಂ ಕಾಲೇಜಿನ ಬಳಿ ಸ್ಕೂಟರ್ನಲ್ಲಿ ಹೋಗುವಾಗ ಕಾಲೇಜು ಹುಡುಗಿಯರು ಪಾದಾಚಾರಿ ರಸ್ತೆ ಮೇಲೆ ನಡೆದುಕೊಂಡು ಹೋಗುವಾಗ ತನ್ನ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಅಯೂಬ್ ಉರ್ ರೆಹೆಮಾನ್ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ವಿವಿಪುರಂ ಪೊಲೀಸರು, 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಮರ್ಮಾಂಗ ತೋರಿಸುತ್ತಿದ್ದ ವ್ಯಕ್ತಿ ಯುವಕನಲ್ಲ, ಈತ ಅಯೂಬ್ ಉರ್ ರೆಹಮಾನ್ ಎಂಬ 48 ವರ್ಷದ ಅಂಕಲ್. ತನಗೆ ಮಕ್ಕಳ ವಯಸ್ಸಿನ ವಿದ್ಯಾರ್ಥಿನಿಯರ ಮುಂದೆ ಹೀಓಗೆ ಅಶ್ಲೀಲವಾಗು ನಡೆದುಕೊಂಡಿದ್ದಾರೆ. ಸ್ಕೂಟರ್ನಲ್ಲಿ ಹೋಗುವಾಗ ಕಾಲೇಜು ವಿದ್ಯಾರ್ಥಿನಿಯರಿಗೆ…
ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ (41) ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಹೋಗಿದ್ದ ಪ್ರತಾಪ್ ಕುಮಾರ್ ವಿಷ ಸೇವಿಸಿದ್ದಾರೆ. ಅಸಲಿಗೆ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ಇಲ್ಲಿದೆ ಸಂಪೂರ್ಣ ವಿವರ. ಮಕ್ಕಳಾಗದಿದ್ದಕ್ಕೆ ಕುಗ್ಗಿ ಮಾನಸಿಕವಾಗಿ ಹೋಗಿದ್ದರು ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್ ಮೃತಪಟ್ಟಿದ್ದಾರೆ. ಇನ್ನು ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ಮಗಳ ಜೊತೆ 2008 ರಲ್ಲಿ ಮದುವೆ ಆಗಿತ್ತು. ಮಕ್ಕಳ ಆಗಿಲ್ಲ ಎನ್ನುವ ವಿಚಾರದಲ್ಲಿ ಕೊರಗಿತ್ತು. ಡಿ…
ಉಡುಪಿ : ಕಳೆದೊಂದು ವಾರದಿಂದ ಕರಾವಳಿಯಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆ ಪ್ರವಾಹ ಅವಾಂತರ ಕೂಡ ಸೃಷ್ಟಿಯಾಗಿದೆ.ಈ ಮಧ್ಯ ಮತ್ತೆ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಂತೂ ರಣ ಮಳೆಯಿಂದಾಗಿ ನೆರೆ ಉಂಟಾಗಿದೆ. ಈಗಾಗಲೇ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ರಕ್ಷಣಾ ತಂಡ ಸಹ ಬೀಡು ಬಿಟ್ಟಿದೆ. ಹೀಗಿರುವಾಗ ಇಂದಿನಿಂದ ಮತ್ತೆ ಮಳೆ ಆರ್ಭಟ ಮುಂದುವರಿಕೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿಯಲ್ಲಿ ಜು.9 ರಂದು ಬಾರೀ ಮಳೆಯಾಗುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಂಜಿನಿಯರಿಂಗ್ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಐಟಿಐ ಮತ್ತು ಸ್ನಾತಕೋತ್ತರ…
ದಾವಣಗೆರೆ : ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಗರ ಸಭೆ ಆಯುಕ್ತ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಹೌದು ಹರಿಹರ ನಗರಸಭೆ ಆಯುಕ್ತ ಬಸವರಾಜ್ ಐಗುರು ಎನ್ನುವವ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ ಆಯುಕ್ತ ಬಸವರಾಜ ಐಗೂರು ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಎನ್ನಲಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ಹರಿಹರದ ವಿದ್ಯಾನಗರದಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಸಾಮಗ್ರಿ ಸರಬರಾಜು ಮಾಡುತ್ತಿದ್ದ ಕರಿಬಸಪ್ಪ ಎಂಬುವವರಿಂದ ಎರಡು ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕಮಲಾಪುರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಇದೀಗ ಆರೋಪಿಯನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.











