Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, “ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗಣ್ಯಾತಿಗಣ್ಯರ ಸಾಕ್ಷಿ: ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಉಪಸ್ಥಿತರಿದ್ದು, 87 ವರ್ಷಗಳ ಇತಿಹಾಸವಿರುವ ಮೈಲಾರಿ ಪರಂಪರೆ ಬೆಂಗಳೂರಿಗೆ ಕಾಲಿಟ್ಟಿರುವುದಕ್ಕೆ ಶುಭ ಹಾರೈಸಿದರು. ತುಮಕೂರಿನ ಸಿದ್ದಗಂಗಾ…
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯು ಯಶಸ್ವಿ ಮಾದರಿ ಶಾಲೆಗಳ ಉತ್ತಮ ಸಾಧನೆಗಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ (NIEPA) ನಡೆಸುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ‘ಯಶಸ್ವಿ ಶಾಲಾ ನಾಯಕತ್ವ ರಾಷ್ಟ್ರೀಯ ಸಮಾವೇಶ’ಕ್ಕೆ ಮಾದರಿ ಶಾಲೆಯ ಅತ್ಯುತ್ತಮ ಅಭ್ಯಾಸಗಳ ಅಡಿ ಆಯ್ಕೆಯಾಗಿದ್ದು, ಸಮಾವೇಶದಲ್ಲಿ ಶಾಲೆಯ ಯಶೋಗಾಥೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ವಿಕಸಿತ ಭಾರತ-2047 ಸೃಜನಶೀಲ ಹಾದಿಗೆ ಪೂರಕವಾಗಿ NIEPA ಯಿಂದ ಆಯೋಜನೆಗೊಳ್ಳುವ ‘ಯಶಸ್ವಿ ಶಾಲಾ ನಾಯಕತ್ವ’ ರಾಷ್ಟ್ರೀಯ ಸಮಾವೇಶಕ್ಕಾಗಿ ದೇಶದಾದ್ಯಂತ 300ಕ್ಕೂ ಹೆಚ್ಚು ಶಾಲೆಗಳಿಂದ ನಾಮನಿರ್ದೇಶನಗೊಂಡಿದ್ದು, ಇದರಲ್ಲಿ 55 ಮಾದರಿ ಶಾಲೆಗಳನ್ನು ಆಯ್ಕೆ ಮಾಡಿದ್ದು ರಾಜ್ಯದಿಂದ 2 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಸರ್ಕಾರಿ ಪ್ರೌಢಶಾಲೆ ಹೂದಲಮನೆ, ಸಿದ್ದಾಪುರ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗರವಳ್ಳಿ, ಚಿಕ್ಕಮಗಳೂರು ಆಯ್ಕೆಗೊಂಡಿವೆ. ಶಾಲೆಯ ಮುಖ್ಯೋಪಾಧ್ಯಾಯರು ಈ ಸಮಾವೇಶದಲ್ಲಿ ಭಾಗವಹಿಸಿ ಶಾಲೆಯ ಯಶೋಗಾಥೆಯನ್ನು ಕುರಿತು 15…
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನ ನಡೆಯಲಿದ್ದು, ರಾಜ್ಯ ರಾಜಧಾನಿಯಲ್ಲಿ ಪ್ರಾಚೀನ ಆಯುರ್ವೇದದ ಭವ್ಯಲೋಕ ಅನಾವರಣಗೊಳ್ಳಲಿದೆ. ದಕ್ಷಿಣ ಭಾರತದ ಏಳು ರಾಜ್ಯಗಳನ್ನು ಸಂಚರಿಸಿ ಬಂದಿರುವ ಧನ್ವಂತರಿ ಜ್ಯೋತಿ ಯನ್ನು ಬೆಳಗುವುದರ ಮೂಲಕ ಐತಿಹಾಸಿಕ ವಿಶ್ವ ಸಮ್ಮೇಳನಕ್ಕೆ ಚಾಲನೆ ದೊರೆಯಲಿದ್ದು, ಉದ್ಘಾಟನಾ ಸಭೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಪೇಜಾವರ ಮಠದ ಶ್ರೀಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು, ಸಿರಿಗೆರೆಯ ಶ್ರೀಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ, ಶ್ವಾಸಗುರು ಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು, ಬಿಹಾರದ ಶ್ರೀಶ್ರೀ ಸ್ವಾಮಿ ವೆಂಕಟೇಶ ಪ್ರಪನ್ನಾಚಾರ್ಯ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಲಿದ್ದು, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಶ್ರೀ ಶಿವರಾಜ್ ಪಾಟೀಲ್, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸಿ.ಟಿ. ರವಿ, ಹಿರಿಯ ಪತ್ರಕರ್ತ ರವಿ ಹೆಗಡೆ,…
ಬೆಂಗಳೂರು: ನಟ ದರ್ಶನ್ ಮತ್ತು ನಟ ಸುದೀಪ್ ಅವರ ಫ್ಯಾನ್ ನಡುವೆ ವಾರ್ ನಡೆಯುತ್ತಿದೆ. ಈ ನಡುವೆ ಇಂದು ತಮಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದವರ ವಿರುದ್ದ ನಟ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ಅವರು ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಕಿರಾತಕರ ವಿರುದ್ದ ಪೋಲಿಸರು ಎಫ್ಐಆರ್ ದಾಖಲಿಸಿಕೊಂಡಿದ್ದು ಕಿಡಿಗೇಡಿಗಳಿಗಾಗಿ ಹುಡುಕಾಟ ಶುರು ಮಾಡಿದ್ದಾರೆ. ಈ ನಡುವೆ ಕಿಚ್ಚ ಸುದೀಪ್ ಅವರು ಟ್ವಿಟರ್ನಲ್ಲಿ ʻಆಸ್ಕ್ ಮಿ ಎನಿಥಿಂಗ್ʼ ಸೆಷನ್ ನಡೆಸಿದ್ದಾರೆ. ಒಬ್ಬ ಅಭಿಮಾನಿ ಸುದೀಪ್ ಹಾಗೂ ದರ್ಶನ್ ಜೊತೆಗಿನ ಫೋಟೋವೊಂದನ್ನ ಹಂಚಿಕೊಂಡಿದ್ದು, ಇವರ ಬಗ್ಗೆ ಒಂದು ಮಾತು ಹೇಳಿ ಅಂತ ಹೇಳಿದ್ದಾರೆ. ಇದಕ್ಕೆ ಮರು ಉತ್ತರ ನೀಡಿರು ನಟ ಸುದೀಪ್ ಅವರು ಅವರಿಗೆ ಯಾವಾಗಲೂ ಒಳ್ಳೆಯದನ್ನೇ ಭಯಸುತ್ತೀನಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ಹುಬ್ಬಳ್ಳಿ ಪ್ರೀ-ರಿಲೀಸ್ ಈವೆಂಟ್ನಲ್ಲಿ ಸುದೀಪ್ ʻಯುದ್ದಕ್ಕೆ ಸಿದ್ದʼ ಇನ್ನೋದು ಪಡೆ ಎನ್ನುವ ಪದಗಳ ಬಳಕೆ ದರ್ಶನ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿತ್ತು, ಅದಕ್ಕೆ ಸುದೀಪ್ ತಮ್ಮ ಹೇಳಿಕೆ ಬಗ್ಗೆ ನೇರವಾಗಿ…
ಬೆಂಗಳೂರು: ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ ನಟ ದರ್ಶನ್ ಅಭಿಮಾನಿಗಳು ಈಗ ನಟ ಸುದೀಪ್ ವಿರುದ್ದ ತಿರುಗಿ ಬಿದ್ದಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಅವರು …….. All set?? ಅಂತ ಮಾಡಿ ನಿಮ್ಮ ಸ್ಕ್ರೀನ್ ಅನ್ನು ಆಯ್ಕೆ ಮಾಡಿಕೊಳ್ಲಿ ಅಂತ ಟ್ವಿಟ್ ಮಾಡಿದ್ದಾರೆ. ಕಿಚ್ಚ ಸುದೀಪ್ ಹೇಳಿದ್ದೇನು: ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು. ಈ ನಡುವೆ ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದು. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ…
ನವದೆಹಲಿ: ಡಿಸೆಂಬರ್ 26 ರಿಂದ ರೈಲ್ವೇ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತರುವುದರಿಂದ ರೈಲು ಪ್ರಯಾಣ ದುಬಾರಿಯಾಗಲಿದೆ. ಉಪನಗರ ರೈಲು ಪ್ರಯಾಣದ ದರಗಳನ್ನು ಹೆಚ್ಚಿಸಲಾಗಿಲ್ಲ, ದೀರ್ಘ ಪ್ರಯಾಣವು ಹೆಚ್ಚು ವೆಚ್ಚವಾಗುತ್ತದೆ. ರೈಲ್ವೆಯು ಡಿಸೆಂಬರ್ 26, 2025 ರಿಂದ ಜಾರಿಗೆ ಬರುವಂತೆ ಹೊಸ ದರ ರಚನೆಯನ್ನು ಘೋಷಿಸಿದೆ. 215 ಕಿಮೀ ಅಡಿಯಲ್ಲಿ ಸಾಮಾನ್ಯ ವರ್ಗದ ಪ್ರಯಾಣಗಳಿಗೆ ಯಾವುದೇ ದರದಲ್ಲಿ ಹೆಚ್ಚಳವಿರುವುದಿಲ್ಲ. 215 ಕಿಮೀ ಮೀರಿದ ಪ್ರಯಾಣಕ್ಕೆ ಪ್ರತಿ ಕಿಮೀಗೆ 1 ಪೈಸೆ ದರ ಏರಿಕೆಯಾಗಲಿದೆ. ರೈಲ್ವೆಯು ಡಿಸೆಂಬರ್ 26, 2025 ರಿಂದ ಜಾರಿಗೆ ಬರುವಂತೆ ಹೊಸ ದರ ರಚನೆಯನ್ನು ಘೋಷಿಸಿದೆ, ಸಾಮಾನ್ಯ ವರ್ಗದಲ್ಲಿ 215 ಕಿಲೋಮೀಟರ್ಗಳೊಳಗಿನ ಪ್ರಯಾಣಕ್ಕೆ ಯಾವುದೇ ದರವನ್ನು ಹೆಚ್ಚಿಸುವುದಿಲ್ಲ. 215 ಕಿಮೀ ಮೀರಿದ ಪ್ರಯಾಣಕ್ಕೆ, ಸಾಮಾನ್ಯ ವರ್ಗದಲ್ಲಿ ಪ್ರತಿ ಕಿಮೀಗೆ 1 ಪೈಸೆ ಮತ್ತು ಮೇಲ್/ಎಕ್ಸ್ಪ್ರೆಸ್ ನಾನ್-ಎಸಿ ಮತ್ತು ಎಸಿ ತರಗತಿಗಳಿಗೆ ಪ್ರತಿ ಕಿಮೀಗೆ 2 ಪೈಸೆ ದರ ಏರಿಕೆಯಾಗಲಿದೆ. ಈ ಬದಲಾವಣೆಯಿಂದ ನಿರೀಕ್ಷಿತ ಆದಾಯ ಗಳಿಕೆ 600 ಕೋಟಿ…
ಬೆಂಗಳೂರು: IMD ಮುಂದಿನ 48 ಗಂಟೆಗಳ ಕಾಲ ಉತ್ತರ ಕರ್ನಾಟಕದ 7 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆಯನ್ನು ನೀಡಿದೆ, ತಾಪಮಾನವು ಸಾಮಾನ್ಯಕ್ಕಿಂತ 4 ° C ನಿಂದ 6 ° C ವರೆಗೆ ಕಡಿಮೆಯಾಗುವ “ತೀವ್ರ ಶೀತ ಅಲೆ” ಪರಿಸ್ಥಿತಿಗಳ ಬಗ್ಗೆ ಎಚ್ಚರಿಕೆ ನೀಡಿದೆ.ಆರೆಂಜ್ ಅಲರ್ಟ್ ಜಿಲ್ಲೆಗಳು: ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಬೆಳಗಾವಿ. ಅತ್ಯಂತ ಕಡಿಮೆ ತಾಪಮಾನ: ವಿಜಯಪುರದಲ್ಲಿ ಶನಿವಾರ 6.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬಯಲು ಸೀಮೆಯಲ್ಲೇ ಅತಿ ಕಡಿಮೆ ತಾಪಮಾನ, ಬೀದರ್ನಲ್ಲಿ 7.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಳದಿ ಎಚ್ಚರಿಕೆ: 15 ಜಿಲ್ಲೆಗಳು ಹೆಚ್ಚಿನ ನಿಗಾದಲ್ಲಿವೆ ದಕ್ಷಿಣ ಒಳನಾಡಿನ 15 ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಜಾರಿಯಲ್ಲಿದೆ, ಅಲ್ಲಿ “ಶೀತ ಅಲೆ” ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ. ಚಳಿ ಪೀಡಿತ ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ,…
ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಮಾತನಾಡಿದರು. ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು. ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ…
ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ತಲೆ ಮರೆಸಿಕೊಂಡಿದ್ದು, ಸದ್ಯ ಸಿಐಡಿ ಅಧಿಕಾರಿಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದು, ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ. ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು, ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ಮುಂದಾಗದ ಹಿನ್ನಲೆಯಲ್ಲಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.ಜು.15 ರಂದು ನಡೆಯುವ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿ ಶಾಸಕ ಬೈರತಿ ಬಸವರಾಜ್ ಗುರುತಿಸಿಕೊಂಡಿದ್ದಾರೆ. ಇದಲ್ಲದೇ ಪ್ರಕರಣ ಸಂಬಂಧಪಟ್ಟಂತೆ ಈಗಾಗಲೇ 16 ಜನರ ಬಂಧನವಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ. ಜು.15ರಂದು ಹಲಸೂರಿನಲ್ಲಿ ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿ ಕಿತ್ತಗನೂರಿನ ಸರ್ವೇ ನಂ.212ರ ಭೂಮಿಗೆ ಸಂಬಂಧಿಸಿದಂತೆ ರೌಡಿ ಬಿಕ್ಲು ಶಿವನನ್ನು ಕೊಲೆ ಮಾಡಲಾಗಿತ್ತು.
ಬೆಳಗಾವಿ : ಕುಂದಾಪುರ ತಾಲೂಕಿನ ಇಎಸ್ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು ಆದರೆ 2015 ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್ ಕುಮಾರ್ ಅವರು ಹೇಳಿದರು. ಕುಂದಾಪುರದ ಇಎಸ್ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಹೇಳಿದರು. ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ: ಇಎಸ್ಐ ಫಲಾನುಭವಿಗಳಿಗೆ ಚಿಕಿತ್ಸೆ…














