Subscribe to Updates
Get the latest creative news from FooBar about art, design and business.
Author: kannadanewsnow07
* ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ರನ್ನು ಬೆಂಗಳೂರು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅಹಮದಾಬಾದ್ ನಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಅವರನ್ನು ಬೆಂಗಳೂರು ಕೆಂಪೇಗೌಡ ವಿಮಾನದಲ್ಲಿ ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಇಂದು ನಾಳೆ ಸಂಜೆ ತನಕ ವಿಚಾರಣೆ ಪಡಿಸಿ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲೇ ಅವರು ಸುಪ್ರಿಂಕೋರ್ಟ್ನಲ್ಲಿ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ರದ್ದದ ಆದೇಶದ ಬಗ್ಗೆ ಮೇಲ್ನವಿ ಸಲ್ಲಿಸಿದ್ದರು, ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಅರ್ಜಿಯನ್ನು ಮಾನ್ಯಮಾಡದೇ ಪೋಲಿಸರ ಮುಂದೆ ಶರಣಾಗುವಂತೆ ಸೂಚನೆ ನೀಡಿತ್ತು. ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ಭೈರತಿ ಬಸವರಾಜು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು ಎನ್ನಲಾಗುತಿತ್ತು, ಆದರೆ ಈಗ ಅವರು ಅಹಮದಾಬಾದ್ ನಿಂದ ಆಗಮಿಸಿದ್ದ ವೇಳೇಯಲ್ಲಿ ಸಿಐಡಿ ಪೋಲಿಸರು ಬಂಧಿಸಿ ತಮ್ಮ…
ನವದೆಹಲಿ : ಇತ್ತೀಚಿನ ಅಧಿಸೂಚನೆಗಳ ಆಧಾರದ ಮೇಲೆ, ಭಾರತ ಸರ್ಕಾರವು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ಅನ್ನು ಬಿಗಿಗೊಳಿಸಿದೆ, ಮತ್ತು ನವೆಂಬರ್ 15, 2025 ರಿಂದ ಜಾರಿಗೆ ಬಂದ ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ನಿಯಮಗಳು, 2025 ಅನ್ನು ಜಾರಿಗೆ ತಂದಿದೆ. ತಿದ್ದುಪಡಿಗಳು ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ, ವಿಶೇಷವಾಗಿ ಕಾನೂನುಬಾಹಿರ ಮತ್ತು ಹಾನಿಕಾರಕ ವಿಷಯವನ್ನು ತ್ವರಿತವಾಗಿ ತೆಗೆದುಹಾಕುವ ಬಗ್ಗೆ ಸೂಚನೆ ನೀಡಿದೆ. ಭಾರತ ಸರ್ಕಾರವು AI-ರಚಿತ ಮತ್ತು ಡೀಪ್ಫೇಕ್ ವಿಷಯದ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿದೆ, ಸಾಮಾಜಿಕ ಮಾಧ್ಯಮ ವೇದಿಕೆಗಳು ಮೂರು ಗಂಟೆಗಳ ಒಳಗೆ ಆಕ್ಷೇಪಾರ್ಹ ವಿಷಯವನ್ನು ತೆಗೆದುಹಾಕುವುದನ್ನು ಕಡ್ಡಾಯಗೊಳಿಸುತ್ತದೆ ಮತ್ತು AI-ರಚಿತ ವಿಷಯವನ್ನು ಲೇಬಲ್ ಮಾಡುವುದನ್ನು ಕಡ್ಡಾಯಗೊಳಿಸುತ್ತದೆ. ತಿದ್ದುಪಡಿ ಮಾಡಿದ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳ ಅಡಿಯಲ್ಲಿ, ವೇದಿಕೆಗಳು AI ಪರಿಕರಗಳನ್ನು ಬಳಸಿಕೊಂಡು ರಚಿಸಲಾದ ಯಾವುದೇ ವಿಷಯವನ್ನು ಸ್ಪಷ್ಟವಾಗಿ ಮತ್ತು ಪ್ರಮುಖವಾಗಿ ಲೇಬಲ್…
ಬೆಂಗಳೂರು : ಜನರು ಉಳಿತಾಯದ ಹೂಡಿಕೆಗಳು ಸರ್ಕಾರದ ಎಂ ಎಸ್ ಐ ಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿ ಇದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿಯಿಂದ ಆಯೋಜಿಸಲಾಗಿದ್ದ MSIL ಚಿಟ್ಸ್ ಹೊಸ ಸಾಫ್ಟ್ ವೆರ್ ಹಾಗೂ ಮೊಬೈಲ್ ಆಪ್ ಬಿಡುಗಡೆಗೊಳಿಸಿ ಮಾತನಾಡಿದರು. ಎಂಎಸ್ ಐ ಎಲ್ ಸರ್ಕಾರಿ ಸಂಸ್ಥೆಯು ಹಲವು ದಶಕಗಳಿಂದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. 2005 ರಿಂದ ಚಿಟ್ ಫಂಡ್ ವ್ಯವಸ್ಥೆ ಪ್ರಾರಂಭವಾಗಿದೆ. ಉಳಿತಾಯದ ಸಂಸ್ಕೃತಿ ಅತ್ಯವಶ್ಯ.ವಾಗಿದ್ದು, ಅಗತ್ಯ ಸಂದರ್ಭದಲ್ಲಿ ಉಳಿತಾಯದ ಹಣ ನೆರವಿಗೆ ಬರುತ್ತದೆ. ಜಾತಿವರ್ಗಗಳ ಬೇಧವಿಲ್ಲದೇ ಜಾರಿಯಾಗುವ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ ದಿಂದ ಉಳಿತಾಯವಾಗುವ ಹಣವನ್ನು ಜನರು ವಿಶೇಷವಾಗಿ ಮಹಿಳೆಯರು ಹೂಡಿಕೆ ಮಾಡಬೇಕು ಎಂದರು. ಜನರ ಹೂಡಿಕೆ ಭದ್ರತೆಯ ಖಾತ್ರಿ ಹೂಡಿಕೆ ಹಣವನ್ನು ಸುರಕ್ಷಿತವಾಗಿರುವುದು ಅತ್ಯಂತ ಅಗತ್ಯವಾಗಿದ್ದು, ಎಂಎಸ್ ಐ ಎಲ್ ನ ಚಿಟ್ ಫಂಡ್ ಈ ಭರವಸೆಯನ್ನು ನೀಡುತ್ತದೆ. ಸಾಮಾನ್ಯವಾಗಿ…
ಕೊಡಗು : ಕರ್ನಾಟಕದಲ್ಲಿ ಮತ್ತೊಬ್ಬ ಉದ್ಯಮಿ ತನ್ನ ಕುಟುಂಬದ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಸಜೀರ್ ಎನ್ನುವ ವ್ಯಕ್ತಿ ಕಾರಿನಲ್ಲಿ ತನ್ನ ಕುಟುಂಬದ ಜೊತೆಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಘಟನೆಯಲ್ಲಿ ಸಜೀರ್ ಸಾವನ್ನಪ್ಪಿದ್ದು, ಸಜೀರ್ ಪತ್ನಿ ಹಾಗೂ ಅವರ ಇಬ್ಬರು ಮಕ್ಕಳನ್ನು ಸ್ಥಳೀಯರು ಕಾಪಾಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಮುನ್ನ ಸಜೀರ್ ವಿಡಿಯೋ ಮಾಡಿದ್ದು ಅದರಲ್ಲಿ ತನ್ನ ಸಾವಿಗೆ ಕಾರಣವಾಗಿರುವ ವ್ಯಕ್ತಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಁಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನ್ಲೈನ್ ಗೇಮ್ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರು ಎನ್ನಲಾಗಿದೆ. ಗುಬ್ಬಿಯಿಂದ ಅವರು ಕೆಲ ದಿನಗಳ ಹಿಂದೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ವಾಸ ಮಾಡುತ್ತಿದ್ದಾರೆ. ಇಡೀ ಕುಟುಂಬ ನೇಪಾಳ ಹಾಗು ಬಿಹಾರಕ್ಕೆ ಪ್ರವಾಸಕ್ಕೆ ಹೋದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬಿಹಾರದ ನಳಂದ ಜಿಲ್ಲೆಯ ಧರ್ಮಶಾಲೆ ರೂಮ್ ಬುಕ್ ಮಾಡಿದ್ದರು ಎನ್ನಲಾಗಿದೆ. ಸದ್ಯ ಘಟನೆ ಬಗ್ಗೆ ಸ್ಥಳೀಯ ಬಿಹಾರದ ಪೊಲೀಸರು ಮೃತರ ಸಂಬಂಧಿಕರಿಗೆ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗಿದೆ. ಮೃತರನ್ನು ಜಿ.ಆರ್. ಸುಮಂಗಲಾ (78 ) ಮಗ ಜಿ.ಆರ್. ನಾಗಪ್ರಸಾದ್, (50) ಸಹೋದರಿಯರಾದ ಜಿ.ಆರ್. ಶಿಲ್ಪಾ (48) –.ಆರ್. ಶ್ರುತಾ (43) ಎಂದು ಗುರುತಿಸಲಾಗಿದೆ. ಮೃತರನ್ನು ಜಿ.ಆರ್. ಸುಮಂಗಲ (78), ಅವರ ಪುತ್ರಿಯರಾದ ಶಿಲ್ಪಾ ಜಿ.ಆರ್. (48) ಮತ್ತು ಶ್ರುತಾ ಜಿ.ಬಿ. (43) ಮತ್ತು ಪುತ್ರ ಜಿ.ಆರ್. ನಾಗ ಪ್ರಸಾದ್…
ಬೆಂಗಳೂರು: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, “ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗಣ್ಯಾತಿಗಣ್ಯರ ಸಾಕ್ಷಿ: ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಉಪಸ್ಥಿತರಿದ್ದು, 87 ವರ್ಷಗಳ ಇತಿಹಾಸವಿರುವ ಮೈಲಾರಿ ಪರಂಪರೆ ಬೆಂಗಳೂರಿಗೆ ಕಾಲಿಟ್ಟಿರುವುದಕ್ಕೆ ಶುಭ ಹಾರೈಸಿದರು. ತುಮಕೂರಿನ ಸಿದ್ದಗಂಗಾ…
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯು ಯಶಸ್ವಿ ಮಾದರಿ ಶಾಲೆಗಳ ಉತ್ತಮ ಸಾಧನೆಗಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ (NIEPA) ನಡೆಸುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ‘ಯಶಸ್ವಿ ಶಾಲಾ ನಾಯಕತ್ವ ರಾಷ್ಟ್ರೀಯ ಸಮಾವೇಶ’ಕ್ಕೆ ಮಾದರಿ ಶಾಲೆಯ ಅತ್ಯುತ್ತಮ ಅಭ್ಯಾಸಗಳ ಅಡಿ ಆಯ್ಕೆಯಾಗಿದ್ದು, ಸಮಾವೇಶದಲ್ಲಿ ಶಾಲೆಯ ಯಶೋಗಾಥೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ವಿಕಸಿತ ಭಾರತ-2047 ಸೃಜನಶೀಲ ಹಾದಿಗೆ ಪೂರಕವಾಗಿ NIEPA ಯಿಂದ ಆಯೋಜನೆಗೊಳ್ಳುವ ‘ಯಶಸ್ವಿ ಶಾಲಾ ನಾಯಕತ್ವ’ ರಾಷ್ಟ್ರೀಯ ಸಮಾವೇಶಕ್ಕಾಗಿ ದೇಶದಾದ್ಯಂತ 300ಕ್ಕೂ ಹೆಚ್ಚು ಶಾಲೆಗಳಿಂದ ನಾಮನಿರ್ದೇಶನಗೊಂಡಿದ್ದು, ಇದರಲ್ಲಿ 55 ಮಾದರಿ ಶಾಲೆಗಳನ್ನು ಆಯ್ಕೆ ಮಾಡಿದ್ದು ರಾಜ್ಯದಿಂದ 2 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಸರ್ಕಾರಿ ಪ್ರೌಢಶಾಲೆ ಹೂದಲಮನೆ, ಸಿದ್ದಾಪುರ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗರವಳ್ಳಿ, ಚಿಕ್ಕಮಗಳೂರು ಆಯ್ಕೆಗೊಂಡಿವೆ. ಶಾಲೆಯ ಮುಖ್ಯೋಪಾಧ್ಯಾಯರು ಈ ಸಮಾವೇಶದಲ್ಲಿ ಭಾಗವಹಿಸಿ ಶಾಲೆಯ ಯಶೋಗಾಥೆಯನ್ನು ಕುರಿತು 15…
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನ ನಡೆಯಲಿದ್ದು, ರಾಜ್ಯ ರಾಜಧಾನಿಯಲ್ಲಿ ಪ್ರಾಚೀನ ಆಯುರ್ವೇದದ ಭವ್ಯಲೋಕ ಅನಾವರಣಗೊಳ್ಳಲಿದೆ. ದಕ್ಷಿಣ ಭಾರತದ ಏಳು ರಾಜ್ಯಗಳನ್ನು ಸಂಚರಿಸಿ ಬಂದಿರುವ ಧನ್ವಂತರಿ ಜ್ಯೋತಿ ಯನ್ನು ಬೆಳಗುವುದರ ಮೂಲಕ ಐತಿಹಾಸಿಕ ವಿಶ್ವ ಸಮ್ಮೇಳನಕ್ಕೆ ಚಾಲನೆ ದೊರೆಯಲಿದ್ದು, ಉದ್ಘಾಟನಾ ಸಭೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಪೇಜಾವರ ಮಠದ ಶ್ರೀಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು, ಸಿರಿಗೆರೆಯ ಶ್ರೀಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ, ಶ್ವಾಸಗುರು ಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು, ಬಿಹಾರದ ಶ್ರೀಶ್ರೀ ಸ್ವಾಮಿ ವೆಂಕಟೇಶ ಪ್ರಪನ್ನಾಚಾರ್ಯ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಲಿದ್ದು, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಶ್ರೀ ಶಿವರಾಜ್ ಪಾಟೀಲ್, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸಿ.ಟಿ. ರವಿ, ಹಿರಿಯ ಪತ್ರಕರ್ತ ರವಿ ಹೆಗಡೆ,…
ಬೆಂಗಳೂರು: ನಟ ದರ್ಶನ್ ಮತ್ತು ನಟ ಸುದೀಪ್ ಅವರ ಫ್ಯಾನ್ ನಡುವೆ ವಾರ್ ನಡೆಯುತ್ತಿದೆ. ಈ ನಡುವೆ ಇಂದು ತಮಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದವರ ವಿರುದ್ದ ನಟ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ಅವರು ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಕಿರಾತಕರ ವಿರುದ್ದ ಪೋಲಿಸರು ಎಫ್ಐಆರ್ ದಾಖಲಿಸಿಕೊಂಡಿದ್ದು ಕಿಡಿಗೇಡಿಗಳಿಗಾಗಿ ಹುಡುಕಾಟ ಶುರು ಮಾಡಿದ್ದಾರೆ. ಈ ನಡುವೆ ಕಿಚ್ಚ ಸುದೀಪ್ ಅವರು ಟ್ವಿಟರ್ನಲ್ಲಿ ʻಆಸ್ಕ್ ಮಿ ಎನಿಥಿಂಗ್ʼ ಸೆಷನ್ ನಡೆಸಿದ್ದಾರೆ. ಒಬ್ಬ ಅಭಿಮಾನಿ ಸುದೀಪ್ ಹಾಗೂ ದರ್ಶನ್ ಜೊತೆಗಿನ ಫೋಟೋವೊಂದನ್ನ ಹಂಚಿಕೊಂಡಿದ್ದು, ಇವರ ಬಗ್ಗೆ ಒಂದು ಮಾತು ಹೇಳಿ ಅಂತ ಹೇಳಿದ್ದಾರೆ. ಇದಕ್ಕೆ ಮರು ಉತ್ತರ ನೀಡಿರು ನಟ ಸುದೀಪ್ ಅವರು ಅವರಿಗೆ ಯಾವಾಗಲೂ ಒಳ್ಳೆಯದನ್ನೇ ಭಯಸುತ್ತೀನಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ಹುಬ್ಬಳ್ಳಿ ಪ್ರೀ-ರಿಲೀಸ್ ಈವೆಂಟ್ನಲ್ಲಿ ಸುದೀಪ್ ʻಯುದ್ದಕ್ಕೆ ಸಿದ್ದʼ ಇನ್ನೋದು ಪಡೆ ಎನ್ನುವ ಪದಗಳ ಬಳಕೆ ದರ್ಶನ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿತ್ತು, ಅದಕ್ಕೆ ಸುದೀಪ್ ತಮ್ಮ ಹೇಳಿಕೆ ಬಗ್ಗೆ ನೇರವಾಗಿ…
ಬೆಂಗಳೂರು: ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನ ಪರಪ್ಪನ ಆಗ್ರಹಾರದಲ್ಲಿರುವ ನಟ ದರ್ಶನ್ ಅಭಿಮಾನಿಗಳು ಈಗ ನಟ ಸುದೀಪ್ ವಿರುದ್ದ ತಿರುಗಿ ಬಿದ್ದಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಅವರು …….. All set?? ಅಂತ ಮಾಡಿ ನಿಮ್ಮ ಸ್ಕ್ರೀನ್ ಅನ್ನು ಆಯ್ಕೆ ಮಾಡಿಕೊಳ್ಲಿ ಅಂತ ಟ್ವಿಟ್ ಮಾಡಿದ್ದಾರೆ. ಕಿಚ್ಚ ಸುದೀಪ್ ಹೇಳಿದ್ದೇನು: ಶನಿವಾರದಂದು ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು. ಈ ನಡುವೆ ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದು. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ…












