Author: ಅವಿನಾಶ್‌ ಆರ್‌ ಭೀಮಸಂದ್ರ

ಅವಿನಾಶ್‌ ಆರ್‌ ಭೀಮಸಂದ್ರ ಪರಿಚಯ: ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 15 ವರ್ಷಗಳ ಅನುಭವ, ತನಿಖಾ ಪತ್ರಿಕೋದ್ಯಮ, ಅಪರಾಧ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ. ಊರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಇವರು ಓದಿದ್ದು ಪದವಿಯಲ್ಲಿ ಪತ್ರಿಕೋದ್ಯಮ, ಐಚ್ಚಿಕ ಕನ್ನಡ, ಮನೋವಿಜ್ಞಾನ, ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ. ಕಸ್ತೂರಿ ನ್ಯೂಸ್‌. ವಿಜಯವಾಣಿ, ಪ್ರಜಾಪ್ರಗತಿ, ಪ್ರಗತಿ ಟಿವಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಕನ್ನಡಿಗರ ಮನೆಮಾತಾಗಿರುವ ಕನ್ನಡ ನ್ಯೂಸ್‌ನೌ.ಕಾಂ ಡಿಜಿಟಲ್‌ ಮೀಡಿಯಾದ ಸಂಸ್ಥಾಪಕ ಸಂಪಾದಕರು ಕೂಡ ಹೌದು.

ಬೆಂಗೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪೆÇ್ರೀತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ತಿಳಿಸಿದರು. ಸಿರಿಧಾನ್ಯಗಳನ್ನು ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾಗಿದೆ.…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಐದು ಚುನಾವಣಾ ಭರವಸೆಗಳಲ್ಲಿ ಒಂದಾದ ಮತ್ತು ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ನಿರುದ್ಯೋಗ ಪ್ರಯೋಜನಗಳನ್ನು ಒದಗಿಸುವ ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಗೆ ಡಿಸೆಂಬರ್ 26 ರಂದು ನೋಂದಣಿ ತೆರೆಯಲಾಗಿದೆ. ಈ ಕಾರ್ಯಕ್ರಮವು ಜನವರಿ 1, 2024 ರಿಂದ ಜಾರಿಗೆ ಬಂದಿದೆ, ಆಸಕ್ತರು ಸೇವಾ ಸಿಂಧು ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯದ ವಿದ್ಯಾವಂತ ಆದರೆ ನಿರುದ್ಯೋಗಿ ಯುವಕರಿಗೆ ಸರ್ಕಾರ ನಗದು ಬೆಂಬಲವನ್ನು ನೀಡುತ್ತದೆ. ಕರ್ನಾಟಕ ಯುವ ನಿಧಿ ಯೋಜನೆಗೆ ಸಂಬಂಧಿಸಿದ ಮುಖ್ಯಾಂಶಗಳು, ಉದ್ದೇಶಗಳು, ಪ್ರಯೋಜನಗಳು, ನೆರವು ಮೊತ್ತ, ಅರ್ಹತಾ ಮಾನದಂಡಗಳು, ಅಗತ್ಯ ದಾಖಲೆಗಳು, ಅರ್ಜಿ ಕಾರ್ಯವಿಧಾನಗಳು ಮತ್ತು ಹೆಚ್ಚಿನವುಗಳನ್ನು ಪರಿಶೀಲಿಸಲು ಕೆಳಗೆ ಓದಿ. ಅರ್ಹತೆ: 1. 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು 2. ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು 3. ಸ್ವಯಂ ಉದ್ಯೋಗ ಹೊಂದಿಲ್ಲದವರು 4. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು 5. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ…

Read More

ವಸಂತ್‌ ಬಿ ಈಶ್ವರಗೆರೆ ಬೆಂಗಳೂರು: 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಪಿ.ಎಸ್.ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ (One time measure) ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡುವ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಗೊಳ್ಳಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಗರಿಷ್ಠ 3 ವರ್ಷಗಳವರೆಗೆ ಸಡಿಲಿಸಲು ಪ್ರಸ್ತಾಪಿಸಿದೆ. ವರ್ಗ ಈಗಿರುವ ವಯೋಮಿತಿ ವಿಸ್ತರಿತ ವಯೋಮಿತಿ ವರ್ಗ ಈಗಿರುವ ವಯೋಮಿತಿ ವಿಸ್ತರಿತ ವಯೋಮಿತಿ ಸಾಮಾನ್ಯ 35 ವರ್ಷ 38 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ 38 ªÀµÀð 41 ªÀµÀð ಪ.ಪಂ. ಪ್ರವರ್ಗ-1 40 ವರ್ಷ 43…

Read More

ಶಿವಮೊಗ್ಗ: ಬ್ಯಾಂಕು ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹೊನ್ನೇಕೆರೆ ಗ್ರಾಮದ ಪುರ್ವಾನಾಯ್ಕ್ ಎಂಬುವವರು 1ನೇ ಎದುರುದಾರರಾದ ಬ್ಯಾಂಕ್ ಆಫ್ ಬರೋಡ ತೀರ್ಥಹಳ್ಳಿ ಮತ್ತು 2ನೇ ಎದುರುದಾರರಾದ ಟಾಟಾ ಎ.ಐ.ಜಿ ಜನರಲ್ ಇನ್ಸೂರೆನ್ಸ್ ಕಂಪನಿ ಲಿ ಎಂಬುವವರ ವಿರುದ್ಧ ಸೇವಾನ್ಯೂನ್ಯತೆ ಕುರಿತು ಆಪಾದಿಸಿ ಪ್ರಕರಣ ದಾಖಲಿಸಿದ್ದರು. ಅರ್ಜಿದಾರರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹೊನ್ನೇಕೆರೆಯಲ್ಲಿ 2 ಎಕರೆ ಜಮೀನನ್ನು ಹೊಂದಿದ್ದು, 2017 ರಲ್ಲಿ ಬ್ಯಾಂಕ್ ಆಫ್ ಬರೋಡದವರಿಂದ ಸಾಲ ಪಡೆದು ಇಲ್ಲಿ ಒಂದು ಕಟ್ಟಡವನ್ನು ನಿರ್ಮಿಸಿರುತ್ತಾರೆ. ಈ ಕಟ್ಟಡಕ್ಕೆ 2ನೇ ಎದುರುದಾರರಾದ ವಿಮಾ ಕಂಪನಿಯವರಿಂದ ದಿನಾಂಕ:22.03.2021 ರಲ್ಲಿ ಪ್ರಿಮಿಯಮ್ ಮೊತ್ತವನ್ನು ಪಾವತಿಸಿ ಪಾಲಿಸಿಯನ್ನು ಕೂಡ ಪಡೆದಿದ್ದು ದಿ: 28.02.2022 ರಂದು ಈ ಕಟ್ಟಡವು ಗುಡುಗು ಮತ್ತು ಸಿಡಿಲಿನ ಹೊಡೆತದಿಂದಾಗಿ ಹಾನಿಗೊಳಗಾಗಿರುತ್ತದೆ. ಅರ್ಜಿದಾರರು 1 ಮತ್ತು 2ನೇ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22, 2022-23ರ ಜುಲೈ ಆವೃತ್ತಿಗಳಲ್ಲಿ ಪ್ರಥಮ/ದ್ವಿತೀಯ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು 2023-24ನೇ ಸಾಲಿಗೆ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ಬಿ.ಎ.,/ಬಿ.ಕಾಂ., ಬಿ.ಎಸ್ಸಿ. (ಜನರಲ್/ ಹೋಮ್ ಸೈನ್ಸ್/ ಐಟಿ), ಬಿ.ಸಿ.ಎ., ಬಿ.ಬಿ.ಎ. ಹಾಗೂ 2021-22, 2022-23ರ ಅಂತಿಮ ಎಂ.ಎ.(ಎಂ.ಸಿ.ಜೆ)/ಎಂ.ಕಾಂ., ಎಂ.ಬಿ.ಎ., ಎಂ.ಎಸ್ಸಿ., ಕೋರ್ಸ್‍ಗಳಿಗೆ ಬೋಧನಾ ಶುಲ್ಕ ರೂ. 400/-ಗಳ ದಂಡ ಶುಲ್ಕದೊಂದಿಗೆ ವರೆಗೆ ಜನವರಿ 20ರ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ ವಿದ್ಯಾರ್ಥಿಗಳು ಆನ್‍ಲೈನ್ www.ksoumysuru.ac.in ಮೂಲಕ ಬೋಧನಾ ಶುಲ್ಕವನ್ನು ಪಾವತಿಸಿಕೊಂಡು, ಶುಲ್ಕ ಪಾವತಿಸಿದ ರಶೀದಿ ಮತ್ತು ಅರ್ಜಿಯನ್ನು 15 ದಿನಗಳ ಒಳಗಾಗಿ ಪ್ರವೇಶಾತಿ ಪಡೆದ ಪ್ರಾದೇಶಿಕ ಕೇಂದ್ರಕ್ಕೆ ಖುದ್ಧಾಗಿ ಭೇಟಿ ನೀಡಿ ಪ್ರವೇಶಾತಿ ಹಾಗೂ ಗುರುತಿನ ಚೀಟಿ ನವೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‍ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರುರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ:…

Read More

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 9ರಂದು ನ್ಯೂಯಾರ್ಕ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೆಣಸಲಿದೆ. ‘ಎ’ ಗುಂಪಿನಲ್ಲಿ ಭಾರತ ಪಾಕಿಸ್ತಾನ, ಅಮೆರಿಕ, ಕೆನಡಾ ಮತ್ತು ಐರ್ಲೆಂಡ್ ವಿರುದ್ಧ ಸೆಣಸಲಿದೆ. ಉದ್ಘಾಟನಾ ಪಂದ್ಯದಲ್ಲಿ ಯುಎಸ್ಎ ಕೆನಡಾವನ್ನು ಎದುರಿಸಲಿದೆ. ಭಾರತ ‘ಎ’ ಗುಂಪಿನಲ್ಲಿದ್ದು, ಪಾಕಿಸ್ತಾನ, ಅಮೆರಿಕ, ಕೆನಡಾ, ಐರ್ಲೆಂಡ್ ತಂಡಗಳೊಂದಿಗೆ ಸ್ಥಾನ ಪಡೆದಿದೆ. 2024ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧಿಕೃತವಾಗಿ ಪ್ರಕಟಿಸಿದೆ. ಕ್ಯಾಲೆಂಡರ್ ವರ್ಷದ ಮಾರ್ಕ್ಯೂ ಐಸಿಸಿ ಈವೆಂಟ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿದ್ದು, ಜೂನ್ 1 ರಂದು ಯುಎಸ್ಎ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಕೆನಡಾವನ್ನು ಎದುರಿಸಲಿದೆ. ಫೈನಲ್ ಪಂದ್ಯ ಜೂನ್ 29ರಂದು ನಡೆಯಲಿದೆ. ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. 2024ರ ಟಿ20 ವಿಶ್ವಕಪ್ ವೇಳಾಪಟ್ಟಿ…

Read More

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ನಡೆಯಲಿರುವ ಮುಂಬರುವ ಟಿ 20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಪ್ರಕಟಿಸಿದೆ. ಜೂನ್ 1 ರಿಂದ 29 ರವರೆಗೆ ಟಿ 20 ಪಂದ್ಯಾವಳಿ ನಡೆಯಲಿದೆ. ಜೂನ್ 1ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ತಂಡ ಕೆನಡಾ ತಂಡವನ್ನು ಎದುರಿಸಲಿದೆ. ಟಿ20 ವಿಶ್ವಕಪ್ ಫೈನಲ್ ಪಂದ್ಯ ಜೂನ್ 29ರಂದು ಬಾರ್ಬಡೋಸ್ನಲ್ಲಿ ನಡೆಯಲಿದೆ. ಭಾರತ ತಂಡ ಜೂನ್ 5ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ಜೂನ್ 9 ರಂದು ನ್ಯೂಯಾರ್ಕ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ, ಅಮೆರಿಕ, ಐರ್ಲೆಂಡ್ ಮತ್ತು ಕೆನಡಾ ‘ಎ’ ಗುಂಪಿನಲ್ಲಿವೆ. 2022ರಲ್ಲಿ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ (ಎಂಸಿಜಿ) ನಡೆದ ಟಿ 20 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು, ಆಗ ಉಭಯ ತಂಡಗಳು ಥ್ರಿಲ್ಲರ್ ಅನ್ನು ನಿರ್ಮಿಸಿದವು ಮತ್ತು ವಿರಾಟ್ ಕೊಹ್ಲಿ ಮಾಸ್ಟರ್ ಕ್ಲಾಸ್…

Read More

ಬೆಂಗಳೂರು: ಶೂ ಹಾಕಿಕೊಂಡು ರಾಮಭಜನೆ ಮಾಡಿದ ಸಿ.ಟಿ ರವಿ ಅವರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಟ್ವಿಟರ್‌ನಲ್ಲಿ ರಾಜ್ಯ ಕಾಂಗ್ರೆಸ್‌ ಘಟಕ ಬಿಜೆಪಿಯವರ ಧಾರ್ಮಿಕತೆ ಬೂಟಾಟಿಕೆಯದ್ದು ಸಿಟಿ ರವಿ ಕಾಲಲ್ಲಿರುವ ಬೂಟು ಸಾಕ್ಷಿ ಹೇಳುತ್ತಿದೆ.. ಬಾಯಲ್ಲಿ ಭಜನೆ, ಮನದಲ್ಲಿ ಆತ್ಮವಂಚನೆ, ಕಾಲಲ್ಲಿ ಬೂಟು, ಜೇಬಲ್ಲಿ ಅಕ್ರಮದ ನೋಟು! ಇದು ಬಿಜೆಪಿಗರ ವರಸೆ.. ರಾಮ ಬಿಜೆಪಿಗೆ ರಾಜಕೀಯ ಸರಕೇ ಹೊರತು ಭಕ್ತಿಯಲ್ಲ, ರಾಮನ ಬಗ್ಗೆ ನಿಜಕ್ಕೂ ಗೌರವ ಭಕ್ತಿ ಇದ್ದಿದ್ದರೆ ಕಾಲಿನಲ್ಲಿ ಬೂಟು ಧರಿಸಿಕೊಂಡು ಭಜನೆ ಮಾಡುತ್ತಿರಲಿಲ್ಲ, ಎಷ್ಟೇ ಆದರೂ ಶೂ ಧರಿಸಿ ದೇವಸ್ಥಾನಕ್ಕೆ ನುಗ್ಗಿದವರಲ್ಲವೇ ಅಂಥ ಪ್ರಶ್ನೆ ಮಾಡಿದೆ. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಮಾಜಿ ಶಾಸಕ ಸಿ ಟಿ ರವಿ ಚಿಕ್ಕಮಗಳೂರು ಪೊಲೀಸ್​ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಸಿ ಟಿ ರವಿ ಮೌನ ಪ್ರತಿಭಟನೆ ನಡೆಸಿದ್ದು, ಶ್ರೀ ರಾಮ್, ಜೈ ರಾಮ್ ಎನ್ನುತ್ತ ಠಾಣೆ ಮುಂದೆ…

Read More

ನವದೆಹಲಿ: ಟೀಮ್ ಇಂಡಿಯಾ ಸ್ಟಾರ್ ಗಳಾದ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರು 2023 ರ ಐಸಿಸಿ ಪುರುಷರ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಗೆ ನಾಮನಿರ್ದೇಶನಗೊಂಡಿದ್ದಾರೆ, ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಮತ್ತು ಆರಂಭಿಕ ಬ್ಯಾಟ್ಸ್ ಮನ್ ಟ್ರಾವಿಸ್ ಹೆಡ್. ಕೊಹ್ಲಿ ಮತ್ತು ಜಡೇಜಾ ಇಬ್ಬರೂ 2023 ರ ಏಕದಿನ ವಿಶ್ವಕಪ್ ತಂಡದ ಭಾಗವಾಗಿದ್ದರು ಮತ್ತು ಪಂದ್ಯಾವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಾಮನಿರ್ದೇಶನಗೊಂಡ ಇತರ ಇಬ್ಬರು ಆಟಗಾರರು ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಮತ್ತು ಅಂತಿಮ ಟ್ರಾವಿಸ್ ಹೆಡ್. 2023 ರಲ್ಲಿ ಗಮನಾರ್ಹ ರನ್ ಸ್ಕೋರಿಂಗ್ ಸಾಧನೆಗಳ ನಂತರ ಕೊಹ್ಲಿ ತಮ್ಮ ಮೂರನೇ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಗಾಗಿ ಸ್ಪರ್ಧಿಸುತ್ತಿದ್ದಾರೆ. ಕಳೆದ ವರ್ಷ, ಕೊಹ್ಲಿ ಐತಿಹಾಸಿಕ 50 ನೇ ಏಕದಿನ ಶತಕದೊಂದಿಗೆ ಐಸಿಸಿ ಹಾಲ್ ಆಫ್ ಫೇಮ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು ಮತ್ತು ಸಿಡಬ್ಲ್ಯುಸಿ 23 ರಿಂದ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯನ್ನು…

Read More

ಬೆಂಗಳೂರು: : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

Read More