Author: ಅವಿನಾಶ್‌ ಆರ್‌ ಭೀಮಸಂದ್ರ

ಅವಿನಾಶ್‌ ಆರ್‌ ಭೀಮಸಂದ್ರ ಪರಿಚಯ: ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 15 ವರ್ಷಗಳ ಅನುಭವ, ತನಿಖಾ ಪತ್ರಿಕೋದ್ಯಮ, ಅಪರಾಧ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ. ಊರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಇವರು ಓದಿದ್ದು ಪದವಿಯಲ್ಲಿ ಪತ್ರಿಕೋದ್ಯಮ, ಐಚ್ಚಿಕ ಕನ್ನಡ, ಮನೋವಿಜ್ಞಾನ, ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ. ಕಸ್ತೂರಿ ನ್ಯೂಸ್‌. ವಿಜಯವಾಣಿ, ಪ್ರಜಾಪ್ರಗತಿ, ಪ್ರಗತಿ ಟಿವಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಕನ್ನಡಿಗರ ಮನೆಮಾತಾಗಿರುವ ಕನ್ನಡ ನ್ಯೂಸ್‌ನೌ.ಕಾಂ ಡಿಜಿಟಲ್‌ ಮೀಡಿಯಾದ ಸಂಸ್ಥಾಪಕ ಸಂಪಾದಕರು ಕೂಡ ಹೌದು.

ಜಪಾನ್: ಜಪಾನ್ನಲ್ಲಿ ಸೋಮವಾರದಿಂದ 7.6 ತೀವ್ರತೆಯ ಭೂಕಂಪ ಸೇರಿದಂತೆ 155 ಭೂಕಂಪಗಳು ಸಂಭವಿಸಿವೆ ಎಂದು ಜಪಾನ್ ಹವಾಮಾನ ಕಚೇರಿ ಮಂಗಳವಾರ ತಿಳಿಸಿದೆ. ಹೆಚ್ಚಿನ ಭೂಕಂಪಗಳು ರಿಕ್ಟರ್ ಮಾಪಕದಲ್ಲಿ 3 ಕ್ಕಿಂತ ಹೆಚ್ಚಿನ ತೀವ್ರತೆಯನ್ನು ಹೊಂದಿವೆ ಎಂದು ಅವರು ಹೇಳಿದರು. ಬಲವು ಕ್ರಮೇಣ ಮಧ್ಯಮವಾಗಿದ್ದರೂ, ಮಂಗಳವಾರ ಕನಿಷ್ಠ ಆರು ಬಲವಾದ ನಡುಕಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ . ಹೊಸ ವರ್ಷದ ದಿನದಂದು ಮಧ್ಯ ಜಪಾನ್ನಲ್ಲಿ ಸಂಭವಿಸಿದ ಭೂಕಂಪವು “ವ್ಯಾಪಕ” ಹಾನಿಯನ್ನುಂಟು ಮಾಡಿದೆ ಮತ್ತು ಹಲವಾರು ಸಾವುನೋವುಗಳು ಸಂಭವಿಸಿವೆ ಎಂದು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಹೇಳಿದ್ದಾರೆ. ಸಂತ್ರಸ್ತರನ್ನು ರಕ್ಷಿಸಲು ಅಧಿಕಾರಿಗಳು ಎಲ್ಲ ರೀತಿಯಲ್ಲಿ ಮುಂಜಾಗ್ರತ ಕ್ರಮವನ್ನು ವಹಿಸಿದ್ದಾರೆ ಆಂತ ತಿಳಿಸಿದ್ದಾರೆ. “ಹಲವಾರು ಸಾವುನೋವುಗಳು, ಕಟ್ಟಡ ಕುಸಿತ ಮತ್ತು ಬೆಂಕಿ ಸೇರಿದಂತೆ ವ್ಯಾಪಕ ಹಾನಿಯನ್ನು ದೃಢಪಡಿಸಲಾಗಿದೆ” ಎಂದು ಕಿಶಿಡಾ ಸುದ್ದಿ ಸಂಸ್ಥೆ ಎಎಫ್ಪಿಗೆ ತಿಳಿಸಿದ್ದಾರೆ.

Read More

ಬೆಂಗಳೂರು: ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಸೋಮವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ವಾಗಬೇಕು ಎಂದರು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕು\ ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019 ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು ಎಂದರು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ ಎಂದರು. ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು : ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರ ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ…

Read More

ಬೆಂಗಳೂರು: ತತ್ಕಾಲ್ ಪೋಡಿ, 11ಇ ನಕ್ಷೆ ಒಳಗೊಂಡು ಜಮೀನು ಅಳತೆಗಾಗಿ ಮೋಜಿಣಿ ವ್ಯವಸ್ಥೆಯಡಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳ ಸೇವಾ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಕಡಿತ ಮಾಡಲಾಗಿದೆ. ಜನಮ 1ರಿಂದಲೇ ಪರಿಷ್ಕೃತ ದರಗಳು ಜಾರಿಗೆ ಬಂದಿವೆ ಎಂದು ಕಂದಾಯ ಇಲಾಖೆ ತಿಳಿಸಿದೆ. 11ಇ ಸ್ಕೆಚ್, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಪ್ರಕರಣಗಳಲ್ಲಿ ಗ್ರಾಮೀಣ ಭಾಗದ ಅರ್ಜಿದಾರರಿಗೆ ನಿಗದಿಯಾಗಿದ್ದ 2,000 ರೂ. ಸೇವಾ ಶುಲ್ಕವನ್ನು 1,500 ರೂ.ಗೆ ಇಳಿಸಲಾಗಿದೆ. ನಗರ ಪ್ರದೇಶದ ಅರ್ಜಿದಾರರಿಗೆ 2,500 ರೂ. ಶುಲ್ಕವೇ ಮುಂದುವರಿಯಲಿದೆ. ಹದ್ದುಬಸ್ತು ಪ್ರಕರಣಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿನಿಗದಿಯಾಗಿದ್ದ,500 ರೂ. ಶುಲ್ಕವನ್ನು 500 ರೂ.ಗೆ ಇಳಿಸಲಾಗಿದೆ. ನಗರ ಪ್ರದೇಶದಲ್ಲಿ 2,000 ರೂ. ಶುಲ್ಕವೇ ಮುಂದುವರಿಯಲಿದೆ. ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಪಹಣಿಯ (ಆರ್‌ಟಿಸಿ) ಕಾಲಂ -9 ರಲ್ಲಿನ ಅರ್ಜಿದಾರರ ಹಕ್ಕಿನ ವಿಸ್ತೀರ್ಣಕ್ಕೆ ಮಾತ್ರ ಪಾವತಿಸಿಕೊಳ್ಳಲು ಆದೇಶಿಸಲಾಗಿದೆ. ಈಗಾಗಲೇ ಅಳತೆಗಾಗಿ ಸ್ವೀಕೃತವಾಗಿ ಬಾಕಿ ಇರುವ ಪ್ರಕರಣಗಳಿಗೆ ಈಶುಲ್ಕ ಪರಿಷ್ಕರಣೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Read More

ಟೋಕಿಯೊ: ಜಪಾನ್‌ನಲ್ಲಿ ಸೋಮವಾದಿಂದ 155 ಬಾರಿ ಭೂಕಂಪಗಳು ಸಂಭವಿಸಿವೆ. ಇದರಲ್ಲಿ 7.6 ತೀವ್ರತೆಯ ಕಂಪನ ಹಾಗೂ ಮಂಗಳವಾರ 6 ಕ್ಕೂ ಹೆಚ್ಚು ಭೂಕಂಪಗಳು ಸಂಭವಿಸಿವೆ ಎಂದು ಜಪಾನ್ ಹವಾಮಾನ ಕಚೇರಿ ತಿಳಿಸಿದೆ. ಹೆಚ್ಚಿನ ಭೂಕಂಪಗಳು 3 ಕ್ಕಿಂತ ಹೆಚ್ಚು ತೀವ್ರತೆಯನ್ನು ಹೊಂದಿದ್ದವು ಎಂದು ಜಪಾನ್ ಹವಾಮಾನ ಕಚೇರಿ ತಿಳಿಸಿದೆ. ಹೊಸ ವರ್ಷದ ದಿನದಂದು ಮಧ್ಯ ಜಪಾನ್‌ನಲ್ಲಿ ಸಂಭವಿಸಿದ ದೊಡ್ಡ ಭೂಕಂಪದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಪ್ರಚೋದಿಸಿತು, ಮನೆಗಳನ್ನು ಹಾನಿಗೊಳಿಸಿತು ಮತ್ತು ರಾತ್ರಿಯಿಡೀ ವಿನಾಶವನ್ನು ಉಂಟುಮಾಡಿದ ದೊಡ್ಡ ಬೆಂಕಿಯನ್ನು ಹುಟ್ಟುಹಾಕಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಹೊನ್ಶು ಮುಖ್ಯ ದ್ವೀಪದ ಇಶಿಕಾವಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪವು 7.5 ತೀವ್ರತೆಯನ್ನು ಹೊಂದಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ತಿಳಿಸಿದೆ. https://kannadanewsnow.com/kannada/the-meteorological-department-has-predicted-rain-for-a-week-in-several-districts-of-the-state-from-today/ https://kannadanewsnow.com/kannada/4-shot-dead-in-manipur-biren-singh-calls-ministers-for-urgent-meet/ https://kannadanewsnow.com/kannada/the-meteorological-department-has-predicted-rain-for-a-week-in-several-districts-of-the-state-from-today/ https://kannadanewsnow.com/kannada/4-shot-dead-in-manipur-biren-singh-calls-ministers-for-urgent-meet/

Read More

ಬೆಂಗಳೂರು: ಜ.2ರಿಂದ ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2.380 ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. 23.5 ಮತ್ತು ಜ.6ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಹಾವೇರಿ, ಗದಗ, ರಾಯಚೂರು, ಬೀದರ್,ವಿಜಯಪುರ, ಕೊಪ್ಪಳದಲ್ಲೂ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಇದಲ್ಲದೇ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ಮಳೆಯಾಗುವ ಸಾಧ್ಯತೆ ಇದೆ.

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರ ಸಮಸ್ಯೆ, ಕುಂದು-ಕೊರತೆಗಳನ್ನು ಆಲಿಸಿ, ನಿವಾರಿಸುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಾಳೆಯಿಂದ ಮೊದಲ ಹಂತದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ಮೂಲ ಉದ್ದೇಶ ಸರ್ಕಾರಿ ಕಚೇರಿಗೆ ಜನರು ಅಲೆಯುವುದನ್ನು ತಡೆಯಲು ಅವರ ಮನೆ ಬಾಗಿಲಿನಲ್ಲಿಯೇ ಸಮಸ್ಯೆ ಗಳನ್ನು ಬಗೆಹರಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜನತೆಗೆ ಸಮಸ್ಯೆಯಿಂದ ಮುಕ್ತಿ ನೀಡುವುದು ಆಗಿದೆ. ನಾಳೆ ಬಿಬಿಎಂಪಿ ವ್ಯಾಪ್ತಿಯ 8 ವಲಯ ಗಳಲ್ಲಿನ 28 ವಿಧಾನಸಭಾ ವ್ಯಾಪ್ತಿ ಯಲ್ಲೂ ಹಂತಹಂತವಾಗಿಕಾರ್ಯಕ್ರಮನಡೆಸಲಾಗುವುದು. ಮೊದಲ ಹಂತದಲ್ಲಿ ಜ. 3 ರಂದು ಮಹದೇವಪುರ ವಲಯ, ಜ. 5ರಂದು ಯಲಹಂಕ ಹಾಗೂ ಜ. 6ರಂದು ಪೂರ್ವ ವಲಯ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆಗಳನ್ನು ಖುದ್ದು ಡಿ.ಕೆ. ಶಿವಕುಮಾರ್ ಅವರೇ ಆಲಿಸಿ, ಪರಿಹಾರ ನೀಡಲಿದ್ದಾರೆ.

Read More

ಬೆಂಗಳೂರು: ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪರಿಷ್ಕೃತ ಪಠ್ಯವನ್ನು ಮತ್ತು ಅಂಕಗಳನ್ನು ನಿಗದಿ ಮಾಡಿ, ಪರೀಕ್ಷೆ ನಡೆಸಲು ಮಾರ್ಗಸೂಚಿ ಪ್ರಕಟಿಸಿದೆ. ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಪರೀಕ್ಷೆಯು ಮಾರ್ಚ್ ನಲ್ಲಿ ನಡೆಯಲಿದೆ ಅಂತ ತಿಳಿಸಿದೆ.

Read More

ಬೆಂಗಳೂರು: 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅದರ ವಿವರ ಈ ಕೆಳಕಂಡತಿದೆ. 21 ಸಾರ್ವತ್ರಿಕ ರಜೆ 15 ಪರಿಮಿತ ರಜೆ (ಪ್ರತಿ ಭಾನುವಾರ ಹಾಗೂ 2ನೇ ಮತ್ತು 4ನೇ ಶನಿವಾರಗಳನ್ನು ಹೊರತುಪಡಿಸಿ) ರಜೆ ವಿವರವನ್ನು ನೀಡಲಾಗಿದೆ. ಜನವರಿ 15, ಸೋಮವಾರ: ಉತ್ತರಾಯಣ ಪುಣ್ಯಕಾಲ, ಮಕರ ಸಕ್ರಾಂತಿ ಜನವರಿ 26, ಶುಕ್ರವಾರ: ಗಣರಾಜ್ಯೋತ್ಸವ ಮಾರ್ಚ್ 8, ಶುಕ್ರವಾರ: ಮಹಾ ಶಿವರಾತ್ರಿ ಮಾರ್ಚ್ 29, ಶುಕ್ರವಾರ: ಗುಡ್​ ಫ್ರೈಡೆ ಏಪ್ರಿಲ್ 9, ಮಂಗಳವಾರ: ಯುಗಾದಿ ಹಬ್ಬ ಏಪ್ರಿಲ್ 11, ಗುರುವಾರ: ಖುತುಬ್ ಎ ರಂಜಾನ್ಮೇ 1, ಬುಧವಾರ: ಕಾರ್ಮಿಕರ ದಿನಾಚರಣೆ ಮೇ 10, ಶುಕ್ರವಾರ: ಬಸವ ಜಯಂತಿ, ಅಕ್ಷಯ ತೃತೀಯ ಜೂನ್ 17, ಸೋಮವಾರ: ಬಕ್ರೀದ್ಜು ಲೈ 17, ಬುಧವಾರ: ಮೊಹರಂ ಕಡೇ ದಿನ ಆಗಸ್ಟ್ 15, ಗುರುವಾರ: ಸ್ವಾತಂತ್ರ್ಯ ದಿನಚಾರಣೆ ಸೆಪ್ಟೆಂಬರ್ 7, ಶನಿವಾರ: ವರಸಿದ್ಧಿ ವಿನಾಯಕ ವೃತ ಸೆಪ್ಟೆಂಬರ್ 16, ಸೋಮವಾರ:…

Read More

ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವ (ಎಲ್.ಪಿ.ಜಿ ಗ್ಯಾಸ್) ಫಲಾನುಭವಿಗಳು, ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಎಂಬ ವದಂತಿಗೆ ಕಿವಿಗೊಡದಿರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಡಿ.31ರ ಒಳಗಾಗಿ ಗ್ಯಾಸ್ ಏಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಹಾಗೂ ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿ ಮತ್ತು ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿರುತ್ತದೆ. ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಬಯೋಮೆಟ್ರಿಕ್ ನೀಡಲು ಕೇಂದ್ರ ಸರ್ಕಾರವು ಯಾವುದೇ ರೀತಿಯ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಬಯೋಮೆಟ್ರಿಕ್ ನೀಡಬಹುದಾಗಿದೆ. ಜಿಲ್ಲೆಯ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ಅನಾವಶ್ಯಕ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಉಜ್ವಲ ಯೋಜನೆಯಡಿ ಗ್ಯಾಸ್…

Read More

ಬೆಂಗಳೂರು: ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಎಲ್ಲಾ ಸಿಬ್ಬಂದಿಗಳ ಕುಟುಂಬದ ಸದಸ್ಯರನ್ನು ಗೌರವಿಸಿದ ಸಾರಿಗೆ ಸಚಿವರು, ಅಪಘಾತದಲ್ಲಿ ಮೃತಪಟ್ಟ ಒಟ್ಟು 12 ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಅವಲಂಬಿತರಿಗೆ ತಲಾ 1 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಾಂಕೇತಿಕ ಅಪಘಾತದಲ್ಲಿ ಮೃತ ಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ 1 ಕೋಟಿಯ ಪರಿಹಾರ ಮೊತ್ತವನ್ನು ವಿತರಿಸಿದರು ಅಲ್ಲದೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಿದರು. ಮೃತರನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಪರಿಹಾರದ ಮೊತ್ತದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು ನಡೆಸಬಹುದಾಗಿದೆ ಎಂದರು. ಈ ಹಿಂದೆ ಅಪಘಾತ ಸೇರಿದಂತೆ ಇತರ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ ರೂ. 3 ಲಕ್ಷ ಗಳನ್ನು ಮಾತ್ರ ನೀಡಲಾಗುತ್ತಿತ್ತು. ಸಾರಿಗೆ…

Read More