Author: kannadanewsnow07

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಪಟ್ಟ ಕೇಸಿಗೆ ಇಡಿ ಎಂಟ್ರಿಯಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು, ರಾಯಚೂರು, ಹೈದ್ರಬಾದ್ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ಕಲೆ ಹಾಕುತ್ತಿದೆ ಎನ್ನಲಾಗಿದೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದಲ್ಲದೇ ಬೆಂಗಳೂರಿನ ಯಲಹಂಕದಲ್ಲಿರುವ ಅವರ ಮನೆ ಮೇಲೆ ಕೂಡ ದಾಳಿ ನಡೆಸಿದ್ದಾರೆ. ಇನ್ನೂ ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ ಮನೆ ಮೇಲೂ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್​ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ನಡುವೆ ಇಡಿ ದಾಳಿಗೆ ಸಂಬಂಧಪಟ್ಟಂತೆ  ಬೆಂಗಳೂರಿನಲ್ಲಿ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ್ ಇಡಿ ಅಧಿಕಾರಿಗಳು ದಾಳಿ ಮಾಡುವ ಬಗ್ಗೆ ರಾಜ್ಯಕ್ಕೆ…

Read More

ನವದೆಹಲಿ: ರಷ್ಯಾ ಪ್ರವಾಸವನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಆಸ್ಟ್ರಿಯಾ ತಲುಪಿದ್ದು, ಅವರು ನೇರವಾಗಿ ಯುರೋಪಿಯನ್ ದೇಶಕ್ಕೆ ಆಗಮಿಸಿದ್ದಾರೆ. ಯುರೋಪಿಯನ್ ದೇಶದಲ್ಲಿ ಪ್ರಧಾನಮಂತ್ರಿಯವರನ್ನು ಕೆಂಪು ಹಾಸಿನ ನೊಂದಿಗೆ ಸ್ವಾಗತಿಸಲಾಯಿತು. ಆಸ್ಟ್ರಿಯಾದ ವಿದೇಶಾಂಗ ಸಚಿವ ಅಲೆಕ್ಸಾಂಡರ್ ಶಾಲೆನ್ಬರ್ಗ್ ಸ್ವತಃ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಂತರ, ಅಲೆಕ್ಸಾಂಡರ್ ಶಾಲೆನ್ಬರ್ಗ್ ಟ್ವೀಟ್ ಮಾಡಿ, “ಆಸ್ಟ್ರಿಯಾಕ್ಕೆ ಐತಿಹಾಸಿಕ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮೀಯ ಸ್ವಾಗತ. ಇಂದು ನಮ್ಮ ರಾಜತಾಂತ್ರಿಕ ಸಂಬಂಧಗಳ 75 ನೇ ವಾರ್ಷಿಕೋತ್ಸವ. ನಮ್ಮ ದೇಶಗಳ ನಡುವಿನ ಸಹಭಾಗಿತ್ವವು ಜಾಗತಿಕ ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿಗೆ ಜಂಟಿ ಬದ್ಧತೆಯನ್ನು ಆಧರಿಸಿದೆ” ಎಂದು ಅವರು ಹೇಳಿದರು. ವಂದೇ ಮಾತರಂನೊಂದಿಗೆ ಸ್ವಾಗತ : ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಟ್ರಿಯಾದ ರಾಜಧಾನಿ ವಿಯೆನ್ನಾದ ಹೋಟೆಲ್ ರಿಟ್ಜ್-ಕಾರ್ಲ್ಟನ್ ತಲುಪಿದರು. ಇಲ್ಲಿ ಸಾಗರೋತ್ತರ ಭಾರತೀಯರು ಅವರನ್ನು ಸ್ವಾಗತಿಸಿದರು. ಹೋಟೆಲ್ ತಲುಪಿದ ಆಸ್ಟ್ರಿಯಾದ ಕಲಾವಿದರು ಪ್ರಧಾನಿ ಮೋದಿಯವರನ್ನು…

Read More

ಬೆಂಗಳೂರು: ಮಾಜಿ ಸಚಿವ B. ನಾಗೇಂದ್ರ ಮನೆ, ವಾಲ್ಮೀಕಿ ಕಚೇರಿ ಸೇರಿದಂತೆ ಕಡೆ ED ದಾಳಿ ನಡೆಸಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಬೆಂಗಳೂರಿನ ವಸಂತ ನಗರದಲ್ಲಿರುವ ವಾಲ್ಮಿಕಿ ಕಚೇರಿ ಮೇಲೆ ಕೂಡ ಇಡಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದಾರೆ ಎನ್ನಲಾಗಿದೆ. ಇದಲ್ಲದೇ ಬೆಂಗಳೂರು ಮತ್ತು ಬಳ್ಳಾರಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರ ಅಂತ ತಿಳಿದು ಬಂದಿದೆ. ಬಳ್ಳಾರಿ. ಬೆಂಗಳೂರು, ಹೈದ್ರಬಾದ್‌ ಸೇರಿದಂತೆ ಒಟ್ಟು 18 ಕಡೆಗಳಲ್ಲಿ ಇಡಿ ಅಧಿಕಾರಿಗಳಿಂದ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಇದಲ್ಲದೇ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರ ಬೆಂಗಳೂರು. ರಾಯಚೂರಿನ ಮನೆ ಮೇಲೆ ಕೂಡ ಕೂಡ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪ್ರಮುಖ ಮಾಹಿತಿಗಳನ್ನು,. ಮಹತ್ವದ ದಾಖಲೆಗಳನ್ನು ಪರಿಶೀಲನೆ…

Read More

ಬೆಂಗಳೂರು: ಮಾಜಿ ಸಚಿವ B. ನಾಗೇಂದ್ರ ಮನೆ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ಸಂಜಯನಗರದಲ್ಲಿರುವ ಇದಲ್ಲದೇ ಬಳ್ಳಾರಿಯ ನೆಹರು ನಗರದಲ್ಲಿರುವ ನಾಗೇಂದ್ರ ಅವರ ಮನೆ ಮೇಲೆ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸರಿ ಸುಮಾರು ಎಂಟು ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ. ಇದಲ್ಲದೇ ಶಾಸಕ  ಬಸವರಾಜ ದದ್ದಲ್‌ ಬೆಂಗಳೂರಿನಲ್ಲಿರುವ ಅವರ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದು, ಇಡಿ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಮಂಗಳವಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಎದುರು ಹಾಜರಾಗಿ ವಿಚಾರಣೆ ಎದುರಿಸಿದರು.

Read More

ಬೆಂಗಳೂರು: ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ. ಇದಲ್ಲದೇ ರಾಜ್ಯ ಸರ್ಕಾರವು ʼಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆʼಯನ್ನು ಜಾರಿಗೆ ತಂದಿದೆ.  ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ…

Read More

ಬೆಂಗಳೂರು: ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಅಡಿ ಪ್ರತಿ ವರ್ಷ 436 ರೂ. ಪ್ರೀಮಿಯಂ ಪಾವತಿಸಿದರೆ, ಯಾವುದೇ ಕಾರಣದಿಂದ ಸಾವು ಸಂಭವಿಸಿದರೆ 2ಲಕ್ಷ ರೂ. ಪಾಲಿಸಿ ಹಣ ದೊರೆಯುವುದು ಅಂತ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಅವರು ಎರಡು ದಿನಗಳ ಕಾಲ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ನಂತರ ಸಭೆಯನ್ನುದ್ದೇಶಿಸಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಾಧ್ಯಮದವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, 18ರಿಂದ 50 ವರ್ಷದೊಳಗಿನವರು ಇದಕ್ಕೆ ಅರ್ಹರಿದ್ದಾರೆ. ಇದೇ ರೀತಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವಾರ್ಷಿಕ ರೂ. 20 ಪ್ರೀಮಿಯಂ ಪಾವತಿಸಿದರೆ, ಅಪಘಾತದಲ್ಲಿ ಮೃತಪಟ್ಟರೆ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ರೂ. 2ಲಕ್ಷ ರೂ. ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯಕ್ಕೆ 1ಲಕ್ಷ ರೂ. ಪಾಲಿಸಿ ಮೊತ್ತ ದೊರೆಯಲಿದೆ. 18ರಿಂದ 70 ವರ್ಷದೊಳಗಿನವರು ಈ ಯೋಜನೆ ವ್ಯಾಪ್ತಿಗೆ…

Read More

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಆಗಸ್ಟ್ 01 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷದವರು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜು. 23 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ,…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಅನೇಕ ವ್ಯಕ್ತಿಗಳು ಮದುವೆ ಯೋಗ ಇರದೆ ಸಮಸ್ಯೆಯಾಗುತ್ತದೆ. ಕೆಲವೊಂದು ಬಾರಿ ನಾವು ಇಷ್ಟಪಡುವ ವ್ಯಕ್ತಿಯೊಂದಿಗೆ ಮದುವೆಯಾಗದೆ ಇರುವವುದು ಅಥವಾ ಕಂಕಣ ಭಾಗ್ಯದಲ್ಲಿ ಅನೇಕ ರೀತಿಯ ಸಮಸ್ಯೆಗಳು ಕಾಡುವುದು ಈ ರೀತಿಯ ಸಮಸ್ಯೆಗಳು ನಮ್ಮನ್ನ ಏನಾದರೂ ಕಾಡುತ್ತಾ ಇದೆ ಎಂದರೆ ನಾವು ಕೆಲವೊಂದು ಪರಿಹಾರ ಅನುಸರಿಸುವುದರಿಂದ ಖಂಡಿತವಾಗಿಯೂ ಮದುವೆಯಾಗುವ ಅಂತ ಯೋಗ ಫಲವನ್ನು ನೀವು ಪಡೆದುಕೊಳ್ಳಬಹುದು. ಮದುವೆ ಎಂಬುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂದು ಹೇಳಲಾಗುತ್ತದೆ, ಆದರೆ ಕೆಲವೊಂದು ಬಾರಿ ನಮಗೆ ಸಮಸ್ಯೆಗಳು ಅಡೆತಡೆಗಳು ಬರುವ ಸಾಧ್ಯತೆ ಇದೆ. ಮದುವೆಯಾಗಬೇಕು ಅಂದುಕೊಂಡಿದ್ದರೆ ಈ ಪರಿಹಾರ ಕ್ರಮ ಅನುಸರಿಸುವುದು ತುಂಬಾ ಮುಖ್ಯವಾಗಿರುತ್ತದೆ. ಮದುವೆ ಎಂದರೆ ಎರಡು ಕುಟುಂಬ ಎರಡು ಜೀವಗಳನ್ನ ಒಂದು ಮಾಡುವಂತಹ ಒಂದು ಪ್ರಕ್ರಿಯೆಯಾಗಿದೆ. ಮದುವೆ ವಿಳಂಬ ಆಗುವುದಕ್ಕೆ ಗ್ರಹಗಳಲ್ಲಿ ಕೆಲವೊಂದು ಸಮಸ್ಯೆ ಉಂಟಾಗುವುದರಿಂದ ಈ ಸಮಸ್ಯೆಗಳು ಬರುತ್ತವೆ. ಜಾತಕದಲ್ಲಿ ಏನಾದರೂ ದೋಷಗಳಿದ್ದರೂ ಕೂಡ…

Read More

ಬೆಂಗಳೂರು: ನಮ್ಮ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇದೆ. ಸುಮಾರು 320 ಕಿಮಿ ಕರಾವಳಿ ಪ್ರದೇಶ ನಮ್ಮ ರಾಜ್ಯದಲ್ಲಿದ್ದು, ಇದುವರೆಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನಮಗೆ ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಎರಡನೇ ದಿನದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಪಾಲಿಸಿ ಮಾಡಲು ಮಾಸ್ಟರ್ ಪ್ಲಾನ್ ಸಿದ್ದಪಡಿಸಿಕೊಂಡು ಬರುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿದರು. ಕರಾವಳಿಯಲ್ಲಿ ಉತ್ತಮ ಪಂಚತಾರಾ ಹೋಟೆಲ್ ಇಲ್ಲ. ವಿದೇಶಿ ಪ್ರವಾಸಿಗರು ಬಂದರೆ ಉಳಿದುಕೊಳ್ಳಲು ಆ ಗುಣಮಟ್ಟದ ಹೋಟೆಲ್ ಅಗತ್ಯ. ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ.…

Read More

ಬೆಂಗಳೂರು: ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕøತ ಯೋಜನೆಯಾಗಿದ್ದು, ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000,…

Read More