Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್ ಸಜ್ಜುಗೊಳಿಸಬೇಕು. ಮೆಡಿಕಲ್ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ಫೋರ್ಸ್ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಅಂತ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ…
ಬೆಂಗಳೂರು: ಮನೆ ಊಟ, ಹಾಸಿಗೆ, ಪುಸಕ್ತಕ್ಕೆ ಅವಕಾಶ ನೀಡುವಂತೆ ಬೆಂಗಳೂರು ಕೇಂದ್ರ ಕಾರಗೃಹದ ಅಧಿಕಾರಿಗಳಿಗೆ ನಿರ್ಧೇಶನ ನೀಡುವಂತೆ ಹೈಕೋರ್ಟ್ಗೆ ನಟ ದರ್ಶನ್ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕೊಲೆ ಆರೋಪದ ಮೇಲೆ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿದ್ದು, ಅವರು ಜೈಲಿನ ಆಹಾರವನ್ನು ಸೇವನೆ ಮಾಡಿದರೆ ಅಜೀರ್ಣ ಮತ್ತು ವಾಂತಿಯಾಗುತ್ತಿದೆ ಎನ್ನಲಾಗಿದೆ. ಇದಲ್ಲದೇ ಜೈಲಿನ ವೈದ್ಯರು ಕೂಡ ಇದನ್ನೇ ಉಲ್ಲೇಖ ಮಾಡಿದ್ದು, ಇದನ್ನೆ ಆಧಾರವಾಗಿ ಇಟ್ಟುಕೊಂಡು ದರ್ಶನ್ ಪರ ವಕೀಲರು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಅರ್ಜಿ ವಿಚಾರಣೆ ನಾಳೆ ನ್ಯಾಯಾಧೀಶರ ಮುಂದೆ ಬರಲಿದೆ ಎನ್ನಲಾಗಿದೆ.
ಬೆಂಗಳೂರು: ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು “ಗೃಹ ಲಕ್ಷ್ಮೀ” ಯೋಜನೆ (Gruha Lakshmi Scheme Karnataka) ಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಲೆಂದು ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2,000 ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ.ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. “ಗೃಹ ಲಕ್ಷ್ಮಿ” ಯೋಜನೆಯ ಅರ್ಜಿ ಸಲ್ಲಿಸುವುದು ಹೇಗೆ? “ಗೃಹ ಲಕ್ಷ್ಮಿ” ಯೋಜನೆಯ ಲಾಭ ಪಡೆಯಲು ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅಥವಾ ಸರ್ಕಾರ ನೇಮಿಸಿರುವ ಸ್ವಯಂಸೇವಕ “ಪ್ರಜಾಪ್ರತಿನಿಧಿಗಳು” ಮನೆ…
ಸಿಂಗಾಪುರದ ಆಹಾರ ನಿಯಂತ್ರಣ ಪ್ರಾಧಿಕಾರವು ಸೋಮವಾರ ಮಿಡತೆಗಳು ಸೇರಿದಂತೆ 16 ಜಾತಿಯ ಕೀಟಗಳನ್ನು ಮಾನವ ಬಳಕೆಗೆ ಅನುಮೋದಿಸಿದೆ. ಈ ಸೇರ್ಪಡೆಯು ನಗರ-ರಾಜ್ಯದ ವೈವಿಧ್ಯಮಯ ಮೆನುವನ್ನು ಶ್ರೀಮಂತಗೊಳಿಸುತ್ತದೆ, ಇದು ಈಗಾಗಲೇ ಚೀನೀ ಮತ್ತು ಭಾರತೀಯ ಪಾಕಪದ್ಧತಿಯನ್ನು ಒಳಗೊಂಡಿದೆ ಎನ್ನಲಾಗಿದೆ. ಈ ಸುದ್ದಿಯು ಚೀನಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂನಲ್ಲಿ ಕೃಷಿ ಮಾಡಿದ ಕೀಟಗಳನ್ನು ಸಿಂಗಾಪುರಕ್ಕೆ ಪೂರೈಸಲು ತಯಾರಿ ನಡೆಸುತ್ತಿರುವ ಉದ್ಯಮ ಮಧ್ಯಸ್ಥಗಾರರನ್ನು ಉತ್ತೇಜಿಸಿದೆ. ಅನುಮೋದಿಸಲ್ಪಟ್ಟ ಎಲ್ಲಾ ಕೀಟಗಳು, ಮಿಡತೆಗಳು, ಆಹಾರ ಹುಳುಗಳು ಮತ್ತು ರೇಷ್ಮೆ ಹುಳುಗಳಂತಹ ವಿವಿಧ ಜಾತಿಗಳನ್ನು ಒಳಗೊಂಡಿವೆ. ಆಹಾರ ಅಥವಾ ಜಾನುವಾರು ಆಹಾರಕ್ಕಾಗಿ ಕೀಟಗಳನ್ನು ಆಮದು ಮಾಡಿಕೊಳ್ಳಲು ಅಥವಾ ಕೃಷಿ ಮಾಡಲು ಯೋಜಿಸುವ ಯಾರಾದರೂ ಎಸ್ಎಫ್ಎ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಸಿಂಗಾಪುರ್ ಫುಡ್ ಏಜೆನ್ಸಿ (ಎಸ್ಎಫ್ಎ) ನಿರ್ದಿಷ್ಟಪಡಿಸಿದೆ. ಕೀಟಗಳನ್ನು ಆಹಾರ ಸುರಕ್ಷತಾ ಕ್ರಮಗಳೊಂದಿಗೆ ನಿಯಂತ್ರಿತ ಪರಿಸರದಿಂದ ಪಡೆಯಲಾಗಿದೆ ಮತ್ತು ಕಾಡು ಕೊಯ್ಲು ಮಾಡಲಾಗಿಲ್ಲ ಎಂದು ಸಾಬೀತುಪಡಿಸುವುದು ಇದರಲ್ಲಿ ಸೇರಿದೆ ಎನ್ನಲಾಗಿದೆ.
ಬೆಂಗಳೂರು: ಸೈಬರ್ ಕಳ್ಳರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನತೆಯ ಸೈಬರ್ ಖಾತೆಯಿಂದ ಹಣವನ್ನು ಕದಿಯಲು ದಿನನಿತ್ಯ ಹೊಸ ಹೊಸ ಐಡಿಯಾಗಳನ್ನು ಪ್ರಯೋಗ ಮಾಡುತ್ತಿದ್ದಾರೆ. ಈಗ ಈ ಸಾಲಿಗೆ ರಿಜಿಸ್ಟರ್ ಪೋಸ್ಟ್ ಮೂಲಕ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೌದು, ಮನೆಯ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಕಳುಹಿಸಿ, ಲಕ್ಷಾಂತರ ರೂಪಾಯಿ ಬಹುಮಾನ ಬಂದಿದೆ ಅಂತ ಪೋಸ್ಟ್ವೊಂದನ್ನು ಕಳುಹಿಸಿದ್ದು, ಮಲ್ಲಿಕಾರ್ಜುನ ಎನ್ನುವವರು ಟ್ವಿಟ್ಟರ್ ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ಹೇಳುವಂತೆ, ವುದೋ ಒಂದು ವಿಳಾಸದಿಂದ ರಿಜಿಸ್ಟರ್ ಪೋಸ್ಟ್ ಕಳುಹಿಸಿ, . ಕವರ್ ಮೇಲೆ ಬಾರ್ ಕೋಡ್ ಮುದ್ರಿತವಾಗಿರುತ್ತದೆ. ಕವರ್ ಓಪನ್ ಮಾಡಿದಾಗ ಅದರಲ್ಲಿ ಕೂಪನ್ ಇರುತ್ತದೆ ಅದರಲ್ಲಿ ಕಂಪೆನಿಯ ಹೆಸರಿನಲ್ಲಿ ಪ್ರಿಂಟ್ ಆಗಿರುವ ಕೂಪನ್ ಜೊತೆಗೆ, ಒಂದು ಅಪ್ಲಿಕೇಶನ್ ಇರುತ್ತದೆ. ಕೂಪನ್ ನಲ್ಲಿ ಹನ್ನೆರಡು ಲಕ್ಷ ಬಹುಮಾನ ಎನ್ನುವುವದನ್ನು ಕಾಣಬಹುದಾಗಿದೆ. ಈ ನಡುವೆ ಖಾಲಿ ಅಪ್ಲಿಕೇಶನ್, ಕೋಲ್ಕತ್ತಾ ವಿಳಾಸವನ್ನು ಹೊಂದಿರುತ್ತದೆ. ಕೂಪನ್ ಅನ್ನು ಸ್ಕ್ರಾಚ್ ಮಾಡಿದರೆ 12,80,000 ಹಣ ಬಂದಿದೆ…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ಮನೆಯಲ್ಲಿ ಏನಾದರೂ ಹೆಚ್ಚಾಗಿ ನಕಾರಾತ್ಮಕ ಶಕ್ತಿಗಳು ತಾಂಡವವಾಡುತ್ತಿದ್ದರೆ, ಇದ್ದಕ್ಕಿದ್ದ ಹಾಗೆ ಮನೆಯಲ್ಲಿ ಯಾರಾದರೂ ಅನಾರೋಗ್ಯಕ್ಕೆ ತ್ತುತ್ತಾಗುವುದು, ಹಣಕಾಸಿನ ತೊಂದರೆ ಆಗುವಂತಹುದು, ಸಾಲ ಮಾಡುವಂತಹ ಪರಿಸ್ಥಿತಿಗೆ ಬರುವಂತಹದ್ದು ಈ ರೀತಿಯ ಸಮಸ್ಯೆಗಳು ಮನೆಯಲ್ಲಿ ಪದೇಪದೇ ಕಾಣಿಸಿಕೊಳ್ಳುತ್ತಿದ್ದಾರೆ ನರದೃಷ್ಟಿ ದೋಷ ನಮ್ಮ ಮನೆಗೆ ಹೆಚ್ಚಾಗಿ ಪ್ರಭಾವವನ್ನು ಬೀರುತ್ತಿದೆ ಎಂದು ಅರ್ಥ ಮಾಡಿಕೊಳ್ಳಬೇಕು. ಒಬ್ಬ ವ್ಯಕ್ತಿ ಜೀವನದಲ್ಲಿ ಅಭಿವೃದ್ಧಿಯಾಗುತ್ತಿದ್ದಾನೆ ಎಂದರೆ ಯಾರು ಕೂಡ ಸಹಿಸುವುದಿಲ್ಲ. ಅಕ್ಕಪಕ್ಕದ ಮನೆಯವರ ದೃಷ್ಟಿ ಹಾಕಿರಬಹುದು, ಬಂಧುಗಳ ದೃಷ್ಟಿ ಯಾಗಿರಬಹುದು ಇವೆಲ್ಲಾ ಹೆಚ್ಚಾದಾಗ ನರದೃಷ್ಟಿ ದೋಷ ಎಂಬುದು ಪ್ರಭಾವ ಬೀರುತ್ತದೆ. ಈ ದೋಷ ಮನೆಗೆ ತಗಲಬಾರದು ಮತ್ತು ದೋಷದಿಂದ ಕಷ್ಟಗಳು ದೂರವಾಗಬೇಕು ಎಂದರೆ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಬೆಂಗಳೂರು: ಜನರಿಗಾಗಿ ನಾವು ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಎಲ್ಲಾ ಜನಪರ ಕಾರ್ಯಕ್ರಮಗಳು ಸಕಾಲದಲ್ಲಿ ಜನರಿಗೆ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪಾತ್ರ ದೊಡ್ಡದು. ಇವರು ಮೂರು ಜನ ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ಜೊತೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೆ ಅಭಿವೃದ್ಧಿ ವೇಗವಾಗಿ ಮಾಡಲು ಸಾಧ್ಯ ಎಂದು ತಿಳಿಸಿದರು. ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು…
ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು ರಂಗಭೂಮಿಗೆ ಸಂಬಂಧಿಸಿದಂತೆ, ಈಗಾಗಲೇ ಪ್ರಕಟವಾಗಿರುವ ರಂಗಭೂಮಿಯ ಆಕರ ಗ್ರಂಥಗಳಿಗೆ ಬಹುಮಾನ ನೀಡಲು ತೀರ್ಮಾನಿಸಿದ್ದು, 2021, 2022 ಮತ್ತು 2023ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ರಂಗಭೂಮಿಯ ಬೆಳವಣಿಗೆ, ವೈವಿಧ್ಯತೆ ಹಾಗೂ ರಂಗಭೂಮಿಯ ಇತಿಹಾಸವನ್ನು ತಿಳಿಸುವಂತಹ ವಿಮರ್ಶಾತ್ಮಕ ಕೃತಿಗಳಿಗೆ ಬಹುಮಾನ ನೀಡಲಾಗುವುದು. ಪ್ರತಿ ಸಾಲಿಗೆ ತಲಾ ಒಂದು ಪುಸ್ತಕಕ್ಕೆ ಬಹುಮಾನವನ್ನು ನೀಡಲಾಗುವುದು. ಈ ಬಹುಮಾನದ ಮೊತ್ತ ರೂ.25.000/-ಗಳಾಗಿರುತ್ತವೆ. ಕೃತಿಗಳನ್ನು ಲೇಖಕರೇ ನೇರವಾಗಿ ಅಕಾಡೆಮಿಗೆ ಕಳುಹಿಸಿಕೊಡಬೇಕು. ಕೃತಿಗಳು ಜನವರಿ 2021 ರಿಂದ ಡಿಸೆಂಬರ್ 2023ರೊಳಗೆ ಮುದ್ರಣವಾದ ಮೊದಲ ಪ್ರಕಟಣೆಯಾಗಿರಬೇಕು. ಅನುವಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. ಪುಸ್ತಕಗಳು ಯಾವುದೇ ಪದವಿಗಾಗಿ ಪಿಹೆಚ್ಡಿಗಾಗಿ ಮತ್ತು ಪಠ್ಯ ಪುಸ್ತಕಕ್ಕೆ ಸಿದ್ಧಪಡಿಸಿದ ವಿಷಯವಾಗಿರಬಾರದು. ಕಳುಹಿಸಲ್ಪಡುವ ಕೃಷಿ ನಾಟಕವಾಗಿರಬಾರದು. ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು. ಕೃತಿಯ ತಾಂತ್ರಿಕ ಪುಟದಲ್ಲಿ ಮುದ್ರಣ ವರ್ಷವನ್ನು ನಮೂದಿಸಿರಬೇಕು. ಮರುಮುದ್ರಣವಾದ ಪುಸ್ತಕಗಳಾಗಿರಬಾರದು. ಅಕಾಡೆಮಿಯ ಸದಸ್ಯರು ರಚಿಸಿದ ಕೃತಿಗಳಾಗಿರಬಾರದು. ಸಂಪಾದಿತ ಕೃತಿಗಳಾಗಿರಬಾರದು. ಕೃತಿಯು ಕನಿಷ್ಠ 60 ಪುಟಗಳನ್ನು ಹೊಂದಿರಬೇಕು. ಪುಸ್ತಕ ಬಹುಮಾನಕ್ಕೆ…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ. ಈ ಪರಸ್ಪರ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್ಸೈಟ್ನಲ್ಲಿ ಜುಲೈ 6, 2024 ರಂದು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಜುಲೈ 5 ರಿಂದ 2023 ರಿಂದ ಪ್ರಾರಂಭವಾಗಿದ್ದು, ಡಿಸೆಂಬರ್ 31 ರವರೆಗೆ ಆನ್ಲೈನ್ www.ksrtc.org/transfer ಮೂಲಕ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅಂತರ ನಿಗಮ ವರ್ಗಾವಣೆ ಆದೇಶಕ್ಕೆ ಸಂಬಂಧಿಸಿದಂತೆ ಜುಲೈ 6 ರಿಂದ 10 ರಂದು ಸಂಜೆ 5.30ರವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ನೀಡಲಾಗಿದೆ. ನೌಕರರು ಆಕ್ಷೇಪಣೆಗಳನ್ನು…