Author: kannadanewsnow07

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ. ಉದ್ಯೋಗವಿಲ್ಲದೆ ಕೆಲಸ ಹುಡುಕುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ. ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು.…

Read More

ಬೆಂಗಳೂರು: ಶೀಘ್ರದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಕಲಬುರಗಿ ನಗರದಲ್ಲಿವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಕೂಡ ಭರ್ತಿ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.

Read More

ನವದೆಹಲಿ: ಇಂದು ಲೋಕಸಭೆಯಲ್ಲಿ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್‌ ಪ್ರಮಾಣ ವಚನ ಭೋದನೆ ಮಾಡುತ್ತಿದ್ದಾರೆ. ಈ ನಡುವೆ ಕೇಂದ್ರ ಸಚಿವ, ಹಾಗೂ ಮಂಡ್ಯ ಸಂಸದ, ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರು ಕನ್ನಡದಲ್ಲೇ ತಮ್ಮ ಸಂಸದ ಸ್ಥಾನದ ಪ್ರಮಾಣ ವಚನ ಸ್ವೀಕರಿಸಿ ಎಲ್ಲರ ಗಮನ ಸೆಳೆದರು. ಮಂಡ್ಯದಲ್ಲಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ವೆಂಕಟರಮಣೇಗೌಡ (ಅಲಿಯಾಸ್ ‘ಸ್ಟಾರ್’ ಚಂದ್ರು) ವಿರುದ್ಧ 2,84,620 ಮತಗಳ ಅಂತರದಿಂದ ಅವರು ಗೆಲುವಕಂಡಿದ್ದು, ಸದ್ಯ ಅವರು ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರಿದ್ದಾರೆ ಕೂಡ. https://twitter.com/ani_digital/status/1805119713875259523

Read More

ಬೆಂಗಳೂರು: ಕೊಲೆ ಆರೋಪದ ಮೇಲೆ ಸದ್ಯ ನಟ ದರ್ಶನ್‌ ಅವರು ತಮ್ಮ ಗ್ಯಾಂಗ್‌ ಜೊತೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದ ಹಿನ್ನಲೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ನಟ ದರ್ಶನ್‌ ಜೈಲಿನಲ್ಲಿ ನಿದ್ದ ಇಲ್ಲದೇ ದಿನ ಕಳೆಯುತ್ತಿದ್ದಾರೆ ಎನ್ನಲಾಗಿದ್ದು, ಜೈಲಿನ ಊಟಕ್ಕೆ ಅವರಿಗೆ ರುಚಿಸುತ್ತಿಲ್ಲ ಎನ್ನಲಾಗಿದೆ. ದಿನ ನಿತ್ಯ ನಟ ದರ್ಶನ್‌ಗೆ ಹೊರಗೆ ಇದ್ದಾಗ ಚಿಕನ್ ಬಿರಿಯಾನಿ, ಕಬಾಬ್‌, ಮದ್ಯ ಇರಲೇ ಬೇಕಾಗಿತ್ತು, ಆದರೆ ಈಗ ನಟ ದರ್ಶನ್‌ ಪ್ರತಿ ದಿನ ಜೈಲಿನಲ್ಲಿ ನೀಡುವ ಆಹಾರವನೇ ತಿನ್ನಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಬ್ಯಾರಕ್‌ನಲ್ಲಿ ಯಾರೊಂದಿಗೆ ಮಾತನಾಡದ ದರ್ಶನ್‌ ತಮ್ಮ ಪಾಡಿಗೆ ತಾವಿದ್ದು, ಚಡಪಡಿಸುತ್ತ ಓಡಾಡುತ್ತಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಜೈಲಿನ ಮೇನು ಪ್ರಕಾರ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆಯನ್ನು ಸಿಬ್ಬಂದಿ ನೀಡಿದ್ದಾರೆ, ಕೊಟ್ಟಿರುವುದನ್ನು ತಿಂದು ದರ್ಶನ್‌ ನಿನ್ನೆ ನಿದ್ದೆಗೆ ಜಾರಿದ್ದಾರೆ ಎನ್ನಲಾಗಿದೆ. *ಸಾಂದರ್ಭಿಕ ಚಿತ್ರ

Read More

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪಶ್ಚಿಮ ಸಂಚಾರ ಪೊಲೀಸರು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ರಾಂಗ್ ಸೈಡ್ ಡ್ರೈವಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದರು. ಅನೇಕ ಪ್ರಯಾಣಿಕರು, ವಿಶೇಷವಾಗಿ ಬೈಕ್ ಸವಾರರು ರಾಂಗ್ ರೂಟ್ ನಲ್ಲಿ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ ಮತ್ತು ಬೆಂಗಳೂರು ಪಶ್ಚಿಮದ ಎಲ್ಲಾ ಸಂಚಾರ ಮಿತಿಗಳಲ್ಲಿ ಪೊಲೀಸರು ಅಪರಾಧಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಸಿಗ್ನಲ್ ಜಂಪ್ ಮಾಡುವುದು, ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವುದು, ಟ್ರಿಪಲ್ ರೈಡಿಂಗ್ ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವುದು ಮುಂತಾದ ವೇಗದ ಮಿತಿಯ ಉಲ್ಲಂಘನೆಗಳನ್ನು ಎಐ ವ್ಯವಸ್ಥೆಯು ಪತ್ತೆ ಮಾಡುತ್ತದೆ. ಸಂಚಾರ ದಟ್ಟಣೆಯನ್ನು ಪತ್ತೆಹಚ್ಚಲು ಮತ್ತು ವಾಹನಗಳ ಸುಗಮ ಚಲನೆಗಾಗಿ ಡ್ರೋನ್ ಗಳನ್ನು ಬಳಸುತ್ತಿದ್ದಾರೆ. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129 (ಎ) ಪ್ರಕಾರ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಸೇರಿದಂತೆ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯವಾಗಿದ್ದರೂ, ಹೆಲ್ಮೆಟ್ ಪ್ರಾಮುಖ್ಯತೆಯ ಬಗ್ಗೆ ಈಗಾಗಲೇ ಸಾಕಷ್ಟು ಜಾಗೃತಿ ಮೂಡಿಸಿರುವುದರಿಂದ ಉಲ್ಲಂಘನೆಗೆ…

Read More

ಕೊಡಗು: ಕೊಡಗಿನ ಕುಶಾಲನಗರದಲ್ಲಿ ಗುಂಡಿನ ಸುದ್ದಿ ತಡರಾತ್ರಿ ಕೇಳಿ ಬಂದಿದ್ದು, ಸ್ಥಳೀಯ ಉದ್ಯಮ ಶಶಿಧರ್ ಎನ್ನುವವರ ಮೇಲೆ ಅನುದೀಪ್‌ ಎನ್ನುವವರು ಎಂಟು ಸುತ್ತಿನ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ಸದ್ಯ ಶಶಿಧರ್‌ ಕಾಲಿಗೆ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದು, ಸದ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಅಂಥ ತಿಳಿದು ಬಂದಿದೆ. ನಿನ್ನೆ ತಡರಾತ್ರಿ ತನ ಇಬ್ಬರು ಪಾರ್ಟಿ ನಡೆಸಿದ್ದಾರೆ ಎನ್ನಲಾಗಿದೆ. ಇಬ್ಬರು ಕೂಡ ಪಾರ್ಟನರ್‌ ಆಗಿದ್ದಾರೆ ಎನ್ನಲಾಗಿದೆ. ಪಾರ್ಟಿಯಲ್ಲಿ ಜಗಳವಾದ ಬಳಿಕ ಇಬ್ಬರು ಕೂಡ ಮನೆಗೆ ವಾಪಸ್ಸು ಹೋಗಿದ್ದಾರೆ, ಆದರೆ ಕೆಲವೇ ಗಂಟೆಯಲ್ಲಿ ಶಶಿಧರ್‌ ಅವರು ಅನುದೀಪ್ ಅವರ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅನುದೀಪ್‌ ಗುಂಡಿನ ದಾಳಿ ನಡೆಸಿದ್ದು, ಅಲ್ಲೇ ಇದ್ದ ಫಾರ್ಚೈನರ್ ಕಾರಿನ ಮೇಲೆ ಗುಂಡಿನ ದಾಳಿಯ ಕೂರುಹುಗಳು ಕಂಡು ಬಂದಿದೆ.

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ . ಸೋಮನಹಳ್ಳಿ ಗೇಟ್‌ನಿಂದ ರೈತರು ಪಾದಯಾತ್ರೆ ನಡೆಸಲು ಮುಂದಾಗಿದ್ದು, ಇದೇ ವೇಳೆ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದೆ ಮುಂದಾಗಿದ್ದಾರೆ ಎನ್ನಲಾಗಿದೆ. ಇದಲ್ಲದೇ ತಮ್ಮ ಹೊಲದ ಮೇಲೆ ಸಂಪೂರ್ಣ ಹಕ್ಕನ್ನು ನೀಡುವುದು ಸೇರಿದಂತೆ ಸ್ಥಗಿತಗೊಂಡಿರುವ ಹಾಲು ಪ್ರೋತ್ಸಾಹದನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಕಾರ ಮನವೊಲಿಸಲುವುದಕ್ಕೆ ಮುಂದಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತವಾರವಣ ನಿರ್ಮಾಣವಾಗಿದೆ.

Read More

ನವದೆಹಲಿ: ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅಂಗೀಕರಿಸಿದ್ದಾರೆ. ರಾಹುಲ್ ಗಾಂಧಿ ರಾಯ್ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.  18 ನೇ ಲೋಕಸಭೆಯ ಮೊದಲ ಅಧಿವೇಶನವು ಹೊಸ ಸಂಸತ್ ಕಟ್ಟಡದಲ್ಲಿ ಪ್ರಾರಂಭವಾಗುತ್ತದೆ. ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶೀಘ್ರದಲ್ಲೇ ನಡೆಯಲಿದೆ. https://twitter.com/ANI/status/1805113166902567251

Read More

ನವದೆಹಲಿ: ಲೋಕಸಭಾ ಸದ್ಯಸರಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. 18 ನೇ ಲೋಕಸಭೆ ಜೂನ್ 24 ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಪ್ರಾರಂಭವಾಗಿದೆ. ಈ ನಡುವೆರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿ.ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು https://twitter.com/ANI/status/1805113365993574764

Read More

ನವದೆಹಲಿ: ದೆಹಲಿಯ ಸಂಸತ್ತಿನ ಗಾಂಧಿ ಪ್ರತಿಮೆ ಎದುರು ಭಾರತ ಬ್ಲಾಕ್ ನಾಯಕರು ಸಂವಿಧಾನದ ಪ್ರತಿಯನ್ನು ಹಿಡಿದು ಪ್ರತಿಭಟನೆ ನಡೆಸಿದರು.  ಲೋಕಸಭಾ ಚುನಾವಣೆಯಲ್ಲಿ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ಅನುಭವಿಸಿದ ಜೈವಿಕವಲ್ಲದ ಪ್ರಧಾನಿ 18 ನೇ ಲೋಕಸಭೆ ತನ್ನ ಅಧಿಕಾರಾವಧಿಯನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿರುವಾಗ ಸಂಸತ್ತಿನ ಹೊರಗೆ ತಮ್ಮ ಎಂದಿನ ‘ದೇಶ್ ಕೆ ನಾಮ್ ಸಂದೇಶ್’ ನೀಡಿದ್ದಾರೆ. ಅವರು ಹೊಸದಾಗಿ ಏನನ್ನೂ ಹೇಳಿಲ್ಲ ಮತ್ತು ಎಂದಿನಂತೆ ಬೇರೆಡೆಗೆ ತಿರುಗಿಸಲು ಆಶ್ರಯಿಸಿದ್ದಾರೆ. ವಾರಣಾಸಿಯಲ್ಲಿ ಸಂಕುಚಿತ ಮತ್ತು ಅನುಮಾನಾಸ್ಪದ ಗೆಲುವು ಸಾಧಿಸಿದ ಜನರ ತೀರ್ಪಿನ ನಿಜವಾದ ಅರ್ಥವನ್ನು ಅವರು ಅರ್ಥಮಾಡಿಕೊಂಡಿದ್ದಾರೆ ಎಂಬುದಕ್ಕೆ ಅವರು ಯಾವುದೇ ಪುರಾವೆಗಳನ್ನು ತೋರಿಸಿಲ್ಲ. ಅವರು ಯಾವುದೇ ಸಂದೇಹಕ್ಕೆ ಒಳಗಾಗಬಾರದು: ಭಾರತ ಜನಬಂಧನ್ ಪ್ರತಿ ನಿಮಿಷಕ್ಕೂ ಅವರನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ಅವನು ಕ್ರೂರವಾಗಿ ಬಹಿರಂಗಗೊಂಡಿದ್ದಾನೆ. https://twitter.com/ANI/status/1805110072500232569

Read More