Author: kannadanewsnow07

ಬೆಂಗಳೂರು: ರೇಣುಕಸ್ವಾಮಿ ಹತ್ಯೆಯಾದ ಬಳಿಕ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೆ ಮನೆಯಲ್ಲಿ ಪೂಜೆ ಮಾಡಿದ್ದ ವೇಳೆ ಭಾಗವಹಿಸಿದ್ದರು ಎನ್ನಲಾಗಿದೆ. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿವ ಅಪಾರ್ಟ್‌ಮೆಂಟ್‌ನಲ್ಲಿ ವಿಜಯಲಕ್ಷ್ಮಿವಾಸವಿದ್ದು ರೇಣುಕಸ್ವಾಮಿ ಕೊಲೆಯಾದ ಮರು ದಿನ ನಡೆದಿದ್ದ ಪೂಜೆಯಲ್ಲಿ ನಟ ದರ್ಶನ್ ಭಾಗವಹಿಸಿದ್ದ ಎನ್ನಲಾಗಿದೆ. ಪೂಜೆ ಮುಗಿಸಿಕೊಂಡು ನಟ ದರ್ಶನ್‌ ಮೈಸೂರಿನತ್ತ ತೆರಳಿದ್ದರು ಎನ್ನಲಾಗಿದೆ.  ಈ ನಡುವೆ ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧ ಬಂಧಿತ ಆರೋಪಿ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರನ್ನು ತನಿಖಾಧಿಕಾರಿಗಳು ಬುಧವಾರ ಐದು ತಾಸು ವಿಚಾರಣೆಗೆ ಒಳಪಡಿಸಿದರು.

Read More

ಬೆಂಗಳೂರು: ರೇಣುಕಸ್ವಾಮಿ ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿದಂತೆ ಹಲವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯಗೊಳ್ಳಲಿದೆ. ಈ ನಡುವೆ ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಜೂನ್ 20ರ ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ನಡುವೆ ನಟ ದರ್ಶನ್‌ (Darshan) ಮತ್ತು ಗ್ಯಾಂಗ್‌ ವಿರುದ್ಧ ಪೊಲೀಸರು ಒಟ್ಟು 9 ಸೆಕ್ಷನ್‌ಗಳ (IPC Sections) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದ್ದು, ಈ ನಡುವೆ ಯಾವೆಲ್ಲ ಸೆಕ್ಷನ್‌ಗಳಲ್ಲಿ ಎನು ಇದೇ ಎನ್ನುವುದನ್ನು ನೋಡುವುದಾದರೆ ಅದರ ವಿವರ. ಸೆಕ್ಷನ್‌ 302 – ಕೊಲೆಗೆ ದಂಡನೆ ಸೆಕ್ಷನ್‌ 201 – ಅಪರಾಧಿಯನ್ನು ರಕ್ಷಿಸುವುದಕ್ಕಾಗಿ ತಪ್ಪು ಮಾಹಿತಿ ಕೊಡುವುದು, ಸಾಕ್ಷ್ಯ ನಾಶ ಸೆಕ್ಷನ್‌ 120(ಬಿ) – ಕೊಲೆ ಮಾಡಲು ಮಾಡಿಕೊಂಡ ಅಪರಾಧಿಕ ಒಳ ಸಂಚು. ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ಶಿಕ್ಷೆ ವಿಧಿಸಬೇಕು ಸೆಕ್ಷನ್‌ 355 – ತೀವ್ರ ಉದ್ರೇಕದಿಂದಲ್ಲದೇ ವ್ಯಕ್ತಿಗೆ ಅವಮಾನ ಮಾಡಲು ಅವನ ಮೇಲೆ…

Read More

ನವದೆಹಲಿ: ನೀವು ಎಂದಾದರೂ ಯಾರನ್ನಾದರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ ಸ್ನೇಹಿತನನ್ನು ಹೊಂದಿದ್ದೀರಾ, ಮತ್ತು ಅವರು ತಮ್ಮ ಹೊಸ ಪ್ರೀತಿಯ ಆಸಕ್ತಿಯಿಂದ ಎಷ್ಟು ಗೀಳನ್ನು ಹೊಂದಿದ್ದಾರೆಂದರೆ ಅವರ ಇಡೀ ಜೀವನವು ಅವರ ಸುತ್ತಲೂ ಸುತ್ತುತ್ತದೆ. ಈಗಷ್ಟೇ ಡೇಟಿಂಗ್ ಪ್ರಾರಂಭಿಸಿದ ಜನರಲ್ಲಿ ಸಾಕಷ್ಟು ಸಾಮಾನ್ಯ ನಡವಳಿಕೆಯಾಗಿದೆ ಮತ್ತು ಇದಕ್ಕೆ ಒಂದು ಪದವಿದೆ, ಅದನ್ನು – ಗೆಳೆಯನ ಕಾಯಿಲೆ ಎಂದು ಕರೆಯಲಾಗುತ್ತದೆ. ಮತ್ತು ಇದನ್ನು “ಗೆಳೆಯನ ಕಾಯಿಲೆ” ಎಂದು ಕರೆಯಲಾಗಿದ್ದರೂ, ಯಾವುದೇ ಲಿಂಗದ ಜನರು ಈ ನಡವಳಿಕೆಯನ್ನು ಹೊಂದಬಹುದು. ಆದಾಗ್ಯೂ, ಇದು ಸಾಕಷ್ಟು ಸಾಮಾನ್ಯ ನಡವಳಿಕೆಯಾಗಿದೆ ಮತ್ತು ಹೊಸ ದಂಪತಿಗಳು ಬಂಧವನ್ನು ಹೊಂದಲು ಮತ್ತು ಆಳವಾದ ಸಂಬಂಧಗಳನ್ನು ರಚಿಸಲು ಇದು ಹೆಚ್ಚು ಅಗತ್ಯವಾಗಿದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೆ, ಇದು ಹೆಚ್ಚಿನ ಸಂದರ್ಭಗಳಲ್ಲಿ ತಾತ್ಕಾಲಿಕ ಹಂತವಾಗಿದೆ. ವೈಯಕ್ತಿಕ ಗುರುತನ್ನು ಕಳೆದುಕೊಳ್ಳುವುದು: ನಿಮ್ಮ ಸಂಗಾತಿಯ ಆಸಕ್ತಿಗಳು, ಆದ್ಯತೆಗಳು ಮತ್ತು ಚಟುವಟಿಕೆಗಳ ಮೂಲಕ ನೀವು ನಿಮ್ಮನ್ನು ಹೆಚ್ಚು ವ್ಯಾಖ್ಯಾನಿಸುತ್ತಿದ್ದಂತೆ ನಿಮ್ಮ ಸ್ವಂತ ಗುರುತನ್ನು ಕ್ರಮೇಣ ಕಳೆದುಕೊಳ್ಳುವುದು ಅತ್ಯಂತ ಗಮನಾರ್ಹ…

Read More

ಮೆಕ್ಕಾ: ಹಜ್ ಯಾತ್ರೆಯ ವೇಳೆ ಮೆಕ್ಕಾದಲ್ಲಿ ತಾಪಮಾನ 51.8 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, 68 ಭಾರತೀಯರು ಸೇರಿದಂತೆ 900 ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ಸೌದಿ ಅರೇಬಿಯಾದ ರಾಜತಾಂತ್ರಿಕರೊಬ್ಬರು ತಿಳಿಸಿದ್ದಾರೆ. ಹಜ್ ಸಮಯದಲ್ಲಿ 550 ಸಾವುಗಳು ದಾಖಲಾಗಿವೆ ಎಂದು ಇಬ್ಬರು ಅರಬ್ ರಾಜತಾಂತ್ರಿಕರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಈ ಸಾವುಗಳನ್ನು ಇಂಡೋನೇಷ್ಯಾ, ಇರಾನ್, ಸೆನೆಗಲ್, ಟುನೀಶಿಯಾ ಮತ್ತು ಇರಾಕ್ನ ಸ್ವಾಯತ್ತ ಕುರ್ದಿಸ್ತಾನ್ ಪ್ರದೇಶವು ದೃಢಪಡಿಸಿದೆ, ಆದರೆ ಅನೇಕ ಸಂದರ್ಭಗಳಲ್ಲಿ ಅಧಿಕಾರಿಗಳು ಕಾರಣವನ್ನು ನಿರ್ದಿಷ್ಟಪಡಿಸಿಲ್ಲ.

Read More

ಮನೆಯಲ್ಲಿ ದೈವಿಕ ಶಕ್ತಿ ತುಂಬಲು ಪೂಜೆ, ದೇವರ ಪ್ರಾರ್ಥನೆ ಎಲ್ಲರೂ ಮನೆಯಲ್ಲಿ ದೇವಾನುದೇವತೆಗಳನ್ನು ಪೂಜಿಸುತ್ತಿರಲಿ, ದೇವಸ್ಥಾನಕ್ಕೆ ಹೋಗಲಿ ನಮ್ಮ ಕುಟುಂಬ ಉತ್ತಮ ರೀತಿಯಲ್ಲಿ ಬದುಕಬೇಕು. ಆಗಾಗ ನಾವು ದೇವಸ್ಥಾನಕ್ಕೂ ಹೋಗಿ ಪೂಜೆ ಮಾಡುವುದು ಮುಂದಿನ ಹಂತ. ಮನೆಯಲ್ಲಿ ನಿತ್ಯ ಪೂಜೆ ಮಾಡೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ, ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರ, ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…

Read More

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ ಎನ್ನಲಾಗಿದೆ. ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ. ಹೆಚ್ಚುವರಿ ಅಬಕಾರಿ ತೆರಿಗೆಯಿಂದ ರಾಜ್ಯದ ಬೊಕ್ಕಸದ ಆದಾಯಕ್ಕೆ ಹೊಡೆತ ಬೀಳುತ್ತಿದ್ದು, ಹೀಗಾಗಿ, ಸ್ಪರ್ಧಾತ್ಮಕ ದರ ನಿಗದಿಪಡಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ.

Read More

ನವದೆಹಲಿ: ಲೋಕಸಭಾ ಚುನಾವಣೆ ಮುಗಿದ ನಂತರ, ಕೆಲವೊಮ್ಮೆ ರಾಹುಲ್ ಗಾಂಧಿ ಮತ್ತು ಕೆಲವೊಮ್ಮೆ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಎಲೋನ್ ಮಸ್ಕ್ ಇವಿಎಂಗಳ ನ್ಯಾಯಸಮ್ಮತತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಲೇ ಇರುತ್ತಾರೆ. ಈಗ ಭಾರತೀಯ ತಜ್ಞರು ಎಲೋನ್ ಮಸ್ಕ್ ಅವರಿಗೆ ಪ್ರತಿಕ್ರಿಯಿಸಿ ಇವಿಎಂಗಳನ್ನು ಯಾವುದೇ ಸಾಧನ ಅಥವಾ ವ್ಯವಸ್ಥೆಗೆ ಸಂಪರ್ಕಿಸಲು ಸಾಧ್ಯವಿಲ್ಲ ಅಂಥ ಚುನಾವಣಾ ಆಯೋಗ ತಿಳಿಸಿದೆ.  ಇವಿಎಂಗಳನ್ನು ವಿನ್ಯಾಸಗೊಳಿಸಿದ ತಾಂತ್ರಿಕ ಸಮಿತಿಯ ತಜ್ಞ ರಜತ್ ಮೂನಾ, ಯಂತ್ರವು ಸಾಮಾನ್ಯ ಕ್ಯಾಲ್ಕುಲೇಟರ್ ಅನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲದಂತೆಯೇ, ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಮತಯಂತ್ರಗಳ ಅಕ್ರಮ ಹ್ಯಾಕಿಂಗ್ ನಂತಹ ವಿಷಯಗಳು ರಾಜಕೀಯ ಸ್ವರೂಪದ್ದಾಗಿವೆ ಮತ್ತು ಅಂತಹ ವಿಷಯಗಳಿಂದ ದೂರವಿರಲು ಬಯಸುತ್ತೇನೆ ಎಂದು ಅವರು ಹೇಳಿದರು. ಆದರೆ ಯಾವುದೇ ಇವಿಎಂ ಅನ್ನು ಹ್ಯಾಕ್ ಮಾಡಲು ಅಥವಾ ತಿರುಚಲು ಸಾಧ್ಯವಿಲ್ಲ ಎಂದು ನಾನು ಹೇಳಲೇಬೇಕು ಅಂತ ಹೇಳಿದ್ದಾರೆ. ಮತದಾನ ಯಂತ್ರವನ್ನು ಕಟ್ಟುನಿಟ್ಟಾಗಿ ಒಮ್ಮೆ ಮಾತ್ರ ಬಳಸಬಹುದು ಎಂದು ತಜ್ಞರು ಹೇಳುತ್ತಾರೆ. ಇದು ಇತರ…

Read More

ಬೆಂಗಳೂರು: ಗುಣಮಟ್ಟದ ಶಿಕ್ಷಣ ಎಂದರೆ ಕೇವಲ ಅಂಕಗಳಿಕೆಯಲ್ಲ, ವೈಜ್ಞಾನಿಕತೆ, ಸಾಮಾಜಿಕ ಸಮಾನತೆ, ನೈತಿಕ ಮೌಲ್ಯಗಳನ್ನು ಬಿತ್ತಬೇಕು. ಶಿಕ್ಷಣವನ್ನು ಪೆÇ್ರೀತ್ಸಾಹಿಸಲು ಸರ್ಕಾರವು ಎಲ್ಲಾ ರೀತಿಯ ನೆರವನ್ನು ನೀಡಲಿದೆ. ಖಾಸಗಿ ಶಾಲೆಗಳ ಭರಾಟೆಯ ನಡುವೆ ಸರ್ಕಾರಿ ವಸತಿ ಶಾಲೆಯಲ್ಲಿ ಓದಿದ ಗ್ರಾಮೀಣ ಭಾಗದ ವಿದ್ಯಾರ್ಥಿನಿಯೊಬ್ಬಳು 625 ಅಂಕ ಗಳಿಸಿ ರಾಜ್ಯಕ್ಕೆ ಮೊದಲಿಗಳಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಅಂತಹ ಪ್ರತಿಭಾವಂತ ಮಕ್ಕಳನ್ನು ರೂಪಿಸಿದ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಹಯೋಗದಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಿದ್ದ 2024 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಈ ಹಿಂದೆ ದಲಿತ ಸಂಘರ್ಷ ಸಮಿತಿಯು ರಾಜ್ಯದಲ್ಲಿ ಸಾರಾಯಿ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂದು ಒತ್ತಾಯಿಸಿತ್ತು ಅದರ ಪ್ರೇರಣೆಯಿಂದಾಗಿ 1994-95 ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ಮಂಡಿಸಿದ ಮೊದಲ…

Read More

ಬೆಂಗಳೂರು: ಶೀಘ್ರವೇ ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸುಳಿವು ನೀಡಿದ್ದಾರೆ. ಅವರು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Read More

ಬೆಂಗಳೂರು: ವಿಧಾನ ಸಭಾ ಕ್ಷೇತ್ರದಿಂದ, ಶಿಕ್ಷಕರ ಕ್ಷೇತ್ರದಿಂದ ಹಾಗೂ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಒಟ್ಟು 17 ಶಾಸಕರುಗಳು ಜೂನ್ 24 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ಚುನಾಯಿತರಾದ ಶಾಸಕರುಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Read More