Author: kannadanewsnow07

ಮಡಿಕೇರಿ: ಪ್ರಸಕ್ತ (2024-25) ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 490.6 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.-11.5 ರಷ್ಟು ಕಡಿಮೆ ಮಳೆಯಾಗಿದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧ್ದತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿಮಡಿ ಕಾರ್ಯವು ಪ್ರಾರಂಭಗೊಂಡಿದೆ. ಜುಲೈ ಮತ್ತು ಆಗಸ್ಟ್ ಮಾಹೆಗಳಲ್ಲಿ ನಾಟಿ ಕಾರ್ಯಕೈಗೊಳ್ಳಲಾಗುತ್ತದೆ. ಮುಸುಕಿನ ಜೋಳದ ಬಿತ್ತನೆ ಕಾರ್ಯವನ್ನು ಪ್ರಾರಂಭಗೊಂಡಿದ್ದು, ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನೀಕರಿಸಲಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 2171 ಕ್ವಿಂಟಾಲ್ ಭತ್ತ ಮತ್ತು 41 ಕ್ವಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 1198.3 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳು ಸರಬರಾಜಾಗಿದ್ದು,ಇಲ್ಲಿಯವರೆಗೆ 636.14 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ…

Read More

ಮಡಿಕೇರಿ: ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರು ಮೌಲ್ಯಮಾಪನ ತಪಾಸಣಾ ಶಿಬಿರಕ್ಕೆ ಹಾಜರಾಗಲು ತಾಲ್ಲೂಕುವಾರು ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಜುಲೈ, 26 ರಂದು ಕುಶಾಲನಗರ ತಾಲ್ಲೂಕು ಕಲಾಮಂದಿರ ಅಥವಾ ಗಾಯತ್ರಿ ಕಲ್ಯಾಣ ಮಂಟಪ, ಜುಲೈ, 27 ರಂದು ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣ, ಜುಲೈ, 28 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರ ಹಾಗೂ ಜುಲೈ, 29 ಮತ್ತು 30 ರಂದು ಮಡಿಕೇರಿ ತಾಲ್ಲೂಕಿನ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣ. ಈ ದಿನಾಂಕಗಳಂದು ಶಿಬಿರಗಳಲ್ಲಿ ಭಾಗವಹಿಸುವ ವಿಶೇಷಚೇತನರು ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಹಿರಿಯ ನಾಗರಿಕರು ಆಧಾರ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ…

Read More

ಮಡಿಕೇರಿ : ಮಡಿಕೇರಿ ಹೋಬಳಿಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ ಅವರ ಕಚೇರಿ ಸಭಾಂಗಣದಲ್ಲಿ ‘ಪಿಂಚಣಿ ದಿನ’ವು ಜೂನ್, 26 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಜೂನ್, 26 ರಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದುಕೊರತೆಗಳನ್ನು ನೋಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಕೋರಿದ್ದಾರೆ.

Read More

ಮಡಿಕೇರಿ: ಜಿಲ್ಲೆಯ ಕಲಾವಿದರು ಅಥವಾ ಕಲಾ ತಂಡಗಳಿಗೆ ಗುರುತಿನ ಚೀಟಿಯನ್ನು ನೀಡಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ, ಕೊಡಗು ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾವಾರು ಕಲಾವಿದರ ವಿವರಗಳನ್ನು ಕ್ರೋಢೀಕರಿಸುವ ದೃಷ್ಟಿಯಿಂದ ಕಲಾವಿದರು ಅಥವಾ ಕಲಾ ತಂಡಗಳ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಕೇಂದ್ರ ಕಚೇರಿಗೆ ಸಲ್ಲಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಆಸಕ್ತ ಕಲಾವಿದರು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಡಿಕೇರಿ ಈ ಕಚೇರಿಯಿಂದ ನಿಗಧಿತ ನಮೂನೆ ಪಡೆದು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಜೂನ್, 30 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More

ಮಂಡ್ಯ: ನಟ ದರ್ಶನ್‌ ಕೊಲೆ ಮಾಡುವಷ್ಟು ಕಟುಕನಲ್ಲ ಎಂದು ಮದ್ದೂರು ಶಾಸಕ ಕದಲೂರು ಉದಯ್ ಗೌಡ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ. ನನಗೆ ಹಲವು ವರ್ಷಗಳಿಂದ ದರ್ಶನ್​ ಸ್ನೇಹಿತನಾಗಿದ್ದು, ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲಾ. ನಾನು ನೋಡಿದಂತೆ ಆತ ಕೊಲೆ ಮಾಡುವಷ್ಟು ಕ್ರೂರಿಯಲ್ಲ. ಅವರ ಜೊತೆಗಿರುವವರು ಮಾಡಿ ಇವರ ಮೇಲೆ ಏನಾದ್ರು ಹಾಕಿದ್ರಾ ಗೊತ್ತಿಲ್ಲ. ತನಿಖೆಯಿಂದ ಎಲ್ಲವೂ ಹೊರಗೆ ಬರಬೇಕು ಅಂಥ ಹೇಳಿದರು. ಇನ್ನೂ ದರ್ಶನ್​ ಮತ್ತು ಸಹಚರರು ನನ್ನ ಗನ್​ಮ್ಯಾನ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು. ನನಗೆ ಐದಾರು ಮಂದಿ ಗನ್ ಮ್ಯಾನ್ ಇದ್ದಾರೆ. ಹಲ್ಲೆ ಮಾಡಿದ್ದರೆ ನನಗೆ ಗೊತ್ತಾಗುತ್ತಿರಲಿಲ್ವೇ ಆ ರೀತಿ ಏನೂ ಆಗಿಲ್ಲ. ಅದೆಲ್ಲವೂ‌ ಸುಳ್ಳು ಅಂಥ ಅವರು ಇದೇ ವೇಳೆ ಹೇಳಿದರು.

Read More

ಬೆಂಗಳೂರು: ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್‌-ನವೆಂಬರ್‌ನಲ್ಲಿ ನಡೆಸಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.  ಸ್ವೀಕೃತ ಆಕ್ಷೇಪಗಳನ್ನು ಪರಿಶೀಲಿಸಿದ ನಂತರ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳಿಗೆ ಹಸ್ತಾಂತರಿಸಲಾಗುವುದು. ನಂತರ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ವಹಿಸಲಿವೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

Read More

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಜೂನ್ ತಿಂಗಳ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 14 ಕೆ.ಜಿ ಜೋಳ ಮತ್ತು ಪಿ.ಹೆಚ್.ಹೆಚ್ ಫಲಾನುಭವಿಗಳಿಗೆ 2 ಕೆ.ಜಿ ಜೋಳ ಹಾಗೂ ಎಎವೈ ಪಡಿತರ ಚೀಟಿಗೆ 21 ಕೆ.ಜಿ ಅಕ್ಕಿ ಮತ್ತು ಪಿ.ಹೆಚ್.ಹೆಚ್ ಫಲಾನುಭವಿಗಳಿಗೆ 3 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿದಾರರು ಹತ್ತಿರದ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ತಾಲ್ಲೂಕು ಆಡಳಿತ, ಕುಶಾಲನಗರ ತಾಲ್ಲೂಕು ಪಂಚಾಯತ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ನೂತನ ಡಯಾಲಿಸಿಸ್ ಘಟಕ ಉದ್ಘಾಟನಾ ಕಾರ್ಯಕ್ರಮವು ಜೂನ್, 24 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು, ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ||ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ…

Read More

ಬೊಜ್ಜು ಅನೇಕ ರೋಗಗಳಿಗೆ ಕಾರಣವಾಗಬಹುದು ಎಂದು ಎಲ್ಲರಿಗೂ ತಿಳಿದಿದೆ. ಜನರು ಇದನ್ನು ಕಡಿಮೆ ಮಾಡಲು ವಿವಿಧ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ಇದಲ್ಲದೇ ತೂಕ ನಷ್ಟವು ಮ್ಯಾಜಿಕ್ ವಿಷಯವಲ್ಲ ಎಂಬ ಒಂದು ಪ್ರಮುಖ ವಿಷಯವನ್ನು ಜನರು ಮರೆತುಬಿಡುತ್ತಾರೆ. ಇದು ಸಮಯ ತೆಗೆದುಕೊಳ್ಳುತ್ತದೆ. ಆದರೆ ಅವಸರವೆಂದರೆ ಫಲಿತಾಂಶಗಳು ತ್ವರಿತವಾಗಿರುತ್ತವೆ, ಅವರು ಯಾವುದೇ ದಾರಿತಪ್ಪಿಸುವ ಮಾಹಿತಿಯನ್ನು ಅವಲಂಬಿಸುತ್ತಾರೆ ಮತ್ತು ತೂಕ ಇಳಿಸುವ ಔಷಧಿಗಳನ್ನು ಆಶ್ರಯಿಸಲು ಪ್ರಾರಂಭಿಸುತ್ತಾರೆ ಕೂಡ.  ವಿಶ್ವ ಆರೋಗ್ಯ ಸಂಸ್ಥೆ ಮತ್ತು ಔಷಧ ತಯಾರಕ ಎಲಿ ಲಿಲ್ಲಿ & ಕಂಪನಿ ತೂಕ ಇಳಿಸಿಕೊಳ್ಳಲು ಮತ್ತು ಜನಪ್ರಿಯ ಮಧುಮೇಹ ಔಷಧಿಗಳ ನಕಲಿ ಆವೃತ್ತಿಗಳ ಬಗ್ಗೆ ಜಾಗರೂಕರಾಗಿರಿ ಎಂದು ಜನರಿಗೆ ಎಚ್ಚರಿಕೆ ನೀಡಿದೆ. 2022 ರಿಂದ ವಿಶ್ವದ ಎಲ್ಲಾ ಭೌಗೋಳಿಕ ಪ್ರದೇಶಗಳಲ್ಲಿ ಎರಡು ಔಷಧಿಗಳು ನಕಲಿ ಎಂಬ ವರದಿಗಳನ್ನು ದಾಖಲಿಸಲಾಗಿದೆ ಎಂದು ಡಬ್ಲ್ಯುಎಚ್ಒ ಗುರುವಾರ ತಿಳಿಸಿದೆ. ಈ ಎರಡು ಔಷಧಿಗಳ ಹೆಸರುಗಳು ಸೆಮಾಗ್ಲುಟೈಡ್ ಮತ್ತು ಓಜೆಂಪಿಕ್ ಆಗಿದೆ. ಸೆಮಾಗ್ಲುಟೈಡ್ ಮತ್ತು ಓಜೆಂಪಿಕ್ ಎಂದರೇನು? ಸೆಮಾಗ್ಲುಟೈಡ್ ಎಂಬುದು ಟೈಪ್ 2…

Read More

ನವದೆಹಲಿ: ಯುಜಿಸಿ (ಕೇಂದ್ರ ಧನಸಹಾಯ ಆಯೋಗ) ದೇಶದ 157 ಸುಸ್ತಿ ವಿಶ್ವವಿದ್ಯಾಲಯಗಳು ಮತ್ತು ಮಧ್ಯಪ್ರದೇಶದ 7 ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಘೋಷಿಸಿದೆ. ಯುಜಿಸಿ ಕೂಡ ತನ್ನ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇವುಗಳಲ್ಲಿ 108 ಸರ್ಕಾರಿ ವಿಶ್ವವಿದ್ಯಾಲಯಗಳು, 47 ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಎರಡು ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿವೆ. ಯುಜಿಸಿ ಪ್ರಕಾರ, ಈ ಎಲ್ಲಾ ವಿಶ್ವವಿದ್ಯಾಲಯಗಳು ಒಂಬುಡ್ಸ್ಮನ್ ಅನ್ನು ನೇಮಿಸಿಲ್ಲ, ಇದರಿಂದಾಗಿ ಅವುಗಳನ್ನು ಸುಸ್ತಿದಾರ ವಿಶ್ವವಿದ್ಯಾಲಯಗಳ ವರ್ಗಕ್ಕೆ ಸೇರಿಸಲಾಗಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ ಬಿಡುಗಡೆ ಮಾಡಿದ ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಏಳು ವಿಶ್ವವಿದ್ಯಾಲಯಗಳನ್ನು ಸುಸ್ತಿದಾರರೆಂದು ಘೋಷಿಸಲಾಗಿದೆ. ಮಖನ್ಲಾಲ್ ಚತುರ್ವೇದಿ ನ್ಯಾಷನಲ್ ಯೂನಿವರ್ಸಿಟಿ ಆಫ್ ಜರ್ನಲಿಸಂ ಅಂಡ್ ಕಮ್ಯುನಿಕೇಷನ್ (ಭೋಪಾಲ್), ರಾಜೀವ್ ಗಾಂಧಿ ತಾಂತ್ರಿಕ ವಿಶ್ವವಿದ್ಯಾಲಯ (ಭೋಪಾಲ್), ಜವಾಹರಲಾಲ್ ನೆಹರು ಕೃಷಿ ವಿಶ್ವವಿದ್ಯಾಲಯ (ಜಬಲ್ಪುರ್), ಮಧ್ಯಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ (ಜಬಲ್ಪುರ್), ನಾನಾಜಿ ದೇಶ್ಮುಖ್ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ (ಜಬಲ್ಪುರ), ರಾಜಾ ಮಾನ್ಸಿಂಗ್ ತೋಮರ್ ಸಂಗೀತ ಮತ್ತು ಕಲೆ ವಿಶ್ವವಿದ್ಯಾಲಯ (ಗ್ವಾಲಿಯರ್) ಮತ್ತು ರಾಜಮಾತಾ ವಿಜಯ…

Read More