Author: kannadanewsnow07

ಬೆಂಗಳೂರು,: “ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೂ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ ಕಾರ್ಯಕ್ರಮದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯೆ ನೀಡಲು ನನ್ನ ಬಳಿ ಸಮಯವಿಲ್ಲ. ನಾನೂ ರಾಮನಗರ ಜಿಲ್ಲೆಯವನು. “ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ” ಎಂದು ತಿಳಿಸಿದರು. ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ…

Read More

ನವದೆಹಲಿ: ಪ್ರತಿಯೊಬ್ಬರೂ ಯೋಗವನ್ನು ಜೀವನ ಶೈಲಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ನವದೆಹಲಿಯ ನೋಯ್ಡಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಸಮುಚ್ಚಯದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಗತ್ತಿಗೆ ಭಾರತ ಕೊಟ್ಟ ಅಮೂಲ್ಯ ಕೊಡುಗೆ ಯೋಗ. ಯೋಗದ ಮೂಲಕ ಇಡೀ ಜಗತ್ತನ್ನು ಭಾರತದ ಬೆಸೆದಿದೆ. ಯೋಗವೆಂದರೆ ‘ಜೋಡಿಸು’ ‘ಸೇರಿಸು’ ‘ಕೂಡಿಸು’ ಎಂಬ ಅರ್ಥ ಬರುತ್ತದೆ. ಅದಕ್ಕೆ ಸಾರ್ಥಕತೆ ತರುವ ನಿಟ್ಟಿನಲ್ಲಿ ಯೋಗ ಇಡೀ ಜಗತ್ತನ್ನು ಬೆಸೆದುಕೊಂಡು ಬೆಳಗುತ್ತಿದೆ ಎಂದು ಅವರು ಹೇಳಿದರು. ಋಷಿ ಮುನಿಗಳು ನಮಗೆ ಯೋಗವನ್ನು ಕೊಟ್ಟು ಹೋದರು. ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರಗೊಳಿಸಿ ಭಾರತದ ನೆಲದಲ್ಲಿ ನಿಂತು ಜಗತ್ತನ್ನು ನೋಡುವ ಹಿರಿಮೆಯನ್ನು ತಂದುಕೊಟ್ಟರು. ಇದಕ್ಕಾಗಿ ನಾನು ಸನ್ಮಾನ್ಯ ಪ್ರಧಾನಿಗಳನ್ನು ಮನಸಾರೆ ಅಭಿನಂದಿಸುತ್ತೇನೆ ಎಂದರು ಕೇಂದ್ರ ಸಚಿವರು. ಯೋಗ ವಿಕಾಸಕ್ಕೆ ಪೂರಕ : ಯೋಗದ ಮೂಲಕ ಮಾಡುವ…

Read More

ಬಳ್ಳಾರಿ: ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲೆಯ ತೋರಣಗಲ್‍ನ ಜಿಂದಾಲ್ ಏರ್‍ಪೋರ್ಟ್‍ನಲ್ಲಿ ಗುರುವಾರ ಸಂಜೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು. ತುಂಗಭದ್ರಾ ಜಲಾಶಯದಲ್ಲಿನ ಹೂಳಿನ ಸಮಸ್ಯೆ ಪರಿಹರಿಸಲು ಕೊಪ್ಪಳ ಜಿಲ್ಲೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಪ್ರಾರಂಭಕ್ಕೆ…

Read More

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ (1.4) ಹೊಸ ಮೀನುಕೃಷಿ ಕೊಳಗಳ ನಿರ್ಮಾಣ ಮತ್ತು (1.5) ಹೂಡಿಕೆ ವೆಚ್ಚಕ್ಕೆ ಸಹಾಯ (ಸಾಮಾನ್ಯ, ಮಹಿಳೆ ಮತ್ತು ಪ.ಜಾತಿ ಫಲಾನುಭವಿಗಳಿಗೆ ಮಾತ್ರ). ಮತ್ತು (2.7) ಕಡಲಚಿಪ್ಪು ಕೃಷಿ (ಮಸ್ಸೆಲ್ಸ್, ಕ್ಲಾಮ್ಸ್, ಮುತ್ತು ಇತ್ಯಾದಿ) (1-ಮಹಿಳೆ). (5.4) ಬ್ಯಾಕ್ಯಾರ್ಡ್ ಮಿನಿ ಆರ್.ಎ.ಎಸ್ ಘಟಕಗಳ ಸ್ಥಾಪನೆ(1-ಮಹಿಳೆ) ಹಾಗೂ (6.5) ಮೋಟಾರ್ ಸೈಕಲ್ ಮತ್ತು ಐಸ್‍ಬಾಕ್ಸ್(1-ಮಹಿಳೆ). ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 12 ಕೊನೆ ದಿನವಾಗಿದೆ. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ರಷ್ಟು ಮತ್ತು ಶೇ.60ರಷ್ಟು, ಪ.ಜಾತಿ ಮತ್ತು ಮಹಿಳಾ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೆÇನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ನವದೆಹಲಿ: ಜೂನ್ 21 ರಂದು ಆಕಾಶವನ್ನು ಅಲಂಕರಿಸಲು ಸಜ್ಜಾಗಿರುವ ಈ ವಿಶೇಷ ಹುಣ್ಣಿಮೆ ಚಂದ್ರನು ಅದರ ಪ್ರಕಾಶಮಾನವಾದ ಹೊಳಪಿನ ಆಕರ್ಷಣೆಯನ್ನು ಮಾತ್ರವಲ್ಲದೆ ಇತಿಹಾಸ ಮತ್ತು ಸಂಪ್ರದಾಯದಲ್ಲಿ ಮುಳುಗಿರುವ ಹೆಸರನ್ನು ಸಹ ಹೊಂದಿದೆ. ಬೇಸಿಗೆಯ ಅಯನ ಸಂಕ್ರಾಂತಿಯೊಂದಿಗೆ (ಜೂನ್ 20) ಸಾಕಷ್ಟು ಅಪರೂಪದ ಘಟನೆಯಾಗಿದ್ದು, ಈ ವರ್ಷದ ಸ್ಟ್ರಾಬೆರಿ ಮೂನ್ ಹೆಚ್ಚಿನ ಮಹತ್ವವನ್ನು ಹೊಂದಿದೆ. ಸ್ಟ್ರಾಬೆರಿ ಮೂನ್ ಎಂದರೇನು? ಸ್ಟ್ರಾಬೆರಿ ಮೂನ್ ಜೂನ್ ಹುಣ್ಣಿಮೆ ಮತ್ತು ವರ್ಷವಿಡೀ ಸಂಭವಿಸುವ 12 ಹುಣ್ಣಿಮೆಗಳಲ್ಲಿ ಒಂದಾಗಿದೆ. ಇದು ಅದರ ಸಮಯಕ್ಕಾಗಿ ಮಾತ್ರವಲ್ಲ, ವರ್ಷದ ಮಧ್ಯಭಾಗವನ್ನು ಸೂಚಿಸುತ್ತದೆ, ಆದರೆ ಸೊಂಪಾದ ಸ್ಟ್ರಾಬೆರಿಗಳ ಚಿತ್ರಗಳನ್ನು ಪ್ರಚೋದಿಸುವ ಅದರ ಕುತೂಹಲಕಾರಿ ಹೆಸರಿನಿಂದಲೂ ಎದ್ದು ಕಾಣುತ್ತದೆ. “ಸ್ಟ್ರಾಬೆರಿ ಮೂನ್” ಎಂಬ ಹೆಸರು ಚಂದ್ರನು ಕೆಂಪು ಅಥವಾ ಗುಲಾಬಿ ಬಣ್ಣಕ್ಕೆ ತಿರುಗುವ ಯಾವುದೇ ದೃಶ್ಯ ಹೋಲಿಕೆಯನ್ನು ಸೂಚಿಸುವುದಿಲ್ಲ. ಬದಲಾಗಿ, ಇದು ಸ್ಥಳೀಯ ಅಮೇರಿಕನ್ ಬುಡಕಟ್ಟು ಜನಾಂಗದವರ, ವಿಶೇಷವಾಗಿ ಸ್ಥಳೀಯ ಆಲ್ಗೊನ್ಕ್ವಿನ್ ಜನರ ಸಂಪ್ರದಾಯಗಳಲ್ಲಿ ಬೇರುಗಳನ್ನು ಹೊಂದಿದೆ. ಅವರಿಗೆ, ಜೂನ್ ಹುಣ್ಣಿಮೆಯು ಮಾಗಿದ ಕಾಡು…

Read More

ಬಳ್ಳಾರಿ: ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಘಟಕದಡಿ ಸಾಲ-ಸೌಲಭ್ಯ ಪಡೆಯಲು ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಒಟ್ಟು 17 ಫಲಾನುಭವಿಗಳ ಗುರಿ ನಿಗದಿಪಡಿಸಿದ್ದು, ಬ್ಯಾಂಕ್ ವಿಧಿಸುವ ಶೇ.7 ರ ಮೇಲ್ಪಟ್ಟು ಶೇಖಡವಾರು ಬಡ್ಡಿ ಮೊತ್ತವನ್ನು (ಬಡ್ಡಿ ಸಹಾಯಧನ) ಭರಿಸಲಾಗುವುದು. ಜುಲೈ 04 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್‍ಕಾರ್ಡ್, ಯೋಜನಾ ವರದಿ, ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರ, ಸ್ವ-ಸಹಾಯ ಗುಂಪುಗಳ ಭಾವಚಿತ್ರ ಹಾಗೂ ಗುಂಪಿಗೆ ಸಂಬಂಧಪಟ್ಟ ದಾಖಲಾತಿ ಮತ್ತು ಯೋಜನಾ ವರದಿಯನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಾರ್ಯಾಲಯ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು :”ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು. “ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ”…

Read More

ಬೆಂಗಳೂರು: ಕೊಳೆಗೇರಿ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಫಲಾನುಭವಿಗಳಿಗೆ 2024ನೇ ಡಿಸೆಂಬರ್ ಅಂತ್ಯದೊಳಗಾಗಿ ಮನೆಗಳನ್ನು ಹಸ್ತಾಂತರಿಸಲು ಕ್ರಮ ವಹಿಸಲು ಎಲ್ಲಾ ಅಧಿಕಾರಿಗಳಿಗೆ ಹುಬ್ಬಳ್ಳಿ-ಧಾರವಾಡ (ಪೂರ್ವ)ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಸೂಚಿಸಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುμÁ್ಠನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಇದೇ ಜೂನ್ 18 ರಂದು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಸರ್ಕಾರದ ಆದೇಶದನ್ವಯ ರಾಜ್ಯಾದ್ಯಂತ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳು ಮಾಲೀಕತ್ವದಲ್ಲಿರುವ 1821 ಘೋಷಿತ ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿರುವ 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ಪರಿಶೀಲಿಸಿದರು. ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈವರೆವಿಗೂ 68,415 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಹಕ್ಕುಪತ್ರಗಳ ವಿತರಣೆ ಪ್ರಕ್ರಿಯೆಯು ಮಂದಗತಿಯಲ್ಲಿರುವುದನ್ನು ಗಂಭೀರವಾಗಿ ಪರಿಗಣಿಸಿ ಹಾಜರಿದ್ದ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರ್ಕಾರವು ನಿಗಧಿಪಡಿಸಿರುವ ಕಾಲಾಮಿತಿಯೊಳಗೆ ಎಲ್ಲಾ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಕೂಡಲೇ ಕ್ರಮವಹಿಸಲು ಸೂಚಿಸಿದರು. ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿಯಮಗಳನ್ವಯ ಶಿಸ್ತಿನ ಕ್ರಮ…

Read More

ಬೆಂಗಳೂರು: ರಾಜ್ಯದಲ್ಲಿ 2023-24ರ ಕೃಷಿ ಹಂಗಾಮಿನ ಹಿಂಗಾರಿನಲ್ಲಿ ಬೆಳೆದ 3,133 ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮುಖ್ಯವಾಗಿ ರಾಜ್ಯದ ಮಧ್ಯ ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 21,000 ಹೆಕ್ಟೇರ್ ಪ್ರದೇಶದಲ್ಲಿ ಕುಸುಬೆ ಬೆಳೆ ಕೃಷಿ ನಡೆಯುತ್ತಿದ್ದು, ರೈತರು ಸರಿಯಾದ ಬೆಲೆ ಇಲ್ಲದೆ ತೊಂದರೆ ಎದುರಿಸುತ್ತಿದ್ದರು. ಇದನ್ನು ಪರಿಗಣಿಸಿ, ರಾಜ್ಯ ಸರ್ಕಾರದ ಸಹಕಾರ ಇಲಾಖೆಯ ಅಪರ ಕಾರ್ಯದರ್ಶಿಯವರು ಕೇಂದ್ರ ಸಹಕಾರ ಇಲಾಖೆ ಕಾರ್ಯದರ್ಶಿಯವರಿಗೆ ಕುಸುಬೆ ಬೆಳೆಯನ್ನು ಬೆಂಬಲ ಬೆಲೆ ವ್ಯಾಪ್ತಿಗೆ ತರಲು ಕೋರಿದ್ದರು. ನಂತರ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿರುವ ಟಿಬಿ ಜಯಚಂದ್ರ ಅವರು ಈ ಬಗ್ಗೆ ಮುತುವರ್ಜಿ ವಹಿಸಿ ಸಂಬಂಧಿಸಿದ ಇಲಾಖೆಗಳೊಡನೆ ಪತ್ರ ವ್ಯವಹಾರ ಹಾಗೂ ಸಮಾಲೋಚನೆಗಳನ್ನು ನಡೆಸಿದ್ದರು. ರಾಜ್ಯ ಸರ್ಕಾರವು ಸಂಬಂಧಿಸಿದ ನೋಡಲ್ ಏಜೆನ್ಸಿಗಳ ಸಮನ್ವಯತೆಯೊಂದಿಗೆ ಮುಂಬರುವ ದಿನಗಳಲ್ಲಿ ಬೆಂಬಲ ಬೆಲೆಯಲ್ಲಿ ಕುಸುಬೆ ಬೆಳೆ ಖರೀದಿಗೆ ಕ್ರಮ ವಹಿಸಲಿದೆ ಎಂದು ಜಯಚಂದ್ರ ವಿವರಿಸಿದ್ದಾರೆ.

Read More

ಬೆಂಗಳೂರು: ಪೋಲಿಸ್‌ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿಕೊಲೆ ಪ್ರಕರಣದ ಆರೋಪಿ  ನಟ ದರ್ಶನ್‌ ಮತ್ತು ಆತನ ಸಹಚರರನ್ನು ಇಂದು ಮಧ್ಯಾಹ್ನ 3:50 ಗಂಟೆ ಸುಮಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ ನ್ಯಾಯಾಧೀಶರು ನಟ ದರ್ಶನ್‌ ಅವರನ್ನು ಎರಡು ದಿನ ಪೋಲಿಸ್‌ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿತು. ಬಹುತೇಕ ಪ್ರಕ್ರಿಯೆಗಳು ಮುಕ್ತಾಯವಾದರೂ ದರ್ಶನ್‌ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕೆಂದು ಎಸ್‌ಪಿಪಿ ವಾದ ಮಂಡಿಸಿದರು. ಈ ವಾದವನ್ನು ಪುರಸ್ಕರಿಸಿದ ಕೋರ್ಟ್‌ ಮತ್ತೆ ದರ್ಶನ್‌ ಮತ್ತು ಉಳಿದ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತು. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಂದು (Renukaswamy Case) ಮತ್ತೆ ನ್ಯಾಯಾಲಯದ ಮುಂದೆ ನಟ ದರ್ಶನ್‌ ಸೇರಿ ಬಂಧಿತ 17 ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ A 1 ಪವಿತ್ರಗೌಡ,  A 3 ಪವನ್‌, A 4 ರಾಘವೇಂದ್ರ,  A 5  ನಂದೀಶ, A 6 ಜಗದೀಶ್‌, A 7 ಅನುಕುಮಾರ್‌ A…

Read More