Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ವಿರಾಟ್ ಕೊಹ್ಲಿ 227.9 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದೊಂದಿಗೆ ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಯಾಗಿದ್ದು, 2022 ರಲ್ಲಿ 176.9 ಮಿಲಿಯನ್ ಡಾಲರ್ನಿಂದ ಸುಮಾರು 29% ರಷ್ಟು ಗಮನಾರ್ಹ ಹೆಚ್ಚಳವನ್ನು ದಾಖಲಿಸಿದ್ದಾರೆ. ಕನ್ಸಲ್ಟೆನ್ಸಿ ಸಂಸ್ಥೆ ಕ್ರೋಲ್ ಭಾರತದ ಅತ್ಯಂತ ಪ್ರಭಾವಶಾಲಿ ಸೆಲೆಬ್ರಿಟಿ ಬ್ರಾಂಡ್ಗಳ ಪಟ್ಟಿಯನ್ನು ಹಂಚಿಕೊಂಡಿದ್ದು, ಇದರಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರಣವೀರ್ ಸಿಂಗ್ 203.1 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಕ್ರೋಲ್ಸ್ ಸೆಲೆಬ್ರಿಟಿ ಬ್ರಾಂಡ್ ಮೌಲ್ಯಮಾಪನ ವರದಿ 2023 ಎಂಬ ಶೀರ್ಷಿಕೆಯ ವರದಿಯಲ್ಲಿ, 2023 ರಲ್ಲಿ 120.7 ಮಿಲಿಯನ್ ಯುಎಸ್ಡಿ ಬ್ರಾಂಡ್ ಮೌಲ್ಯದೊಂದಿಗೆ “ಜವಾನ್” ಮತ್ತು “ಪಥಾನ್” ನಂತಹ ಚಿತ್ರಗಳ ಯಶಸ್ಸಿನ ನಂತರ ಶಾರುಖ್ ಖಾನ್ ಮೂರನೇ ಸ್ಥಾನದಲ್ಲಿದ್ದಾರೆ. ಅಕ್ಷಯ್ ಕುಮಾರ್ 111.7 ಮಿಲಿಯನ್ ಡಾಲರ್ ಬ್ರಾಂಡ್ ಮೌಲ್ಯದೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಆಲಿಯಾ ಭಟ್ 101.1 ಮಿಲಿಯನ್ ಡಾಲರ್ ಮೌಲ್ಯದೊಂದಿಗೆ ನಾಲ್ಕನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ದೀಪಿಕಾ ಪಡುಕೋಣೆ 96 ಮಿಲಿಯನ್ ಡಾಲರ್ ಬ್ರಾಂಡ್…
ನವದೆಹಲಿ: ಕೆಲವು ದಿನಗಳ ಹಿಂದೆ ಈರುಳ್ಳಿ ಬೆಲೆ ಏರಿಕೆಯ ಬಗ್ಗೆ ಸುದ್ದಿಗಳನ್ನು ನೀವು ಕೇಳಿದ್ದೀರಾ. ದೇಶದ ಅನೇಕ ಭಾಗಗಳಲ್ಲಿ, ಟೊಮೆಟೊ ಬೆಲೆಗಳು ಎರಡು ಮೂರು ವಾರಗಳಲ್ಲಿ ದ್ವಿಗುಣಗೊಂಡಿವು ಗ್ರಾಹಕರಲ್ಲಿ ಆತಂಕವನ್ನು ಮನೆ ಮಾಡಿದೆ. ಮಹಾರಾಷ್ಟ್ರ ಮತ್ತು ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಟೊಮೆಟೊ ಬೆಲೆಯಲ್ಲಿ ಈ ಹೆಚ್ಚಳ ಕಂಡುಬಂದಿದೆ. ಇದಕ್ಕೆ ಕಾರಣ ಶಾಖ ಮತ್ತು ಕಡಿಮೆ ಉತ್ಪಾದನೆ ಎಂದು ಹೇಳಲಾಗುತ್ತಿದೆ. ಪೂರೈಕೆಯ ನಿರ್ಬಂಧಗಳಿಂದಾಗಿ ಸಾಮಾನ್ಯವಾಗಿ ಬೆಲೆಗಳು ಹೆಚ್ಚಾದಾಗ ಜುಲೈನಲ್ಲಿ ಪರಿಸ್ಥಿತಿ ಜಟಿಲವಾಗಬಹುದು ಎನ್ನಲಾಗಿದೆ. ಕಳೆದ ಎರಡು-ಮೂರು ವಾರಗಳಲ್ಲಿ ಮತ್ತು ಒಂದು ವರ್ಷದ ಹಿಂದೆ ಹೋಲಿಸಿದರೆ ಬೆಲೆಗಳು ಬಹುತೇಕ ದ್ವಿಗುಣಗೊಂಡಿವೆಯಂತೆ. ಬೆಂಗಳೂರಿನಲ್ಲಿ ಭಾನುವಾರ ಟೊಮೆಟೊ ಬೆಲೆ ಕೆ.ಜಿ.ಗೆ 80 ರೂಗಳಿಗೆ ಮಾರಟವಾಗುತ್ತಿದೆ.
ಥೈಲ್ಯಾಂಡ್ನ ಸೆನೆಟ್ ಮಂಗಳವಾರ ವಿವಾಹ ಸಮಾನತೆ ಮಸೂದೆಯನ್ನು ಬೆಂಬಲಿಸಿ ಬಹುಮತದಿಂದ ಮತ ಚಲಾಯಿಸಿತು, ಇದು ಅಂತಹ ಕಾನೂನನ್ನು ಜಾರಿಗೆ ತಂದ ಮೊದಲ ಆಗ್ನೇಯ ಏಷ್ಯಾದ ದೇಶವಾಗಿದೆ. ತೈವಾನ್ ಮತ್ತು ನೇಪಾಳದ ನಂತರ ಸಲಿಂಗ ವಿವಾಹಕ್ಕೆ ಅವಕಾಶ ನೀಡುವ ಏಷ್ಯಾದ ಮೂರನೇ ಸ್ಥಾನ ಥೈಲ್ಯಾಂಡ್ ಆಗಲಿದೆ. ವಿವಾಹ ಸಮಾನತೆ ಮಸೂದೆಯು ಯಾವುದೇ ಲಿಂಗದ ವಿವಾಹ ಪಾಲುದಾರರಿಗೆ ಸಂಪೂರ್ಣ ಕಾನೂನು, ಆರ್ಥಿಕ ಮತ್ತು ವೈದ್ಯಕೀಯ ಹಕ್ಕುಗಳನ್ನು ನೀಡುತ್ತದೆ. ಈ ಮಸೂದೆಯು ಸಿವಿಲ್ ಮತ್ತು ವಾಣಿಜ್ಯ ಸಂಹಿತೆಯನ್ನು “ಪುರುಷರು ಮತ್ತು ಮಹಿಳೆಯರು” ಮತ್ತು “ಗಂಡ ಮತ್ತು ಹೆಂಡತಿ” ಎಂಬ ಪದಗಳನ್ನು “ವ್ಯಕ್ತಿಗಳು” ಮತ್ತು “ವಿವಾಹ ಪಾಲುದಾರರು” ಎಂದು ಬದಲಾಯಿಸಿದೆ. ಸೆನೆಟ್ನ 152 ಸದಸ್ಯರಲ್ಲಿ 130 ಸದಸ್ಯರ ಅನುಮೋದನೆಯೊಂದಿಗೆ ಮಸೂದೆಯನ್ನು ಅಂಗೀಕರಿಸಲಾಯಿತು, 4 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು ಮತ್ತು 18 ಸದಸ್ಯರು ಗೈರು ಹಾಜರಾಗಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಮಸೂದೆಗೆ ಸಹಿ ಹಾಕಲು ಈಗ ರಾಜ ಮಹಾ ವಜಿರಲಾಂಗ್ಕಾರ್ನ್ ಅಗತ್ಯವಿದೆ, ನಂತರ ರಾಯಲ್…
ಬೆಂಗಳೂರು: : ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇವರ ಜೀವನ ನಿರ್ವಹಣೆ ದುಸ್ತರವಾಗುವುದರಿಂದ ಕೇರಳ ಸರ್ಕಾರ ಅಗ್ನಿ ದರುಂತದಲ್ಲಿ ಮೃತರ ಕುಟಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿರುವಂತೆಯೇ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ: ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮೃತ ವಿಜಯಕುಮಾರ್ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ.
ಬೆಂಗಳೂರು: ಉತ್ತರ ಕನ್ನಡದ ಬನವಾಸಿಯಲ್ಲಿ ಎನ್ಐಎ ದಾಳಿ ನಡೆಸಿದ್ದು, ಬನವಾಸಿ ಮೂಲದ ಅಬ್ದುಲ್ ಶುಕೂರ್ ಎನ್ನುವವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ ಆನ್ ಲೈನ್ ಮೂಲಕ ಉಗ್ರರ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈತ ಬೆಂಗಳೂರು ಕೆಫೆ, ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗಳಿಗೆ ಪ್ರಚೋಧನೆ ನೀಡುತ್ತಿದ್ದ ಎನ್ನಲಾಗಿದೆ. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಈತ ಮೊನ್ನೆ ಬಕ್ರೀದ್ ಹಬ್ಬದ ಸಲುವಾಗಿ ಊರಿಗೆ ಬಂದಿದ್ದ ವೇಳೆಯಲ್ಲಿ ಈತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಅಂತ ತಿಳಿದು ಬಂದಿದೆ. ಈ ನಡುವೆ ಈತನ ವಿರುದ್ದ ನಕಲಿ ಪಾಸ್ಪೋರ್ಟ್ ಆರೋಪ ಕೇಳಿ ಬಂದಿದೆ.
ಬೆಂಗಳೂರು: ನಿನಗೋಸ್ಕರ ಸಿನಿಮಾ ಡಬ್ ಮಾಡಲು ನಟ ದರ್ಶನ್ ಹಿಂದೇಟು ಹಾಕಿದ್ದ ಈ ಬಗ್ಗೆ ಅಂಬರೀಶ್ ಅವರಿಗೆ ದೂರು ನೀಡಿದ ಬಳಿಕ ಅವರು ಕರದು ಬುದ್ದಿ ಹೇಳಿದ್ದರು, ಅದರು ಅವರ ಹಲವು ದಿನಗಳ ನಂತರದ ಭೇಟಿಯಾಗಿತ್ತು ಆದಾದ ಬಳಿಕ ಎಲ್ಲವೂ ಸರಿ ಆಯ್ತು ಅಂಥ ನಿರ್ಮಾಪಕ ಬಾ.ಮಾ ಹರೀಶ್ ಅವರು ಹೇಳಿದ್ದಾರೆ. ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದು, ಇದೇ ವೇಳೆ ಅವರು ಮಾತನಾಡಿ ಕರಿಯ ಸಿನಿಮಾದ ವೇಳೇ ರೀಲ್ಸ್ ವೇಳೇ ನಟ ದರ್ಶನ್ ಕಿರಿಕ್ ಮಾಡಿಕೊಂಡಿದ್ರು
ನವದೆಹಲಿ: ಆಹಾರ ಭದ್ರತೆಯ ವಿಷಯದಲ್ಲಿ ಭಾರತವು ವಿಶ್ವದ 8 ನೇ ಕೆಟ್ಟ ದೇಶವಾಗಿದೆ. ಅಫ್ಘಾನಿಸ್ತಾನದ ನಂತರ, ದಕ್ಷಿಣ ಏಷ್ಯಾದ ಅತ್ಯಂತ ಕೆಟ್ಟ ಪರಿಸ್ಥಿತಿ ಭಾರತದಲ್ಲಿದೆ. ಯುನಿಸೆಫ್ ನ ಇತ್ತೀಚಿನ ವರದಿಯಲ್ಲಿ ಇದು ಬಹಿರಂಗವಾಗಿದೆ. ಯುನಿಸೆಫ್ 2024 ರ ಮಕ್ಕಳ ಪೌಷ್ಠಿಕಾಂಶ ವರದಿ, ‘ಮಕ್ಕಳ ಆಹಾರ ಬಡತನ: ಆರಂಭಿಕ ಬಾಲ್ಯದಲ್ಲಿ ಪೌಷ್ಠಿಕಾಂಶದ ಕೊರತೆ’ ವರದಿಯು 2018-2022 ರ ವೇಳೆಗೆ 65% ಮಕ್ಕಳು ಅಗತ್ಯವಾದ ಪೌಷ್ಠಿಕಾಂಶದ ಆಹಾರವನ್ನು ಪಡೆಯದ 20 ದೇಶಗಳಲ್ಲಿ ಭಾರತವೂ ಒಂದಾಗಿದೆ ಎಂದು ತೋರಿಸಿದೆ. ವಿಶ್ವದ ಪ್ರತಿ ನಾಲ್ಕನೇ ಮಗು ಹಸಿವಿನಿಂದ ಅಳುತ್ತಿದೆ. ಯುನಿಸೆಫ್ ವರದಿ ಏನು ಹೇಳುತ್ತದೆ ಮತ್ತು ಭಾರತದಲ್ಲಿ ಮಕ್ಕಳ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎನ್ನುವುದನ್ನು ನೋಡುವುದಾದ್ರೆ ಆದರ ವಿವರ ಈ ಕೆಳಕಂಡತಿದೆ. ಯುನಿಸೆಫ್ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಮಕ್ಕಳ ಬಡತನವು ಸಾರ್ವಕಾಲಿಕ ಗರಿಷ್ಠ ಶೇಕಡಾ 40 ರಷ್ಟಿದೆ. ಸೊಮಾಲಿಯಾ (63%), ಗಿನಿಯಾ (54%), ಗಿನಿಯಾ-ಬಿಸ್ಸಾವ್ (53%), ಅಫ್ಘಾನಿಸ್ತಾನ (49%), ಸಿಯೆರಾ ಲಿಯೋನ್ (47%), ಇಥಿಯೋಪಿಯಾ (46%) ಮತ್ತು…
ಬೆಂಗಳೂರು: ನಾಪತ್ತೆಯಾಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಕೊನೆಗೂ ಪತ್ತೆಯಾಗಿದ್ದ ಎನ್ನಲಾಗಿದೆ. ಸದ್ಯ ಆತ ಗೋವಾದಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿತ್ತು. ಪ್ರೇಮ ಬರಹ ಸಿನಿಮಾದ ವಿರತಣಾ ಜವಾಬ್ದಾರಿಯನ್ನು ತೂಗುದೀಪಾ ಪ್ರೊಡಕ್ಷನ್ಸ್ಗೆ ನೀಡಲಾಗಿತ್ತು. ಅದರ ಸಂ ಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದು ಮಲ್ಲಿಕಾರ್ಜುನ್ ಅವರೇ. ಸಿನಿಮಾ ಹಕ್ಕು ವಿತರಿಸಿ, ಹಣ ಬಂದ ನಂತರ ಮಲ್ಲಿಕಾರ್ಜುನ್ ಹಣ ತೆಗೆದುಕೊಂಡು ಪರಾರಿಯಾಗಿದ್ದ. ಸುಮಾರು 7 ವರ್ಷಗಳ ಹಿಂದಿನ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ್ ಇದೂವರೆಗೂ ದರ್ಶನ್ ಕೈಗೆ ಸಿಕ್ಕಿರಲಿಲ್ಲ. ಈ ನಡುವೆ ಮಲ್ಲಿಕಾರ್ಜುನ್ ಪತ್ತೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ದರ್ಶನ್ ರಿಂದ ನಮಗೆ ಯಾವುದೇ ತೊಂದರೆಯಾಗಿಲ್ಲ, ನಮಗೆ ಅವರಿಂದ ಒಂದು ಹೊತ್ತಿನ ಊಟ ಸಿಕ್ಕಿದೆ. ದಯವಿಟ್ಟು ನಮ್ಮ ಮನೆ ಬಳಿಗೆ ಯಾರು ಬರಬೇಡಿ ಅಂತ ಹೇಳಿದ್ದಾರೆ.ಇನ್ನೂ ಪತ್ರವನ್ನು ಬರೆದಿಟ್ಟು ಮಲ್ಲಿಕಾರ್ಜುನ್ ನಾಪತ್ತೆಯಾಗಿದ್ದರು, ಅದರಲ್ಲಿ…
ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದರು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. , ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಎಳಿಗೆಯಾಗುತ್ತದೆ ಎಂದರು. ಸರ್ವ ಧರ್ಮ ಸಮನ್ವಯ ದಲ್ಲಿ,…
ಬೆಂಗಳೂರು:ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರೆಂಟಿ ಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಹೇಳಿದ್ದಾರೆ. ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ ಕಡಿಮೆ ಇದೆ ಎಂದು ಬಡವರ ಮೇಲೆ…










