Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ. ನ್ಯೂ ಜಲ್ಪೈಗುರಿ ಬಳಿ ಸೋಮವಾರ ಬೆಳಿಗ್ಗೆ ಗೂಡ್ಸ್ ರೈಲು ಸೀಲ್ಡಾಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಎನ್ಎಫ್ಆರ್ನ ಕಟಿಹಾರ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಿಳಿಸಿದ್ದಾರೆ. ಅಗರ್ತಲಾದಿಂದ ಬಂದ 13174 ಕಾಂಚನಜುಂಗಾ ಎಕ್ಸ್ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದ ಬಳಿಯ ರಂಗಪಾಣಿ ಬಳಿ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನದ ಬಗ್ಗೆ ನಟ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದು, ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಾಗಾದ್ರೇ ಉಪೇಂದ್ರ ಹೇಳಿದ್ದೇನು..? ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ….. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು…
ಬೆಂಗಳೂರು: ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದರು ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ. ಈ ನಡುವೆ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್ ಜೊತೆಗೆ ಬಾರ್ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಬಹುದು ಎನ್ನಲಾಗಿದೆ.
ನವದೆಹಲಿ: ಬಂಗಾಳದ ಸಿಲಿಗುರುದಲ್ಲಿ ಸೋಮವಾರ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ರೈಲು ಕೋಲ್ಕತ್ತಾದ ಸೀಲ್ಡಾ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಿಲಿಗುರಿಯ ರಂಗಪಾಣಿ ಪ್ರದೇಶದಲ್ಲಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾಂಚನಜುಂಗಾ ಎಕ್ಸ್ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಸೀಲ್ಡಾಗೆ ಪ್ರಯಾಣವನ್ನು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ವೈದ್ಯರು ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. https://twitter.com/ANI/status/1802569301666234725
ಬೆಂಗಳೂರು: ರೇಣುಕಸ್ವಾಮಿ ಕೊಲೆಗೆ ಬಳಸಿದ್ದ ಎಲೆಕ್ಟ್ರಿಕಲ್ ಮೆಗ್ಗಾರ್ ಯಂತ್ರ ಪತ್ತೆ ಹಚ್ಚುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು 9ನೇ ಆರೋಪಿ ರಾಜು ಅಲಿಯಾಸ್ ಧನರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ದರ್ಶನ್ ಮತ್ತು ಧನರಾಜುಗೆ ನೇರ ನೇರ ಸಂಪರ್ಕವೇ ಇಲ್ಲ ಎನ್ನಲಾಗಿದೆ. ಜೊತೆಗೆ ಕೆಲಸ ಮಾಡುತ್ತಿದ್ದವನ ಮಾತು ಕೇಳಿ ಎಲೆಕ್ಟ್ರಿಕ್ ಡಿವೈಸ್ ತಂದು ಸಹಾಯ ಮಾಡಿದ್ದ ಎನ್ನಲಾಗಿದೆ. ಜೂನ್ 8 ರಂದು ಮೆಗ್ಗಾರ್ ಸಾಧನದ ಜೊತೆ ರಾಜುನನ್ನು ಪಟ್ಟಣಗೆರೆ ಶೆಡ್ಗೆ ನಂದೀಶ್ ಕರೆಸಿಕೊಂಡಿದ್ದ. ಪ್ಲ್ಯಾನ್ನಂತೆ ರಾಜುವಿನಿಂದ ಎಲೆಕ್ಟ್ರಿಕಲ್ ಮೆಗ್ಗಾರ್ ಯಂತ್ರವನ್ನು ನಂದೀಶ್ ತರಿಸಿಕೊಂಡಿದ್ದರು. ಆ ಮೆಗ್ಗಾರ್ ಯಂತ್ರವನ್ನು ಬಳಸಿ ರೇಣುಕಾಸ್ವಾಮಿಗೆ ಆರೋಪಿಗಳು ಕರೆಂಟ್ ಶಾಕ್ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.ಸದ್ಯ ರಾಜುವನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ರಾಜು ಜೊತೆ ಎಲೆಕ್ಟ್ರಿಕಲ್ ಮೆಗ್ಗರ್ ಯಂತ್ರ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಧನರಾಜ್ನನ್ನು ಪೊಲೀಸರು ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ವರ್ಕ್…
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಯಾರನ್ನೂ ಕೂಡ ರಕ್ಷಣೆ ಮಾಡುವುದಿಲ್ಲ ಅಂಥ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ತನಿಖೆಯಲ್ಲಿ ಯಾರ ಮುಲಾಜಿಗೂ ಒಳಗಾಗುವುದಿಲ್ಲ, ಎಲ್ಲವೂ ಕಾನೂನು ರೀತಿಯಲ್ಲಿ ನಡೆಯಲಿದೆ. ನಮ್ಮ ಇಲಾಖೆ ಈ ನಿಟ್ಟಿನಲ್ಲಿ ಎಲ್ಲವನ್ನು ಸಮರ್ಥವಾಗಿ ನಿಭಾಯಿಸಲಿದೆ ಅಂತ ಹೇಳಿದರು.
ದೇವತೆಗಳಲ್ಲಿ ಅತ್ಯಂತ ಶ್ರೀಮಂತ ದೇವರು ಹಣಕ್ಕಾಗಿ ಪೂಜಿಸುವ ದೇವತೆಯಾಗಿದ್ದರೆ, ಅದು ಪೆರುಮಾಳ್ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಎಂದರ್ಥ. ಅಂತಹ ಪೆರುಮಾಳ್ ವೆಂಕಟೇಶ್ವರ ಸ್ವಾಮಿ ಆರಾಧನೆಗೆ ಏಕಾದಶಿಯನ್ನು ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ಏಕಾದಶಿ ತಿಥಿಯು ಅನೇಕ ದಿನಗಳಲ್ಲಿ ಬಹಳ ಮುಖ್ಯ ಮತ್ತು ಮಂಗಳಕರವಾಗಿದೆ ಎಂದು ಹೇಳಲಾಗುತ್ತದೆ. ಈ ವಿಶೇಷ ದಿನದಂದು ನಾವು ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಮ್ಮ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿಯನ್ನು ಹೆಚ್ಚಿಸಲು ಪೆರುಮಾಳ್ ವೆಂಕಟೇಶ್ವರ ಸ್ವಾಮಿಗೆ ಹೇಗೆ ಪೂಜೆ ಮಾಡಬೇಕೆಂದು ತಿಳಿಯಬಹುದು . ಹಣ ಸಂಗ್ರಹಿಸಲು ಏಕಾದಶಿ ಪೂಜೆ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…
ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ನಿರ್ದೇಶಕ ದಿನೇಶ್ ಸಕ್ಲಾನಿ ಅವರು ಪಠ್ಯಕ್ರಮದಲ್ಲಿನ ಬದಲಾವಣೆಗಳು ಮತ್ತು ಹಲವು ಪ್ರಮುಖ ಪ್ರಶ್ನೆಗಳಿಗೆ ಮುಕ್ತವಾಗಿ ಉತ್ತರಿಸಿದ್ದಾರೆ. ಶಿಕ್ಷಣದ ಉದ್ದೇಶವು ಹಿಂಸಾತ್ಮಕ ಮತ್ತು ಅಸಡ್ಡೆ ನಾಗರಿಕರನ್ನು ಸೃಷ್ಟಿಸುವುದಲ್ಲ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾವು ವಿದ್ಯಾರ್ಥಿಗಳಿಗೆ ಗಲಭೆಗಳ ಬಗ್ಗೆ ಏಕೆ ಕಲಿಸಬೇಕು? ಗುಜರಾತ್ ಗಲಭೆ, ಬಾಬರಿ ಮಸೀದಿ ಇತ್ಯಾದಿಗಳಿಗೆ ಸಂಬಂಧಿಸಿದ ಪುಸ್ತಕಗಳಲ್ಲಿ ಮಾಡಲಾದ ಬದಲಾವಣೆಗಳ ಕುರಿತು ಎನ್ಸಿಇಆರ್ಟಿ ಮುಖ್ಯಸ್ಥರು ಮಾತನಾಡಿದ್ದು, ಇದೇ ವೇಳೆ ಅವರು ಪಠ್ಯಪುಸ್ತಕಗಳಲ್ಲಿನ ತಿದ್ದುಪಡಿ ಜಾಗತಿಕ ಅಭ್ಯಾಸವಾಗಿದೆ, ಇದು ಶಿಕ್ಷಣದ ಹಿತಾಸಕ್ತಿಯಾಗಿದೆ. ಇತಿಹಾಸದಲ್ಲಿ ಹಿಂಸಾತ್ಮಕ ಮತ್ತು ಅನಾಗರಿಕ ಘಟನೆಗಳ ಬಗ್ಗೆ ಶಾಲಾ ಮಕ್ಕಳಿಗೆ ಕಲಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು, ಆದ್ದರಿಂದ ಸಾಕ್ಷ್ಯ ಮತ್ತು ಸತ್ಯಗಳ ಆಧಾರದ ಮೇಲೆ ಹಲವಾರು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ ಅಂತ ತಿಳಿಸಿದರು.
ಡಾರ್ಜಿಲಿಂಗ್: ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿದೇವಾ ಪ್ರದೇಶದಲ್ಲಿ ಸೋಮವಾರ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಲವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದ ನಂತರ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದವು ಎನ್ನಲಾಗಿದೆ. X ನಲ್ಲಿನ ಪೋಸ್ಟ್ನಲ್ಲಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಕ್ಷಣಾ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಡಿಎಂ, ವೈದ್ಯರು, ಆಂಬ್ಯುಲೆನ್ಸ್ ಮತ್ತು ವಿಪತ್ತು ತಂಡಗಳನ್ನು ಸ್ಥಳಕ್ಕೆ ಧಾವಿಸಲಾಗಿದೆ ಎಂದು ಹೇಳಿದ್ದಾರೆ. ‘ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿದೇವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ಇದೀಗ ತಿಳಿದು ಆಘಾತವಾಗಿದೆ. ವಿವರಗಳಿಗಾಗಿ ಕಾಯುತ್ತಿರುವಾಗ, ಕಾಂಚನಜುಂಗಾ ಎಕ್ಸ್ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ. ಕ್ರಮವನ್ನು ಪ್ರಾರಂಭಿಸಲಾಗಿದೆ,’ ಎಂದು ಅವರು X ನಲ್ಲಿ ಬರೆದಿದ್ದಾರೆ. https://twitter.com/MamataOfficial/status/1802556487371526493
ಬೆಂಗಳೂರು: ತಂತ್ರ-ಕುತಂತ್ರ ರಾಜಕಾರಣಿ, ಸಿಎಂ ಸಿದ್ದರಾಮಯ್ಯ ಹೇಳುವುದು ಒಂದು, ಮಾಡುವುದ ಮತ್ತೊಂದು ಅಂತ ನಟ ಚೇತನ್ ಅಹಿಂಸ ಹೇಳಿದ್ದಾರೆ. ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮತದಾರರಿಗೆ ಭರವಸೆ ನೀಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೆಟ್ರೋಲ್ ತೆರಿಗೆಯನ್ನು ಶೇಕಡಾ 29.84 ರಷ್ಟು ಮತ್ತು ಡೀಸೆಲ್ ತೆರಿಗೆಯನ್ನು ಶೇಕಡಾ 18.44 ರಷ್ಟು ಹೆಚ್ಚಿಸಿದ್ದಾರೆ. ಇದು ರಾಜ್ಯ ಸರ್ಕಾರವು ತನ್ನ ಯೋಜಿತವಲ್ಲದ, ತ್ಯಾಪೆ ಹಚ್ಚೋ ಯೋಜನೆಗಳಿಗೆ ಹಣವನ್ನು ಸಂಗ್ರಹಿಸಲು ಮಾಡಿದ ಹಿಂಬಾಗಿಲ ಕಳ್ಳತನವಾಗಿದೆ ಅಂತ ಕಿಡಿಕಾರಿದ್ದಾರೆ.









