Author: kannadanewsnow07

ಬೆಂಗಳೂರು: ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ‘ಜನತಾದರ್ಶನ’ಕ್ಕೆ ಮರುಚಾಲನೆ ನೀಡಲು ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.  ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಸಚಿವರಿಗೆ ಸೂಚನೆ ನೀಡಿದ್ದಾರ ಎನ್ನಲಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಚನೆ ನೀಡಿದ್ದಾರೆ. ‘ಜನತಾ ದರ್ಶನವನ್ನು ಮತ್ತೆ ಆರಂಭಿಸಬೇಕು. ಜನರ ಬೇಡಿಕೆಗಳು, ಅಹವಾಲುಗಳನ್ನು ಸ್ವೀಕರಿಸಿ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಆಡಳಿತವನ್ನು ಜನಪರವನ್ನಾಗಿಸಲು ಏನೆಲ್ಲಾ ಮಾಡಬೇಕು ಎಂಬ ಬಗ್ಗೆಯೂ ಚರ್ಚೆಯಾಗಿದ್ದು, ಮುಖ್ಯಮಂತ್ರಿಗಳು ಸೂಕ್ತ ಮಾರ್ಗದರ್ಶನ ಮಾಡಿದರು,” ಎಂದು ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು: 2023-24ನೇ ಸಾಲಿಗೆ 1500 ಪೊಲೀಸ್‌ ಹುದ್ದೆಗಳ ನೇಮಕಾತಿ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ.    ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕೇತರ ಹುದ್ದೆಗಳು : 886 ಕಲ್ಯಾಣ ಕರ್ನಾಟಕ ವೃಂದ ಹು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯ (ಸ್ಪೆಷಲ್ ಆರ್‌ಪಿಸಿ) ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ಎರಡೂ ಹುದ್ದೆಗಳಿಗೆ ನಿಗದಿಪಡಿಸಿದ ದೈಹಿಕ ಅರ್ಹತೆ ಉಳ್ಳವರಾಗಿರಬೇಕು. ವಯೋಮಿತಿ ವಿವರ ನೋಡುವುದಾದರೆ ಕೆಎಸ್‌ಆರ್‌ಪಿ ಮತ್ತು ಎಸ್‌ಆರ್‌ಪಿಸಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಕೆಎಸ್‌ಆರ್‌ಪಿ ಹಾಗೂ ಎಸ್‌ಆರ್‌ಪಿಸಿ ಪಡೆಯ 1,500 ಖಾಲಿ ಹುದ್ದೆಗಳನ್ನು ಈ…

Read More

ಹೈದ್ರಬಾದ್‌: ತೆಲಂಗಾಣದ ಮತ್ತೊಂದು ಜನಪ್ರಿಯ ಉಪಾಹಾರ ಗೃಹವಾದ ಚಟ್ನಿಗಳಲ್ಲಿ ವ್ಯಕ್ತಿಯೊಬ್ಬರು ತನಗೆ ಬಡಿಸಿದ ‘ಚಟ್ನಿ’ಯಲ್ಲಿ ಕೂದಲನ್ನು ಕಂಡುಕೊಂಡ ಘಟನೆ ನಡೆದಿದೆ. ಈ ನಡುವೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಕಾಯ್ದೆ, 1955 ರ ಸೆಕ್ಷನ್ 674 ರ ಅಡಿಯಲ್ಲಿ ಕಪ್ರಾದ ಸಹಾಯಕ ವೈದ್ಯಕೀಯ ಅಧಿಕಾರಿ (ಎಎಂಒಹೆಚ್) ರೆಸ್ಟೋರೆಂಟ್ಗೆ 5,000 ರೂ.ಗಳ ದಂಡ ವಿಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.  ಗ್ರಾಹಕ ಉಮೇಶ್ ಕುಮಾರ್ ಅವರು ಎಕ್ಸ್ ನಲ್ಲಿ ಹಂಚಿಕೊಂಡ ಫೋಟೋದಲ್ಲಿ ಅವರು ಬಡಿಸಿದ ತೆಂಗಿನಕಾಯಿ ಚಟ್ನಿಯಲ್ಲಿ ಕೂದಲಿನ ಎಳೆ ಇರುವುದನ್ನು ಕಾಣಬಹುದಾಗಿದೆ. ಈ ನಡುವೆ ಚಟ್ನಿಯಲ್ಲಿ ಕೂದಲು ಇರುವುದನ್ನು ಕಂಡುಕೊಂಡ ಬಳಿಕ, ವ್ಯವಸ್ಥಾಪಕರ ಗಮನಕ್ಕೆ ತಂದರು, ಮತ್ತು ಅವರು ಹೊಸ ಖಾದ್ಯ ನೀಡಿದರು, ಆದಾಗ್ಯೂ, ಇದು ಅಹಿತಕರ ಅನುಭವವಾಗಿತ್ತು” ಎಂದು ಕುಮಾರ್ ಎಕ್ಸ್ನಲ್ಲಿ ಬರೆದಿದ್ದಾರೆ. https://twitter.com/srikhande_umesh/status/1800590574782943287

Read More

ಬೆಂಗಳೂರು: ಜೂನ್, 14 ರಿಂದ ಜೂನ್, 22 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳಾ ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.…

Read More

ಬಳ್ಳಾರಿ: ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿಯನ್ನು ಸಾಧಿಸಲು 2024-2025 ನೇ ಸಾಲಿನಿಂದ ಪ್ರಾಥಮಿಕ ಹಂತದಲ್ಲಿ ಅರ್ಹ ಸರ್ಕಾರಿ ಶಾಲೆಗಳಲ್ಲಿ “ಪೂರ್ವ ಪ್ರಾಥಮಿಕ’’ ಭಾಗವಾಗಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾರೆ. ಮಕ್ಕಳಿಗೆ ಆರಂಭಿಕ ಹಂತದಲ್ಲಿ ಭದ್ರ ಬುನಾದಿ ಹಾಕಲು ಮತ್ತು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಆರಂಭಿಕ ಶಿಕ್ಷಣದ ಸೌಲಭ್ಯವನ್ನು ಕಲ್ಪಿಸಿಕೊಡುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯು ಉತ್ತಮ ಹೆಜ್ಜೆಯನ್ನಿಟ್ಟು ‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೈಜೋಡಿಸಿದೆ.ಜಿಲ್ಲೆಯಲ್ಲಿ ಒಟ್ಟು 119 ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬರ ಜೀವನದಲ್ಲೂ ಕೂಡ ಮಗು ಎಂಬುದು ತುಂಬಾ ಮುಖ್ಯವಾದದ್ದು ಅದರಲ್ಲೂ ಗಂಡು ಸಂತಾನ ಅಥವಾ ಪುತ್ರ ಸಂತಾನಕ್ಕಾಗಿ ಸಾಕಷ್ಟು ಜನ ಕಾಯುತ್ತಲೇ ಇರುತ್ತಾರೆ. ಈ ಪುತ್ರ ಸಂತಾನಕ್ಕಾಗಿ ಏನೆಲ್ಲ ಸುಲಭ ಕ್ರಮ ಅನುಸರಿಸಬೇಕು ಯಾವ ರೀತಿ ನಾವು ಅದನ್ನ ಅಳವಡಿಸಿಕೊಳ್ಳಬೇಕು ಎಂಬುದನ್ನು ಸಂಪೂರ್ಣವಾಗಿ ತಿಳಿಯೋಣ. ಈ ಯಂತ್ರವನ್ನು ಶುಭದ ದಿನದಲ್ಲಿ ಪುಷ್ಯ ನಕ್ಷತ್ರದ ಬರುವ ಸಂದರ್ಭದಲ್ಲಿ ಈ ಯಂತ್ರವನ್ನು ನೀವು ಬರೆದುಕೊಳ್ಳುವುದರಿಂದ ನೀವು ಏನು ಅಂದುಕೊಂಡಿರುತ್ತೀರೋ ಅವುಗಳು ಸಂಪೂರ್ಣವಾಗಿ ಸಿದ್ಧಿಯಾಗುತ್ತದೆ ಮತ್ತು ಸಾಕಷ್ಟು ಪ್ರಯೋಜನ ಪಡೆದುಕೊಳ್ಳಬಹುದು. ಯಂತ್ರವನ್ನು ಬರೆಯಬೇಕಾದರೆ ಕೆಲವೊಂದಿಷ್ಟು ಕ್ರಮಗಳನ್ನು ನೀವು ಅನುಸರಿಸಲೇಬೇಕು ಈ ಯಂತ್ರವನ್ನು ನೀವು ಬರೆಯಬೇಕಾದರೆ ತಾಮ್ರದ ತಗಡನ್ನು ಬಳಸಿಕೊಂಡು ಬರೆಯಬೇಕು. ಇಲ್ಲವಾದರೆ ಒಂದು ಬಿಳಿಯ ಹಾಳೆಯ ಮೇಲೆ ಬರೆಯಬೇಕು. ಆ ಯಂತ್ರ ಯಾವುದು ಎಂದರೆ ಮೂರು ಚೌಕವನ್ನು ಹಾಕಿಕೊಂಡು ಅದರಲ್ಲಿ ಮೊದಲ ಚೌಕದಲ್ಲಿ 10,1,12 ಕೆಳಗಡೆ…

Read More

ಶುಕ್ರವಾರ ಲಕ್ಷ್ಮಿ ಪೂಜೆಗೆ ಶ್ರೇಷ್ಠವಾದ ದಿನ, ಈ ದಿನ ಲಕ್ಷ್ಮಿಯನ್ನು ಆರಾಧಿಸಿದರೆ ನಮ್ಮೆಲ್ಲಾ ಆರ್ಥಿಕ ಸಂಕಷ್ಟ ದೂರಾಗಿ ಸಂಪತ್ತು ಹೆಚ್ಚಾಗುವುದು, ಶುಕ್ರವಾರದಂದು ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ ಬನ್ನಿ: ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ವಾರದ ಏಳು ದಿನಗಳಲ್ಲಿ ಶುಕ್ರವಾರ ಲಕ್ಷ್ಮಿ ದೇವಿಗೆ ಮೀಸಲಾದ ದಿನ. ಈ ದಿನ ಲಕ್ಷ್ಮಿ ಆರಾಧನೆ ಮಾಡುವುದರಿಂದ ಮನೆಯಲ್ಲಿ ಸಂಪತ್ತು ಹೆಚ್ಚಾಗುವುದು, ಲಕ್ಷ್ಮಿ ಕೃಪೆಗೆ ಪಾತ್ರರಾಗಬೇಕೆಂದರೆ ಮನೆಯನ್ನು ಶುದ್ಧವಾಗಿ ಇಡಬೇಕು, ಮನೆಯಲ್ಲಿ ಗಲಾಟೆವಿರಬಹುದು, ಮನೆಯಲ್ಲಿ ಪಾಸಿಟಿವಿಟಿ ಹೆಚ್ಚಿರಬೇಕು, ಹೀಗೆ ಮಾಡುವುದರಿಂದ ಆ ಮನೆಯತ್ತ ಲಕ್ಷ್ಮಿ ಆಕರ್ಷಿತಳಾಗುತ್ತಾಳೆ. ತಾವರೆ ಹೂವು ಅರ್ಪಿಸಿ ಲಕ್ಷ್ಮಿ ಪೂಜೆ ಲಕ್ಷ್ಮಿ ಪೂಜೆಯಂದು ನೀವು ಕಮಲದ ಹೂವು ಅರ್ಪಿಸಿ, ತುಪ್ಪದ ದೀಪ ಹಚ್ಚಿ ಪೂಜೆಯನ್ನು ಮಾಡಿ. ಹೀಗೆ ಮಾಡುವುದರಿಂದ ಲಕ್ಷ್ಮಿಗೆ ಹೊಸ ಆದಾಯದ ಅವಕಾಶಗಳು ದೊರೆಯುವುದು. ಶಂಖ ನಾದ ಸಂಜೆ ಹೊತ್ತು ಲಕ್ಷ್ಮಿ ಪೂಜೆ ಸಮಯದಲ್ಲಿ…

Read More

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಬರಲಿದೆ ನೂತನ ನಮ್ಮ ಕ್ಲಿನಿಕ್ – 254 ಹೊಸ ನಮ್ಮ ಕ್ಲಿನಿಕ್ ಗಳನ್ನ ಆರಂಭಿಸಲು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಹೀಗಾಗಿ ಸ್ಥಳ ಗುರುತಿಸಿದ ನಂತ್ರ, ರಾಜ್ಯಾಧ್ಯಂತ ಹೊಸದಾಗಿ ಶೀಘ್ರದಲ್ಲೇ 254 ನಮ್ಮ ಕ್ಲಿನಿಕ್ ಆರಂಭಗೊಳ್ಳಲಿದ್ದಾವೆ. ಈ ಮೂಲಕ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಗಲಿದೆ. ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಇಂದು ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ…

Read More

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, ರಾಗಿ 2 ಕೆ.ಜಿ ಉಚಿತವಾಗಿ ವಿತರಿಸಲಾಗುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದಾಗಿದೆ.

Read More

ಬೆಂಗಳೂರು: ಸ್ವಾತಂತ್ರ್ಯದ ನಂತರ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ದೇಶದ ಆರ್ಥಿಕತೆಯನ್ನು ಬಲಪಡಿಸಿದೆ. ಪ್ರಸ್ತುತ ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನ ಸ್ವಾಯತ್ತ ಸ್ಥಾನಮಾನದ ಘೋಷಣೆ ಮತ್ತು ಪದವಿ ದಿನದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರಲು ಕರ್ತವ್ಯದ ಸಮಯವಾಗಿದೆ. ಭಾರತ ಸರ್ಕಾರ ದೇಶವನ್ನು ಮತ್ತಷ್ಟು ಬಲಪಡಿಸುವ ಮೂಲಕ ವಿಶ್ವದ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಯುವಪೀಳಿಗೆ ದೇಶವನ್ನು ಮುಂಚೂಣಿಯಲ್ಲಿ ನಡೆಸಲು ಸಹಕಾರ ನೀಡಬೇಕು ಎಂದು ತಿಳಿಸಿದರು. ಸ್ವಾಯತ್ತ ಸ್ಥಾನಮಾನ ಪಡೆದ ಸೇಂಟ್ ಫ್ರಾನ್ಸಿಸ್ ಡಿ’ಸೇಲ್ಸ್ ಕಾಲೇಜಿನ ಮಹತ್ವದ ಸಾಧನೆಗಾಗಿ ಅಭಿನಂದಿಸಿದ ರಾಜ್ಯಪಾಲರು, “ಕಾಲೇಜಿನ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ, ನವೀನ ಬೋಧನೆ ಮತ್ತು ಸಮಗ್ರ ಅಭಿವೃದ್ಧಿಗೆ ಸಾಕ್ಷಿಯಾಗಿದೆ.…

Read More