Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ನಿಮ್ಮ ಮೊಬೈಲ್ ಮತ್ತು ಲ್ಯಾಂಡ್ಲೈನ್ ಸಂಖ್ಯೆಗಳಿಗೆ ನೀವು ಶೀಘ್ರದಲ್ಲೇ ಪಾವತಿಸಬೇಕಾಗಬಹುದು. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಮೊಬೈಲ್ ಮತ್ತು ಲ್ಯಾಂಡ್ಲೈನ್ ಸಂಖ್ಯೆಗಳಿಗೆ ಶುಲ್ಕವನ್ನು ಪರಿಚಯಿಸಲು ಪ್ರಸ್ತಾಪಿಸಿದೆ, ಫೋನ್ ಸಂಖ್ಯೆಗಳು ಅಮೂಲ್ಯವಾದ ಆದರೆ ಸೀಮಿತ ಸಾರ್ವಜನಿಕ ಸಂಪನ್ಮೂಲವನ್ನು ಪ್ರತಿನಿಧಿಸುತ್ತವೆ ಎಂದು ಉಲ್ಲೇಖಿಸಿದೆ. ಜೂನ್ 6, 2024 ರಂದು ಬಿಡುಗಡೆಯಾದ ಸಮಾಲೋಚನಾ ಪತ್ರದಲ್ಲಿ ವಿವರಿಸಲಾದ ಈ ಪ್ರಸ್ತಾಪವು ಮೊಬೈಲ್ ಆಪರೇಟರ್ಗಳು ಈ ಸಂಖ್ಯೆಗಳಿಗೆ ಶುಲ್ಕವನ್ನು ಎದುರಿಸಬಹುದು ಎಂದು ಸೂಚಿಸುತ್ತದೆ, ನಂತರ ಅದನ್ನು ಗ್ರಾಹಕರಿಗೆ ವರ್ಗಾಯಿಸಬಹುದು ಎನ್ನಲಾಗಿದೆ.5 ಜಿ ನೆಟ್ವರ್ಕ್ಗಳು, ಯಂತ್ರದಿಂದ ಯಂತ್ರ ಸಂವಹನ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಸಾಧನಗಳ ವ್ಯಾಪಕ ಅಳವಡಿಕೆ ಸೇರಿದಂತೆ ಸಂವಹನ ತಂತ್ರಜ್ಞಾನಗಳಲ್ಲಿನ ಪ್ರಗತಿಯು ಅಸ್ತಿತ್ವದಲ್ಲಿರುವ ಸಂಖ್ಯೆ ವ್ಯವಸ್ಥೆಯ ಸಮಗ್ರ ಪರಿಶೀಲನೆಯನ್ನು ಅಗತ್ಯಗೊಳಿಸಿದೆ ಎಂದು ಟ್ರಾಯ್ ಹೇಳಿದೆ. ಟ್ರಾಯ್ ಪ್ರಕಾರ, ಶುಲ್ಕದ ಪರಿಚಯವು ಈ ‘ಸೀಮಿತ ಸಂಪನ್ಮೂಲಗಳ’ ಪರಿಣಾಮಕಾರಿ ಹಂಚಿಕೆ ಮತ್ತು ಬಳಕೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. https://twitter.com/TRAI/status/1798940350704480540
ಕೆಎನ್ಎನ್ಸಿನಿಮಾಡೆಸ್ಕ್: ದರ್ಶನ್ ಸ್ಯಾಂಡಲ್ವುಡ್ನಲ್ಲಿ ಈ ಹೆಸರು ಕೇಳುತ್ತಿದ್ದ ಹಾಗೇ ಈಗ ಅನೇಕ ಮಂದಿ ಬೆಚ್ಚಿ ಬೀಳುತ್ತಿದ್ದಾರೆ. ತೆರೆ ಮೇಲೆ ನಾಯಕನಾಗಿ. ಖಳನಾಯಕನಾಗಿ ಪಾತ್ರನಿರ್ವಹಣೆ ಮಾಡಿದ್ದ ದರ್ಶನ್ ನಿಜ ಜೀವನದಲ್ಲಿ ಈಗ ಖಳನಾಯಕನಾಗಿ ಕೊಲೆ ಆರೋಪದಲ್ಲಿ ಕಂಬಿ ಹಿಂದೆ ಮುಂದಿನ ಜೀವನವನ್ನು ನೆನೆಯುತ್ತ ಅಳುತ್ತಿದ್ದಾರೆ. ಅಪ್ಪ ನಂತೆ ಮಗ ಎನ್ನುವ ಗಾದೆಯನ್ನು ಸಂಪೂರ್ಣ ಸುಳ್ಳು ಮಾಡಿದ ದರ್ಶನ್, ಮೆಜೆಸ್ಟಿಕ್ನಲ್ಲಿ ಇದ್ದ ಹಾಗೇ ಇರಲೇ ಇಲ್ಲ, ಬದಲಿಗೆ ಇನ್ನೋಬ್ಬರ ಹೆಂಡ್ತಿ ಮೇಲೆ ಕಣ್ಣು ಹಾಕಿ ಈಗ ಮುಂದಿನ ಜೀವನದ ಬಗ್ಗೆ ಯೋಚನೆ ಮಾಡುತ್ತ ಕುಳಿತುಕೊಂಡಿದ್ದಾರೆ. ಅಸಲಿಗೆ ದರ್ಶನ್ ಹೀಗೆ ಆಗಲು ಕಾರಣ ಪರಸ್ತ್ರೀ ವ್ಯಾಮೋಹ, ಹಣ, ಮದ್ಯವೇ ಕಾರಣ ಎನ್ನಲಾಗುತ್ತಿದೆ. ತನ್ನ ಪಾಡಿಗೆ ತಾನು ಇರುವುದು ಬಿಟ್ಟು ಸ್ಟಾರ್ಡಂ ಅನ್ನು ತಲೆಗೆ ಏರಿಸಿಕೊಂಡಿದ್ದ ದರ್ಶನ್ ತಾನು ನಡೆದು ಹೋಗಿದ್ದೇ ದಾರಿ ಅನ್ನೋ ಹಾಗೇ ಮಾಡಿಕೊಂಡಿದ್ದರು. ಸುತ್ತಲು ಹೊಗಳು ಬಟ್ಟರನ್ನು ತಾನು ಹೇಳಿದಕ್ಕೆ ಹೂ ಎನ್ನುವವರನ್ನು ಇಟ್ಟುಕೊಂಡಿದ್ದ ದರ್ಶನ್ ತನಗೆ ಸರಿ, ತಪ್ಪು ಯಾವುದು ಎನ್ನುವುದನ್ನು…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್-ಯುಜಿ 2024 ರ 1,563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ನಿರ್ಧಾರವನ್ನು ರದ್ದುಗೊಳಿಸಲಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಜೂನ್ 23 ರಂದು ಮರು ಪರೀಕ್ಷೆಗೆ ಅರ್ಜಿ ಸಲ್ಲಿಸುವ ಆಯ್ಕೆಯನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್-ಯುಜಿ, 2024 ಪರೀಕ್ಷೆಯ ಸುತ್ತಲಿನ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. “ಗ್ರೇಸ್ ಅಂಕಗಳನ್ನು ನೀಡಿದ 1,563 ನೀಟ್-ಯುಜಿ 2024 ಅಭ್ಯರ್ಥಿಗಳ ಸ್ಕೋರ್ ಕಾರ್ಡ್ಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಸಮಿತಿ ತೆಗೆದುಕೊಂಡಿದೆ ಮತ್ತು ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆಯನ್ನು ನೀಡಲಾಗುವುದು” ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಪರೀಕ್ಷೆಗಳನ್ನು ಜೂನ್ 23…
ಬೆಂಗಳೂರು: ಕೊಲೆ ಆರೋಪದ ಮೇರೆಗೆ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ನನ್ನು ಸ್ಯಾಂಡಲ್ವುಡ್ನಿಂದ ಬ್ಯಾನ್ ಮಾಡುವುದಕ್ಕೆ ಒತ್ತಡ ಕೇಳಿ ಬಂದಿದೆ. ಈ ನಡುವೆ ಇಂದು ದರ್ಶನ್ ಸಿನಿಮಾ ರಂಗದಲ್ಲಿ ಸಂಪೂರ್ಣವಾಗಿ ಬ್ಯಾನ್ ಮಾಡುವುದರ ಬಗ್ಗೆ ಇಂದು ವಾಣಿಜ್ಯ ಮಂಡಳಿ ಸಭೆ ನಡೆಸಲಿದೆ. ಸಭೆಯಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಭೆ ಬಳಿಕ ಈ ಬಗ್ಗೆ ಇಂದು ಸಂಜೆ ಅಧಿಕೃತ ಮಾಹಿತಿ ಹೊರ ಬೀಳಲಿದೆ.
ಬೆಂಗಳೂರು: ಕೊಲೆ ಪ್ರಕಣದ ಆರೋಪ ಅಡಿಯಲ್ಲಿ ಸದ್ಯ ನಟ ದರ್ಶನ್ ಸೇರಿದಂತೆ ಹನ್ನೆರಡು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಯನ್ನು ಆರೋಪಿಗಳಿಂದ ಪಡೆದುಕೊಳ್ಳಲಾಗುತ್ತಿದೆ. ಸದ್ಯ ಪೋಲಿಸ್ ಕಸ್ಟಡಿಯಲ್ಲಿರುವ ದರ್ಶನ್ ಅಂಢ್ ಟೀಮ್ಗೆ ರಾಜ ಮಾರ್ಯದೆ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಮೊನ್ನೆ ಕಸ್ಟಡಿಯಲ್ಲಿರುವ ದರ್ಶನ್ಗೆ ಬಿರಿಯಾನಿ ನೀಡಲಾಗುತ್ತಿದೆ ಎನ್ನಲಾಗಿದೆ. ಈ ನಡುವೆ ದರ್ಶನ್ ಅಂಡ್ ಟೀಮ್ಗೆ ಪೊಲೀಸರು ಸಿಗರೇಟ್ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ಠಾಣೆ ಸುತ್ತ ಮುತ್ತ ಶಾಮೀಯಾನವನ್ನು ಹಾಕಿಸಲಾಗಿದೆ.
ಬೆಂಗಳೂರು : ದರ್ಶನ್ ಗ್ಯಾಂಗ್ ವಿರುದ್ದ ರೌಡಿಶೀಟ್ ತೆರೆಯಲ ಪೋಲಿಸ್ ಇಲಾಖೆ ಮುಂದಾಗಿದೆ ಎನ್ನಲಾಗಿದೆ. ಈ ಹಿಂದಿನ ಪ್ರಕರಣ ಹಾಗೂ ದೂರುಗಳನ್ನು ಕೂಡ ಪೋಲೀಸರು ದರ್ಶನ್ ಅಂಡ್ ಗ್ಯಾಂಗ್ ಬಗ್ಗೆ ಮಾಹಿತಿಗಳನ್ನು ಕಲೆ ಹಾಕುತ್ತಿದ್ದು, ಮುಂದೆ ಸಮಾಜಕ್ಕೆ ತೊಂದರೆ ಮಾಡದಂತೆ ನಿಗಾ ಇಡುವ ನಿಟ್ಟಿನಲ್ಲಿ ಆರೋಪಿಗಳ ವಿರುದ್ದ ರೌಡಿಶೀಟ್ ಅನ್ನು ತೆರೆದರು ಕೂಡ ಅನುಮಾನವಿಲ್ಲ ಎನ್ನುತ್ತಿವೆ ಪೋಲಿಸ್ ಮೂಲಗಳು. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ತಮ್ಮ ಬೆಳೆ ಬೇಯಿಸಿ ಕೊಳ್ಳುತ್ತಿರುವ, ಸಾರ್ವಜನಿಕ ಸ್ಥಳಗಳಲ್ಲಿ ಜೂಜು ಮಟಕಾ ಇತರೆ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡವರಿಗೆ ಮುಲಾಜಿಲ್ಲದೇ ಪೊಲೀಸ್ ಇಲಾಖೆ ರೌಡಿ ಶೀಟ್ ತೆಗೆಯಲು ಮುಂದಾಗುತ್ತದೆ.
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತೊಬ್ಬ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ನಾಗರಾಜು ಎನ್ನುವಾತ ಬಂಧಿತ ಆರೋಪಿಯಾಗಿದ್ದು, ಈತ ದರ್ಶನ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ನಟ ದರ್ಶನ್ ಅಭಿಮಾನ ಸಂಘಗಳಲ್ಲಿನ ಸಂಪರ್ಕಹೊಂದಿದ್ದ ಈತ ಎಲ್ಲ ಜವಾಬ್ದಾರಿಯನ್ನು ಈತ ನೋಡಿಕೊಳ್ಳುತ್ತಿದ್ದ ಎನ್ನಲಾಗಿದೆ. ನಾಗರಾಜ್ಗೆ ದರ್ಶನ್ ಬಾರ್ ಇಟ್ಟುಕೊಂಡಿದ್ದ ಎನ್ನಲಾಗಿದ್ದ, ಈತ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಮೈಸೂರಿನ ಇಪ್ಪೊಂದನೇ ವಾರ್ಡ್ನಿಂದ ಈ ಬಾರಿ ಕಾರ್ಪೋರೇಟರ್ ಆಗಿ ಕಣಕ್ಕೆ ಇಳಿಯಲು ಸಿದ್ದನಾಗಿದ್ದ ಎನ್ನಲಾಗಿದೆ.
ಬೆಂಗಳೂರು: ಪೋಕ್ಸೊ ಕೇಸ್ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ತಿಂಗಳ ಹಿಂದೆಯೇ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆಯ ಸಹೋದರ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಸಂತ್ರಸ್ತೆಯ ತಾಯಿ ಮಾರ್ಚ್ನಲ್ಲಿ ಸಲ್ಲಿಸಿದ ದೂರಿನಿಂದ ಈ ಪ್ರಕರಣ ಹುಟ್ಟಿಕೊಂಡಿದೆ. 2015 ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಕೋರಿ ಯಡಿಯೂರಪ್ಪ ತಮ್ಮ ನಿವಾಸಕ್ಕೆ ಭೇಟಿ ನೀಡಿದಾಗ ಯಡಿಯೂರಪ್ಪ ಅವರು ತಮ್ಮ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಂತ್ರಸ್ತೆಯ ತಾಯಿ ಮೇ 26 ರಂದು ನಿಧನರಾದರು. ತನಿಖಾ ಪ್ರಕ್ರಿಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅರ್ಜಿದಾರರು, ಪೊಲೀಸರು ಯಡಿಯೂರಪ್ಪ ಅವರ ನಿವಾಸದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿಲ್ಲ ಅಥವಾ ಪೋಕ್ಸೊ ಪ್ರಕರಣಗಳಲ್ಲಿ ಪ್ರಮಾಣಿತ…
ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ದೀನ್ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ ವ್ಯಕ್ತಿಗತ ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಫಲಾನುಭವಿಗಳು ಸಿರುಗುಪ್ಪ ನಗರಸಭೆ ನಿವಾಸಿಯಾಗಿದ್ದು, ಬಡತನರೇಖೆ ಕೆಳಗಿನ ಕುಟುಂಬದವರಾಗಿರಬೇಕು, ಅರ್ಜಿ ಸಲ್ಲಿಸುವ ಕೊನೆಯ ದಿನ ಜೂ.29 ಆಗಿರುತ್ತದೆ. ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.…
ಬಳ್ಳಾರಿ : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್ ಅವರು ತಿಳಿಸಿದ್ದಾರೆ. ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು. *ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಇಂತಿವೆ:* ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸಜ್ಜೆ ಬೆಳೆಗಳಿಗೆ…












