Author: kannadanewsnow07

ಬೆಂಗಳೂರು: ರೇಣುಕಸ್ವಾಮಿ ಕೊಲೆಗೆ ಬಳಕೆ ಮಾಡಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ರಾಡ್‌, ಮಾರಕಾಸ್ತ್ರಗಳು ಹಾಗೂ ದರ್ಶನ್ ನಂದು ಅಂಥ ಹೇಳಲಾಗಿರುವ ಬೆಲ್ಟ್‌ ಅನ್ನು ಕೂಡ ಪೊಲೀಸರು ಕೂಡ ವಶಕ್ಕೆ ಪಡೆದುಕೊಂಡಿದ್ದು, ಸದ್ಯ ಅದನ್ನು ಎಫ್‌ಎಸ್‌ಐಎಲ್‌ ಗೆ ಹೆಚ್ಚಿನ ಮಾಹಿತಿಗಾಗಿ ಕಳುಹಿಸಕೊಡಲಾಗಿದೆ ಎನ್ನಲಾಗಿದೆ.  ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಶರವೇಗದಲ್ಲಿ ಸಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 13 ಜನರನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ವಿನಯ್ ಮತ್ತು ಪ್ರದೋಶ್ ಹೆಸರಿನಲ್ಲಿ ನೋಂದಣಿಯಾಗಿರುವ ಕೆಂಪು ಬಣ್ಣದ ಒಂದು ಜೀಪ್, ಕಪ್ಪು ಬಣ್ಣದ ಸ್ಕಾರ್ಪಿಯೋ ಗಾಡಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Read More

ನವದೆಹಲಿ: ರೈಲ್ವೆಯಲ್ಲಿ ಪ್ರಯಾಣಿಸುವಾಗ ನೀವು ತಿಂಡಿ ಪ್ಯಾಕೆಟ್ ಗಳು, ಚಹಾ ಕಪ್ ಗಳು, ಸಿಹಿತಿಂಡಿಗಳ ಪೆಟ್ಟಿಗೆಯನ್ನು ನಿಮ್ಮ ಆಸನದ ಕೆಳಗೆ ಎಸೆಯುತ್ತೀರಾ? ನೀವು ಸಹ ಇದನ್ನು ಮಾಡಿದರೆ, ಜಾಗರೂಕರಾಗಿರಿ ಏಕೆಂದರೆ ನೀವು 10 ಬಾರಿ ದಂಡವನ್ನು ಪಾವತಿಸಬೇಕಾಗಬಹುದು, ಹೌದು, ಆಗಾಗ್ಗೆ ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸುವಾಗ, ಜನರು ಇದನ್ನು ಮಾಡುತ್ತಾರೆ, ಅವರು ಏನು ತಿನ್ನುತ್ತಾರೆ, ಕುಡಿಯುತ್ತಾರೆ, ಎಲ್ಲವನ್ನೂ ಸೀಟಿನ ಕೆಳಗೆ ಎಸೆಯುತ್ತಾರೆ. ರೈಲ್ವೆಯಲ್ಲಿ ಪ್ರಯಾಣಿಸುವಾಗ ನೀವು ತಿಂಡಿ ಪ್ಯಾಕೆಟ್ ಗಳು, ಚಹಾ ಕಪ್ ಗಳು, ಸಿಹಿತಿಂಡಿಗಳ ಪೆಟ್ಟಿಗೆಯನ್ನು ನಿಮ್ಮ ಆಸನದ ಕೆಳಗೆ ಎಸೆಯುತ್ತೀರಾ? ನೀವು ಸಹ ಇದನ್ನು ಮಾಡಿದರೆ, ಜಾಗರೂಕರಾಗಿರಿ ಏಕೆಂದರೆ ನೀವು 10 ಬಾರಿ ದಂಡವನ್ನು ಪಾವತಿಸಬೇಕಾಗಬಹುದು. ಹೌದು ರೈಲಿನಲ್ಲಿ ಕಸ ಹಾಕಿದ್ದ ಸಲುವಾಗಿ 304 ಪ್ರಯಾಣಿಕರಿಂದ 1,23,075 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದ್ದು, 22 ಪ್ರಯಾಣಿಕರಿಂದ ಕಸ ಹಾಕಿದ್ದಕ್ಕಾಗಿ 2,400 ರೂ. ಟಿಕೆಟ್ ರಹಿತ 243 ಪ್ರಯಾಣಿಕರಿಂದ ಸುಮಾರು 1,02,945 ರೂ.ಗಳನ್ನು ಸಂಗ್ರಹಿಸಲಾಗಿದೆ. ಒಟ್ಟು 2,43,750 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ ಎನ್ನಲಾಗಿದೆ.…

Read More

ನವದೆಹಲಿ: ನೀವು ಇನ್ನೂ ನಿಮ್ಮ ಆಧಾರ್ ಅನ್ನು ಪಡಿತರ ಚೀಟಿ ಅಥವಾ ಆಹಾರ ಸಬ್ಸಿಡಿ ಖಾತೆಗೆ ಲಿಂಕ್ ಮಾಡದಿದ್ದರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ಏಕೆಂದರೆ ಪಡಿತರ ಚೀಟಿಯನ್ನು ಆಧಾರ್ಗೆ ಲಿಂಕ್ ಮಾಡುವ ಗಡುವನ್ನು ಸರ್ಕಾರ ವಿಸ್ತರಿಸಿದೆ. ಆಹಾರ ಸಬ್ಸಿಡಿ ಖಾತೆಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪಡಿತರ ಚೀಟಿಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ಕೊನೆಯ ದಿನಾಂಕ: ಆಧಾರ್ ಅನ್ನು ಪರಿಶೀಲಿಸಲು ಅಥವಾ ಲಿಂಕ್ ಮಾಡಲು ಹೊಸ ಗಡುವನ್ನು ಜೂನ್ 30, 2024 ರ ಬದಲು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ಗಡುವನ್ನು ಸರ್ಕಾರವು ಈ ಹಿಂದೆ ಹಲವಾರು ಬಾರಿ ವಿಸ್ತರಿಸಿದೆ. ಪಡಿತರ ಚೀಟಿಯನ್ನು ಆಧಾರ್ಗೆ ಲಿಂಕ್ ಮಾಡುವುದು ಅವಶ್ಯಕ. ಫೆಬ್ರವರಿ 2017 ರಲ್ಲಿ, ಪಿಡಿಎಸ್ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಪಡಿತರ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ನಟ ದರ್ಶನ್‌ ಸ್ನೇಹಿತ ಹಾಗೂ ಅವರೊಂದಿಗೆ ಕೆಲ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ, ಪ್ರದೋಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ ಎನ್ನಲಾಗಿದ್ದು, ದರ್ಶನ್ ಜೊತೆಗೆ ಸ್ನೇಹವನ್ನು ಹೊಂದಿದ್ದ ಎನ್ನಲಾಗಿದೆ.

Read More

ಬೆಂಗಳೂರು: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಹಾವು ರಕ್ಷಣಾ ಕಾರ್ಯಕರ್ತರ ಕೌಶಲ್ಯಗಳನ್ನು ಹೆಚ್ಚಿಸಲು ಕರ್ನಾಟಕ ಅರಣ್ಯ ಇಲಾಖೆಯು ಜೂನ್ 19 ಮತ್ತು 20 ರಂದು ಬನ್ನೇರುಘಟ್ಟ ಪ್ರಾಕೃತಿಕ ಶಿಬಿರ – ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹಾವು ರಕ್ಷಕರಿಗೆ ಎರಡು ದಿನಗಳ ತರಬೇತಿ ಆಯೋಜಿಸಿದೆ. ತರಬೇತಿಯಲ್ಲಿ ಹಾವುಗಳ ರಕ್ಷಣೆ, ಹಾವುಗಳ ಸುರಕ್ಷತೆಗೆ ನಿರ್ವಹಣೆ ವಿಧಾನಗಳು, ಕಾರ್ಯತಂತ್ರಗಳು, ಉರುಗಶಾಸ್ತ್ರ, ಹಾವು ಕಚ್ಚಿದಾಗ ಪ್ರಥಮ ಚಿಕಿತ್ಸೆ, ದಾಖಲಾತಿಗಳ ನಿರ್ವಹಣೆ ಮತ್ತು ಅರಣ್ಯ ಇಲಾಖೆಯೊಂದಿಗೆ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ತಜ್ಞರು, ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ತರಬೇತಿ ಪಡೆಯಲು ಅವಕಾಶವಿದ್ದು, ಆಸಕ್ತರು ಲಿಂಕ್ https:/bit.ly/kfdswblr and https://forms.gle/mT8gNW2oK7usEhx58 ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಯಾವ ದಿನ ಜನಿಸಿದ ಮಕ್ಕಳು ಅದೃಷ್ಟವಂತರು ಹೇಗೆ ಆಗುತ್ತಾರೆ. ಎಂದು ತಿಳಿದುಕೊಳ್ಳೋಣ. ಪ್ರತಿಯೊಬ್ಬರು ತಮ್ಮ ಮಕ್ಕಳ ಒಳ್ಳೆಯ ಭವಿಷ್ಯಕ್ಕಾಗಿ ಹಲವಾರು ರೀತಿಯ ಉಪಾಯಗಳನ್ನು ಮಾಡುತ್ತಾರೆ . ಹೋಮ – ಹವನ , ಯಜ್ಞ , ಪೂಜೆ , ಪಾಠ ಇತ್ಯಾದಿಗಳನ್ನು ಮಾಡಿರುತ್ತಾರೆ. ಆದರೆ ಮಗು ಯಾವ ದಿನ ಜನಿಸಿದರೆ ಅದೃಷ್ಟವಂತರು ಆಗಿರುತ್ತಾರೆ , ಎಂಬುದನ್ನು ತಿಳಿಯೋಣ . ಎಲ್ಲಾ ದಿನಗಳನ್ನು ಭಗವಂತನೇ ಸೃಷ್ಟಿ ಮಾಡಿರುತ್ತಾನೆ. ಇವುಗಳಲ್ಲಿ ಯಾವುದಾದರೂ ಒಂದು ದಿನವನ್ನು ಅದೃಷ್ಟ ಶಾಲಿ ಅನ್ನೋದು ಸರಿಯಾಗುತ್ತದೆಯೇ , ಇಲ್ಲಿ ಏಳು ದಿನಗಳಲ್ಲಿ ಒಂದು ದಿನ ಚೆನ್ನಾಗಿದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ . ಇಲ್ಲಿ ನಾವು ತಿಳಿಸುವ ವಿಷಯ ಏನೆಂದರೆ , ಜನ್ಮ ಕುಂಡಲಿ, ಜನ್ಮ ತಿಥಿ , ಹಸ್ತ ರೇಖೆಗಳ ಅನುಸಾರವಾಗಿ , ವ್ಯಕ್ತಿಯ ಸ್ವಭಾವವನ್ನು ತಿಳಿಯಬಹುದು . ಆದರೆ ಇವುಗಳ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಭುವನೇಶ್ವರಿ ಚಕ್ರದಿಂದ ನಾವು ಹಲವಾರು ರೀತಿಯ ಕಾರ್ಯಗಳನ್ನು ಮಾಡಬಹುದು. ಈ ಚಕ್ರದಿಂದ ಹಲವಾರು ಕಾರ್ಯಗಳು ಸಿದ್ಧಿಯಾಗುತ್ತದೆ. ಒಂದು ಶುಭವಾದ ದಿನದಂದು ಈ ಯಂತ್ರವನ್ನು ನೀವು ಬರೆಯಬೇಕು. ಕೆಟ್ಟ ಗ್ರಹಗಳನ್ನು ದೂರ ಮಾಡುವುದಕ್ಕೆ ಈ ಯಂತ್ರವನ್ನು ಉಪಯೋಗಿಸಿಕೊಳ್ಳಬಹುದು ಕೆಟ್ಟ ಗ್ರಹಗಳನ್ನು ದೂರ ಮಾಡುವುದಕ್ಕೆ ಈ ಯಂತ್ರವನ್ನು ಬರೆದು ಅಷ್ಟಮಿ ಅರ್ಚನೆ ಮಾಡಿ ಇದಕ್ಕೆ ಪಂಚಮೂಲಿಕೆ ಮತ್ತು ರಸವನ್ನು ಸೇರಿಸಿ ಯಂತ್ರವನ್ನು ಬರೆದು ಕಟ್ಟುವುದರಿಂದ ನಿಮ್ಮ ಎಲ್ಲಾ ಸಕಲ ಇಷ್ಟಾರ್ಥಗಳು ನೆರವೇರುತ್ತದೆ ಈ ಚಕ್ರವನ್ನು ಬರೆದು ಯಂತ್ರವನ್ನು ಮಾಡಿ ಅದನ್ನು ನೀವು ಧರಿಸಿಕೊಳ್ಳುವುದರಿಂದ ಯಾವುದೇ ಕೆಟ್ಟ ಗ್ರಹಗಳು ನಿಮ್ಮ ಹತ್ತಿರ ಬರುವುದಿಲ್ಲ. ಈ ಯಂತ್ರವನ್ನು ಧರಿಸಿಕೊಳ್ಳುವುದರಿಂದ ಸಕಲ ಕಷ್ಟಗಳು ಪರಿಹಾರವಾಗುತ್ತದೆ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ – 1122 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 09-01-2023 ಹಾಗೂ ಪರಿಷ್ಕøತ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 14-03-2023 ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ದಿನಾಂಕ: 05-05-2023 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 16 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲನುಕ್ರಮದನುಸಾರ 79 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್ ಆಪ್ ಅಂಕಗಳ ಪಟ್ಟಿಯನ್ನು ಆಯೋಗದ ಜಾಲತಾಣ http://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯಾದ್ಯಂತ ಜುಲೈ 13, 2024 ರಂದು ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್…

Read More

ಮುಂಬೈ: ಜಾಗತಿಕ ಷೇರುಗಳಲ್ಲಿನ ಸಕಾರಾತ್ಮಕ ಪ್ರವೃತ್ತಿಯ ಮಧ್ಯೆ ವಿದ್ಯುತ್, ಬಂಡವಾಳ ಸರಕುಗಳು ಮತ್ತು ಕೈಗಾರಿಕಾ ಷೇರುಗಳ ಖರೀದಿಯಿಂದಾಗಿ ಬೆಂಚ್ ಮಾರ್ಕ್ ಇಕ್ವಿಟಿ ಸೂಚ್ಯಂಕಗಳು ಬುಧವಾರ ಏರಿಕೆ ಕಂಡಿವೆ. ಇದಲ್ಲದೆ, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ನಂತಹ ಆಯ್ದ ಸೂಚ್ಯಂಕ-ಹೆವಿವೇಯ್ಟ್ ಕೌಂಟರ್ಗಳಲ್ಲಿ ಭಾರಿ ಜನಸಂದಣಿ ಹೂಡಿಕೆದಾರರ ಭಾವನೆಯನ್ನು ಹೆಚ್ಚಿಸಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 149.98 ಪಾಯಿಂಟ್ಸ್ ಅಥವಾ ಶೇಕಡಾ 0.20 ರಷ್ಟು ಏರಿಕೆ ಕಂಡು 76,606.57 ಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ಇದು 593.94 ಪಾಯಿಂಟ್ ಅಥವಾ ಶೇಕಡಾ 0.77 ರಷ್ಟು ಏರಿಕೆ ಕಂಡು 77,050.53 ಕ್ಕೆ ತಲುಪಿದೆ. ಬಿಎಸ್ಇ ಬೆಂಚ್ಮಾರ್ಕ್ ತನ್ನ ಹಿಂದಿನ ಜೀವಮಾನದ ಗರಿಷ್ಠ 77,079.04 ಅನ್ನು ಮುರಿಯಲು ಕೇವಲ 28.51 ಪಾಯಿಂಟ್ಗಳ ದೂರದಲ್ಲಿದೆ. ಎನ್ಎಸ್ಇ ನಿಫ್ಟಿ 177.1 ಪಾಯಿಂಟ್ಸ್ ಅಥವಾ ಶೇಕಡಾ 0.76 ರಷ್ಟು ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 23,441.95 ಕ್ಕೆ ತಲುಪಿದೆ. ಇದು 58.10 ಪಾಯಿಂಟ್ ಅಥವಾ ಶೇಕಡಾ 0.25…

Read More